ಹಾವೇರಿ; ರಾಜ್ಯದಲ್ಲೇ ಮೊಟ್ಟ ಮೊದಲ ತ್ರಿವರ್ಣ ಧ್ವಜಾರೋಹಣ…

ಹಾವೇರಿ ಕರ್ನಾಟಕದಲ್ಲಿಯೇ ಅಗ್ರಗಣ್ಯವಾಯಿತೆಂದು ಜನರು ಮಾತನಾಡಲು ಆರಂಭಿಸಿದರು.

Team Udayavani, Jan 6, 2023, 12:39 PM IST

ಹಾವೇರಿ; ರಾಜ್ಯದಲ್ಲೇ ಮೊಟ್ಟ ಮೊದಲ ತ್ರಿವರ್ಣ ಧ್ವಜಾರೋಹಣ…

ಬ್ರಿಟಿಷರ ಕಪಿಮುಷ್ಟಿಯಿಂದ ಭಾರತ ದೇಶವನ್ನು ಸ್ವಾತಂತ್ರ್ಯಗೊಳಿಸಬೇಕೆಂಬ ಉದ್ದೇಶದಿಂದ ಅನೇಕ ಸ್ವಾತಂತ್ರ್ಯ ಹೋರಾಟಗಾರರು ದೇಶಾದ್ಯಂತ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದರು. ಈ ಹೋರಾಟದ ಕಿಚ್ಚು ಇಮ್ಮಡಿಯಾಗಲೆಂದು ಭಾರತದೇಶದಲ್ಲಿ ಸ್ಥಾನಿಕ ಸ್ವರಾಜ್ಯದ ಕಾರ್ಯಾಲಯಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕೆಂದು ರಾಷ್ಟ್ರಮಟ್ಟದಲ್ಲಿ ನಾಯಕರು ನಿರ್ಣಯಿಸಿದರು. ಭಾರತ ದೇಶದಲ್ಲಿ ಈ ವಿಷಯವಾಗಿ ಕೆಲವೇ ಕೆಲವು ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಧ್ವಜಾರೋಹಣ ಮಾಡಲಾಯಿತು.

ಕರ್ನಾಟಕ ಹಾಗೂ ಹಳೆಯ ಅಖಂಡ ಧಾರವಾಡ ಜಿಲ್ಲೆಯಲ್ಲಿ ಈ ವಿಷಯವಾಗಿ ಸ್ವಾತಂತ್ರ್ಯ ಹೋರಾಟಗಾರರು ಗಟ್ಟಿತನ ಪ್ರದರ್ಶಿಸಬೇಕೆಂಬ ಪ್ರಯತ್ನದಲ್ಲಿದ್ದರು. ಆದರೆ ಹಾವೇರಿ ಜನ ಒಂದು ಹೆಜ್ಜೆ ಮುಂದೆ ಎಂಬಂತೆ ಮುನ್ಸಿಪಾಲ್ಟಿಯ ಕಚೇರಿ ಮೇಲೆ ಧ್ವಜಾರೋಹಣ ಮಾಡಬೇಕೆಂಬ ನಿರ್ಣಯವನ್ನು ಅದಾಗಲೇ ಕೈಗೊಂಡಿದ್ದರು.

1930 ಮೇ 3ರಂದು ಸಂಜೆ ಪಟ್ಟಣದ ನಾಗರಿಕರೆಲ್ಲರೂ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಡಂಗುರ ಸಾರಿದರು. ವಿಷಯ ತಿಳಿಯುತ್ತಿದ್ದಂತೆ ರವಿವಾರ (04/05/1930) ಬೆಳಗ್ಗೆ 7 ಗಂಟೆಗೆ ಮುನ್ಸಿಪಾಲ್ಟಿ ಕಚೇರಿ ಎದುರು ಸಾವಿರಾರು ಜನರು ಸೇರಿದರು. ಮುನ್ಸಿಪಾಲ್ಟಿ ಕಟ್ಟಡವನ್ನು ಹಸಿರು ತೋರಣಗಳಿಂದ ಶೃಂಗರಿಸಲ್ಪಟ್ಟಿತ್ತು. ಕಚೇರಿ ಸಿಬ್ಬಂದಿಗಳೆಲ್ಲ ಖಾದಿ ಧರಿಸಿ ಎದೆಯ ಮೇಲೆ ಮೂರು ಬಣ್ಣದ ರಾಷ್ಟ್ರ ನಿಶಾನೆಯ ಚಿಹ್ನೆ ಹಚ್ಚಿಕೊಂಡಿದ್ದರು.

ವಾಲಂಟಿಯರ್ಗಳು ಖಾದಿ ಧರಿಸಿ ರಾಷ್ಟ್ರಧ್ವಜ ಏರಿಸುವ ಪದ್ಧªತಿ ತಿಳಿಸಲು ಆಗಮಿಸಿದ್ದರು. ಸ್ಪೂಲ್‌ ಕಮಿಟಿ ಚೇರಮನ್‌ರಾದ ಹೊಸಮನಿ ಸಿದ್ದಪ್ಪನವರು ರಾಷ್ಟ್ರಧ್ವಜವನ್ನು ಹೆಗಲ ಮೇಲೆ ಹೊತ್ತುಕೊಂಡು ಉತ್ಸವ ಹೊರಡಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜಕ್ಕೆ ಹೆಣ್ಣು ಮಕ್ಕಳು ಆರತಿ ಬೆಳಗಿ, ಪುಷ್ಪ ಅರ್ಪಿಸುತ್ತಿದ್ದರು. ಉತ್ಸವ ಪಟ್ಟಣದ ತುಂಬೆಲ್ಲ ಸಂಚರಿಸಿ ಬೆಳಗ್ಗೆ 9 ಗಂಟೆಗೆ ಮುನ್ಸಿಪಾಲ್ಟಿ ಆವರಣಕ್ಕೆ ಬಂದಿತು.

ಸಿದ್ಧಗೊಳಿಸಿದ್ದ ಕಂಬದ ಕೆಳಗೆ ಎಲ್ಲರೂ ನಿಂತುಕೊಂಡರು. ವಾಲಂಟಿಯರ್‌ ರಾಷ್ಟ್ರಧ್ವಜ ಏರಿಸುವ ಕಾರ್ಯ ಮಾಡಬೇಕೆಂದು ಮುನ್ಸಿಪಾಲ್ಟಿ ಸದಸ್ಯರಾದ ಹೊಂಬಣ್ಣ ಹೊಂಬಣ್ಣನವರ ಪ್ರಾರ್ಥಿಸಿದರು. ಮಹದೇವರಾವ ನಾಡಗೇರ ಇದಕ್ಕೆ ಅನುಮೋದನೆ ನೀಡಿದರು. ಪರಮಣ್ಣ ಹೊಸಮನಿಯವರು ರಾಷ್ಟ್ರಧ್ವಜ ಪೂಜೆಗೈದರು.

ಧ್ವಜಾರೋಹಣಯಾಗುತ್ತಿದ್ದಂತೆಯೇ ರಾಷ್ಟ್ರಗೀತೆ ಮೊಳಗಲಾರಂಭಿಸಿತು. ರಾಷ್ಟ್ರಗೀತೆ ನಂತರ ಚನ್ನಬಸಪ್ಪ ಹಾಲಪ್ಪನವರ ಜನರಿಗೂ ಮುನ್ಸಿಪಾಲಿಟಿ ಸರ್ವ ಸದಸ್ಯರಿಗೂ ಹಾಗೂ ಅಧ್ಯಕ್ಷರಿಗೂ ವಂದಿಸಿದರು. ರಾಷ್ಟ್ರಕಾರ್ಯದಲ್ಲಿ ಹಾವೇರಿ ಕರ್ನಾಟಕದಲ್ಲಿಯೇ ಅಗ್ರಗಣ್ಯವಾಯಿತೆಂದು ಜನರು ಮಾತನಾಡಲು ಆರಂಭಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.