ಇಂದು World Ocean Day: ಕಡಲ ಉಳಿವಿನಲ್ಲಿ ಅಡಗಿದೆ ನಮ್ಮ ಬದುಕು!


Team Udayavani, Jun 8, 2023, 7:01 AM IST

OCEAN

ಸಾಗರಗಳ ಜೀವವೈವಿಧ್ಯತೆ ಮತ್ತು ಸಮುದ್ರದ ಮಹತ್ವದ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಪ್ರತೀ ವರ್ಷ ಜೂ.8 ರಂದು “ವಿಶ್ವ ಸಾಗರ ದಿನ”ವನ್ನು ಆಚರಿಸ ಲಾಗುತ್ತಿದೆ. ಈ ಬಾರಿ “ಮಹಾಸಾಗರ; ಅಲೆಗಳು ಬದಲಾಗುತ್ತಿವೆ” ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ಸಾಗರ ದಿನವನ್ನು ಆಚರಿಸಲಾಗುತ್ತಿದೆ. ತನ್ಮೂಲಕ ಸಾಗರ ಗಳಲ್ಲಾಗುತ್ತಿರುವ ಪ್ರಸಕ್ತ ಬೆಳವಣಿಗೆಗಳ ಬಗೆಗೆ ವಿಶ್ವಾದ್ಯಂತದ ಜನರ ಗಮನ ಸೆಳೆಯುವುದರ ಜತೆಯಲ್ಲಿ ಭವಿಷ್ಯದ ಕರಾಳತೆಯ ಕುರಿತಂತೆ ಎಚ್ಚರಿಕೆ ಯನ್ನೂ ನೀಡುವ ಪ್ರಯತ್ನ ಮಾಡಲಾಗುತ್ತಿದೆ.

ಸಾಗರ ಅಥವಾ ಸಮುದ್ರ ಕೇವಲಜಲಜೀವಿಗಳಿಗೆ ಮಾತ್ರವಲ್ಲ, ಭೂಮಿಯ ಮೇಲೆ ವಾಸಿಸುವ ಪ್ರತೀ ಜೀವಿಗೂ ಮುಖ್ಯವೇ. ಭೂಮಿಯ ವಾತಾವರಣದ ಸಮತೋಲನದಲ್ಲಿ ಸಾಗರಗಳ ಪಾತ್ರವೂ ದೊಡ್ಡದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಏರುತ್ತಿರುವ ತಾಪಮಾನ, ಬದಲಾಗುತ್ತಿರುವ ವಾತಾವರಣ ಸಮುದ್ರ ಮಟ್ಟದಲ್ಲಿ ಬದಲಾವಣೆಗೆ ಕಾರಣವಾಗುತ್ತಿದೆ. ಅದಲ್ಲದೇ ಕಡಲ ಜೀವವೈವಿಧ್ಯತೆಯ ಮೇಲೂ ಋಣಾತ್ಮಕವಾಗಿ ಪರಿಣಾಮ ಬೀರುತ್ತಿದೆ. ಇದರ ಜತೆಗೆ ಹೆಚ್ಚುತ್ತಿರುವ ಪ್ಲಾಸ್ಟಿಕ್‌ ಮಾಲಿನ್ಯ ಸಾಗರಗಳಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಪರಿಸರ, ಪ್ರಕೃತಿಯ ಜತೆಜತೆಗೆ ಸಾಗರದ ಉಳಿವಿಗಾಗಿ ಹೆಜ್ಜೆ ಇಡಬೇಕಾಗಿದೆ.

 ತಾಪಮಾನ ನಿಯಂತ್ರಣದಲ್ಲಿ ಸಮುದ್ರಗಳ ಪಾತ್ರ
ಸಮುದ್ರ ಸಾವಿರಾರು ಜೀವ ಪ್ರಭೇದಗಳ ಗೂಡು. ಸರಾ ಸರಿ ಶೇ.50ರಷ್ಟು ಆಮ್ಲಜನಕ ಸಮುದ್ರದಿಂದ ಉತ್ಪತ್ತಿಯಾ ಗುತ್ತದೆ. ಅದಲ್ಲದೇ ಕಾರ್ಖಾನೆಗಳಿಂದ ಹೊರಸೂಸುವ ಶೇ.90ರಷ್ಟು ತಾಪಮಾನವನ್ನು ಸಮುದ್ರ ತನ್ನೊಳಗೆ ಎಳೆದು ಕೊಳ್ಳುತ್ತದೆ. ಸಮುದ್ರದಲ್ಲಿ ಹೆಚ್ಚಾಗುತ್ತಿರುವ ಈ ಶಾಖ, ತಾಪ ಮಾನ ಸಮುದ್ರದಲ್ಲಿನ ಜೀವಿಗಳಿಗೆ ಮಾರಕವಾಗುತ್ತಿದ್ದು, ಭೂಮಿಯ ತಾಪಮಾನದ ಮೇಲೂ ಪರಿಣಾಮ ಬೀರುತ್ತಿದೆ. ಈ ಕಾರಣದಿಂದಾಗಿಯೇ ವರ್ಷಗಳುರುಳಿದಂತೆಯೇ ತಾಪಮಾನ ಹೆಚ್ಚು ತ್ತಲೇ ಸಾಗಿದೆ. ಇಡೀ ವಿಶ್ವಕ್ಕೆ ತಲೆನೋವಾಗಿ ಪರಿಣಮಿಸಿರುವ ಹವಾ ಮಾನ ಬದಲಾವಣೆಗೂ ಹೆಚ್ಚುತ್ತಿರುವ ತಾಪಮಾನವೇ ಬಲುಮುಖ್ಯ ಕಾರಣವಾಗಿದೆ.

ಪ್ಲಾಸ್ಟಿಕ್‌ ಮಾಲಿನ್ಯ
ತಾಪಮಾನ ಏರಿಕೆಯ ಜತೆಜತೆಗೆ ಕಡಲ ಜೀವವೈವಿಧ್ಯತೆಗೆ ಎದುರಾಗಿರುವ ಬಹುದೊಡ್ಡ ಅಪಾಯ ಎಂದರೆ ಪ್ಲಾಸ್ಟಿಕ್‌ ಮಾಲಿನ್ಯ. ಮಾನವ ಎಸೆಯುವ ಪ್ರತೀ ಚಿಕ್ಕ ಚಿಕ್ಕ ಪ್ಲಾಸ್ಟಿಕ್‌ ವಸ್ತುಗಳಿಂದ ಕಡಲ ಒಡಲು ತುಂಬಿ ಹೋಗಿದ್ದು, ಇದರಿಂದ ಕಡಲು ಹಾಗೂ ಕಡಲ ಜೀವಿಗಳು ತನ್ನ ಸೌಂದರ್ಯ, ಜೀವಿತಾವಧಿಯನ್ನು ಕಳೆದುಕೊಳ್ಳು ತ್ತಿವೆ. 2050ರ ವೇಳೆಗೆ ಸಮುದ್ರಗಳಲ್ಲಿ ಮೀನು ಗಳಿಗಿಂತ ಪ್ಲಾಸ್ಟಿಕ್‌ಗಳು ಹೆಚ್ಚಾಗಿ ಇರಲಿವೆ ಎಂದು ಊಹಿಸಲಾಗಿದೆ. ಸಮುದ್ರದ ಪ್ಲಾಸ್ಟಿಕ್‌ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ದೇಶಗಳಲ್ಲಿ ಪಿಲಿಫೈನ್ಸ್‌ ( 3,56,371 ಮೆಟ್ರಿಕ್‌ ಟನ್ಸ್‌ )ಮೊದಲ ಸ್ಥಾನದಲ್ಲಿದ್ದರೆ, ಭಾರತ ( 1,26,513 ಮೆಟ್ರಿಕ್‌ ಟನ್ಸ್‌ ) ಎರಡನೇ ಸ್ಥಾನದಲ್ಲಿದೆ. ಇನ್ನು ಮೊದಲ ಹತ್ತು ಸ್ಥಾನಗಳಲ್ಲಿ ದಕ್ಷಿಣ ಏಷ್ಯಾ ದೇಶಗಳೇ ಹೆಚ್ಚಿವೆ.

ಕಡಲ ರಕ್ಷಣೆಗಾಗಿ ಪ್ರತಿಯೊಬ್ಬರು ಜಾಗೃತರಾಗಬೇಕಾಗಿದೆ. ನಾವುಜಾಗೃತರಾಗಿ ನಮ್ಮವರನ್ನು ಕಡಲ ಉಳಿವಿನೆಡೆಗೆ ಕಾರ್ಯಪ್ರವೃತ್ತರನ್ನಾಗಿಸಿ ಕಡಲ ಉಳಿವಿಗೆ ನೆರವಾಗೋಣ. ಕಡಲ ರಕ್ಷಣೆಯ ಮಾತುಗಳು ಕೇವಲ ಮಾತಾಗಿಯೇ ಉಳಿಯದಿರಲಿ, ಏಕೆಂದರೆ ನಮ್ಮ ಗ್ರಹದ ಉಳಿವು ಇರುವುದು ನಮ್ಮ ಕೈಗಳಲ್ಲೇ.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.