ವಿಶೇಷ ಸ್ಥಾನಮಾನ ಕೊಟ್ಟವರಿಗೆ ಬೆಂಬಲ


Team Udayavani, Apr 9, 2019, 6:00 AM IST

f-24

ವೈ.ಎಸ್‌.ಆರ್‌.ಕಾಂಗ್ರೆಸ್‌ ಪಕ್ಷದ ಸಂಸ್ಥಾಪಕ ವೈ.ಎಸ್‌.ಜಗನ್ಮೋಹನ ರೆಡ್ಡಿ ಹತ್ತು ವರ್ಷಗಳಲ್ಲಿ ಆಂಧ್ರಪ್ರದೇಶ ರಾಜಕೀಯದಲ್ಲಿ ಪ್ರಬಲ ನಾಯಕನಾಗಿ ಹೊರ ಹೊಮ್ಮಿದ್ದಾರೆ. ಮುಂದಿನ ಚುನಾವಣೆಯಲ್ಲಿ ರಾಜ್ಯದ ಹಿತ ಕಾಪಾಡುವವರಿಗೆ ಬೆಂಬಲ ಎಂದಿದ್ದಾರೆ.

ಈ ಚುನಾವಣೆಯನ್ನು ಯಾವ ವಿಷಯ ದೊಂದಿಗೆ ಕಣಕ್ಕೆ ಇಳಿದಿದ್ದೀರಿ?
ಇದು ನಂಬಿಕೆ ಮತ್ತು ಮೋಸದ ನಡುವಿನ ಯುದ್ಧವಾಗಲಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಂಧ್ರಕ್ಕೆ ಮೋಸ ಮಾಡಿದ್ದಾರೆ. 2014ರಲ್ಲಿ ಅವರು ವಾಗ್ಧಾನ ಮಾಡಿದ್ದಕ್ಕೂ, ಅನುಷ್ಠಾನಕ್ಕೂ ಹೋಲಿಕೆಯೇ ಇಲ್ಲ. ಕೆಲ ಸಮಯ ಎನ್‌ಡಿಎ ಜತೆಗಿದ್ದೂ ಏನು ಲಾಭವಾಗಲಿಲ್ಲ.

ಟಿಡಿಪಿ ಸರ್ಕಾರವನ್ನು ಈ ಬಾರಿ ಸೋಲಿಸುತ್ತೀರಾ?
ಹಿಂದಿನ ಚುನಾವಣೆಯಲ್ಲಿ ಸೋಲು ಮತ್ತು ಗೆಲುವಿನ ಅಂತರ ಕೇವಲ ಶೇ.1 ಆಗಿತ್ತು. ಈ ಬಾರಿ ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ. ಹಿಂದಿನ ಬಾರಿ ಆಡಳಿತ ವಿರೋಧಿ ಅಲೆ ಇರಲಿಲ್ಲ. ಪ್ರತಿಪಕ್ಷದಲ್ಲಿದ್ದುದರಿಂದ ಸುಳ್ಳು ಹೇಳಿ ಗೆದ್ದರು. ಸ್ವಲ್ಪ ಮೋದಿ ಅಲೆ, ಪವನ್‌ ಕಲ್ಯಾಣ್‌ ಪ್ರಭಾವ ಅವರಿಗೆ ನೆರವಾಯಿತು.

ವಿಶೇಷ ಸ್ಥಾನ ಮಾನ ಕೊಟ್ಟವರಿಗೆ ಕೇಂದ್ರದಲ್ಲಿ ಬೆಂಬಲ ಎಂದಿದ್ದೀರಿ?
ಕಾಂಗ್ರೆಸ್‌, ಬಿಜೆಪಿ ಬಗ್ಗೆ ನಮಗೆ ನಂಬಿಕೆ ಇಲ್ಲ. ರಾಜ್ಯ ವಿಭಜನೆ ವೇಳೆ ಕಾಂಗ್ರೆಸ್‌ ಸಂಸತ್‌ನಲ್ಲಿ ವಿಶೇಷ ಸ್ಥಾನಮಾನದ ಭರವಸೆ ನೀಡಿತ್ತು. ಬಿಜೆಪಿ ಅದನ್ನು ಬೆಂಬಲಿಸಿದ್ದು ಮಾತ್ರವಲ್ಲದೆ, ಹತ್ತು ವರ್ಷಗಳ ಅವಧಿಯ ಸ್ಥಾನಮಾನದ ವಾಗ್ಧಾನ ಮಾಡಿತ್ತು. 2 ಪಕ್ಷಗಳು ತಮ್ಮ ಮಾತುಗಳನ್ನು ನಡೆಸಲಿಲ್ಲ. ಕೆಸಿಆರ್‌ ಕೂಡ ನಮಗೆ ಬೆಂಬಲ ನೀಡಲಿದ್ದಾರೆ. ಆಂಧ್ರದಲ್ಲಿ 25, ತೆಲಂಗಾಣದಲ್ಲಿ 17; ಹೀಗೆ ನಮ್ಮಲ್ಲಿ ಉತ್ತಮ ಫ‌ಲಿತಾಂಶ ಅನುಕೂಲವಾಗಲಿದೆ.

ಬಿಜೆಪಿ ರಾಷ್ಟ್ರೀಯತೆಯ ಬಗ್ಗೆ ಮತ್ತು ಕಾಂಗ್ರೆಸ್‌ ಉದ್ಯೋಗ ಸೃಷ್ಟಿಯ ಬಗ್ಗೆ ಮಾತನಾಡುತ್ತಿದೆ. ಈ ಬಗ್ಗೆ ಏನು ಹೇಳುತ್ತೀರಿ?
ಪ್ರಧಾನಿ ನರೇಂದ್ರ ಮೋದಿಯವರು ಏನು ಮಾಡಲು ಸಾಧ್ಯವಿದೆಯೋ ಅದಕ್ಕೆ ಬೇಕಾದ ಪ್ರಯತ್ನ ನಡೆಸಿದ್ದಾರೆ. ನಾಯಕತ್ವ ಹೇಗೆ ಇರಬೇಕು ಎನ್ನುವುದನ್ನು ಅವರು ಸಮರ್ಥವಾಗಿಯೇ ಪ್ರದರ್ಶಿಸಿದ್ದಾರೆ. ದೇಶದ ಇತರ ಭಾಗದಲ್ಲಿ ಅವರಿಗೆ ಅದು ಧನಾತ್ಮಕವಾಗಿ ಪ್ರಯೋಜನವಾಗಬಹುದು. ಆದರೆ ಆಂಧ್ರಪ್ರದೇಶಕ್ಕೆ ಸಂಬಂಧಿಸಿದಂತೆ ಯಾವುದೇ ರಾಷ್ಟ್ರೀಯ ಪಕ್ಷಗಳು ಉತ್ತಮ ಸಾಧನೆ ಮಾಡಲಾರವು.

ನೀವು ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಜತೆಗೆ ಕೈ ಜೋಡಿಸಿದ್ದೀರಿ ಎನ್ನುವುದು ಚಂದ್ರಬಾಬು ನಾಯ್ಡು ಆರೋಪಿಸುತ್ತಾರೆ.
ತೆಲಂಗಾಣ ಸಿಎಂ, ನಮ್ಮ ಪಕ್ಷದ ಜತೆಗೆ ಚುನಾವಣಾ ಮೈತ್ರಿ ಇಲ್ಲ. ಆದರೆ ಒಬ್ಬರನ್ನೊಬ್ಬರು ಬೆಂಬಲಿಸುತ್ತಿದ್ದೇವೆ.

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಿಕೊಂಡಿರುವಂತೆ ಅತ್ಯಂತ ಬಡತನದಲ್ಲಿರುವ ಕುಟುಂಬಗಳಿಗೆ ಕನಿಷ್ಠ ಆದಾಯ ಒದಗಿಸುವ ಯೋಜನೆ ಕಾರ್ಯ ಸಾಧ್ಯವಾದೀತೆ?
ರಾಹುಲ್‌ ಗಾಂಧಿಯವರ ಭರವಸೆಯೇ ಒಂದು ಅವಮಾನ. ಪ್ರತಿ ತಿಂಗಳು 12 ಸಾವಿರ ರೂ.ಗಳಿಗಿಂತ ಕಡಿಮೆ ಇರುವ ಎಲ್ಲರಿಗೆ ಯೋಜನೆ ಅನ್ವಯ ಎಂದು ಹೇಳಿದ್ದಾರೆ. ಯೋಜನೆ ಏನೋ ಒಳ್ಳೆಯದೆ. ಆದರೆ ಅನುಷ್ಠಾನ ಹೇಗಾಗುತ್ತದೆ ಎನ್ನು ವುದು ಮುಖ್ಯ. ರಾಹುಲ್‌ ಪ್ರಕಾರ ಜನಸಂಖ್ಯೆಯ ಶೇ.20ರಷ್ಟು ಮಂದಿ ಬಡವರು ಅಥವಾ 5 ಕೋಟಿ ಕುಟುಂಬಗಳಿಗೆ ಅನುಕೂಲವಾಗುತ್ತದೆ ಎಂದು ಹೇಳುತ್ತಾರೆ. ಅವರು ನೀಡಿದ ಸಾಂಖೀಕ ಮಾಹಿತಿ ತಪ್ಪಾಗಿರುವ ಸಾಧ್ಯತೆ ಇದೆ.

(ಸಂದರ್ಶನ ಕೃಪೆ: ದ ಹಿಂದುಸ್ತಾನ್‌ ಟೈಮ್ಸ್‌)

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.