Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ


Team Udayavani, Sep 29, 2023, 6:50 AM IST

Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ, ಹೃದಯ ಸ್ತಂಭನದಂತಹ ಹೃದಯ ಸಂಬಂಧಿ ಕಾಯಿಲೆಗಳು ಮನುಷ್ಯನನ್ನು ಅತಿಯಾಗಿ ಕಾಡತೊಡಗಿವೆ. ಇಂದು ಇದು ಜಾಗತಿಕ ಆರೋಗ್ಯ ಸಮಸ್ಯೆಯಾಗಿಯೂ ಮಾರ್ಪಾಡಾಗಿದೆ. ಸಕಲ ಜೀವ ಸಂಕುಲ ಗಳಿಗೂ ಪ್ರಮುಖವಾಗಿರುವ ಹೃದಯದ ಬಗ್ಗೆ ಅರಿವು ಮೂಡಿಸಲು ಪ್ರತೀ ವರ್ಷ ಸೆ.29ರಂದು ವಿಶ್ವ ಹೃದಯ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಈ ಬಾರಿ “ಹೃದಯವನ್ನು ಬಳಸಿ, ಹೃದಯವನ್ನು ತಿಳಿಯಿರಿ’ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸ ಲಾಗುತ್ತಿದೆ. ಹೃದಯ ಚಿಹ್ನೆಯ ಇಮೋಜಿಯನ್ನು ಬಳಸುವ ಮೂಲಕ ” ಹೃದಯವನ್ನು ಬಳಸಿ’ ಎಂದು ಕರೆ ನೀಡ. ಇಂದು ಸಂವಹನದ ಪ್ರಮುಖ ಮಾಧ್ಯಮವಾಗಿ ಗುರುತಿಸಿ ಕೊಂಡಿರುವ ಇಮೋಜಿಯು ಜನರಿಗೆ ಸಂದೇಶವನ್ನು ಕ್ಷಿಪ್ರಗತಿಯಲ್ಲಿ ತಲುಪಿಸುವಲ್ಲಿ ಯಶಸ್ವಿಯಾಗುತ್ತಿದೆ. ಹಾಗಾಗಿ ಇದನ್ನೇ ಈ ಬಾರಿಯ ವಿಶ್ವ ಹೃದಯ ದಿನದ ಆಚರಣೆಯಲ್ಲಿ ಬಳಸಲಾಗುವುದು. ಪ್ರತಿಯೊಬ್ಬರೂ ತಮ್ಮ ತಮ್ಮ ಹೃದಯದ ಬಗ್ಗೆ ಅರಿತುಕೊಂಡು ಕಾಳಜಿ ವಹಿಸುವುದರ ಮೂಲಕ ಆರೋಗ್ಯವನ್ನು ಕಾಪಾಡಿ ಕೊಳ್ಳುವಂತೆ ಮಾಡುವುದು ಇದರ ಉದ್ದೇಶ ಎಂದು ವರ್ಲ್ಡ್ ಹಾರ್ಟ್‌ ಫೆಡರೇಶನ್‌ ಹೇಳಿದೆ.

ಕೋವಿಡ್‌ ಮತ್ತು ಹೃದಯ
ಕೊರೊನಾಗೆ ಸೋಂಕಿಗೆ ತುತ್ತಾದವರೂ ಅದರಿಂದ ಚೇತರಿಸಿಕೊಂಡ ಕೆಲವು ವಾರಗಳಲ್ಲೇ ಹಠಾತ್‌ ಹೃದಯಾಘಾತಕ್ಕೆ ತುತ್ತಾಗಿದ್ದರು. ಇದರ ಬಗ್ಗೆ ತಜ್ಞರು ಅಧ್ಯಯನಗಳನ್ನು ಕೈಗೊಂಡಿದ್ದರು. ಕೋವಿಡ್‌ ಬಳಿಕ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗಿವೆ ಎಂದು ಅಧ್ಯಯನ ವರದಿಗಳು ಬೆಟ್ಟು ಮಾಡಿವೆ. ಕೋವಿಡ್‌ ಸೋಂಕು ರಕ್ತದ ಕಣಗಳ ಮೇಲೆ ಪರಿಣಾಮ ಬೀರಿದ್ದು, ಇದು ಹೃದಯ ಸಂಬಂಧಿ ಕಾಯಿಲೆಗಳನ್ನು ಹೆಚ್ಚಿಸಿವೆ. ಅದಾಗಲೇ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದವರಲ್ಲಿ ಹೆಚ್ಚಾಗಿ ಪರಿಣಾಮ ಬೀರಿದೆ. ಅಲ್ಲದೇ ಪಾರ್ಶ್ವ ವಾಯು, ಹೃದಯ ಸಂಬಂಧಿ ಕಾಯಿಲೆಗಳು, ಹೃದಯಾಘಾತ ಸಮಸ್ಯೆಗಳು ಹೆಚ್ಚಾಗಿವೆ ಎಂದು ಅಧ್ಯಯನದ ವೇಳೆ ಕಂಡುಕೊಳ್ಳಲಾಗಿದೆ.

ಯುವಕರಲ್ಲೇ ಹೆಚ್ಚು !
ಈಗೀಗ ಹೃದಯ ಸಂಬಂಧಿ ಸಮಸ್ಯೆಗಳು ಯುವಕರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿರುವುದು ಕಂಡುಬಂದಿದೆ. ಅಧಿಕ ಕೆಲಸದ ಒತ್ತಡ, ಆರೋಗ್ಯಕರ ದಿನಚರಿಯನ್ನು ಪಾಲಿಸದೇ ಇರುವುದು, ಆಹಾರ ಕ್ರಮದಲ್ಲಿನ ಏರುಪೇರು ಹಾಗೂ ಇತ್ಯಾದಿಗಳು ಇದಕ್ಕೆ ಕಾರಣ. ಇತ್ತೀಚಿನ ವರದಿಯ ಪ್ರಕಾರ ಭಾರತದಲ್ಲಿ ಶೇ.25ರಷ್ಟು ಜನರು ಹೃದಯ ಸಮಸ್ಯೆಯಿಂದ ಸಾವನ್ನಪ್ಪು ತ್ತಿದ್ದಾರೆ. ಇದರಲ್ಲಿ ಶೇ.18ರಷ್ಟು ಮಹಿಳೆಯರು. ಕಳೆದ ಕೆಲವು ವರ್ಷಗಳಲ್ಲಿ ಮಹಿಳೆಯರಲ್ಲಿ ಈ ಸಮಸ್ಯೆಯು ಅಧಿಕವಾಗಿ ಕಾಣಿಸಿಕೊಂಡಿದೆ. ಕಳೆದ ಎರಡು ದಶಕಗಳಿಗೆ ಹೋಲಿಸಿದರೆ ಶೇ.300ರಷ್ಟು ಈ ಸಮಸ್ಯೆಯು ಮಹಿಳೆಯರಲ್ಲಿ ಉಲ್ಬಣಿಸಿದೆ. ಅಧಿಕ ರಕ್ತದೊತ್ತಡ, ಅಧಿಕ ಬೊಜ್ಜು ಹಾಗೂ ಮಹಿಳೆಯರಲ್ಲಿ ಹೆಚ್ಚುತ್ತಿರುವ ಮಧುಮೇಹ ಇದಕ್ಕೆ ಕಾರಣವಾಗಿದೆ. ಜತೆಗೆ ಭಾರತೀಯ ಮಹಿಳೆಯರಿಗೆ ಈ ವಿಷಯದ ಬಗ್ಗೆ ಇರುವ ಅರಿವಿನ ಕೊರತೆಯೂ ಇದಕ್ಕೆ ಕಾರಣವಾಗಿದೆ.

ನಿಮಗಿದು ತಿಳಿದಿರಲಿ
-ನಮ್ಮ ಹೃದಯವು ದಿನಕ್ಕೆ ಅಂದಾಜು 1 ಲಕ್ಷ
ಬಾರಿ ಬಡಿಯುತ್ತದೆ.
-ನವಜಾತ ಶಿಶುಗಳ ಹೃದಯವು ನಿಮಿಷಕ್ಕೆ 70-190 ಬಾರಿ ಬಡಿಯುತ್ತದಂತೆ.
-ವಯಸ್ಕರ ಹೃದಯವು ಪ್ರತೀ ನಿಮಿಷಕ್ಕೆ
60ರಿಂದ 80 ಬಾರಿ ಬಡಿಯುತ್ತದೆ.
-ಹೃದಯವು 250ರಿಂದ 350 ಗ್ರಾಂನಷ್ಟು ತೂಕವನ್ನು ಹೊಂದಿದೆ.

ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣ
ದೈಹಿಕ ವ್ಯಾಯಾಮದ ಕೊರತೆ, ಅತಿಯಾದ ಸೋಡಿಯಂ, ಮದ್ಯಪಾನ, ತಂಬಾಕು ಬಳಕೆ, ಅಧಿಕ ರಕ್ತದೊತ್ತಡ, ಮಧುಮೇಹ, ವಾಯುಮಾಲಿನ್ಯ.

ಹೃದಯದ ರಕ್ಷಣೆ ಹೇಗೆ?
-ದೇಹದ ತೂಕ ಹೆಚ್ಚಾಗಿ ಬೊಜ್ಜು ಬಾರದಂತೆ ನೋಡಿಕೊಳ್ಳಬೇಕು.
-ಮಧುಮೇಹವನ್ನು ನಿಯಂತ್ರಣದಲ್ಲಿಡಬೇಕು.
-ಸಾಧ್ಯವಾದಷ್ಟು ಒತ್ತಡದ ಸನ್ನಿವೇಶದಿಂದ ದೂರವುಳಿಯಿರಿ.
-ರಕ್ತದಲ್ಲಿ ಕೊಬ್ಬು ಸೇರಿಕೊಳ್ಳದಂತೆ ಎಚ್ಚರವಹಿಸಬೇಕು.
-ಒಳ್ಳೆಯ ಆಹಾರ ಕ್ರಮಗಳನ್ನು ಅನುಸರಿಸಬೇಕು.
-ಹಣ್ಣು, ತರಕಾರಿ ಸೇವಿಸಿ.
-ಬಿರುಸಿನ ನಡಿಗೆ, ಓಟ, ಈಜು, ಟೆನಿಸ್‌, ಬ್ಯಾಡ್ಮಿಂಟನ್‌, ಸ್ಕಿಪಿಂಗ್‌ ಮತ್ತಿತರ ದೈಹಿಕ ಚಟುವಟಿಕೆಗಳನ್ನು ದಿನನಿತ್ಯ ನಡೆಸಬೇಕು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.