World Tourism Day 2023: ಒಂಭತ್ತು ಗುಡ್ಡದ ಹರಸಾಹಸದ ಚಾರಣ…

ಕೆಲವೊಂದು ಅಪರೂಪದ ಮರ, ಹಕ್ಕಿ, ಕಪ್ಪೆ, ಹಾರುವ ಹಲ್ಲಿಯ ವಿವರವನ್ನು ತಿಳಿಸಿದರು

Team Udayavani, Sep 27, 2023, 11:00 AM IST

World Tourism Day 2023: ಒಂಭತ್ತು ಗುಡ್ಡದ ಹರಸಾಹಸದ ಚಾರಣ…

ಮಳೆ ಹಾಗೂ ಮಲೆನಾಡಿಗೆ ಏನೋ ಒಂದು ವಿಶೇಷ ಬಾಂಧವ್ಯ. ಕುವೆಂಪು ಅವರ ಪುಸ್ತಕದಲ್ಲಿ ವರ್ಣಿಸಿದ ಮಲೆನಾಡನ್ನು ಬರೀ ಪದಗಳಲ್ಲಿ ಓದಿ ಖುಶಿ ಪಡುತಿದ್ದ ಕಾಲೇಜು ದಿನಗಳ ನೆನಪು.

ಮುಂಗಾರು ಪ್ರಾರಂಭವಾಗಿ ತಿಂಗಳುಗಳೇ ಕಳೆದಿತ್ತು. ಸ್ನೇಹಿತರಾದ ಹರ್ಷ, ಭುವನ್ ಹಾಗೂ ಸಾಯಿಕಿರಣ ಫೋನ್ ಮೂಲಕ ಕರೆ ಮಾಡಿ “ಎಲ್ಲಿಗಾದರು ಹೊರಗಡೆ ಹೋಗಿ ಸುತ್ತಿ ಬರೋಣವೆ”  ಎಂದು ಕೇಳಿದಾಗ  ನನಗೆ ಎಲ್ಲಿಲ್ಲದ ಖುಶಿ. ಒಂದು ಗಂಟೆಯ ಚರ್ಚೆಯ ನಂತರ ನಾವು ಹೋಗುವ ಜಾಗ ನಿಗದಿಯಾಯಿತು. ನಾವು ಹೊರಟದ್ದು ಸಕಲೇಶಪುರದ ಹತ್ತಿರ ಇರುವ ಒಂಬತ್ತು ಗುಡ್ಡದ ಚಾರಣ. ನಮ್ಮ ತಂಡ ಸಕಲೇಶಪುರ ತಲುಪುವಾಗ ಬೆಳಿಗ್ಗೆ 7 ಗಂಟೆಯಾಗಿತ್ತು. ನಮ್ಮ ಅದೃಷ್ಟ ಕೈಕೊಟ್ಟ ಕಾರಣ, ಕಾರಣಾಂತರದಿಂದ ಚಾರಣದ ಯೋಜನೆಯನ್ನು ಕೈ ಬಿಡಲಾಗಿತ್ತು.  ನಾವು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಲ್ಲಿಂದ ಹೊರಡುವ ಸಿದ್ದತೆ ಮಾಡಿದೆವು.

ಅದೇ ದಾರಿಯಲ್ಲಿ ಕೂಲಿ ಕೆಲಸಕ್ಕೆ ಹೊರಟ ಊರಿನ ವ್ಯಕ್ತಿ ನಮ್ಮನ್ನು ಪ್ರಶ್ನಿಸಿ, ವಿಚಾರಿಸಿ ಕೇಳಿದಾಗ ನಾವು ನಮ್ಮ ಪರಿಚಯವನ್ನು ಹಾಗೂ ಬಂದ ಕಾರಣವನ್ನು ಹೇಳಿದೇವು.  ಊರಿನ ವ್ಯಕ್ತಿಯು ಒಂಭತ್ತು ಗುಡ್ಡ ಚಾರಣ , ಆನೆಗಳು ಚಾರಣದ ಹಾದಿಯಲ್ಲಿ ಓಡಾಡುವುದರಿಂದ  ನಿಷೇಧಿಸಲಾಗಿದೆ. ಅದರೆ ಅರಣ್ಯ ಇಲಾಖೆಯ ಅನುಮತಿ ಪಡೆದರೆ, ಇಲಾಖೆಯ ಮಾರ್ಗದರ್ಶಕರು ಸಹಾಯಕ್ಕೆ ಬರಬಹುದು ಎಂದರು. ಅರಣ್ಯ ಇಲಾಖೆಯಲ್ಲಿ ಪರಿಚಯದ ಅನೇಕ ಸ್ನೇಹಿತರು ಇರುವುದರಿಂದ , ಯಾವ ಸ್ನೇಹಿತನಿಗೆ ಕೇಳಿದರೆ ನಮಗೆ ಸಹಾಯ ಆಗಬಹುದು ಎಂದು ಯೋಚಿಸಿದೆ. ಒಬ್ಬ ಸ್ನೇಹಿತನಿಗೆ ಕರೆ ಮಾಡಿ ಗುಡ್ಡದ ವಿವರ ಹಾಗೂ ಯಾವ ಅರಣ್ಯ ವಲಯಕ್ಕೆ ಸೇರುತ್ತದೆ ಎಂದು ವಿಷಯ ತಿಳಿಸಿದೆ.

ಕಾಡಿನ ಕರಾಳತೆಯನ್ನು ಕಂಡಿದ್ದ ಅವನು, ನಮ್ಮೊಡನೆ ಇಲಾಖೆಯ ಅರಣ್ಯ ವೀಕ್ಷಕನನ್ನು ಕಳುಹಿಸುತ್ತೇನೆ ಎಂದ. ಅರಣ್ಯ ವೀಕ್ಷಕ ಬರುವ ತನಕ ಅಲ್ಲೇ ಹಳ್ಳಿಯ ಜನರ ಬಳಿ ಸುತ್ತ ಮುತ್ತದ ಪ್ರದೇಶಗಳ ಕೆಲವು ವಿಷಯಗಳನ್ನು ತಿಳಿದುಕೊಂಡೆ. ಸ್ವಲ್ಪ ಹೊತ್ತಿನ ಬಳಿಕ ಅರಣ್ಯ ವೀಕ್ಷಕ ನಮ್ಮ ಜೊತೆಗೂಡಿದರು. ಅಲ್ಲಿಗೆ ನಮ್ಮ ಚಾರಣ ಶುರುವಾಯಿತು.

ಅದು ಸುಮಾರು  8 ಕಿಲೋಮೀಟರ್ ಕಿಂತಲು ಅಧಿಕ ಚಾರಣ ಎಂದು ತಿಳಿಯಿತು.  ನಾವು ಮೊದಲು ಯೋಚಿಸಿದ ಹಾಗೆ ದಾರಿ ಮಧ್ಯ ತಿನ್ನಲು ಕುಡಿಯಲು ಬೇಕಾದ ವಸ್ತುಗಳನ್ನು ಎಲ್ಲರೂ ಬ್ಯಾಗಿನಲ್ಲಿ ತಂದಿದ್ದೆವು. ಕಾಡಿಗೆ ಹೊರಟ ಮೇಲೆ ಜಿಗಣೆ ಕಾಟ ಇದ್ದೆ ಇರುತ್ತದೆ ಎಂದು ಉಪ್ಪು ಕೂಡ ತಂದಿದ್ದೆವು. ಚಾರಣದ ಆರಂಭದಲ್ಲಿ ಶೋಲಾ ಅರಣ್ಯದ ಸಣ್ಣ ಕಾಡನ್ನು ದಾಟಿದೆವು. ಅಲ್ಲಿ ನಮ್ಮ ಮಾರ್ಗದರ್ಶಿಯಾಗಿ ಬಂದ ಇಲಾಖೆಯ ಸಂತೋಷ್ ಅಣ್ಣ ಕಾಡಿನಲ್ಲಿ ಕಂಡ ಕೆಲವೊಂದು ಅಪರೂಪದ ಮರ, ಹಕ್ಕಿ, ಕಪ್ಪೆ, ಹಾರುವ ಹಲ್ಲಿಯ ವಿವರವನ್ನು ತಿಳಿಸಿದರು. ಚಾರಣದ ಹಾದಿಯುದ್ದಕ್ಕೂ ಅವರು ತಿಳಿಸಿದ ಕಾಡಿನ ಹಾಗೂ ಕಾಡು ಪ್ರಾಣಿಗಳ ವಿಷಯಗಳನ್ನು ಕೇಳಲು ಬಲು ಚಂದವಾಗಿತ್ತು. ಅವರ 19 ವರ್ಷಗಳ ಕಾಡಿನ ಸೇವೆ ಅವರ ಮಾತಿನಲ್ಲಿ ಕೇಳಿ ಬರುತ್ತಿತ್ತು. ಮಾತಿನ ನಡುವೆ ನಾವು ಕಾಡು ದಾಟಿ ಶೋಲಾ ಹುಲ್ಲುಗಾವಲಿಗೆ ತಲುಪಿದೆವು.

ಅದೊಂದು ಅತ್ಯಂತ ಸುಂದರ ನೋಟ, ಬೇರೆಯೇ ಪ್ರಪಂಚ ತೆರೆದ ಅನುಭವ, ಕಾಲಿನಲ್ಲಿ ಜಿಗಣೆಗಳು  ಆಗಲೇ ರಕ್ತ ಹೀರಲು ಶುರುಮಾಡಿದ್ದವು. ಜಿಗಣೆಗಳನ್ನು ಕಾಲಿನಿಂದ ತೆಗೆದರೆ ನಿಲ್ಲದ ರಕ್ತ, ಇವೆಲ್ಲವು ಒಂದು ಹೊಸ ಅನುಭವ. ಅರ್ಧ ದಾರಿಯ ಸುಸ್ತು ಕಳೆಯಲು ಸರಿಯಾದ ಜಾಗ ನೋಡಿ ಕುಳಿತೆವು. ಸಂತೋಷ್ ಅಣ್ಣ ನ ಅನುಭವದ ಬುತ್ತಿ ಇನ್ನು ಹಾಗೆ ಇತ್ತು. ಶೋಲಾ ಹುಲ್ಲುಗಾವಲು ಉಪಯೋಗದ ಮಾಹಿತಿ ನಮ್ಮನ್ನು ಇನ್ನಷ್ಟು ಪ್ರಕೃತಿಯ ಅಡಿಯಲ್ಲಿ ಇರಲು ಪ್ರೇರಿಸಿತು. ಅಲ್ಲಿಂದ ಹೊರಟ ನಾವು ಬೆಟ್ಟದ ಸುತ್ತ ಹೆಜ್ಜೆ ಹಾಕುತ್ತಾ ನಮ್ಮ ಚಾರಣವನ್ನು ಮುಂದುವರಿಸಿದೆವು.

ಮಧ್ಯಾಹ್ನದ ಸಮಯ, ನಾವು ನಮ್ಮ ಚಾರಣದ ಒಂದನೇ ಭಾಗ ಅಂದರೆ ಬೆಟ್ಟದ ತುತ್ತ ತುದಿ ತಲುಪಿದೆವು. ತಂದ ತಿಂಡಿ ಖಾಲಿ ಮಾಡಿ ಪ್ರಕೃತಿಯ ಆನಂದವನ್ನು ಕೆಲ ಕಾಲ ಸವಿದು ಬೆಟ್ಟಗಳ ಪರಿಚಯ ಪಡೆಯುತ್ತ ಕುಳಿತೆವು. ಅಲ್ಲಿ ಕಾಣುವುದು ಆ ಬೆಟ್ಟ, ಇಲ್ಲಿ ಕಾಣುವುದು ಈ ಬೆಟ್ಟ ಎಂದು ಸಂತೋಷ ಅಣ್ಣನ ಮಾತುಗಳು ಇಂದು ಕಿವಿಗಳಲ್ಲಿ ಜೀವಂತ. ನಮ್ಮ ಕುತೂಹಲ ಅವರನ್ನು ಇನ್ನಷ್ಟು ವಿಷಯ ಹೇಳಲು ಉತ್ತೇಜಿಸಿತು. ಎಲ್ಲೋ ದೂರದಲ್ಲಿ ಕಾಣುತ್ತಿದ್ದ ಕಾಡೆಮ್ಮೆಗಳ ಹಿಂಡು ಕಂಡು ನಮ್ಮಲ್ಲಿ ಸ್ವಲ್ಪ ಮಟ್ಟಿಗೆ ಭಯ ಕಾಡಿದರೂ ಸಂತೋಷ ಅಣ್ಣನ ಮಾತಿನ ನಡುವೆ ಮರೆತೆ ಹೋಯಿತು. ಜಿಟಿ ಜಿಟಿ ಮಳೆ ಇದ್ದಕ್ಕಿದ್ದಂತೆ ಶುರುವಾಯಿತು. ಬೆಟ್ಟದ ಮೇಲೆ ಗಾಳಿ ತುಂಬ ಜೋರಾಗಿ ಬೀಸುತ್ತಿದ್ದ ಕಾರಣ ನಮ್ಮ ಸುರಕ್ಷತೆಗೆ ನಾವು ಈಗಲೇ ಹೊರಡೋಣ ಎಂದು ಸಂತೋಷ್ ಅಣ್ಣ ಹೇಳಿದರು.

ಅವರ ಮಾತು ಕೇಳಿ ಸ್ವಲ್ಪ ಬೇಜಾರ್ ಆದರು, ಸರಿ ಎಂದು ಅವರ ಹಿಂದೆ ಹೊರಟೆವು. ಬಂದ ದಾರಿಯಲ್ಲಿ ಎಲ್ಲಿಯೂ ನಿಲ್ಲದೆ, ಕಾಡು ದಾಟಿ ನಮ್ಮ ನಮ್ಮ ವಾಹನ ಬಳಿಗೆ ಬಂದೆವು. ಮಳೆಯ ಕಾರಣ ಸ್ವಲ್ಪ ಕಷ್ಟವಾದರು ಎಲ್ಲರೂ ಕ್ಷೇಮವಾಗಿ ಬಂದೆವು.  ನಮ್ಮನ್ನು ಆರಾಮವಾಗಿ ಕರೆದುಕೊಂಡು ಹೋದ ಸಂತೋಷ ಅಣ್ಣನಿಗೆ ಧನ್ಯವಾದ ತಿಳಿಸಿ, ಸಹಾಯ ಮಾಡಿದ ಇಲಾಖೆಯ ಸ್ನೇಹಿತನಿಗೂ ಧನ್ಯವಾದ ತಿಳಿಸಿ, ನಾವು ನಮ್ಮ ಮನೆ ಕಡೆ ಹೊರಟೆವು.

*ಶಿವರಾಮ್ ಕಿರಣ್. ಉಜಿರೆ

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.