ಗುರುಗಳಿಗೆ ನಮೋ ನಮಃ 


Team Udayavani, Sep 5, 2021, 6:00 AM IST

Untitled-1

ಪ್ರೀತಿಯ ಶಿಕ್ಷಕರೇ… ನಿಮ್ಮೆಲ್ಲರಿಗೂ ಶಿಕ್ಷಕರ ದಿನಾಚರಣೆ ಶುಭಾಶಯಗಳು.

ದೇಶ ಕಂಡ ಶ್ರೇಷ್ಠ ತಣ್ತೀಜ್ಞಾನಿ. ಶಿಕ್ಷಣ ತಜ್ಞ. ಭಾರತೀಯ ಸಂಸ್ಕೃತಿ, ಪರಂಪರೆಯ ಅಂತಾ ರಾಷ್ಟ್ರೀಯ ರಾಯಭಾರಿ. ವಾಗ್ಮಿ. ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಹುದ್ದೆಗಳನ್ನು ಅಲಂಕರಿಸಿ, ಭಾರತದಲ್ಲಿ ಶಿಕ್ಷಣಕ್ಕೆ ಒತ್ತು ನೀಡಿದ ಭಾರತರತ್ನ ಡಾ| ಎಸ್‌. ರಾಧಾಕೃಷ್ಣನ್‌ ಅವರ ಜನ್ಮ ದಿನವನ್ನು “ಶಿಕ್ಷಕರ ದಿನ’ವಾಗಿ ಆಚರಿಸುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ.

ಪಾಠ ಕಲಿಸಿದ, ಮಾರ್ಗದರ್ಷನ ನೀಡಿದ ಗುರುಗಳು ಪ್ರತಿಯೊಬ್ಬರ ಜೀವನದಲ್ಲಿ ಇರುತ್ತಾರೆ. ಭವಿಷ್ಯ ರೂಪಿಸಿಕೊಳ್ಳಲು, ಉತ್ತಮ ಜೀವನ ನಡೆಸಲು ಮಾರ್ಗದರ್ಶನ ನೀಡಿದ ಗುರುಗಳಿಗೆ ವಂದಿಸಿ, ಸ್ಮರಿಸಲು ಈ ದಿನವನ್ನು ಮೀಸಲಿಡಲಾಗಿದೆ.

ಕಳೆದ ಒಂದೂವರೆ ವರ್ಷದಲ್ಲಿ ಎದುರಾದ ಹಲವು ಸವಾಲುಗಳನ್ನು ಸಮ ರ್ಥವಾಗಿ ಎದುರಿಸಿರುವ ಶಿಕ್ಷಕರು, ಕೊರೊ ನಾ ಮಹಾಮಾರಿಯ ನಡುವೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳು ಮುಂದುವರಿ ಯಲು ಕಾರಣರಾದರು. ಕೊರೊ ನಾ ಸಂದರ್ಭದಲ್ಲಿ ಮಕ್ಕಳ ವ್ಯಾಸಂಗಕ್ಕಾಗಿ ಸರಕಾರ ಆರಂಭಿಸಿದ ವಿದ್ಯಾಗಮ ಯೋಜನೆ ಜಾರಿಗೊಳಿಸಲು ಶಿಕ್ಷಕರ ಶ್ರಮ ಅವಿಸ್ಮರ ಣೀಯ. ಮರಗಳ ಕೆಳಗೆ, ಶಾಲೆಗಳ ಆವರಣ, ಸಮುದಾಯ ಭವನ, ದೇಗುಲ ಆವರಣದಂತಹ ಸ್ಥಳಗಳಲ್ಲಿ ಕೊರೊ ನಾ ಸುರಕ್ಷತ ಕ್ರಮಗಳೊಂದಿಗೆ ತರಗತಿಗಳನ್ನು ತೆಗೆದುಕೊಳ್ಳುವ ಮೂಲಕ ಮಕ್ಕಳ ಶಿಕ್ಷಣ ಮುಂದುವರಿಯಲು ಶ್ರಮಿಸಿರುವುದು ಗಮನಾರ್ಹ.

ಶಿಕ್ಷಕರು ಪಾಠ ಮಾಡುವುದು ಮತ್ತು ಚುನಾವಣೆ ಕರ್ತವ್ಯಗಳ ಜತೆಗೆ ಕೊರೊ ನಾ ದಂತಹ ತುರ್ತು ಸಂದರ್ಭಗಳಲ್ಲಿ ಅದರ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವುದು ಸಂತಸದ ಸಂಗತಿ.

ಆರೋಗ್ಯ ಇಲಾಖೆ ಜತೆ ಕೈಜೋಡಿಸಿ ಕೊರೊ ನಾ ಸೋಂಕಿತರಿಗೆ, ಕ್ವಾರಂಟೈನ್‌¬ನಲ್ಲಿರುವವರಿಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ಕೊರೊ ನಾ ಸೋಂಕಿತರು ಮತ್ತು ಪ್ರಾಥಮಿಕ ಸಂಪರ್ಕಿತರ ಪತ್ತೆ ಕಾರ್ಯದಲ್ಲಿ ನೆರವಾಗುವುದು, ಲಸಿಕೆ ಸರ್ವೇ ಕಾರ್ಯ ಸೇರಿದಂತೆ ಕೊರೊ ನಾ ಮುಂಚೂಣಿ ಆರೋಗ್ಯ ಕಾರ್ಯಕರ್ತರಾಗಿ ಧೈರ್ಯದಿಂದ ಕರ್ತವ್ಯ ನಿರ್ವಹಿಸುವ ಮೂಲಕ ಶಿಕ್ಷಕರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ತರಗತಿಗಳು ಪುನರಾರಂಭಕ್ಕೆ ಉತ್ಸಾಹ: ಒಂದೂವರೆ ವರ್ಷದ ಬಳಿಕ ಭೌತಿಕ ತರಗತಿಗಳನ್ನು ಪುನರಾರಂಭಿಸಲು ನಿರ್ಧಾರ ತೆಗೆದುಕೊಂಡಾಗ ಶಿಕ್ಷಕರ ಸಹಕಾರ ಅತೀ ಮುಖ್ಯವಾಗಿತ್ತು. ಶಾಲೆಗಳನ್ನು ಆರಂಭಿಸು ತ್ತೇವೆ ಎಂದಾಗ ಅತೀ ಉತ್ಸಾಹ ತೋರಿದರು. ಶಾಲೆಗೆ ಬರಲು ನಾವೆಲ್ಲ ಸಿದ್ದ ಎಂದರು. ಇದು ಮಕ್ಕಳ ಶೈಕ್ಷಣಿಕ ಭವಿಷ್ಯದ ಕುರಿತು ಶಿಕ್ಷಕರಿಗೆ ಅತೀ ಹೆಚ್ಚಿನ ಕಾಳಜಿ ಇದೆ ಎಂಬುದು ತೋರಿಸುತ್ತದೆ. ಲಸಿಕೆ ಕುರಿತು ಹಲವು ಹಿಂಜರಿಕೆಗಳ ನಡುವೆ ನಮ್ಮ ರಾಜ್ಯದ ಬಹುತೇಕ ಶಿಕ್ಷಕರು ಲಸಿಕೆ ಪಡೆದು ತರಗತಿಗಳಿಗೆ ಆಗಮಿಸಿದರು,

ಪ್ರೌಢಶಾಲೆ ಮತ್ತು ಪಿಯು ತರಗತಿಗಳ ಆರಂಭದ ಮೊದಲ ದಿನವನ್ನು ಹಬ್ಬದಂತೆ ಸಂಭ್ರಮಿಸಿದರು. ಶಾಲೆ, ಕಾಲೇಜುಗಳನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಸುರಕ್ಷತ ಕ್ರಮಗಳನ್ನು ಪಾಲಿಸಿಕೊಂಡು ಮಕ್ಕಳು ಕೋವಿಡ್‌ ನಿಯಮಗಳನ್ನು ಪಾಲಿ ಸುವಂತೆ ನೋಡಿಕೊಳ್ಳುತ್ತಿದ್ದಾರೆ. ಶಿಕ್ಷಕರ ಉತ್ಸಾಹ ನೋಡಿ ಲಕ್ಷಾಂತರ ಪಾಲಕರು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಗೈರು ಹಾಜರಾಗಿರುವ ಮಕ್ಕಳನ್ನು ಶಾಲೆಗೆ ಕರೆತರಲು ಶಿಕ್ಷಕರು ಸ್ವತಃ ಮನೆಗಳಿಗೆ ಹೋಗುತ್ತಿದ್ದಾರೆ. ಶೈಕ್ಷಣಿಕ ಭವಿಷ್ಯ, ದೇಶದ ಭವಿಷ್ಯದ ಪ್ರಜೆಗಳನ್ನು ರೂಪಿಸಲು ಕೊರೊ ನಾ ಸಂಕಷ್ಟದ ಸಂದ ರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಭಾರತ ರತ್ನ ಡಾ| ಎಸ್‌. ರಾಧಾಕೃಷ್ಣನ್‌ ಅವರ ಜನ್ಮ ದಿನದಂದು ನೆನೆಯುವುದಕ್ಕಿಂತ ಬೇರೆ ಸುಸಂದರ್ಭವಿಲ್ಲ.

ಶಿಕ್ಷಣ ಇಲಾಖೆ, ಶಿಕ್ಷಕರ ಶ್ರಮ, ಪ್ರಯತ್ನದಿಂದ ಸರಕಾರಿ ಶಾಲೆಗಳ ಭೌತಿಕ ತರಗತಿಗಳಿಗೆ ದೊಡ್ಡ ಸಂಖ್ಯೆಯಲ್ಲಿ ಮಕ್ಕಳು ಹಾಜರಾಗುತ್ತಿದ್ದಾರೆ. ಪ್ರವೇಶಗಳು ಕೂಡ ಗಣನೀಯವಾಗಿ ಹೆಚ್ಚುತ್ತಿವೆ.

ಪ್ರಸಕ್ತ ಸಾಲಿನಲ್ಲಿ (2021-22) 45.63 ಲಕ್ಷಕ್ಕೂ ಹೆಚ್ಚು ಮಕ್ಕಳು ಸರಕಾರಿ ಶಾಲೆಗಳ ತರಗತಿಗಳಿಗೆ ಪ್ರವೇಶ ಪಡೆದಿದ್ದಾರೆ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಮೂಲಸೌಕರ್ಯಗಳ ಲಭ್ಯತೆ ಸೇರಿದಂತೆ ಒಟ್ಟಾರೆಯಾಗಿ ಸರಕಾರಿ ಶಾಲೆಗಳು ಸುಧಾರಣೆಯಾಗುತ್ತಿರುವ ಸಂಕೇತವಾಗಿದೆ.

ಸರಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಒಟ್ಟಾರೆ ದಾಖಲಾತಿ 1.01 ಕೋಟಿಗೂ ಹೆಚ್ಚಿದೆ. ಒಂದನೇ ತರಗತಿಗೆ ಅಕ್ಟೋಬರ್‌ ಅಂತ್ಯದವ ರೆಗೂ ದಾಖಲಾತಿಗೆ ಅವಕಾಶವಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಒಂದನೇ ತರಗತಿ ಹಾಗೂ ಇನ್ನಿತರ ತರಗತಿಗಳಿಗೆ ದಾಖಲಾತಿ ಗಳು ಆಗುವ ವಿಶ್ವಾಸವಿದೆ.

ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಹೋಲಿಸಿದರೆ ಸರಕಾರಿ ಶಾಲೆಗಳಲ್ಲಿ ಅತೀ ಹೆಚ್ಚಿನ ದಾಖಲಾತಿಗಳು ಆಗಿರುವುದು ಸಂತೋಷದ ಸಂಗತಿ. ಇನ್ನು ಮುಂದೆ ಸರಕಾರ ಮತ್ತು ಸರಕಾರಿ ಶಾಲೆಗಳ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ. ಒಂದೂವರೆ ವರ್ಷದಿಂದ ಭೌತಿಕ ತರಗತಿಗಳಿಂದ ದೂರ ಉಳಿದಿರುವ ಮಕ್ಕಳು ಶಾಲೆಗೆ ಬಂದಿದ್ದಾರೆ.

ಹಿಂದಿನ ತರಗತಿಗಳ ಪಾಠಗಳನ್ನು ತೆಗೆದ ಕೊಳ್ಳುವ ಮೂಲಕ ಮಕ್ಕಳ ನೆನಪಿನ ಶಕ್ತಿಗೆ ಚುರುಕು ಮುಟ್ಟಿಸುವ ಜತೆಗೆ ಈ ಸಾಲಿನ ಪಠ್ಯಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣ ಗೊಳಿಸುವ ಮಹತ್ವದ ಜವಾಬ್ದಾರಿ ಶಿಕ್ಷಕರ ಮೇಲೆ ಇದೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ಪೂರ್ಣ ವಿಶ್ವಾಸ ನನಗಿದೆ.

ಮತ್ತೂಮ್ಮೆ ನಿಮ್ಮೆಲ್ಲರಿಗೂ ಶಿಕ್ಷಕರ ದಿನಾಚರಣೆ ಶುಭಾಶಯಗಳು.

-ಬಿ.ಸಿ ನಾಗೇಶ್‌, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.