ಜೆಡಿಎಸ್‌ ಒಳ ಏಟು, ದಲಿತ ಓಟು, ಬಿಜೆಪಿ ಗೆಲುವಿನ ಗುಟ್ಟು


Team Udayavani, May 25, 2019, 5:00 AM IST

jds-olaguttu

ಚಾಮರಾಜನಗರ: ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಂಸದ ಆರ್‌.ಧ್ರುವನಾರಾಯಣ ಅವರು ಅಭಿವೃದ್ಧಿ ಕೆಲಸಗಳಲ್ಲಿ ದೇಶದ ಮೂರನೇ ಮತ್ತು ರಾಜ್ಯದ ಮೊದಲನೇ ಸಂಸದ ಎಂಬ ಹೆಗ್ಗಳಿಕೆ ಪಡೆದಿದ್ದರೂ, ಸೋಲು ಕಾಣಲು ಪ್ರಮುಖ ಕಾರಣವಾದದ್ದು, ದೇಶಾದ್ಯಂತ ಎದ್ದ ಮೋದಿ ಅಲೆ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್‌ ಅವರ ವೈಯಕ್ತಿಕ ವರ್ಚಸ್ಸು.

ಶ್ರೀನಿವಾಸ ಪ್ರಸಾದ್‌ ಅವರು 1,817 ಮತಗಳ ಅಂತರದ ಪ್ರಯಾಸದ ಗೆಲುವು ಸಾಧಿಸಿದ್ದಾರೆ. 18 ಸುತ್ತುಗಳಲ್ಲೂ ಮುಂದಿದ್ದ ಧ್ರುವ ಅವರನ್ನು ಕೊನೆಯ ನಾಲ್ಕು ಸುತ್ತುಗಳಲ್ಲಿ ಹಿಂದಿಕ್ಕಿ ಜಯವನ್ನು ಬಿಜೆಪಿ ತನ್ನದಾಗಿಸಿಕೊಂಡಿತು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಐದು ಬಾರಿ ಗೆದ್ದು, ಸಂಸದರಾಗಿದ್ದ ಶ್ರೀನಿವಾಸಪ್ರಸಾದ್‌ಗೆ ಕ್ಷೇತ್ರದ ಆಳ-ಅಗಲ ಕರಗತವಾಗಿದೆ.

ಧ್ರುವನಾರಾಯಣ ಅವರು ಕ್ಷೇತ್ರದ ಮೂಲೆ, ಮೂಲೆ ಗಳಿಗೂ ಹೋಗಿ ಮತಯಾಚಿಸಿದರೆ, ಶ್ರೀನಿವಾಸಪ್ರಸಾದ್‌ ಅವರು ಬಹಿರಂಗ ಪ್ರಚಾರಕ್ಕೆ ಹೆಚ್ಚು ಬರಲಿಲ್ಲ. ತಮ್ಮ ಅನು ಭವದ ಬಲದಿಂದ ಗೆಲುವಿನ ತಂತ್ರಗಳನ್ನು ಪ್ರಯೋಗಿಸಿ ಯಶಸ್ವಿಯಾದರು.

* ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿರುವ ದಲಿತ ಮತಗಳು ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳಾಗಿದ್ದವು. ರಾಜ್ಯದ ಅಗ್ರಪಂಕ್ತಿಯ ದಲಿತ ನಾಯಕರಾಗಿರುವ ಶ್ರೀನಿವಾಸಪ್ರಸಾದ್‌ ಅವರು ಬಿಜೆಪಿಯವರಾದರೂ ಸಹ ತಮ್ಮ ಶಕ್ತಿಯಿಂದ ದಲಿತ ಮತಗಳನ್ನು ಗಣನೀಯ ಪ್ರಮಾಣದಲ್ಲಿ ಪಡೆಯುವಲ್ಲಿ ಯಶಸ್ವಿಯಾದರು.

* ಇನ್ನು, ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿ ನಿರೀಕ್ಷೆಗಿಂತ ಹೆಚ್ಚು ಮತಗಳನ್ನು ಪಡೆದದ್ದು ಸಹ ಕಾಂಗ್ರೆಸ್‌ಗೆ ಮುಳುವಾಯಿತು. ಬಿಎಸ್‌ಪಿಯ ಡಾ.ಶಿವಕುಮಾರ್‌ 87,631 ಮತಗಳನ್ನು ಪಡೆದರು. ಕಳೆದ ಬಾರಿ ಬಿಎಸ್‌ಪಿ 34 ಸಾವಿರ ಮತಗಳನ್ನು ಪಡೆದಿತ್ತು. ಬಿಎಸ್‌ಪಿ ಕಸಿದುಕೊಂಡಿರುವ ಮತಗಳಲ್ಲಿ ಹೆಚ್ಚಿನವು ಕಾಂಗ್ರೆಸ್‌ಗೆ ಬರಬೇಕಾಗಿದ್ದ ಮತಗಳು.

* ಕ್ಷೇತ್ರದಲ್ಲಿ ಪುಟ್ಟರಂಗ ಶೆಟ್ಟಿ ಶಾಸಕರಾದ ನಂತರ ಉಪ್ಪಾರ ಸಮುದಾಯದ ಮತಗಳು ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷಕ್ಕೆ ಹೋಗುತ್ತಿರಲಿಲ್ಲ. ಈ ಬಾರಿ ಉಪ್ಪಾರ ಮತಗಳು ಗಮನಾರ್ಹ ಪ್ರಮಾಣದಲ್ಲಿ ಬಿಜೆಪಿಗೆ ಹೋಗಿವೆ. ಅದೇ ಸಮುದಾಯದ ಉಸ್ತುವಾರಿ ಸಚಿವರಿದ್ದರೂ ಉಪ್ಪಾರರ ಮತಗಳನ್ನು ಇಡುಗಂಟಾಗಿ ಉಳಿಸಿಕೊಳ್ಳುವಲ್ಲಿ ಅವರು ಸಫ‌ಲರಾಗಲಿಲ್ಲ.

* ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.