ಇಂದು ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ: ಮಾರುಕಟ್ಟೆ ವ್ಯವಸ್ಥೆಯಲ್ಲಿ ಗ್ರಾಹಕನೇ ಶ್ರೇಷ್ಠ


Team Udayavani, Dec 24, 2023, 6:30 AM IST

1-sasadasd

ಪ್ರತಿಯೊಬ್ಬ ನಾಗರಿಕ, ಗ್ರಾಹಕನೂ ಹೌದು. ಮಾರುಕಟ್ಟೆಯು ತನ್ನದೇ ಆದ ನೀತಿ ನಿಯಮ ಹಾಗೂ ಮೌಲ್ಯಗಳಿಂದ ನಡೆಯುತ್ತದೆ. ಈ ಮಾರುಕಟ್ಟೆ ವ್ಯವಸ್ಥೆಯಲ್ಲಿ ಗ್ರಾಹಕರು ಕನಿಷ್ಠ ಜ್ಞಾನವನ್ನು ಹೊಂದಿರದಿದ್ದಲ್ಲಿ, ಮೋಸಕ್ಕೆ ಒಳಗಾಗುವ ಸಾಧ್ಯತೆಗಳಿವೆ. ಇದೇ ಕಾರಣದಿಂದ ಗ್ರಾಹಕರ ರಕ್ಷಣೆಗಾಗಿ ಮಾರುಕಟ್ಟೆ ವ್ಯವಸ್ಥೆಯಲ್ಲಿ ಆತನಿಗೆ ಕೆಲವೊಂದು ಹಕ್ಕುಗಳನ್ನು ಸಹ ನೀಡಲಾಗಿದೆ. ಗ್ರಾಹಕ ಹಕ್ಕುಗಳು ಮತ್ತು ಕಾನೂನು ನಿಯಮಾವಳಿಗಳ ಬಗೆಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಡಿ.24ರಂದು ದೇಶದಲ್ಲಿ ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ.

ಗ್ರಾಹಕ ಸಂರಕ್ಷಣ ಕಾಯಿದೆ
ದೇಶದಲ್ಲಿ ಮೊದಲ ಬಾರಿಗೆ 1986ರಲ್ಲಿ ಗ್ರಾಹಕ ಸಂರಕ್ಷಣ ಕಾಯಿದೆಯನ್ನು ಜಾರಿಗೆ ತರಲಾಯಿತು. ಸರಕು ಸಾಮಾಗ್ರಿಗಳ ಮಾರಾಟ ಹಾಗೂ ಖರೀದಿಯ ವೇಳೆ ಗ್ರಾಹಕ ಯಾವುದೇ ವಂಚನೆ ಗೊಳಗಾಗಬಾರದು ಮತ್ತು ಗ್ರಾಹಕ ಸುರಕ್ಷೆಯನ್ನು ಆದ್ಯತೆಯಾಗಿರಿಸಿಕೊಂಡು ಈ ಕಾಯಿದೆಯನ್ನು ರೂಪಿಸಲಾಗಿತ್ತು. ಈ ಕಾಯಿದೆಯ ಜಾರಿಯ ಬಳಿಕ ದೇಶದ ನಾಗರಿಕರಿಗೆ ಗ್ರಾಹಕ ಹಕ್ಕುಗಳ ಬಗೆಗೆ ಜಾಗೃತಿ ಮೂಡಲಾರಂಭಿಸಿತು.

ಸ್ಫರ್ಧಾತ್ಮಕ ಮಾರುಕಟ್ಟೆ ಮತ್ತು ಗ್ರಾಹಕ ಶೋಷಣೆ
1990ರ ದಶಕದ ಬಳಿಕ ಭಾರತದ ಮಾರುಕಟ್ಟೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿ ಕೊಳ್ಳುತ್ತಾಹೋಯಿತು. ಕೇಂದ್ರ ಸರಕಾರ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ ನೀತಿಯನ್ನು ದೇಶದಲ್ಲಿ ಜಾರಿಗೆ ತಂದ ಬಳಿಕ ಮಾರುಕಟ್ಟೆಯಲ್ಲಿ ಸ್ಪರ್ಧೆಯು ಹೆಚ್ಚಾಯಿತು. ಇದರಿಂದ ಗ್ರಾಹಕರಿಗೂ ಹೆಚ್ಚಿನ ಆಯ್ಕೆಗಳು ದೊರೆತವು. ಸಹಜವಾಗಿಯೇ ಮಾರುಕಟ್ಟೆಯಲ್ಲಿ ಪೈಪೋಟಿ ಆರಂಭವಾಗಿ ಬೆಲೆ ಇಳಿಕೆಗೆ ಕಾರಣವಾಯಿತು. ಆದರೆ ಈ ಪೈಪೋಟಿಯ ಭರದಲ್ಲಿ ವಸ್ತುಗಳ ಗುಣಮಟ್ಟದಲ್ಲಿ ಇಳಿಕೆ ಕಂಡುಬಂತು. ಇದರಿಂದ ಪರೋಕ್ಷವಾಗಿ ಗ್ರಾಹಕರ ಶೋಷಣೆಗೊಳಗಾಗುವಂತಾಯಿತು. ಹೀಗಾಗಿ ದಿನಗಳುರುಳಿದಂತೆ ಸ್ಪರ್ಧಾತ್ಮಕ ಮಾರುಕಟ್ಟೆಯ ಮೇಲಿನ ಗ್ರಾಹಕರ ನಂಬಿಕೆಯು ಕಡಿಮೆಯಾಯಿತು. ಈ ಸಂದರ್ಭದಲ್ಲಿ ದೇಶದಲ್ಲಿ ಗ್ರಾಹಕ ಹಕ್ಕುಗಳ ಬಗೆಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಲಾರಂಭಿಸಿತು. ಅಷ್ಟು ಮಾತ್ರವಲ್ಲದೆ ಗ್ರಾಹಕ ವೇದಿಕೆಗಳು, ಗ್ರಾಹಕ ನ್ಯಾಯಾಲಯಗಳು ಅಸ್ತಿತ್ವಕ್ಕೆ ಬಂದವು. ಕಾಲಕ್ರಮೇಣ ಗ್ರಾಹಕರಲ್ಲಿ ನಿಧಾನವಾಗಿ ತಮ್ಮ ಹಕ್ಕುಗಳ ಬಗೆಗೆ ಜಾಗೃತಿ ಮೂಡತೊಡಗಿತು.

ಮತ್ತಷ್ಟು ಗ್ರಾಹಕಸ್ನೇಹಿಯಾದ ಕಾಯಿದೆ ಜಾರಿ
2019ರಲ್ಲಿ ಕೇಂದ್ರ ಸರಕಾರ ಸಂಸತ್‌ನಲ್ಲಿ ಹೊಸದಾಗಿ ಗ್ರಾಹಕ ಸಂರಕ್ಷಣ ಮಸೂದೆಯನ್ನು ಮಂಡಿಸಿತು. ಅನಂತರ ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣ ಸಚಿವಾಲಯವು 2020ರ ಜುಲೈಯಿಂದ ಈ ಹೊಸ ಕಾಯಿದೆಯನ್ನು ಜಾರಿಗೆ ತರುವ ಮೂಲಕ ಗ್ರಾಹಕರನ್ನು ಮತ್ತಷ್ಟು ಸಶಕ್ತವನ್ನಾಗಿಸಿದವು. ಈ ಕಾಯಿದೆಯು ಗ್ರಾಹಕರಿಗೆ ರಕ್ಷಣೆಯ ಹಕ್ಕು, ಮಾಹಿತಿ ತಿಳಿಸುವ ಹಕ್ಕು, ಆಯ್ಕೆಯ ಹಕ್ಕು, ಕೇಳುವ ಹಕ್ಕು, ಪರಿಹಾರ ಕಂಡುಕೊಳ್ಳುವ ಹಕ್ಕು ಹಾಗೂ ಗ್ರಾಹಕ ಶಿಕ್ಷಣದ ಹಕ್ಕನ್ನು ಒಳಗೊಂಡಿದೆ. ಎಲ್ಲ ಹಂತದ ಗ್ರಾಹಕ ಆಯೋಗಗಳ ಮೇಲೆ ನಿಯಂತ್ರಣ ಹೊಂದಿರುವ ಸಾಂವಿಧಾನಿಕ ಸಂಸ್ಥೆ ಗ್ರಾಹಕ ರಕ್ಷಣ ಪರಿಷತ್‌ ಸ್ಥಾಪನೆ ಈ ಕಾಯಿದೆಯ ಅತ್ಯಂತ ಮಹತ್ವದ ಅಂಶ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.