ಇಂದು ವಿಶ್ವ ಪ್ರವಾಸೋದ್ಯಮ ದಿನ; ಪ್ರವಾಸೋದ್ಯಮ ಮರು ಚಿಂತನೆ

ದೇಶದ ಆರ್ಥಿಕ ಪ್ರಗತಿಗೆ ಪ್ರವಾಸೋದ್ಯಮ ಪಾತ್ರ ಬಹಳ ಪ್ರಾಮುಖ್ಯವಾಗಿದೆ

Team Udayavani, Sep 27, 2022, 10:13 AM IST

ಇಂದು ವಿಶ್ವ ಪ್ರವಾಸೋದ್ಯಮ ದಿನ; ಪ್ರವಾಸೋದ್ಯಮ ಮರು ಚಿಂತನೆ

ಪ್ರವಾಸೋದ್ಯಮವು ದೇಶದ ಪ್ರಗತಿಗೆ ಮತ್ತು ಆರ್ಥಿಕತೆಗೆ ಬಹಳ ದೊಡ್ಡ ಕೊಡುಗೆಯನ್ನು ನೀಡುವುದರೊಂದಿಗೆ, ಪ್ರವಾಸಿಗರ ಮತ್ತು ಸ್ಥಳೀಯರ ನಡುವೆ
ಸಾಂಸ್ಕೃತಿಕ ನಿಮಯವನ್ನು ಪೋಷಿಸುತ್ತದೆ, ಲಕ್ಷಾಂತರ ಮಂದಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಉದ್ಯೋಗ ಸೃಷ್ಟಿ ಮಾಡುವುದರೊಂದಿಗೆ ಸಮುದಾಯದ
ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕೂಡಾ ಸಹಕರಿಸುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಯುನೈಟೆಡ್‌ ನೇಶನ್ಸ್‌ ವರ್ಲ್ಡ್ ಟೂರಿಸಂ ಆರ್ಗನೈಸೇಶನ್‌-ವಿಶ್ವ ಪ್ರವಾಸೋದ್ಯಮವನ್ನು ಸಮರ್ಥನೀಯವಾಗಿ ಸರ್ವರಿಗೂ ತಲುಪಿಸಲು ಪ್ರಯತ್ನಿಸುತ್ತಿದೆ.

ಪ್ರತಿ ವರುಷದಂತೆ ಈ ಬಾರಿ ಕೂಡಾ ಇಂದು (ಸೆಪ್ಟೆಂಬರ್‌ 27)ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ.
ಇಂಡೋನೇಷ್ಯಾದ ಬಾಲಿಯಲ್ಲಿ ಪ್ರವಾಸೋದ್ಯಮ-ಮರು ಚಿಂತನೆ ಧ್ಯೇಯವಾಕ್ಯದೊಂದಿಗೆ ವಿಶ್ವ ಪ್ರವಾಸೋದ್ಯಮ ಸಂಘಟನೆಯ ಅಧಿಕೃತ
ಕಾರ್ಯಕ್ರಮಗಳೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.

ಪ್ರವಾಸೋದ್ಯಮ – ಮರು ಚಿಂತನೆ
ವಿಶ್ವದಾದ್ಯಂತ ಕೋವಿಡ್‌ ಮಹಾಮಾರಿಯಿಂದಾಗಿ ಎಲ್ಲಾ ವ್ಯವಹಾರಗಳು ಸಾಕಷ್ಟು ನಷ್ಟಕ್ಕೊಳಗಾಗಿವೆ.ಅದರಲ್ಲೂ ಪ್ರವಾಸೋದ್ಯಮ ನೆಲಕಚ್ಚಿ ಹೋಗಿದೆ.
ರೆಸಾರ್ಟ್‌ಗಳು, ಹೋಟೆಲ್‌ಗ‌ಳು, ರೆಸ್ಟೋರೆಂಟ್‌ಗಳು, ವಿಮಾನ, ಬಸ್‌, ಕಾರ್‌ ಮತ್ತಿತರ ಸಾರಿಗೆ ಸಂಸ್ಥೆಗಳು, ಥೀಮ್‌ ಪಾರ್ಕ್‌ಗಳು ಮತ್ತಿತರ ಪ್ರವಾಸೋದ್ಯಮಕ್ಕೆ ನೇರವಾಗಿ, ಪರೋಕ್ಷವಾಗಿ ಸಂಬಂಧಿಸಿದ ಚಟುವಟಿಕೆಗಳು ಭಾರಿ ನಷ್ಟಕ್ಕೆ ಒಳಗಾಗಿವೆ.

ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಸೆಪ್ಟೆಂಬರ್‌27
1980ರಲ್ಲಿ ವಿಶ್ವಸಂಸ್ಥೆಯ ಅಂಗ ಸಂಸ್ಥೆಯಾದ ಯುನೈಟೆಡ್‌ ನೇಶನ್ಸ್‌ ವರ್ಲ್ಡ್ ಟೂರಿಸಂ ಆರ್ಗನೈಸೇಷನ್‌ ಪ್ರಾರಂಭಿಸಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆ – ಈಗ ಪ್ರತಿ ವರುಷ ಸೆಪ್ಟೆಂಬರ್‌ 27ರಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. ಎಲ್ಲಾ ದೇಶಗಳಲ್ಲೂ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸ್ಥಳೀಯ ಉತ್ಸವಗಳಂತೆ ಆಚರಿಸಲಾಗುತ್ತಿದೆ. ತನ್ಮೂಲಕ ಜಾಗತಿಕ ಮಟ್ಟದಲ್ಲಿ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಗಳ ಮೇಲೆ ಪ್ರವಾಸೋದ್ಯಮದ ಪರಿಣಾಮದ ಕುರಿತು ಜನ ಜಾಗೃತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇದೊಂದು ಜಾಗತಿಕ ಪ್ರವಾಸೋದ್ಯಮದ ಇತಿಹಾಸದಲ್ಲಿ ವಿಶಿಷ್ಠ ಮೈಲುಗಲ್ಲು ಎಂದು ಪರಿಗಣಿಸಲಾಗಿದೆ. ಪ್ರತಿ ವರುಷ ವಿವಿಧ ಧ್ಯೇಯ ವಾಕ್ಯಗಳ ಮೂಲಕ ಜನಜಾಗೃತಿ ಮಾಡಲಾಗುತ್ತಿದೆ.ಈ ಬಾರಿಯ ಧ್ಯೇಯ ವಾಕ್ಯ : ಪ್ರವಾಸೋದ್ಯಮ- ಮರು ಚಿಂತನೆ.

ಬೆಂಗಳೂರಿನಂತಹ ಮಹಾನಗರದಲ್ಲಿ ಕೂಡಾ ಸುಮಾರು 400ಕ್ಕೂ ಅಧಿಕ ಹೋಟೆಲ್‌, ರೆಸ್ಟೊರೆಂಟ್‌ಗಳು ಶಾಶ್ವತವಾಗಿ ಮುಚ್ಚಿವೆ, ಸಾವಿರಾರು ಮಂದಿ
ಉದ್ಯೋಗವನ್ನು ಕಳೆದು ಕೊಂಡಿರುವರು.ಈಗ ಕಳೆದೆರಡು ತಿಂಗಳುಗಳಿಂದ ನಿಧಾನವಾಗಿ ವ್ಯವಹಾರಗಳು ಚೇತರಿಸಿಕೊಳ್ಳತೊಡಗಿವೆ.ಈ ಸಂಕ್ರಮಣ ಕಾಲದಲ್ಲಿ ಪ್ರವಾಸೋದ್ಯಮವನ್ನು ಪುನಃ ಮೊದಲಿನ ಸ್ಥಾನಕ್ಕೆ ಕೊಂಡೊಯ್ಯಲು ಮರು ಚಿಂತನೆ ಮಾಡಲೇಬೇಕಾದ ಅನಿವಾರ್ಯತೆ ಉಂಟಾಗಿದೆ.

ಪ್ರಸ್ತುತ ದೇಶದ ಜಿ.ಡಿ.ಪಿ.ಗೆ 6.8% ಕೊಡುಗೆ ನೀಡುತ್ತಿರುವ ಪ್ರವಾಸೋದ್ಯಮ 2028ರಲ್ಲಿ 10.35%ಕ್ಕೆ ತಲುಪಬಹುದೆಂಬ ನಿರೀಕ್ಷೆಯಿದೆ. ಅಂತೆಯೇ ದೇಶದ
ಪ್ರವಾಸೋದ್ಯಮ ಆದಾಯ ಅಂದಾಜು 420 ಸಾವಿರ ಕೋಟಿ (50.9 ಮಿಲಿಯನ್‌ ಡಾಲರ್‌) ತಲುಪಲಿದೆ. ಭಾರತದ ಸಮಗ್ರ ಉದ್ಯೋಗಗಳಲ್ಲಿ 13% ಕ್ಕೂ ಅಧಿಕ ಮಂದಿ ಪ್ರವಾಸೋದ್ಯಮದಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ತೊಡಗಿಸಿಕೊಂಡಿರುವರು (2019 – 9 ಕೋಟಿ ಉದ್ಯೋಗಿಗಳು).

ಒಟ್ಟಿನಲ್ಲಿ ಪ್ರವಾಸೋದ್ಯಮದ ಮರು ಚಿಂತನೆಯ ಮೂಲಕ ಪ್ರವಾಸೋದ್ಯಮದ ಸಮರ್ಥತೆಯನ್ನು ಗುರುತಿಸುವ ಕೆಲಸವಾಗಬೇಕು. ಉದ್ಯೋಗ, ಶಿಕ್ಷಣ, ಕುಶಲ
ಕಲೆಗಳ ನಿರ್ಮಾಣ ಮತ್ತು ದೇಶದ ಆರ್ಥಿಕ ಪ್ರಗತಿಗೆ ಪ್ರವಾಸೋದ್ಯಮ ಪಾತ್ರ ಬಹಳ ಪ್ರಾಮುಖ್ಯವಾಗಿದೆ ಎನ್ನುವುದನ್ನು ಸಿದ್ಧಪಡಿಸುವುದು ಇಂದಿನ ಅಗತ್ಯತೆ.

ಉಡುಪಿ ಹೋಮ್‌ಸ್ಟೇ:ಈ ಹೋಮ್‌ಸ್ಟೇಯ ಪರಿಕಲ್ಪನೆ ಬಹಳ ಪುರಾತನವಾದುದು. ವೇದ ಕಾಲದಿಂದಲೂ ಈ ಪರಿಕಲ್ಪನೆ ಇತ್ತು. ನಮ್ಮ ನಮ್ಮ ಮನೆಯಲ್ಲಿ ಹೆಚ್ಚುವರಿಯಾಗಿರುವ ಒಂದೆರಡು ಕೊಠಡಿಗಳನ್ನು ಸರಕಾರಿ ನಿಯಮಾವಳಿ ಮತ್ತು ಉತ್ತಮ ಮೂಲಭೂತ ಸೌಲಭ್ಯಗಳನ್ನು ಅಳವಡಿಸಿ, ಅತಿಥಿಗಳಿಗೆ ನೀಡಿ, ಅವರಿಗೆ ನಮ್ಮದೇ ಊಟೋಪಹಾರಗಳನ್ನು ಉಣಬಡಿಸಿ, ಆಚಾರ ವಿಚಾರಗಳನ್ನು ನಿಮಯ ಮಾಡಿಕೊಂಡರೇ ಅದೇ ಹೋಮಸ್ಟೇಯ ಸಂಕ್ಷಿಪ್ತ ಪರಿಚಯ. ಇದರಿಂದ ನಿರ್ವಾಹಕ ಕುಟುಂಬದ ಆರ್ಥಿಕತೆಯು ಅಭಿವೃದ್ಧಿ ಹೊಂದುತ್ತದೆ. ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ನಿಯಮಾವಳಿಗಳಂತೆ ಮಾಲಿಕರು
ವಾಸ ಮಾಡಿಕೊಂಡಿರುವ ಮನೆಗಳಲ್ಲಿ ಕನಿಷ್ಟ 2, ಗರಿಷ್ಟ 5 ಕೊಠಡಿಗಳನ್ನು ಒದಗಿಸಿ, ಇಲಾಖೆಯ ಮಾನ್ಯತೆ ಪಡೆದರೆ ನಿಮ್ಮ ಹೋಮ್‌ಸ್ಟೇ ಸಿದ್ಧ.

ಬದಲಾಗುತ್ತಿರುವ ಭಾರತದ ಆರ್ಥಿಕತೆ:ಮಧ್ಯಮ ವರ್ಗದ ಜನರ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುತ್ತಿದ್ದು, ಆದಾಯ ದ್ವಿಗುಣಗೊಳ್ಳುತ್ತಿದೆ.ಈ ಸಂದರ್ಭದಲ್ಲಿ ಪ್ರವಾಸೋದ್ಯಮ – ಮರು ಚಿಂತನೆಗಾಗಿ ಬಹಳಷ್ಟು ಬದಲಾವಣೆಗಳನ್ನು ಮಾಡಬೇಕಿದೆ (ಸ್ಥಳೀಯ ಮಟ್ಟದಲ್ಲಿ ಹಾಗೂ ಸರಕಾರದ ಮಟ್ಟದಲ್ಲಿ).
*ಹತ್ತಾರು ವರುಷಗಳಿಂದ ಸರಕಾರಕ್ಕೆ ಸೂಕ್ತ ಸಮಯದಲ್ಲಿ ತೆರಿಗೆ ಪಾವತಿಸಿ ಕಾರ್ಯಾಚರಿಸುತ್ತಿರುವ ಪ್ರವಾಸೋದ್ಯಮ ಸಂಸ್ಥೆಗಳಿಗೆ ತೆರಿಗೆ ವಿನಾಯಿತಿ, ಜಿ.ಎಸ್‌.ಟಿ. ಗೊಂದಲಗಳ ನಿವಾರಣೆ, ಮೂಲಭೂತ ಸೌಲಭ್ಯಗಳನ್ನು ಪುನರ್‌ ರಚಿಸಲು ಸೂಕ್ತ ಆರ್ಥಿಕ ಸಹಾಯವನ್ನು ಸರಕಾರ ಧನಸಹಾಯ ಮತ್ತು ಧೀರ್ಘ‌ಕಾಲದ ಸಾಲದ ಮೂಲಕ ಪುನರ್‌ ರಚನೆಗೆ ಸಹಾಯ ನೀಡುವುದು.
* ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹೊಸ ಆವಿಷ್ಕಾರ ಕೇಂದ್ರಗಳ ಸ್ಥಾಪನೆ, ಸ್ಟಾರ್ಟ್‌ ಅಪ್ ಗಳ ಪ್ರಾಯೋಜನೆ.
*ಭಾರತ ಪ್ರಸ್ತುತ ವಿಶ್ವದ ಡಿಜಿಟಲ್‌ ಜಗತ್ತಿನಲ್ಲಿ ಮುಂಚೂಣಿಯಲ್ಲಿದೆ. ಭರದಿಂದ ಉನ್ನತಿಗೇರುತ್ತಿರುವ ಡಿಜಿಟಲ್‌ ಜ್ಞಾನವನ್ನು ಪ್ರವಾಸೋದ್ಯಮಕ್ಕೆ ಅಳವಡಿಸಲು ಸಹಕಾರ ನೀಡುವುದು.
* ವಿದ್ಯಾ ಸಂಸ್ಥೆಗಳು, ಸರಕಾರ, ಖಾಸಗಿ ಸಂಸ್ಥೆಗಳು ಮತ್ತು ತಾಂತ್ರಿಕ ನಿಪುಣರು – ಪ್ರವಾಸೋದ್ಯಮದಲ್ಲಿ ಭವಿಷ್ಯದ ಕೆಲಸದ ಅವಕಾಶಗಳಿಗೆ ಜನರನ್ನು ಸಿದ್ಧಪಡಿಸುವುದು.
* ಪ್ರಸ್ತುತವಿರುವ ವಿದ್ಯಾರ್ಹತೆ ಮತ್ತು ಕೆಲಸದ ವಾಸ್ತವತೆಯ ನಡುವೆ ಇರುವ ಅಸಮರ್ಪಕ ಹೊಂದಾಣಿಕೆಯನ್ನು ಸರಿಪಡಿಸಬೇಕು.
* ಹೋಮ್‌ಸ್ಟೇ ಪರಿಕಲ್ಪನೆಗೆ ಜಾಸ್ತಿ ಒತ್ತು ನೀಡಿ, ತನ್ಮೂಲಕ ಗ್ರಾಮೀಣ ಜನರ, ಮಹಿಳೆಯರ, ಯುವಜನರ ಆರ್ಥಿಕತೆಯನ್ನು ಭದ್ರಪಡಿಸುವ ಕೆಲಸಗಳು ಆಗಬೇಕು.
*ಪ್ರವಾಸೋದ್ಯಮ – ದೇಶದ ಅತಿ ದೊಡ್ಡ ಉದ್ಯೋಗ ಅವಕಾಶ ನೀಡುವ ಉದ್ಯಮವೆಂದು ಪರಿಗಣಿಸುವುದು. ಬಹುಶಃ ಈ ಪಟ್ಟಿ ಇನ್ನೂ ದೊಡ್ಡದಿದೆ….
ಮರವಂತೆ ನಾಗರಾಜ ಹೆಬ್ಟಾರ್‌
ಅಧ್ಯಕ್ಷರು, ಉಡುಪಿ ಜಿಲ್ಲಾ ಟ್ರಾವೆಲ್‌ ಏಜೆಂಟ್ಸ್‌ ಎಸೋಸಿಯೇಶನ್‌

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

ಸೌರ ಯುಗಾದಿ; ಜೀವನೋತ್ಸಾಹ, ನವಚೈತನ್ಯ ತುಂಬುವ ಹಬ್ಬ ವಿಷು

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

1-qwewqew

ಮರಳಿ ಬಂದಿದೆ ಯುಗಾದಿ: ಹೊಸ ಸಂವತ್ಸರದ ಹುರುಪು, ನವ ಬೆಳಕಿನ ಆಶಯ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.