ಆರೋಗ್ಯ ಕ್ಷೇತ್ರಕ್ಕೆ ಶ್ರೀರಾಮುಲು ಸೇವೆ ಅನುಪಮ


Team Udayavani, Jul 2, 2020, 3:00 AM IST

ಆರೋಗ್ಯ ಕ್ಷೇತ್ರಕ್ಕೆ ಶ್ರೀರಾಮುಲು ಸೇವೆ ಅನುಪಮ

ಆರೋಗ್ಯ ಸಚಿವ ಬಿ. ಶ್ರೀರಾಮುಲು ಅಂದಾಕ್ಷಣ ಥಟ್ಟನೆ ನೆನಪಾಗುವುದು 108 ಆಂಬ್ಯುಲೆನ್ಸ್‌.

ಹೌದು, ಒಂದು ಕಾಲದಲ್ಲಿ ಹಳ್ಳಿಗೆ ಆಂಬ್ಯುಲೆನ್ಸ್‌ ಬಂದರೆ ಆ ಊರಿನ ಶ್ರೀಮಂತರ ಮನೆಯಲ್ಲಿ ಅನಾರೋಗ್ಯವಿದೆ ಎಂದರ್ಥ.

ಬಡವರಿಗೆ ಕಾಯಿಲೆಯಾದರೆ ಆಸ್ಪತ್ರೆಗೆ ಹೋಗಲು ಎತ್ತಿನ ಗಾಡಿ ಕಟ್ಟಬೇಕಿತ್ತು. ಇನ್ನೂ ತುರ್ತು ಎಂದರೆ ಆ ಊರಿನಲ್ಲಿದ್ದ ಟ್ರ್ಯಾಕ್ಟರೇ ಆಂಬ್ಯುಲೆನ್ಸ್‌ ಆಗುತ್ತಿತ್ತು.

ಆದರೆ, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮೊದಲ ಸಲ ಅಧಿಕಾರ ಹಿಡಿದಾಗ ಆರೋಗ್ಯ ಸಚಿವರಾಗಿ ಚುಕ್ಕಾಣಿ  ಹಿಡಿದಿದ್ದು ಬಿ. ಶ್ರೀರಾಮುಲು. ಈ ಅವಧಿಯಲ್ಲಿ 108 ಆಂಬ್ಯುಲೆನ್ಸ್‌ ಯೋಜನೆ ಜಾರಿಗೆ ತಂದಿದ್ದು, ಆರೋಗ್ಯ ಕ್ಷೇತ್ರದ ಕ್ರಾಂತಿಕಾರಕ ಬದಲಾವಣೆ ಎನ್ನಬಹುದು.

ಅಪಘಾತ, ಹೆರಿಗೆ ಸೇರಿದಂತೆ ಎಂಥದ್ದೇ ತುರ್ತು ಸಂದರ್ಭದಲ್ಲಿ 108 ಸಂಖ್ಯೆಗೆ ಡಯಲ್‌ ಮಾಡಿದರೆ 15 ರಿಂದ 30 ನಿಮಿಷಗಳಲ್ಲಿ ಆಂಬ್ಯುಲೆನ್ಸ್‌ ಬಂದು ನಿಲ್ಲುತ್ತದೆ. ಇದರಿಂದ  ಲಕ್ಷಾಂತರ ಪ್ರಾಣಗಳು ಉಳಿದಿವೆ ಎಂದರೆ ತಪ್ಪಾಗಲಾರದು.

ಜಿಲ್ಲಾಸ್ಪತ್ರೆಗಳಲ್ಲಿ ವಾಸ್ತವ್ಯ ಮಾಡಿದ ಮೊದಲ ಸಚಿವ: ಈಗ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಯೋಗಾಯೋಗ ಎಂಬಂತೆ ಅದೇ ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದಾರೆ. ಜನರ ಸಂಕಟಗಳನ್ನು ಅರಿತಿರುವ ಹಿನ್ನೆಲೆಯಲ್ಲಿ ತನ್ನ ಇಲಾಖೆಯಿಂದ ಜನಸಾಮಾನ್ಯರಿಗೆ ಏನು ಮಾಡಬಹುದೆನ್ನುವುದರ ಸ್ಪಷ್ಟತೆ ಇದೆ. ಈ ಕಾರಣಕ್ಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲ ದಿನಗಳಲ್ಲೇ ರಾಜ್ಯದ 10 ಜಿಲ್ಲೆಗಳ ಜಿಲ್ಲಾ ಆಸ್ಪತ್ರೆಗಳಲ್ಲಿ ವಾಸ್ತವ್ಯ ಮಾಡುವ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.

ವಾಸ್ತವ್ಯದ ಕಾರಣಕ್ಕೆ ಜಿಲ್ಲಾಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಪ್ರಯತ್ನ ಆರಂಭವಾಗಿವೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಜತೆಗೆ ಬರುವವರಿಗೆ ಉಳಿಯಲು ತಾವಿಲ್ಲದ ಕಾರಣ ಬಹುತೇಕರು ಆಸ್ಪತ್ರೆಯ ಆವರಣ, ಕಾರಿಡಾರ್‌ಗಳಲ್ಲಿ ಮಲಗುತ್ತಿದ್ದರು.

ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ಸಲುವಾಗಿ ಅಧಿಕಾರಿಗಳ ಎತೆ ಸಮಾಲೋಚನೆ ನಡೆಸಿ, ಎಲ್ಲಾ ಜಿಲ್ಲಾ ಆಸ್ಪತ್ರೆಗಳ ಆವರಣದಲ್ಲಿ ರೋಗಿಗಳ ಸಹಾಯಕರು ಉಳಿಯಲು ಡಾಮೆಂಟರಿ ನಿರ್ಮಿಸುವ ಉದ್ದೇಶ ಹೊಂದಿದ್ದಾರೆ. ಡಾರ್ಮೆಂಟರಿ ನಿರ್ಮಿಸುವುದರಿಂದ ರಾತ್ರಿ ಸುರಕ್ಷಿತವಾಗಿ ಮಲಗಲು, ಶೌಚ, ಸ್ನಾನ, ಊಟೋಪಚಾರ ಕೂಡಾ ಆಗಲಿದೆ. ಇದೂ ಕೂಡಾ 108 ಆಂಬ್ಯುಲೆನ್ಸ್‌ ಯೋಜನೆಯಂತೆ ಜನೋಪಯೋಗಿ ಆಗುವುದರಲ್ಲಿ ಎರಡು ಮಾತಿಲ್ಲ.

ಮೂರು ತಿಂಗಳಲ್ಲಿ 12 ಸಾವಿರ ಕಿ.ಮೀ ಪ್ರವಾಸ

ಅಧಿಕಾರದ ಚುಕ್ಕಾಣಿ ಹಿಡಿದು ಅಭಿವೃದ್ಧಿ ಪರ್ವಕ್ಕೆ ನಾಂದಿ ಹಾಡಬೇಕು ಎನ್ನುವ ಹೊತ್ತಿಗೆ ಇಡೀ ಜಗತ್ತಿಗೆ ಕೋವಿಡ್ 19 ಮಹಾಮಾರಿ ಬಂದಪ್ಪಳಿಸಿದೆ. ದೇಶದ ಇತರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೋವಿಡ್ 19 ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿದ ಬಗ್ಗೆ ಖುದ್ದು ಪ್ರಧಾನಿಯೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೋವಿಡ್ 19 ವೈರಸ್‌ ಆತಂಕದ ಕಾರಣಕ್ಕೆ ಎಲ್ಲರೂ ಮನೆಯಲ್ಲೇ ಉಳಿದರೆ ಆರೋಗ್ಯ ಸಚಿವ ಬಿ.ಶ್ರೀರಾಮುಲು  ಮಾತ್ರ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಓಡಾಡಿದರು. ಎಲ್ಲ ಜಿಲ್ಲೆಗಳಿಗೂ ಪ್ರವಾಸ ಮಾಡಿ ಪರಿಸ್ಥಿತಿ ನಿಭಾಯಿಸುವುದು ಹೇಗೆ? ಆಗಿರುವ ಸಿದ್ಧತೆಗಳೇನು? ಆಗಬೇಕಾದ್ದೇನು? ಹೀಗೆ ಎಲ್ಲವನ್ನೂ ಅವಲೋಕಿಸಿದರು.

ಈ ಮೂರು ತಿಂಗಳ ಅವಧಿಯಲ್ಲಿ ಅವರ ಓಡಾಟ ಬರೋಬ್ಬರಿ 12 ಸಾವಿರ ಕಿ.ಮೀ. ಕೋವಿಡ್ 19 ಸಂದರ್ಭ ಸಮರ್ಥವಾಗಿ ನಿಭಾಯಿಸುವ ಜತೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರಯೋಗಾಲಯ ತೆರೆಯುವ ಮೂಲಕ ಫಲಿತಾಂಶ ವೇಗವಾಗಿ ಸಿಗುವಂತೆ ಮಾಡಿದ್ದಾರೆ. ಜತೆಗೆ ಸ್ಯಾನಿಟೈಸರ್‌, ಮಾಸ್ಕ್ ಆಹಾರದ ಕಿಟ್‌ಗಳ ವಿತರಣೆಯಲ್ಲೂ ಸಚಿವರ ಕಾರ್ಯವೈಖರಿ ಪ್ರಶಂಸನೀಯ.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಮಾಡಿದ ಆರೋಗ್ಯ ಸಚಿವ ಶ್ರೀ ರಾಮುಲು.

ವೈದ್ಯಕೀಯ ಪರಿಕರ ವಿತರಿಸುತ್ತಿರುವ ಆರೋಗ್ಯ ಸಚಿವ ಶ್ರೀರಾಮುಲು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.