ಗಣರಾಜ್ಯೋತ್ಸವ 55 ವರ್ಷಗಳ ಬಳಿಕ ವಿದೇಶಿ ಮುಖ್ಯ ಅತಿಥಿ ಇಲ್ಲ


Team Udayavani, Jan 16, 2021, 7:25 AM IST

ಗಣರಾಜ್ಯೋತ್ಸವ  55 ವರ್ಷಗಳ ಬಳಿಕ  ವಿದೇಶಿ ಮುಖ್ಯ ಅತಿಥಿ ಇಲ್ಲ

ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಗ್ಲೆಂಡಿನ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಬೇಕಿತ್ತು. ಆದರೆ ಕೋವಿಡ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಅವರು ಭಾರತ ಪ್ರವಾಸವನ್ನು ಮುಂದೂಡಿದ್ದಾರೆ. ಅವರ ಬದಲು ಸುರಿನಾಮ್‌ ಅಧ್ಯಕ್ಷ ಚಂದ್ರಿಕಾ ಪ್ರಸಾದ್‌ ಅವರನ್ನು ಆಹ್ವಾನಿಸಲಾಗುತ್ತದೆ ಎನ್ನಲಾಗಿತ್ತಾದರೂ ಬಳಿಕ ನಿರ್ಧಾರವನ್ನು ಕೈಬಿಡಲಾಯಿತು. ಹೀಗಾಗಿ ಕಳೆದ 55 ವರ್ಷಗಳಲ್ಲಿ ಇದೇ ಮೊದಲ ಬಾರಿ ಗಣರಾಜ್ಯೋತ್ಸವ ಕಾರ್ಯಕ್ರಮ ಮುಖ್ಯ ಅತಿಥಿ ಇಲ್ಲದೆ ನಡೆಯಲಿದೆ.

1966 ರ ಬಳಿಕ ಇಂತಹ ವಿದ್ಯಮಾನ ನಡೆಯುತ್ತಿದೆ. ಸಾಮಾನ್ಯವಾಗಿ ಗಣರಾಜ್ಯೋತ್ಸವದ ಅತಿಥಿಗಳನ್ನು ತಿಂಗಳುಗಳ ಮೊದಲೇ ಘೋಷಿಸಲಾಗುತ್ತದೆ. ಆದರೆ ಒಮ್ಮೆ ವಿಳಂಬವಾಗಿತ್ತು. 2019ರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಆಹ್ವಾನಿಸಲಾಗಿತ್ತು. ಕಡೆಯ ಕ್ಷಣದಲ್ಲಿ ಅವರು ಭಾರತ ಭೇಟಿ ರದ್ದುಗೊಳಿಸಿದ್ದರಿಂದಾಗಿ ದ. ಆಫ್ರಿಕಾದ ಅಧ್ಯಕ್ಷ ಸಿರಿಲ್‌ ರಾಮಾಫೋಸಾ ಅವರಿಗೆ ಆಹ್ವಾನ ನೀಡಲಾಗಿತ್ತು.

ಉದ್ದೇಶ ಏನು? :

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿದೇಶಿ ನಾಯಕರನ್ನು ಆಹ್ವಾನಿಸುವುದರ ಮುಖ್ಯ ಉದ್ದೇಶ ಉಭಯ ದೇಶಗಳ ನಡುವಿನ ಸಂಬಂಧವನ್ನು ವೃದ್ಧಿಸುವುದಾಗಿದೆ. ಈ ಸಂದರ್ಭದಲ್ಲಿ ಆಯೋಜಿಸಲಾಗುವ  ಪರೇಡ್‌ನ‌ಲ್ಲಿ ದೇಶದ ವೈವಿಧ್ಯಮಯ ಸಂಸ್ಕೃತಿ ಮತ್ತು ದೇಶದ ಸೇನಾ ಪಡೆಗಳ ಶಕ್ತಿ, ಸಾಮರ್ಥ್ಯವನ್ನು ಪ್ರದರ್ಶಿಸಲಾಗುತ್ತದೆ.

1950 ‌ ಜನವರಿ 26ರಂದು ನಡೆದ ಮೊದಲ ಗಣರಾಜ್ಯೋತ್ಸವ ಪರೇಡ್‌ಗೆ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾದ ಅಧ್ಯಕ್ಷ ಡಾ| ಸುಕನೊì ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು. 1955ರಲ್ಲಿ ರಾಜ್‌ಪಥ್‌ನಲ್ಲಿ ಮೊದಲ ಪರೇಡ್‌ ನಡೆದಾಗ ಪಾಕಿಸ್ಥಾನದ ಗವರ್ನರ್‌ ಜನರಲ್‌ ಮಲಿಕ್‌ ಗುಲಾಮ್‌ ಮೊಹಮ್ಮದ್‌ ಅವರನ್ನು ಆಹ್ವಾನಿಸಲಾಯಿತು.

1950 ರಿಂದ 1954ರ ವರೆಗೆ ಪರೇಡ್‌ಗೆ ರಾಜ್‌ಪಥ್‌ ಕೇಂದ್ರವಾಗಿರಲಿಲ್ಲ. ಈ ವರ್ಷಗಳಲ್ಲಿ ಪರೇಡ್‌ ಅನ್ನು ಕ್ರಮವಾಗಿ ಇರ್ವಿನ್‌ ಕ್ರೀಡಾಂಗಣ (ಈಗ ರಾಷ್ಟ್ರೀಯ ಕ್ರೀಡಾಂಗಣ), ಕಿಂಗ್ಸ್‌ವೇ, ಕೆಂಪು ಕೋಟೆ ಮತ್ತು ರಾಮ್‌ಲೀಲಾ ಮೈದಾನದಲ್ಲಿ ನಡೆಸಲಾಗಿತ್ತು. 1955ರಿಂದ ಪರೇಡ್‌ಗೆ ರಾಜ್‌ಪಥ್‌ ಶಾಶ್ವತ ಸ್ಥಳವಾಯಿತು. ರಾಜಪಥದ ಹಳೆಯ ಹೆಸರು ಕಿಂಗ್ಸ್‌ವೇ.

ಗಣ್ಯರ ಪ್ರತಿನಿಧಿ ಹಾಜರ್‌! :

ಕೆಲವೊಮ್ಮೆ ಆಹ್ವಾನಿತ ರಾಷ್ಟ್ರದ ರಾಷ್ಟ್ರಪತಿ ಅಥವಾ ಸರಕಾರದ ಮುಖ್ಯಸ್ಥರು ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದ ಸಂದರ್ಭಗಳಿವೆ. 1955ರಲ್ಲಿ ಪಾಕಿಸ್ಥಾನ ಮಾಡಿದಂತೆ ಗಣರಾಜ್ಯೋತ್ಸವ ಪರೇಡ್‌ಗೆ ಸಾಕ್ಷಿಯಾಗಲು ಗವರ್ನರ್‌-ಜನರಲ್‌ ಮಲಿಕ್‌ ಗುಲಾಮ್‌ ಮುಹಮ್ಮದ್‌ ಅವರನ್ನು ಕಳುಹಿಸಿದ್ದರು. ಹೀಗೆ 1957, 1958, 1959, 1964, 1965, 1977 ಮತ್ತು 1989ರಲ್ಲಿ ಗಣ್ಯರ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

3 ಬಾರಿ ವಿದೇಶಿ ಅತಿಥಿಗಳಿರಲಿಲ್ಲ :

ಈ ವರೆಗೆ ಒಟ್ಟು 3 ಬಾರಿ ಯಾವುದೇ ವಿದೇಶಿ ಅತಿಥಿಗಳನ್ನು ಗಣರಾಜ್ಯೋತ್ಸವಕ್ಕೆ ಆಹ್ವಾನಿಸಿಲ್ಲ. ಅದು 1952, 1953 ಮತ್ತು 1966ರಲ್ಲಿ. ಇನ್ನು 4 ಗಣರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಇಬ್ಬರಿಗಿಂತ ಹೆಚ್ಚು ಅತಿಥಿಗಳನ್ನು ಆಹ್ವಾನಿಸಲಾಗಿತ್ತು. ಅದರಲ್ಲೂ 2018ರಲ್ಲಿ 10 ಆಸಿಯಾನ್‌ ರಾಷ್ಟ್ರಗಳ ಹತ್ತು ಪ್ರಮುಖರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

ಅತ್ಯುನ್ನತ ಗೌರವ :

ಭಾರತದ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಮುಖ್ಯ ಅತಿಥಿಗೆ ಪ್ರೊಟೋಕಾಲ್‌ ಮೂಲಕ ದೇಶದ ಅತ್ಯುನ್ನತ ಗೌರವವನ್ನು ನೀಡಲಾಗುತ್ತದೆ. ಪರೇಡ್‌ಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸುವುದು ವಿದೇಶಿ ಗಣ್ಯರಿಗೆ ಭಾರತ ಸರಕಾರ ನೀಡುವ ಅತ್ಯುನ್ನತ ಗೌರವವೆಂದು ಪರಿಗಣಿಸಲಾಗಿದೆ. ಪರೇಡ್‌ನೊಂದಿಗೆ ಪ್ರಧಾನಿ ಮತ್ತು ಆಹ್ವಾನಿತ ಮುಖ್ಯ ಅತಿಥಿಗಳ ನಡುವೆ ದ್ವಿಪ ಕ್ಷೀಯ ಶೃಂಗ ಸಭೆಯೂ ನಡೆಯುವುದರಿಂದ ಇದೊಂದು ಮಹತ್ವಪೂರ್ಣ ರಾಜತಾಂತ್ರಿಕ ಉಪಕ್ರಮ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.