ಸಕಾರಾತ್ಮಕ ಚಿಂತನೆಯಲ್ಲಿ ಅಡಗಿದೆ ಬದುಕಿನ ಯಶಸ್ಸು


Team Udayavani, Jun 15, 2022, 6:15 AM IST

ಸಕಾರಾತ್ಮಕ ಚಿಂತನೆಯಲ್ಲಿ ಅಡಗಿದೆ ಬದುಕಿನ ಯಶಸ್ಸು

ಯದ್ಭಾವಂ ತದ್ಭವತಿ – ಎಂಬಂತೆ ನಾವು ಯಾವಾಗಲೂ ಏನನ್ನು ಆಲೋ ಚಿಸುತ್ತಿರುತ್ತೇವೆಯೋ ಹಾಗೆ ನಮ್ಮ ವ್ಯಕ್ತಿತ್ವವು ಕೂಡ ರೂಪುಗೊಳ್ಳುತ್ತದೆ ಎಂಬುದು ಶಾಲೆಯಲ್ಲಿ ಗುರುಗಳು ನಮಗೆ ಹೇಳುತ್ತಿದ್ದ ಮಾತುಗಳು. ಬದುಕಿನಲ್ಲಿ ಅನಿರೀಕ್ಷಿತವಾಗಿ ಬೀಳುವ ದೊಡ್ಡ ಹೊಡೆತಗಳು ಕೆಲವೊಮ್ಮೆ ನಮ್ಮ ಮನೋಸ್ಥೈರ್ಯವನ್ನೇ ಕುಗ್ಗಿಸಿ ಬಿಡುತ್ತವೆ. ಈ ಸಮಯದಲ್ಲಿ ಭಗವಂತನ ಮೊರೆ ಹೋಗುವುದು ಬಿಟ್ಟರೆ ನಮಗೆ ಬೇರೆ ದಾರಿಯೇ ಕಾಣುವುದಿಲ್ಲ. ದೇವರ ಪ್ರಾರ್ಥನೆಯಿಂದ ನಮ್ಮೊಳಗಿನ ಅಂತರಾತ್ಮದಲ್ಲಿ ಪ್ರಜ್ವಲಿಸುವ ಬೆಳಕು ನಮ್ಮಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತದೆ. ಆ ಆತ್ಮವಿಶ್ವಾಸವೇ ಅದೆಂತಹ ಕಠಿನ ಪರಿಸ್ಥಿತಿಯಲ್ಲೂ ನಮ್ಮನ್ನು ಮುನ್ನಡೆಸಿ ಕೊಂಡು ಹೋಗುತ್ತದೆ.

ಬದುಕನ್ನು ಒಂದು ನಿರ್ದಿಷ್ಟ ಪರಿಮಿತಿಯೊಳಗೆ ತನ್ನ ಅನುಕೂಲಕ್ಕೆ ತಕ್ಕಂತೆ ವಿನ್ಯಾಸಗೊಳಿಸಿ ನಿತ್ಯದ ದಿನಚರಿಯಲ್ಲಿ ಒಂದಷ್ಟು ವ್ಯತ್ಯಾಸ ಕಂಡು ಬಂದರೂ ಕೆಲವೊಮ್ಮೆ ನಾವು ವಿಪರೀತವಾಗಿ ಗಲಿಬಿಲಿಗೊಳಗಾಗುತ್ತೇವೆ. ಅದೆಷ್ಟೋ ಸಲ ಅಷ್ಟೊಂದು ಪ್ರಾಮುಖ್ಯವಲ್ಲದ ಸಣ್ಣ ಪುಟ್ಟ ವಿಷಯಗಳಿಗೂ ಅತಿಯಾದ ಮಹತ್ವ ಕೊಟ್ಟು ಆಕಾಶವೇ ಕಳಚಿ ಮೈ ಮೇಲೆ ಬಿದ್ದಿತೇನೋ ಎಂಬಂತೆ ವರ್ತಿಸುತ್ತೇವೆ. ಸವಾಲುಗಳಿಗೆ ಮುಖಾಮುಖೀಯಾಗಿ ಅದರಿಂದ ಹೊರಬರುವ ಬದಲು ಆ ಕ್ಷಣದಲ್ಲಿ ಕೈಗೊಳ್ಳುವ ಕೆಲವು ದುಡುಕಿನ ತಪ್ಪು ನಿರ್ಧಾರಗಳಿಂದ ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಿ ನಮ್ಮ ಬದುಕಿಗೆ ನಾವೇ ಕೊಳ್ಳಿ ಇಟ್ಟು ನಮ್ಮ ಅವನತಿಗೆ ನಾವೇ ಕಾರಣರಾಗುತ್ತೇವೆ. ಕೆಲವೊಂದು ಕ್ಷಣಗಳು ಮೇಲ್ನೋಟಕ್ಕೆ ತುಂಬಾ ಕಠಿನವಾಗಿ ಕಂಡರೂ ಇಂತಹ ಸನ್ನಿವೇಶಗಳನ್ನು ಸ್ವಲ್ಪ ಸರಿಯಾಗಿ ಪರಾಮರ್ಶಿಸಿ ಅವಲೋಕಿಸಿದಾಗ ಸಮಸ್ಯೆಗೆ ಪರಿಹಾರವೊಂದು ಅಲ್ಲೇ ಸುಲಭವಾಗಿ ಗೋಚರಿಸುತ್ತದೆ.

ಬದುಕಿನಲ್ಲಿ ತಮಗೆದುರಾದ ಕಠಿನ ಸನ್ನಿವೇಶಗಳನ್ನು ಸವಾಲಾಗಿ ಸ್ವೀಕರಿಸಿ, ಅವಕಾಶಗಳನ್ನಾಗಿ ಪರಿವರ್ತಿಸಿ ಯಶಸ್ಸನ್ನು ಸಾಧಿಸಿರುವ ಅದೆಷ್ಟೋ ವ್ಯಕ್ತಿಗಳನ್ನು ನಾವಿಂದು ನಮ್ಮ ಸುತ್ತಮುತ್ತಲಿನ ಸಮಾಜದಲ್ಲಿ ಕಾಣಬಹುದಾಗಿದೆ. ಇಂತಹ ಸಾಧನಾಶೀಲ ವ್ಯಕ್ತಿಗಳ ಬದುಕಿನ ಸಾಹಸಗಾಥೆಗಳನ್ನು ಪುಟ ತಿರುವಿ ನೋಡಿದಾಗ ಮನಸ್ಸಲ್ಲಿ ತುಂಬಿ ಬರುವ ಸ್ಫೂರ್ತಿ ನಮ್ಮ ಯೋಚನಾ ಲಹರಿಯನ್ನು ಬದಲಾಯಿಸುತ್ತದೆ. ಬದುಕಿನಲ್ಲಿ ಎದುರಾಗುವ ಅದೆಂತಹ ಕಠಿನ ಪರಿಸ್ಥಿತಿಯಲ್ಲೂ ಧೃತಿಗೆಡದೆ ಇಂತಹ ಸನ್ನಿವೇಶಗಳನ್ನು ಸವಾಲಾಗಿ ಸ್ವೀಕರಿಸಿ ಅವಕಾಶಗಳನ್ನಾಗಿ ಪರಿವರ್ತಿಸಿಕೊಂ ಡದ್ದೇ ಆದಲ್ಲಿ ಅಲ್ಲೊಂದು ಸಾಧನೆಯ ಇತಿಹಾಸದ ಪುಟವೊಂದು ತನ್ನಿಂತಾನಾಗಿ ತೆರೆದುಕೊಳ್ಳುತ್ತದೆ. ಅಲ್ಲಿ ಸಿಗುವ ಶ್ರೇಯಸ್ಸು ಚಿಕ್ಕ ಮಟ್ಟಿನದಾಗಿದ್ದರೂ ಅದು ದೊಡ್ಡ ಸಾಧನೆಯೆನಿಸುತ್ತದೆ. ಆಗುವುದೆಲ್ಲ ಒಳ್ಳೆಯದೇ ಆಗುತ್ತಿದೆ ಎಂದು ಪರಿಭಾವಿಸಿ ಎದುರಾಗುವ ಸವಾಲುಗಳಿಗೆ ಸಕಾರಾತ್ಮಕವಾಗಿ ನಮ್ಮನ್ನು ತೆರೆದು
ಕೊಂಡು ಮುನ್ನುಗಿದಾಗ ದೊರಕುವ ಶ್ರೇಯಸ್ಸು ಅನನ್ಯವಾದುದು. “ಉದ್ಧರೇ ದಾತ್ಮನಾತ್ಮಾನಂ ನಾತ್ಮಾನಮ ವಸಾದ ಯೇತ್‌ ಆತ್ಮೆವ ಹ್ಯಾತ್ಮನೋ ಬಂಧು ರಾತ್ಮೆವ ರಿಪುರಾತ್ಮನಃ’-ತನ್ನ ಮೂಲಕ ತನ್ನನ್ನು ಸಂಸಾರ ಸಾಗರದಿಂದ ಉದ್ಧಾರ ಮಾಡಿಕೊಳ್ಳಲಿ ಮತ್ತು ತನ್ನನ್ನು ಅಧೋಗತಿಗೆ ಕೊಂಡೊಯ್ಯದಿರಲಿ. ಏಕೆಂದರೆ ಈ ಮನುಷ್ಯನು ತನಗೆ ತಾನೇ ಮಿತ್ರನೂ ಮತ್ತು ತಾನೇ ಶತ್ರುವೂ ಆಗಿದ್ದಾನೆ ಎಂದರ್ಥ. “ಬಂಧುರಾತ್ಮಾತ್ಮನಸ್ತಸ್ಯ ಯೇನಾತ್ಮೆ ವಾತ್ಮನಾ ಜಿತಃ ಅನಾತ್ಮನಸ್ತು ಶತ್ರುತ್ಮೆ ವತೇìತಾತ್ಮೆವ ಶತ್ರುವತ್‌’- ಯಾವ ಜೀವಾತ್ಮನ ಮೂಲಕ ಮನಸ್ಸು ಮತ್ತು ಇಂದ್ರಿಯಗಳ ಸಹಿತವಾದ ಶರೀರವು ಗೆಲ್ಲಲ್ಪಟ್ಟಿದೆಯೋ ಅ ಜೀವಾ ತ್ಮನಿಗಾದರೋ ಅವನು ತನಗೆ ತಾನೇ ಮಿತ್ರನಾಗಿ¨ªಾನೆ ಮತ್ತು ಯಾರ ಮೂಲಕ ಮನಸ್ಸು ಮತ್ತು ಇಂದ್ರಿಯಗಳ ಸಹಿತವಾದ ಶರೀರವು ಗೆಲ್ಲಲ್ಪಟ್ಟಿಲ್ಲವೋ ಅವನಿಗೆ ಅವನು ಶತ್ರುವಿನಂತೆ ಶತ್ರುತ್ವದಲ್ಲಿ ವರ್ತಿಸುತ್ತಾನೆ ಎಂಬ ಭಗವಂತನ ಉವಾಚಗಳ ಸಾರಗಳು ಅದೆಷ್ಟೊಂದು ಅದ್ಭುತ !

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.