ಇಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನ: ಶ್ರಮಜೀವಿಗಳ ಬವಣೆ ನೀಗಿಸಬಲ್ಲವೇ ಯೋಜನೆಗಳು?


Team Udayavani, May 1, 2022, 8:10 AM IST

ಇಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನ: ಶ್ರಮಜೀವಿಗಳ ಬವಣೆ ನೀಗಿಸಬಲ್ಲವೇ ಯೋಜನೆಗಳು?

ಇಂದು ಮೇ 1. ಅಂತಾರಾಷ್ಟ್ರೀಯ ಕಾರ್ಮಿಕ ದಿನ. ಯಾವುದೇ ದೇಶವಿರಲಿ, ಅದರ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಪ್ರಮುಖವಾದದ್ದು. ಇಂಥ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರಕಾರ, ರಾಜ್ಯ ಸರಕಾರಗಳು ಹಲವಾರು ಯೋಜನೆಗಳನ್ನು ಜಾರಿ ಮಾಡಿವೆ. ಈ ಯೋಜನೆಗಳು ಅವರ ಕಷ್ಟ ಕಾರ್ಪಣ್ಯಗಳನ್ನು ನೀಗಿಸಬಲ್ಲವೇ? ಈ ಕುರಿತ ಒಂದು ನೋಟ ಇಲ್ಲಿದೆ.

ಕೇಂದ್ರ ಸರಕಾರದ ಕಾರ್ಮಿಕ ಯೋಜನೆಗಳು
ಗರೀಬ್‌ ಕಲ್ಯಾಣ ಯೋಜನೆ
ಕೊರೊನಾ ಕಾಲದಲ್ಲಿ ನಿರುದ್ಯೋಗಿಗಳಾಗಿದ್ದ ಜನರ ಅನುಕೂಲಕ್ಕಾಗಿ ತಂದ ಯೋಜನೆ ಇದು. 2020ರ ಜೂನ್‌ನಲ್ಲಿ ಆರಂಭವಾಗಿರುವ ಈ ಯೋಜನೆ, 2022ರ ಅಕ್ಟೋಬರ್‌ಗೆ ಮುಗಿಯಲಿದೆ. ಇದರಿಂದ ಲಕ್ಷಾಂತರ ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ.

2.ಪಿಎಂ ಮತ್ಸ್ಯ ಸಂಪದ ಯೋಜನೆ
ಮೀನುಗಾರಿಕೆ ನಡೆಸುವವರ ಅನುಕೂಲತೆಗಾಗಿ ಜಾರಿಗೊಳಿಸಲಾದ ಯೋಜನೆ ಇದು. 2020-24ರ ವರೆಗೆ ಇದು ಜಾರಿಯಲ್ಲಿರಲಿದ್ದು, ಕೇಂದ್ರ ಸರಕಾರವೇ 20 ಸಾವಿರ ಕೋಟಿ ರೂ. ಮೀಸಲಿರಿಸಿದೆ.

3.ಪಿಎಂ ಶ್ರಮ ಯೋಗಿ ಮನ್‌ಧನ್‌
ಅಸಂಘಟಿತ ವಲಯದಲ್ಲಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ 2019ರಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ. ಕಾರ್ಮಿಕರಿಗೆ 60 ವರ್ಷ ದಾಟಿದ ಬಳಿಕ ನೇರ ನಗದು ವರ್ಗಾವಣೆ ಮೂಲಕ ಪಿಂಚಣಿ ನೀಡುವುದು ಈ ಯೋಜನೆಯ ಉದ್ದೇಶ.

4.ಸ್ಟಾರ್ಟ್‌ಅಪ್‌ ಇಂಡಿಯಾ
2016ರಲ್ಲಿ ಕೇಂದ್ರ ಸರಕಾರ ಜಾರಿಗೆ ತಂದ ಅತ್ಯಂತ ಮಹತ್ವದ ಯೋಜನೆ ಇದು. ಸಣ್ಣಪುಟ್ಟ ಕೈಗಾರಿಕೆಗಳು, ಆರಂಭಿಸುವವರಿಗಾಗಿ ಈ ಯೋಜನೆಯ ಮೂಲಕ ಸಾಲ ನೀಡಲಾಗುತ್ತದೆ. 2021ರ ಜುಲೈ ವೇಳೆಗೆ 1.16 ಲಕ್ಷ ಮಂದಿಗೆ ಸಾಲ ನೀಡಲಾಗಿದೆ. ವಿಶೇಷವೆಂದರೆ ಸಾಲ ಪಡೆದವರಲ್ಲಿ ಶೇ.81ರಷ್ಟು ಮಂದಿ ಮಹಿಳೆಯರು.

5.ಪಿಎಂ ಮುದ್ರಾ ಯೋಜನೆ
ಈ ಯೋಜನೆಯ ಅಡಿಯಲ್ಲಿಯೂ ಕೇಂದ್ರ ಸರಕಾರ ಸಣ್ಣಪುಟ್ಟ ಉದ್ಯೋಗಳಿಗೆ ಸಾಲ ಒದಗಿಸುತ್ತದೆ. ಇದುವರೆಗೆ 34,42,00,000 ಮಂದಿಗೆ 18.6 ಲಕ್ಷ ಕೋಟಿ ರೂ. ಹಣ ಸಾಲ ನೀಡಲಾಗಿದೆ.

6. ಅಟಲ್‌ ಪಿಂಚಣಿ ಯೋಜನೆ
2010ರಲ್ಲಿ ಸ್ವಾವಲಂಬನಾ ಯೋಜನೆಯಾಗಿದ್ದ ಇದನ್ನು 2015ರಲ್ಲಿ ಅಟಲ್‌ ಪಿಂಚಣಿ ಯೋಜನೆ ಎಂದು ಬದಲಿಸಲಾಯಿತು. ಇದರಲ್ಲಿ ಕಾರ್ಮಿಕರ ಕೊಡುಗೆಯಷ್ಟೇ ಹಣವನ್ನು ಸರಕಾರ ಹಾಕುತ್ತದೆ. ಇದರ ಸೌಲಭ್ಯ ನಿವೃತ್ತಿಯ ಅನಂತರ ಸಿಗಲಿದೆ.

7.ಪಿಎಂ ಕೌಶಲ್‌ ವಿಕಾಸ್‌ ಯೋಜನೆ
ಉತ್ತಮ ಕೌಶಲವನ್ನು ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವೇ ಜನರಿಗೆ ತರಬೇತಿ ನೀಡುತ್ತಿದೆ. 2021ರ ವೇಳೆಗೆ ಇಲ್ಲಿ ಕಲಿತ ಶೇ.20 ಮಂದಿಗೆ ಉದ್ಯೋಗ ಲಭ್ಯವಾಗಿದೆ.

8.ರಾಷ್ಟ್ರೀಯ ಉದ್ಯೋಗ ಸೇವೆ
ಉದ್ಯೋಗ ಅರಸುವವರಿಗಾಗಿ ಆನ್‌ಲೈನ್‌ ಜಾಬ್‌ ಪೋರ್ಟಲ್‌ ಅನ್ನು ಕೇಂದ್ರ ಸರಕಾರವೇ ರಚಿಸಿದೆ. ಕೆಲಸ ಹುಡುಕುವವರಿಗೆ, ಉದ್ಯೋಗದಾತರಿಗೆ, ತರಬೇತಿ ನೀಡುವವರಿಗೆ, ಸರಕಾರಿ ಇಲಾಖೆಗಳಿಗೆ ಇದರಿಂದ ಅನುಕೂಲವಾಗುತ್ತಿದೆ.

ಜು.1ರಿಂದ ಕಾರ್ಮಿಕ ಕಾನೂನು ಬದಲು
ಕೇಂದ್ರ ಸರಕಾರವು ಜು.1ರಿಂದ ಹೊಸ ಕಾರ್ಮಿಕ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದ್ದು, ಆಗಿನಿಂದಲೇ ಕೆಲಸದ ಅವಧಿ, ಪಿಎಫ್ ಕೊಡುಗೆ ಹೆಚ್ಚಳ, ವೇತನ ಕಡಿತದಂಥ ನಿಯಮಗಳು ಜಾರಿಗೆ ಬರಲಿವೆ.

ಅಂದರೆ ಕೇಂದ್ರ ಸರಕಾರ ನಾಲ್ಕು ಕಾರ್ಮಿಕ ಕಾನೂನು ಸಂಹಿತೆಯನ್ನು ಜಾರಿಗೊಳಿಸಲು ತೀರ್ಮಾನಿಸಿದೆ. ಕೇಂದ್ರದಿಂದ ಈ ಕುರಿತ ಎಲ್ಲ ಪ್ರಕ್ರಿಯೆ ಅಂತ್ಯವಾಗಿದ್ದರೂ ಕೆಲವು ರಾಜ್ಯಗಳು ಮಾತ್ರ ಇನ್ನೂ ಪೂರ್ಣ ಮಾಡಿಲ್ಲ. ಈ ಕೆಲಸ ಜೂನ್‌ ಅಂತ್ಯದ ವೇಳೆಗೆ ಮುಗಿಯುವ ಸಾಧ್ಯತೆ ಇದೆ.

ಕೆಲಸದ ಅವಧಿ 
ಹೊಸ ಕಾನೂನು ಜಾರಿಗೆ ಬಂದ ಮೇಲೆ ಕೆಲಸದ ಅವಧಿ 8ರಿಂದ 9 ಅಥವಾ 12ಗಂಟೆವರೆಗೆ ವಿಸ್ತರಣೆಯಾಗಬಹುದು. ಆಗ ಕಂಪೆನಿಗಳು ವಾರಕ್ಕೆ 4 ದಿನ ಮಾತ್ರ ಕೆಲಸ ಮಾಡಿಸಿಕೊಳ್ಳಬಹುದು. ಇದರಿಂದಾಗಿ ವಾರಕ್ಕೆ 3 ದಿನ ರಜೆ ಸಿಕ್ಕಂತಾಗುತ್ತದೆ.

ವೇತನ ಮತ್ತು ಪಿಎಫ್
ಮೂಲ ವೇತನ ಶೇ.50ರಷ್ಟು ಹೆಚ್ಚಳವಾಗಲಿದೆ. ಆಗ ಪಿಎಫ್ಗೆ ಕಡಿತ ಮಾಡಿಕೊಳ್ಳುವ ಹಣವೂ ಹೆಚ್ಚಾಗುತ್ತದೆ. ಇದರಿಂದಾಗಿ ಟೇಕ್‌ ಹೋಮ್‌ ವೇತನ ಕಡಿಮೆಯಾಗಲಿದೆ. ಆದರೆ, ಪಿಎಫ್ ಮತ್ತು ಗ್ರಾಚ್ಯುಯಿಟಿಯಲ್ಲಿ ಹೆಚ್ಚಳವಾಗಲಿದೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.