ಚಂದ್ರನಲ್ಲಿದೆ 1 ಲಕ್ಷ ವರ್ಷಕ್ಕೆ ಬೇಕಾದ ಆಮ್ಲಜನಕ?


Team Udayavani, Nov 13, 2021, 6:50 AM IST

ಚಂದ್ರನಲ್ಲಿದೆ 1 ಲಕ್ಷ ವರ್ಷಕ್ಕೆ ಬೇಕಾದ ಆಮ್ಲಜನಕ?

ಲಿಸ್ಮೋರ್‌ (ಆಸ್ಟ್ರೇಲಿಯಾ): ಆಧುನಿಕ ಖಗೋಳ ವಿಜ್ಞಾನವು, ಭೂಮಿಯ ಸುತ್ತಲೂ ಸುತ್ತುವ ಚಂದ್ರನ ಬಗ್ಗೆ ಎರಡು ಕುತೂಹಲಕರ ವಿಚಾರವನ್ನು ಪತ್ತೆ ಹಚ್ಚಿದೆ. ಮೊದಲನೆಯದಾಗಿ ಚಂದ್ರನಲ್ಲಿರುವ ಆಮ್ಲಜನಕ, ಅಲ್ಲಿರುವ ಬಂಡೆಗಳು ಹಾಗೂ ಮಣ್ಣಿನ ಕಣಗಳಲ್ಲಿ ಘನರೂಪದಲ್ಲಿ ಅಡಕವಾಗಿದೆ ಎಂಬುದು ಹಾಗೂ ಕೋಟ್ಯಂತರ ವರ್ಷಗಳ ಹಿಂದೆ ಚಂದ್ರನಿಂದ ಸಿಡಿದಿದ್ದ ಚೂರೊಂದು ಈಗಲೂ ಸೂರ್ಯನ ಸುತ್ತಲೂ ಸುತ್ತುತ್ತಿದೆ.  ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ವಿಜ್ಞಾನಿಗಳು ಮತ್ತಷ್ಟು ಸಂಶೋಧನೆಗಳತ್ತ ಮುಂದಾಗಿದ್ದಾರೆ.

ಚಂದ್ರನಲ್ಲಿರುವ ಆಮ್ಲಜನಕವು ಬಂಡೆಗಳಲ್ಲಿ, ಮಣ್ಣಿನಲ್ಲಿ ಅಡಗಿರುವುದರಿಂದ ಅದನ್ನು ಅನಿಲ ರೂಪವಾಗಿ ಪರಿವರ್ತಿಸಲು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಲು ಅಮೆರಿಕ ಹಾಗೂ ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಗಳು ನಿರ್ಧರಿಸಿದ್ದಾರೆ.  ಇದು ಸಾಧ್ಯವಾದರೆ ಆ ಗ್ರಹದಲ್ಲಿ ಸುಮಾರು 800 ಕೋಟಿ ಜನರು, 1 ಲಕ್ಷ ವರ್ಷಗಳವರೆಗೆ ಜೀವಿಸುವಷ್ಟು ಆಮ್ಲಜನಕವು ಉಸಿರಾಟಕ್ಕೆ ಲಭ್ಯವಾಗಲಿದೆ ಎಂಬುದು ವಿಜ್ಞಾನಿಗಳ ಅಂದಾಜು.  ಈ ಬೃಹತ್‌ ಯೋಜನೆಗಾಗಿ ಅಮೆರಿಕ ಬಾಹ್ಯಾಕಾಶ ಸಂಸ್ಥೆ (ನಾಸಾ) ಹಾಗೂ ಆಸ್ಟ್ರೇಲಿಯಾ ಬಾಹ್ಯಾಕಾಶ ಸಂಸ್ಥೆ (ಎಎಸ್‌ಎ) ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಇದು ಸಾಧ್ಯವಾದರೆ ಕೆಲವು ದಶಕಗಳಲ್ಲಿ ಚಂದ್ರನು ವಾಸಯೋಗ್ಯವಾಗಬಹುದು.

ಸುತ್ತುತ್ತಿದೆ ಚಂದ್ರನ ಚೂರು!: ಕೋಟ್ಯಂತರ ವರ್ಷಗಳ ಹಿಂದೆ, ಮಂಗಳ ಗ್ರಹದಷ್ಟು ಬೃಹದಾಕಾರದ ಹೆಬ್ಬಂಡೆಯೊಂದು ಭೂಮಿಗೆ ಅಪ್ಪಳಿಸಿದ್ದರಿಂದಾಗಿ ಭೂಮಿಯ ಚೂರೊಂದು ಸಿಡಿದು ಚಂದ್ರನಾಗಿ ರೂಪುಗೊಂಡಿದೆ ಎಂಬ ಸಿದ್ಧಾಂತವನ್ನು ದಶಕಗಳ ಹಿಂದೆಯೇ ವಿಜ್ಞಾನಿಗಳು ಒಪ್ಪಿಕೊಂಡಿದ್ದಾರೆ. ಆಗ ಸಂಭವಿಸಿದ ಘರ್ಷಣೆಯ ವೇಳೆ ಚಂದ್ರನಿಂದಲೇ ಸಿಡಿದ ಸಣ್ಣ ಚೂರೊಂದು 150 ಅಡಿ ಉದ್ದ ಹಾಗೂ 190 ಅಡಿ ಅಗಲವಿರುವ ಬಂಡೆಯು, ಭೂಮಿಯಿಂದ 9 ಮಿಲಿಯನ್‌ ಮೈಲುಗಳ ದೂರದಲ್ಲಿ ಸೂರ್ಯನ ಸುತ್ತಲೂ ಈಗಲೂ ಸುತ್ತುತ್ತಿದೆ ಎಂಬುದನ್ನು ಆರಿಝೋನಾ ವಿಶ್ವವಿದ್ಯಾವಿಲಯದ ಖಗೋಳ ವಿಜ್ಞಾನ ವಿಭಾಗದ ಸಂಶೋಧಕರ ತಂಡವೊಂದು ಹೇಳಿದೆ.

ಅವರ ಸಂಶೋಧನ ಪ್ರಬಂಧ, “ನೇಚರ್‌ ಕಮ್ಯೂನಿಕೇಷನ್ಸ್‌’  ವೈಜ್ಞಾನಿಕ ನಿಯತಕಾಲಿಕೆಯಲ್ಲಿ ಪ್ರಕಟವಾಗಿದೆ. 2016ರಲ್ಲೇ ಇದು ಪತ್ತೆಯಾಗಿತ್ತಾದರೂ ಚಂದ್ರನಿಂದಲೇ ಸಿಡಿದಿರುವ ಚೂರು ಎಂಬುದು ತಮ್ಮ ಸಂಶೋಧನೆಯಿಂದ ತಿಳಿದುಬಂದಿದೆ ಎಂದು ಖಗೋಳ ವಿಜ್ಞಾನಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.