Hoysala Temples: ಕನ್ನಡ ನಾಡಿನ ಅದ್ಭುತ ವಾಸ್ತುಶಿಲ್ಪ ಹೊಯ್ಸಳ ಶೈಲಿ


Team Udayavani, Sep 20, 2023, 9:52 AM IST

tdy-9

ಬೇಲೂರು, ಹಳೇಬೀಡು ಹಾಗೂ ಸೋಮನಾಥಪುರದಲ್ಲಿರುವ ಹೊಯ್ಸಳ ದೇಗುಲಗಳು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಕನ್ನಡ ನಾಡಿನ ಅದ್ಭುತ ಹಾಗೂ ಅದಮ್ಯ ಹೊಯ್ಸಳ ಶೈಲಿಯ ವಾಸ್ತುಶಿಲ್ಪದ ಕುರಿತ ಒಂದಿಷ್ಟು ಮಾಹಿತಿ ಇಲ್ಲಿದೆ.

ಕನ್ನಡ ನಾಡನ್ನು ಆಳಿದ ರಾಜಮನೆತನಗಳಲ್ಲಿ ಹೊಯ್ಸಳ ರಾಜ ಮನೆತನ ತನ್ನದೇ ಆದ ಪ್ರಖ್ಯಾತಿ ಪಡೆದಿದೆ. ಸುಮಾರು ಮೂರು ಶತಮಾನಗಳ ಹೊಯ್ಸಳರ ಆಳ್ವಿಕೆಯು ಮಧ್ಯಕಾಲೀನ ಕರ್ನಾಟಕದ ಇತಿಹಾಸದ ಒಂದು ಭವ್ಯ ಅಧ್ಯಾಯ.

ಹೊಯ್ಸಳರು ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಶಿಲ್ಪಕಲೆಗಳ ಪುರೋಭಿವೃದ್ಧಿಗೆ ನೀಡಿದ ಪ್ರೋತ್ಸಾಹ ಅನನ್ಯ. ತುಂಗಭದ್ರೆಯಿಂದ ತಮಿಳುನಾಡಿನ ಮಧುರೈವರೆಗೂ ರಾಜ್ಯವನ್ನು ವಿಸ್ತರಿಸಿದ್ದರು. ಹೊಯ್ಸಳರು ತಮ್ಮ ಕಾಲದಲ್ಲಿ ಹಲವಾರು ದೇವಾಲಯಗಳನ್ನು ನಿರ್ಮಿಸಿದ್ದಾರೆ.

ಇವುಗಳಲ್ಲಿ ಬೇಲೂರಿನ ಚೆನ್ನಕೇಶವ, ಹಳೇಬೀಡಿನ ಹೊಯ್ಸಳೇಶ್ವರ, ಕೇದಾರೇಶ್ವರ ಮತ್ತು ಸೋಮನಾಥಪುರದ ಕೇಶವ ದೇವಾಲಯಗಳು ಹೊಯ್ಸಳ ಶಿಲ್ಪಕಲಾ ವೈಭವವನ್ನು ಜಗದ್‌ ವಿಖ್ಯಾತಗೊಳಿಸಿವೆ. ಹೊಯ್ಸಳರು, ಬಾದಾಮಿ ಚಾಲುಕ್ಯರು ಮತ್ತು ಕಲ್ಯಾಣ ಚಾಲುಕ್ಯರಿಂದ ಕನ್ನಡನಾಡಿನಲ್ಲಿ ರೂಪಗೊಂಡಿದ್ದ ವಾಸ್ತುಶಿಲ್ಪ ಶೈಲಿಯಿಂದ ಪ್ರಭಾವಿತರಾಗಿದ್ದರೂ, ತಮ್ಮದೇ ಆದ ವೈಶಿಷ್ಟ್ಯಪೂರ್ಣ “”ಹೊಯ್ಸಳ ಶೈಲಿ”ಯನ್ನು ರೂಪಿಸಿಕೊಂಡರು. ಈ ಶೈಲಿಯ ಮುಖ್ಯ ಅಂಶಗಳೆಂದರೆ, ದೇವಾಲಯಗಳ ತಳ ವಿನ್ಯಾಸವು ನಕ್ಷತ್ರಾಕಾರದಲ್ಲಿದ್ದು ಮೇಲಿನ ಕಟ್ಟಡವೂ ಅದೇ ವಿನ್ಯಾಸವನ್ನು ಹೊಂದಿರುತ್ತವೆ. ದೇವಾಲಯಗಳನ್ನು ಎತ್ತರವಾದ ಜಗಲಿಯ ಮೇಲೆ ನಿರ್ಮಿಸಿದ್ದಾರೆ.

ಪ್ರತಿಯೊಂದು ದೇವಾಲಯದಲ್ಲಿ ಗರ್ಭಗೃಹ, ನವರಂಗ, ಸುಖನಾಸಿ, ಮೊಗಸಾಲೆ ಮತ್ತು ಅದರ ಸುತ್ತಲೂ ಕಂಬಗಳ ಮಂಟಪಗಳನ್ನು ನಿರ್ಮಿಸಿರುತ್ತಾರೆ. ಗರ್ಭಗೃಹಗಳು ನಕ್ಷತ್ರಾಕಾರವಾಗಿರುತ್ತವೆ. ಶಿಖರಗಳು ಮಟ್ಟಸವಾಗಿದ್ದು ಹಂತ ಹಂತವಾಗಿ ಮೇಲೇರುತ್ತಾ ವಿಮಾನಗಳಿಂದ ಮುಕ್ತಾಯಗೊಳ್ಳುತ್ತವೆ. ಇವರು ದೇವಾಲಯಗಳನ್ನು ಏಕಕೂಟ, ದ್ವಿಕೂಟ, ಚತುಷ್ಕೂಟ ಮತ್ತು ಪಂಚಕೂಟ ಮಾದರಿಯಲ್ಲಿ ನಿರ್ಮಿಸಿದ್ದಾರೆ. ವಿಶೇಷವಾಗಿ ದ್ವಾರಗಳನ್ನು ಮತ್ತು ದೇವಾಲಯದ ಹೊರ ಮೈಯನ್ನು ಅತಿ ಸೂಕ್ಷ್ಮವಾದ ಮತ್ತು ಸುಂದರವಾದ ಕೆತ್ತನೆಗಳಿಂದ ಅಲಂಕೃತಗೊಳಿಸಿದ್ದಾರೆ. ಹೊಯ್ಸಳರ ದೇವಾಲಯಗಳ ಕಂಬಗಳು ಪ್ರತಿಬಿಂಬ ಮೂಡಿಸುವಷ್ಟು ಹೊಳಪಿನಿಂದ ಕೂಡಿರುವುದಲ್ಲದೆ, ಅವುಗಳ ಮೇಲೆ ಕೆತ್ತಿರುವ ಮದನಿಕಾ ವಿಗ್ರಹಗಳು ಆಗಿನ ಕಾಲದ ಶಿಲ್ಪಗಳ ಶ್ರೇಷ್ಠ ಕಲಾ ನೈಪುಣ್ಯಕ್ಕೆ ನಿದರ್ಶನವಾಗಿವೆ.

ಹೊಯ್ಸಳ ಕಲಾಶೈಲಿ ರೂಪುಗೊಳ್ಳಲು ದೊರೆ ವಿಷ್ಣುವರ್ಧನ ಕಾರಣ. ಈತನ ಮೂಲ ಹೆಸರು ಬಿಟ್ಟಿದೇವ. ವಿಷ್ಣುವರ್ಧನನ ಅತ್ಯಂತ ಪ್ರಮುಖ ಸಾಧನೆಯೆಂದರೆ ಗಂಗರಿಂದ ಗಂಗಾವಾಡಿಯನ್ನು ಗೆದ್ದುಕೊಂಡದ್ದು,ಚೋಳರನ್ನು ತಲಕಾಡಿನಿಂದ ಓಡಿಸಿ ಅದನ್ನು ತನ್ನ ರಾಜ್ಯಕ್ಕೆ ಸೇರಿಸಿಕೊಂಡನು. ಕಲೆ ಮತ್ತು ವಾಸ್ತು ಶಿಲ್ಪಗಳ ದೃಷ್ಟಿಯಿಂದ ವಿಷ್ಣುವರ್ಧನನ ಕಾಲ ಅಪೂರ್ವವಾದುದು. ಇವನ ಕಾಲದಲ್ಲಿ ಅಪೂರ್ವವಾದ ಹೊಯ್ಸಳ ಕಲಾಶೈಲಿಯೊಂದು ರೂಪುಗೊಂಡಿತು. ಬೇಲೂರಿನ ಚೆನ್ನಕೇಶವ ದೇವಾಲಯವು ಇವನ ಕಲಾಭಿರುಚಿಗೆ ಜೀವಂತ ಸಾಕ್ಷಿಯಾಗಿದೆ.

ಕರುನಾಡ ಹೆಮ್ಮೆ: ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆ ಗೊಂಡಿರುವುದು ಹೆಮ್ಮೆಯ ಸಂಗತಿ. ನಾಡಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಶ್ವಮಟ್ಟದ ಮೂಲ ಸೌಲಭ್ಯ ಮತ್ತು ಸುರಕ್ಷತೆ ಒದಗಿಸಲು ಬದ್ಧ.- ಸಿದ್ದರಾಮಯ್ಯ, ಮುಖ್ಯಮಂತ್ರಿ

ಭಾರತದ ಪರಂಪರೆಗೆ ಸಾಕ್ಷಿ: ಇದು ಭಾರತಕ್ಕೆ ಹೆಮ್ಮೆಯ ವಿಚಾರ. ಹೊಯ್ಸಳ ವಾಸ್ತುಶಿಲ್ಪವಿರುವ ದೇಗುಲಗಳು ಈಗ ಯುನೆಸ್ಕೋ ಪಟ್ಟಿಗೆ ಸೇರ್ಪಡೆ ಯಾಗಿವೆ. ಹೊಯ್ಸಳ ದೇವಾಲಯಗಳ ಸೌಂದರ್ಯ ಮತ್ತು ಸೂಕ್ಷ್ಮ ವಾಸ್ತುಶಿಲ್ಪವು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಪೂರ್ವಜರ ವಿಶಿಷ್ಟ ಕಲಾತ್ಮಕತೆಗೆ ಸಾಕ್ಷಿ. – ನರೇಂದ್ರ ಮೋದಿ, ಪ್ರಧಾನಿ

-ಟಿ. ಕೆಂಪಣ್ಣ, ಖ್ಯಾತ ಛಾಯಾ ಗ್ರಾಹಕರು

ಟಾಪ್ ನ್ಯೂಸ್

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.