ಜಲಮೂಲ ಕಸಿಯದಿರಲಿ ಕೊಳವೆ ಬಾವಿ


Team Udayavani, Feb 25, 2018, 3:45 AM IST

kolave-bavi.jpg

ಸ್ಥಳೀಯ ಆಡಳಿತ ತೆರೆದ ಬಾವಿಗಳ ಸಮೀಪ ಕೊಳವೆ ಬಾವಿ ನಿರ್ಮಿಸಿ ಬಾವಿಯ ನೀರಿಗೆ ತೊಂದರೆ ಆಗುವಂತೆ ಮಾಡುತ್ತಿದೆ. ತಮ್ಮ ಬಾವಿ ಸಮೀಪ ಕೊಳವೆ ಬಾವಿ ನಿರ್ಮಿಸಬೇಡಿ ಎಂದು ಮನವಿ ಮಾಡಿಕೊಂಡರೂ ಅದಕ್ಕೂ ತನಗೂ ಸಂಬಂಧವಿಲ್ಲವೆಂಬ ರೀತಿಯಲ್ಲಿ ಕೊಳವೆ ಬಾವಿ ಕೊರೆಯಿಸುತ್ತಿದೆ ಎಂದು ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರಕಾರವೇ ಕೊಳವೆ ಬಾವಿ ನಿರ್ಮಾಣ ಬೇಡ ಎಂದು ಹೇಳುತ್ತಿದ್ದರೂ ಸ್ಥಳೀಯಾಡಳಿತಗಳು ಮಾತ್ರ ಅಲ್ಲಲ್ಲಿ ಕೊಳವೆ ಬಾವಿ ನಿರ್ಮಿಸುತ್ತಿರುವುದು ವಿಪರ್ಯಾಸದ ಸಂಗತಿ. ಕೊಳವೆ ಬಾವಿ ಹುಚ್ಚುಬಿಟ್ಟು ಹೋಗಲು ಸುಪ್ರೀಂ ಕೋಟೇì ಕಠಿಣ ಆದೇಶ ನೀಡಬೇಕೇನೋ? ವರ್ಷದಿಂದ ವರ್ಷಕ್ಕೆ ಬೇಸಿಗೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಬವಣೆ ಹೆಚ್ಚುತ್ತಿರುವುದು ಕೆಲವೆಡೆ ಕಂಡು ಬರುತ್ತಿದೆ. ಇದರಿಂದಾಗಿ ಹೊಸ ಜಲ ಮೂಲ ಅರಸಬೇಕಾದುದು ಅನಿವಾರ್ಯ. ಆದರೂ ಅಂತರ್ಜಲ ಸಾಮರ್ಥ್ಯ ಹೆಚ್ಚಿಸುವ ವಿವಿಧ ಕ್ರಮಗಳನ್ನು ಅನುಸರಿಸಿದರೆ ಎಲ್ಲರಿಗೂ ಉಪಕಾರವಾಗುತ್ತದೆ.

ನಾಡಿನಾದ್ಯಂತ ಬೇಸಿಗೆ ಶುರುವಲ್ಲೇ ನೀರಿನ ಕೊರತೆ ಕಂಡು ಬರುತ್ತಿದೆ. ನೀರಿಲ್ಲ ಎಂದ ಕೂಡಲೇ ಜನರಿಗೆ ಮೊದಲು ನೆನಪಾಗುವುದು ಬೋರ್‌ವೆಲ್‌ಗ‌ಳು. ಎಷ್ಟೇ ಖರ್ಚಾದರೂ ಸರಿ ಬೋರ್‌ವೆಲ್‌ ಕೊರೆದರೆ ನೀರು ಸಿಗುತ್ತದೆ ಎಂಬ ನಂಬಿಕೆಯೊಂದು ಅದ್ಹೇಗೋ ಹುಟ್ಟಿಕೊಂಡಿದೆ. ಹಗಲು-ರಾತ್ರಿ ಎಂಬ ವ್ಯತ್ಯಾಸವಿಲ್ಲದಂತೆ ಅಲ್ಲಲ್ಲಿ ದೈತ್ಯಾಕಾರದ ಯಂತ್ರಗಳು ಭೂಮಿಯನ್ನು ಕೊರೆಯುವ ಸದ್ದು ಎದೆ ಝಲ್ಲೆನಿಸುತ್ತಿದೆ. 500, 600 ಅಡಿ ಕೊರೆದರೂ ಕೆಲವೊಮ್ಮೆ ನೀರು ಸಿಗುವುದೆಂಬ ಖಾತ್ರಿ ಇಲ್ಲ, ಸಿಕ್ಕಿದರೂ ಅತ್ಯಲ್ಪ. ಇಂತಹ ಕೊಳವೆ ಬಾವಿಗಳಲ್ಲಿ ಆರು ತಿಂಗಳು, ಒಂದು ವರ್ಷದ ತನಕ ನೀರು ದೊರೆತರೆ ಅದೇ ಹೆಚ್ಚು. ಆದರೂ ಪ್ರತಿ ವರ್ಷ ಕೊರೆಯುವುದು ನಿಂತಿಲ್ಲ. ಭೂಮಿಯ ಮೇಲೆ ದೌರ್ಜನ್ಯ ನಿರಂತರ ಮುಂದುವರಿದಿದೆ.

ಕೈಗಾರಿಕೆ, ವಾಣಿಜ್ಯ, ನಗರೀಕರಣದಿಂದಾಗಿ ಈಗಾಗಲೇ ನೀರಿನ ಮೂಲ ಕಡಿಮೆಯಾಗುತ್ತಿದೆ. ಕೃಷಿ ಚಟುವಟಿಕೆಗಳು ಕಣ್ಮರೆಯಾಗುವ ಹಂತ ತಲುಪಿದೆ. ಇದೀಗ ಸರಕಾರದ ಕಠಿಣ ನಿರ್ಬಂಧ ಇರುವ ಹೊರತಾಗಿಯೂ ಅಲ್ಲಲ್ಲಿ ಕೊಳವೆ ಬಾವಿಗಳು ನಿರ್ಮಾಣವಾಗುತ್ತಿವೆ. ಒಂದೆಡೆ ಕೃಷಿ ಕಾರ್ಯಕ್ಕಾಗಿ ಖಾಸಗಿಯಾಗಿ ಬೋರ್‌ವೆಲ್‌ ನಿರ್ಮಾಣ, ಇನ್ನೊಂದೆಡೆ ಕುಡಿಯುವ ನೀರು ಸರಬರಾಜಿಗಾಗಿ ಸ್ಥಳೀಯ ಆಡಳಿತಗಳಿಂದ ಕೊಳವೆ ಬಾವಿ ಕೊರೆಯಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ತೆರೆದ ಬಾವಿ, ಕೆರೆಗಳ ಸಮೀಪ ಕೊಳವೆ ಬಾವಿ ತೆಗೆದರೆ ಜಲಮೂಲ ಬತ್ತಿ ಹೋಗಿ ಬಾವಿಗಳು ಬರಿದಾಗುವುದು ಎಲ್ಲರಿಗೂ ತಿಳಿದ ವಿಚಾರವೇ. ಒಂದು ಹಂತದಲ್ಲಿ ಕೊಳವೆ ಬಾವಿಗಳು ಕೃಷಿಗೆ, ಕುಡಿಯುವ ನೀರಿಗೆ ಬೇಕಾದ ನೀರನ್ನು ಕೆಲವಾರು ಕಡೆ ಒದಗಿಸಿಕೊಟ್ಟಿರುವುದು ಸತ್ಯ. ಹಾಗಿದ್ದರೂ ಮಿತಿಮೀರಿ ಅಲ್ಲಲ್ಲಿ ಕೊಳವೆ ಬಾವಿ ನಿರ್ಮಿಸಿದರೆ ನೀರಿನ ಒಳ ಹರಿವು ಬಹುಮುಖವಾಗಿ ಇರುವುದಿಲ್ಲ ಎಂದು ಈಗಾಗಲೇ ಅನೇಕ ಕಡೆಗಳಲ್ಲಿ ಕಂಡು ಬಂದಿದೆ.

ಸ್ಥಳೀಯ ಆಡಳಿತ ಈ ವಿಚಾರ ಮರೆತು ತೆರೆದ ಬಾವಿಗಳ ಸಮೀಪ ಕೊಳವೆ ಬಾವಿ ನಿರ್ಮಿಸಿ ಬಾವಿಯ ನೀರಿಗೆ ತೊಂದರೆ ಆಗುವಂತೆ ಮಾಡುತ್ತಿದೆ. ತಮ್ಮ ಬಾವಿ ಸಮೀಪ ಕೊಳವೆ ಬಾವಿ ನಿರ್ಮಿಸಬೇಡಿ ಎಂದು ಮನವಿ ಮಾಡಿಕೊಂಡರೂ ಅದಕ್ಕೂ ತನಗೂ ಸಂಬಂಧವಿಲ್ಲವೆಂಬ ರೀತಿಯಲ್ಲಿ ಕೊಳವೆ ಬಾವಿ ಕೊರೆಯಿಸುತ್ತಿದೆ ಎಂದು ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸರಕಾರವೇ ಕೊಳವೆ ಬಾವಿ ನಿರ್ಮಾಣ ಬೇಡ ಎಂದು ಹೇಳುತ್ತಿದ್ದರೂ ಸ್ಥಳೀಯಾಡಳಿತಗಳು ಮಾತ್ರ ಅಲ್ಲಲ್ಲಿ ಕೊಳವೆ ಬಾವಿ ನಿರ್ಮಿಸುತ್ತಿರುವುದು ವಿಪರ್ಯಾಸದ ಸಂಗತಿ. ಕೊಳವೆ ಬಾವಿ ಹುಚ್ಚುಬಿಟ್ಟು ಹೋಗಲು ಸುಪ್ರೀಂ ಕೋಟೇì ಕಠಿಣ ಆದೇಶ ನೀಡಬೇಕೇನೋ? ವರ್ಷದಿಂದ ವರ್ಷಕ್ಕೆ ಬೇಸಿಗೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಬವಣೆ ಹೆಚ್ಚುತ್ತಿರುವುದು ಕೆಲವೆಡೆ ಕಂಡು ಬರುತ್ತಿದೆ. ಇದರಿಂದಾಗಿ ಹೊಸ ಜಲ ಮೂಲ ಅರಸಬೇಕಾದುದು ಅನಿವಾರ್ಯ. ಆದರೂ ಅಂತರ್ಜಲ ಸಾಮರ್ಥ್ಯ ಹೆಚ್ಚಿಸುವ ವಿವಿಧ ಕ್ರಮಗಳನ್ನು ಅನುಸರಿಸಿದರೆ ಎಲ್ಲರಿಗೂ ಉಪಕಾರವಾಗುತ್ತದೆ.

ಪರಿಸರ ಮಾಲಿನ್ಯದಿಂದ ಈಗಾಗಲೇ ಕಂಗೆಟ್ಟಿರುವ ನಾಡಿಗೆ ನದಿ ತಿರುವು ಹಾಗೂ ಇನ್ನಿತರ ಯೋಜನೆಗಳ ಸಮಸ್ಯೆ ಒಂದೆಡೆಯಾದರೆ ಇನ್ನೊಂದೆಡೆ ಅಲ್ಲಲ್ಲಿ ನೂರಾರು ಕೊಳವೆ ಬಾವಿಗಳನ್ನು ನಿರ್ಮಿಸುತ್ತಿರುವುದು ಆತಂಕಕಾರಿ ಸಂಗತಿ. ಹೊಸ ಕೊಳವೆಬಾವಿ ಕೊರೆಯುವಾಗ ಸಂಭವಿಸುವ ಶಬ್ದ ಮಾಲಿನ್ಯ, ಧೂಳು, ಜಲ್ಲಿ ಹುಡಿಗಳಿಂದ ಪರಿಸರದ ಸಸ್ಯಗಳಿಗೆ ಹಾನಿ.

ಆರೋಗ್ಯಕ್ಕೂ ಈ ಧೂಳು ಹಾನಿಕರ. ಕೆಲವೊಮ್ಮೆ ಈ ಧೂಳನ್ನು ತೊಳೆಯಲು ಬೇಕಾಗುವಷ್ಟು ನೀರು ಕೂಡಾ ಸಿಗಲಾರದು, ಅಷ್ಟು ವ್ಯಾಪಕವಾಗಿ ಧೂಳು, ಕೆಸರು ಮಿಶ್ರಿತ ಮಣ್ಣಿನ ರಾಶಿ ಎದ್ದಿರುತ್ತದೆ. ಪ್ರಾಕೃತಿಕವಾಗಿ ಸ್ವತ್ಛವಾಗಲು ಮಳೆಯನ್ನೇ ನಿರೀಕ್ಷಿಸಬೇಕಷ್ಟೇ. ಮುಂಗಾರು ಮಳೆ ಆಗಮನದ ತನಕವೂ ಕೊಳವೆ ಬಾವಿಯಿಂದೆದ್ದ ಧೂಳಿನ ಪ್ರಭಾವ ಪರಿಸರದ ಮೇಲೆ ಇರುತ್ತದೆ.

ಜಲ ತಜ್ಞರು ಹೇಳುವಂತೆ ಮಳೆಗಾಲದಲ್ಲಿ ಮಳೆ ನೀರನ್ನು ಹೊರಗೆ ಹೋಗಗೊಡದೆ ತಮ್ಮ ತಮ್ಮ ಹಿತ್ತಿಲಿನಲ್ಲೇ ಇಂಗು ಗುಂಡಿಗಳ ಮುಖೇನ ಇಂಗಿಸಿಕೊಂಡರೆ ಬಾವಿ, ಕೆರೆಗಳನ್ನು ಸಮೃದ್ಧಗೊಳಿಸಿಕೊಳ್ಳಬಹುದು. ಕೊಳವೆ ಬಾವಿಗಳ ಹೊರತಾಗಿಯೂ ಕೆಲವು ಕಡೆಗಳಲ್ಲಿ ಹಳೆ ಕಾಲದ ಕೆರೆ, ಬಾವಿಗಳನ್ನು ದುರಸ್ತಿಪಡಿಸಿದರೆ ನೀರು ದೊರಕಬಹುದು. ಸ್ಥಳೀಯ ಆಡಳಿತಗಳು ಏಕಾಏಕಿ ಕೊಳವೆ ಬಾವಿಗಳಿಗೆ ಆಸಕ್ತಿ ತೋರಿಸುವುದನ್ನು ಬಿಟ್ಟು ಇಂತಹ ಕೆರೆ ಬಾವಿಗಳ ಹೂಳೆತ್ತಿ ಅಭಿವೃದ್ಧಿಪಡಿಸುವತ್ತ ಚಿಂತನೆ ನಡೆಸಬೇಕಾಗಿದೆ.

ಅಂತಹ ಕೆರೆಗಳಲ್ಲಿ ಕೊಳವೆ ಬಾವಿಗಳಲ್ಲಿ ದೊರಕುವುದಕ್ಕಿಂತ ಹೆಚ್ಚಿನ ಪ್ರಮಾಣದ ನೀರು ಲಭ್ಯವಾಗುತ್ತದೆ. ಗಮನಾರ್ಹವಾದ ಮತ್ತೂಂದು ವಿಚಾರವೆಂದರೆ ಹತ್ತಾರು ವರ್ಷಗಳ ಹಿಂದೆ ಅಗಾಧ ನೀರಿನ ಸಾಮರ್ಥ್ಯವಿದ್ದ ಕೊಳವೆ ಬಾವಿಗಳಲ್ಲಿ ಈಗ ನೀರಿನ ಪ್ರಮಾಣ ಕಡಿಮೆಯಾಗಿರುವುದು.

ಅಧಿಕ ಉಷ್ಣಾಂಶದ ಪ್ರದೇಶವಾದ ನಮ್ಮ ರಾಜ್ಯದಲ್ಲಿ ನೀರಿನ ಬಳಕೆ ಪ್ರಮಾಣ ಹೆಚ್ಚು. ಬೇಡಿಕೆಯೂ ಅಧಿಕ. ಅವಶ್ಯಕತೆಗೆ ತಕ್ಕಂತೆ ಪೂರೈಸುವುದು ಆಡಳಿತದವರಿಗೂ ಕಷ್ಟಕರವೇ. ಕಾಂಕ್ರೀಟ್‌ ಕಟ್ಟಡ ನಿರ್ಮಾಣಗಳಿಗೆ ಬೇಕಾಗುವ ನೀರಿನ ಪ್ರಮಾಣವು ಹೆಚ್ಚಾಗಿದೆ. ಸಮಸ್ತ ಜನತೆ ಜಾಗರೂಕತೆಯಿಂದ ನೀರನ್ನು ಹಿತಮಿತವಾಗಿ ಬಳಸುವ ಮೂಲಕ ನೀರನ್ನು ಉಳಿಸಬೇಕಾಗಿದೆ. ಈ ಬಗ್ಗೆ ಜಾಗೃತಿ ಮೂಡಲಿ.

– ಎಲ್‌.ಎನ್‌.ಭಟ್‌ ಮಳಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.