ಪಾಸಿಟಿವ್ ಗೆದ್ದೇ ಗೆಲ್ಲುತ್ತದೆ : ಓದುಗರೊಬ್ಬರಿಂದ ಪಿಡಿಎಫ್ ಆದ ಉದಯವಾಣಿ ಸುದ್ದಿಗಳು ವೈರಲ್

ಉದಯವಾಣಿಯ ಪಾಸಿಟಿವ್ ಸುದ್ದಿಗಳನ್ನು ಪಿಡಿಎಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಗೋಪಾಲ್ ಪೈ ಮಾಣಿ

Team Udayavani, Jun 10, 2021, 4:49 PM IST

Udayavani News

ನಮಗೆ  ‘ಉದಯವಾಣಿ’ ಎಂದಿಗೂ ‘ಜನ ಪರ ಧ್ವನಿ’ ಎಂದು ಪ್ರಮಾಣ ಪತ್ರ ಕೊಟ್ಟಿದ್ದು ನಮ್ಮ ಓದುಗರು. ಉದಯವಾಣಿ ಓದುಗರ ವಿಶ್ವಾಸವನ್ನು ಕಳೆದ 52 ವರ್ಷಗಳಿಂದಲೂ ಉಳಿಸಿಕೊಂಡು ಬಂದಿದೆ. ಎಂದಿಗೂ ಅಭಿವೃದ್ಧಿ ಪರ, ವಸ್ತುನಿಷ್ಠ ಪತ್ರಿಕೋದ್ಯಮ ನಮ್ಮದು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಹೆಮ್ಮೆ ಇದೆ.

ಕಳೆದ ವರ್ಷ ಕೋವಿಡ್ ಸಂಕಷ್ಟ ತಂದೊಡ್ಡಿದ ಪರಿಸ್ಥಿತಿಯಲ್ಲಿ, ಹಾಗೂ ಈ ವರ್ಷ ಕೋವಿಡ್ ಸೋಂಕಿನ ಎರಡನೇ ಅಲೆ ಸೃಷ್ಟಿಸಿದ ಪ್ರಾಣ ಸಂಕಟದ ವಾತಾವರಣದಲ್ಲಿ  ಉದಯವಾಣಿ ಜನರಿಗೆ ಧನಾತ್ಮಕ ಸುದ್ದಿಗಳನ್ನು ಸಾಮಾಜಿಕ ಜವಾಬ್ದಾರಿಯಿಂದ, ಪ್ರಾಮಾಣಿಕತೆಯಿಂದ ನೀಡುತ್ತಾ ಬಂದಿದೆ. ಈ ಸುದ್ದಿಗಳಿಗೆ ನಮ್ಮ ಓದುಗರಿಂದ ಮನ್ನಣೆಯೂ ಸಿಕ್ಕಿದೆ.

ಕೋವಿಡ್ ಎರಡನೇ ಅಲೆ ಆರಂಭವಾದಾಗಿನಿಂದ ಕೆಲವು ದೃಶ್ಯ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಸಾವಿನ ಸುದ್ದಿಗಳನ್ನು ಒಳಗೊಂಡು ಋಣಾತ್ಮಕ ಸುದ್ದಿಗಳಿಗೇ ಪ್ರಾಶಸ್ಯ ಪಡೆಯುತ್ತಿರುವಾಗ, ಕೋವಿಡ್ ನ ನಿವಾರಣೆಯತ್ತ ಚಿಂತನೆಯಲ್ಲಿ ಕಳೆದ ಎರಡು ಮೂರು ತಿಂಗಳುಗಳಿಂದ ಉದಯವಾಣಿ ಪತ್ರಿಕೆ ಪ್ರಕಟ ಮಾಡಿದ ಸುದ್ದಿಗಳು ನೂರಾರು. ಈ ಪಾಸಿಟಿವ್ ಸುದ್ದಿಗಳು ಜನರನ್ನು ಮುಟ್ಟಿವೆ ಎನ್ನುವ ಸಾರ್ಥಕತೆ ನಮಗಿದೆ.

ಇದನ್ನೂ ಓದಿ : ಬಿಜೆಪಿ ವಿರುದ್ಧ ಎಲ್ ಡಿ ಎಫ್ ಷಡ್ಯಂತ್ರ : ಕುಂಬ್ಡಾಜೆ ಪಂಚಾಯಿತಿಯಲ್ಲಿ ಪ್ರತಿಭಟನೆ

ಇದಕ್ಕೆ ಸಾಕ್ಷಿ ಎಂಬಂತೆ, ಮೇ 1 2021ರಿಂದ ಇಂದಿನವರೆಗೆ ನಿಮ್ಮ ಉದಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸುಮಾರು 46 ಪ್ರಮುಖ ಸುದ್ದಿಗಳನ್ನು ಸಂಗ್ರಹಿಸಿ ಅದನ್ನು ಪಿಡಿಎಫ್ ಮಾದರಿಯಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ಬೆಂಗಳೂರಿನ ಖಾಸಗಿ ಕಂಪೆನಿಯೊಂದರ  ಆರ್ಥಿಕ ವಿಶ್ಲೇಷಕ ಮಾಣಿಯ ಗೋಪಾಲ ಪೈ ಎನ್ನುವ ನಮ್ಮ ಓದುಗ ಮಿತ್ರರೊಬ್ಬರು ಹಂಚಿಕೊಂಡಿರುವುದು ಭಾರಿ ಪ್ರಮಾಣದಲ್ಲಿ ವೈರಲ್ ಆಗುತ್ತಿದೆ ಎನ್ನುವುದು ನಮಗೆ ನಮ್ಮ ಕರ್ತವ್ಯದ ಬಗ್ಗೆ ಇನ್ನೂ ಹೆಚ್ಚಿನ ಹೆಮ್ಮೆಯನ್ನು ತಂದುಕೊಟ್ಟಿದೆ.

ಉದಯವಾಣಿ ಬಳಗ ಮಾಡಿದ ಸರಣಿ ವೈದ್ಯಕೀಯ ಮಾಹಿತಿ ಫೇಸ್ ಬುಕ್ ಕಾರ್ಯಕ್ರಮಗಳ ಸುದ್ದಿಗಳು, ಕೋವಿಡ್ ಲಸಿಕೆಗಳು, ಬ್ಲ್ಯಾಕ್ ಫಂಗಸ್ ಸೇರಿ ಹತ್ತು ಹಲವು ವಿಷಯಗಳ ವಿಸ್ತೃತ ಸುದ್ದಿಗಳು ಪಿಡಿಎಫ್ ನಲ್ಲಿ ಒಂದೆಡೆ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ಈಗ ಹರಿದಾಡುತ್ತಿವೆ.

ಇದನ್ನೂ ಓದಿ : ಬಿಹಾರ: ಹಾಡಹಗಲೇ ಖಾಸಗಿ ಬ್ಯಾಂಕ್ ಗೆ ನುಗ್ಗಿ 1.19 ಕೋಟಿ ರೂಪಾಯಿ ದರೋಡೆ!

ಇನ್ನು, ಉದಯವಾಣಿಯಲ್ಲಿ ಪ್ರಕಟವಾದ ಸುದ್ದಿಗಳ ಪಿಡಿಎಫ್, ಅಧಿಕಾರಿಯೊಬ್ಬರ ಮುಖಾಂತರ ಆಶಾಕಾರ್ಯಕರ್ತರಿಗೆ ತಲುಪಿ ಮನೆಮನೆಗೆ ತಲುಪುತ್ತಿದೆ ಎನ್ನುತ್ತಾರೆ ಈ ಪಿಡಿಎಫ್ ಮಾಡಿದ ಗೋಪಾಲ್ ಪೈ ಮಾಣಿ.

(ಗೋಪಾಲ್ ಪೈ ಮಾಣಿ)

ಇದರ ಎಲ್ಲಾ ಕ್ರೆಡಿಟ್ ಉದಯವಾಣಿಗೆ ಸಲ್ಲಬೇಕು 

ಉದಯವಾಣಿಯೊಂದಿಗೆ ಮಾತನಾಡಿದ ಅವರು, ಈ ಎಲ್ಲದರ ಕ್ರೆಡಿಟ್ ಉದಯವಾಣಿಗೆ ಸಲ್ಲಬೇಕು. ಎಲ್ಲೆಡೆ ಕೋವಿಡ್ ನ ಬಗ್ಗೆ ಋಣಾತ್ಮಕ ಸುದ್ದಿಗಳೇ ಹೆಚ್ಚು ಕೇಳಿ ಬರುತ್ತಿರುವ ದಿನಗಳಲ್ಲಿ ಉದಯವಾಣಿ ಸಾಮಾಜಿಕ ಜವಾಬ್ದಾರಿಯಿಂದ ಪಾಸಿಟಿವ್ ಸುದ್ದಿಗಳನ್ನು ಪ್ರಕಟಿಸುವುದರ ಮೂಲಕ ಜನರಲ್ಲಿ ಇದ್ದ ಭಯವನ್ನು ದೂರಮಾಡಿದೆ ಎಂದಿದ್ದಾರೆ.

ಬ್ಯಾಂಕ್ ಲೋನ್ ವಿಚಾರಕ್ಕೆ ಸಂಬಂಧಿಸಿದ ಇಎಮ್ಐ ವಿಸ್ತರಣೆಯ ಸುದ್ದಿ, ಆಕ್ಸಿಮೀಟರ್ ಬಳಕೆಯ ಹೇಗೆ ಮಾಡುವುದು ಎನ್ನುವುದರ ಸುದ್ದಿ…ಹೀಗೆ ಹಲವಾರು ಸುದ್ದಿಗಳನ್ನು ರಾಜಕೀಯದ ಹೊರತಾಗಿ ಪ್ರಕಟಿಸುವುದರ ಮೂಲಕ ಉದಯವಾಣಿ ವೃತ‍್ತಿಧರ್ಮವನ್ನು ಎತ್ತಿ ಹಿಡಿದಿದೆ.  ಜನರಿಗೆ ಪಾಸಿಟಿವ್ ಸುದ್ದಿಗಳನ್ನು ನೀಡುವುದಕ್ಕೆ ಸಂಸ್ಥೆ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಪತ್ರಿಕೆಗಳಲ್ಲಿ ಓದದವರಿಗೆ ಸಹಾಯವಾಗಲಿ ಎಂಬ ಕಾರಣದಿಂದ ಎಲ್ಲಾ ಪ್ರಮುಖ ಸುದ್ದಿಗಳನ್ನು ಸಂಗ್ರಹಿಸಿ ಪಿಡಿಎಫ್ ಮಾಡಿ ವಾಟ್ಸ್ಯಾಪ್ ಗ್ರೂಪ್ ಗಳ ಮೂಲಕ ಹಂಚಿಕೊಂಡಿದ್ದೇನೆ. ಅದು ಆಶಾಕಾರ್ಯಕರ್ತರ ಮೂಲಕ ಜನರಿಗೆ ತಲುಪುತ್ತಿದೆ ಎನ್ನುವುದು ಖುಷಿಕೊಟ್ಟಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನನ್ನ ಬೆಳವಣಿಗೆಗೆ ಉದಯವಾಣಿ ಕಾರಣ

ಉದಯವಾಣಿಯನ್ನು ನಾನು ನನಗೆ ಬುದ್ಧಿ ಬಂದಾಗಿನಿಂದ ಓದುತ್ತಾ ಬಂದವ.  ನನ್ನ ತಂದೆಯವರು ಸುಮಾರು 50 ವರ್ಷಗಳ ಕಾಲ ಉದಯವಾಣಿಯ ಏಜೆಂಟ್ ಆಗಿದ್ದರು. ಹಾಗಾಗಿ ಉದಯವಾಣಿ ಪತ್ರಿಕೆ ಓದು ನನ್ನ ಬಾಲ್ಯದಿಂದಲೇ ಆರಂಭವಾಗಿದೆ. ಉದಯವಾಣಿ ನನ್ನ ಬೆಳವಣಿಗೆಯ ಒಂದು ಭಾಗ ಎನ್ನುತ್ತಾರೆ ಪೈ.

ಒಟ್ಟಿನಲ್ಲಿ, ಉದಯವಾಣಿಯ ನಿಷ್ಪಕ್ಷಪಾತ, ಗಟ್ಟಿತನದ ನಿಲುವು ಓದುಗರಿಗೆ ತಲುಪುತ್ತಿದೆ ಎಂಬುವುದಕ್ಕೆ ಇದೊಂದು ಸಾಕ್ಷಿಯಾಗಿದೆ.

ಇದನ್ನೂ ಓದಿ : ನಾಯಕತ್ವ ಬದಲಾವಣೆ ಊಹಾಪೋಹ: ಪ್ರಧಾನಿ ಮೋದಿ, ಶಾ ಭೇಟಿಗೆ ದೌಡಾಯಿಸಿದ ಸಿಎಂ ಯೋಗಿ

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

4-manohar-prasad

ನುಡಿನಮನ- ಪತ್ರಿಕಾರಂಗದ ಮನೋಹರ ಪ್ರಸಾದ್‌ ಕರಾವಳಿಯ ರಾಯಭಾರಿ

1-dasdsad

Yakshagana; ಮಾತಿನ ಜರಡಿ: ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Shivratri 2024; ದಕ್ಷಿಣ ಕಾಶಿ, ಸಂಗಮ ಕ್ಷೇತ್ರ ಎನಿಸಿಕೊಂಡ ಶ್ರೀ ಸಹಸ್ತ್ರಲಿಂಗೇಶ್ವರನ ಆಲಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.