ವಾಯುಮಾಲಿನ್ಯ ಗ‌ರ್ಭಕ್ಕೇ ಕುತ್ತು


Team Udayavani, Jan 14, 2021, 7:00 AM IST

ವಾಯುಮಾಲಿನ್ಯ ಗ‌ರ್ಭಕ್ಕೇ ಕುತ್ತು

ಭಾರತ, ಬಾಂಗ್ಲಾದೇಶ ಮತ್ತು ಪಾಕಿಸ್ಥಾನ ದೇಶಗಳಲ್ಲಿ ವಾಯು ಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕಕಾರಿಯಾಗಿದೆ. ಈ ಕಾರಣದಿಂದ ಶ್ವಾಸಕೋಶ ಸೋಂಕು ಸಂಭವಿಸಿ ಸಾವಿರಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಇದೇ ವೇಳೆ ಹೊಸ ಆಘಾತಕಾರಿ ಮಾಹಿತಿಯೊಂದು ಹೊರ ಬಿದ್ದಿದೆ. ಪ್ರತೀ ವರ್ಷ ವಾಯುಮಾಲಿನ್ಯದಿಂದಾಗಿ ಲಕ್ಷಾಂತರ ಗರ್ಭಪಾತಗಳು ಸಂಭವಿಸುತ್ತಿವೆ ಎಂದು ವರದಿಯೊಂದು ಹೇಳಿದೆ.

ಲ್ಯಾನ್ಸೆಟ್‌ ಜರ್ನಲ್‌ನಲ್ಲಿ ಇತ್ತೀಚೆಗೆ ಪ್ರಕಟವಾದ ಈ ಸಂಶೋಧನ ವರದಿಯ ಪ್ರಕಾರ, ವಾಯುಮಾಲಿನ್ಯವು ಗರ್ಭಪಾತಕ್ಕೆ ನೇರವಾಗಿ ಸಂಬಂಧಿಸಿದೆ. ಭಾರತ ಸಹಿತ ನೆರೆಹೊರೆಯ ದೇಶಗಳಲ್ಲಿ ಗಾಳಿಯ ಗುಣಮಟ್ಟ ತೀರಾ ಕುಸಿಯುತ್ತಿದ್ದು ವಿಶ್ವದ ಅತ್ಯಂತ ಕಲುಷಿತ ಭಾಗವಾಗಿದೆ.

ಏನಾಗುತ್ತಿದೆ? :

ಗಾಳಿಯು ಹೆಚ್ಚು ಕಲುಷಿತಗೊಂಡಿರುವ ಪ್ರದೇಶಗಳಲ್ಲಿ ಗರ್ಭಧಾರಣೆಯ ತೊಂದರೆಗಳು, ಗರ್ಭಪಾತಗಳು ಮತ್ತು ಮಗು ಸಾವಿಗೀಡಾಗಿ ಜನಿಸುವಂಥ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶದಲ್ಲಿ ಹೆಚ್ಚಿನ ವಾಯುಮಾಲಿನ್ಯದಿಂದಾಗಿ ವಾರ್ಷಿಕವಾಗಿ 3.49 ಲಕ್ಷ ಗರ್ಭಪಾತಗಳು ಸಂಭವಿಸುತ್ತಿವೆ ಎಂದಿದೆ. ಸಂಶೋಧನೆಯ ಪ್ರಕಾರ, ಭಾರತವು ವಾಯುಮಾಲಿನ್ಯವನ್ನು ಕಡಿಮೆ ಮಾಡಿದರೆ, ಗರ್ಭಪಾತ ಪ್ರಕರಣಗಳು ಪ್ರತೀ ವರ್ಷ ಶೇ. 7ರಷ್ಟು ಕಡಿಮೆಯಾಗಬಹುದು.

ಏನು ಹಾನಿ? :

ವಾಯುಮಾಲಿನ್ಯವು ತಾಯಿ ಮತ್ತು ಮಗುವನ್ನು ಸಂಪರ್ಕಿಸುವ ಹೊಕ್ಕುಳ ಬಳ್ಳಿಯನ್ನು ಹಾನಿಗೊಳಿಸುವುದರ ಮೂಲಕ ಭ್ರೂಣವನ್ನು ಹಾನಿಗೊಳಿಸುತ್ತದೆ. ದಕ್ಷಿಣ ಏಷ್ಯಾದಲ್ಲಿ ಗರ್ಭಧಾರಣೆಯ ಮೇಲೆ ಮಾಲಿನ್ಯದ ಪ್ರಭಾವವನ್ನು ತೋರಿಸುವ ಮೊದಲ ಅಧ್ಯಯನ ಇದಾಗಿದೆ. ದಕ್ಷಿಣ ಏಷ್ಯಾದಲ್ಲಿ ಗರ್ಭಾಶಯದ ಹಾನಿ ವಿಶ್ವದಲ್ಲೇ ಅತೀ ಹೆಚ್ಚು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ನಿಯಂತ್ರಣ ಹೇಗೆ?:

ತಜ್ಞರ ಪ್ರಕಾರ, ಗರ್ಭಿಣಿಯರು ವಾಸಿಸುವ ಪ್ರದೇಶದಲ್ಲಿ ಗಾಳಿ ಶುದ್ಧವಾಗಿರಬೇಕು. ಶುದ್ಧಗಾಳಿ ಬೇಕು ಎಂದರೆ ನಿಮ್ಮ ಮನೆಯ ಸುತ್ತಲೂ ಸ್ವತ್ಛತೆಯನ್ನು ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಮನೆಯ ತೋಟದಲ್ಲಿ ಗಾಳಿ ಶುದ್ಧೀಕರಿಸುವ ಸಸ್ಯಗಳನ್ನು ನೆಡಬಹುದು. ಬೆಳಗ್ಗೆ ಮತ್ತು ಸಂಜೆ ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿಡಬೇಕು. ಇದು ಮನೆಯ ಒಳಕ್ಕೆ ಶುದ್ಧಗಾಳಿಯನ್ನು ತರುತ್ತದೆ. ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ. ಇದು ವಾಯುಮಾಲಿನ್ಯದಿಂದ ಉಂಟಾಗುವ ರೋಗಗಳನ್ನು ತಡೆಯಲು ನೆರವಾಗುತ್ತದೆ.

4 ಪಟ್ಟು ಏರಿಕೆ :

2000 ಮತ್ತು 2016ರ ನಡುವೆ, ಸಂಶೋಧಕರು ಭಾರತದಲ್ಲಿ ಗಾಳಿಯು ವಿಶ್ವಸಂಸ್ಥೆಯ ಮಾನದಂಡಕ್ಕಿಂತ ನಾಲ್ಕು ಪಟ್ಟು ಕೆಟ್ಟದಾಗಿದೆ ಎಂದಿದ್ದಾರೆ. ದಕ್ಷಿಣ ಏಷ್ಯಾದಲ್ಲಿ ಕಲುಷಿತ ಗಾಳಿಯು ಶೇ. 7.1ರಷ್ಟು ಗರ್ಭಪಾತಕ್ಕೆ ಕಾರಣವಾಗಿದೆ. ಭಾರತದ ಪ್ರಸ್ತುತ ವಾಯು ಗುಣಮಟ್ಟದ ಮಾನದಂಡವು ಘನ ಮೀಟರ್‌ಗೆ 40 ಮೈಕ್ರೋ ಗ್ರಾಂಗಳಷ್ಟಿವೆ. ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯ ಪ್ರಕಾರ ಘನ ಮೀಟರ್‌ಗೆ 10 ಮೈಕ್ರೋ ಗ್ರಾಂ ಸುರಕ್ಷಿತವೆಂದು ಪರಿಗಣಿಸಲಾಗಿದೆ.

ಪರಿಣಾಮ ಹಲವು :

ಗರ್ಭಾವಸ್ಥೆಯಲ್ಲಿ ಮಹಿಳೆಯರು ಹೆಚ್ಚು ಜಾಗರೂಕರಾಗಿರಬೇಕು ಎನ್ನುತ್ತಾರೆ ತಜ್ಞರು. ವಾಯುಮಾಲಿನ್ಯ ಹುಟ್ಟಲಿರುವ ಮಗುವಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ತಾಯಿ ಏನು ತಿಂದರೂ ಅದು ನೇರವಾಗಿ ಮಗುವಿಗೆ ದೊರೆಯುತ್ತದೆ. ಗರ್ಭಿಣಿಯರು ಕಲುಷಿತ ಗಾಳಿಯನ್ನು ಉಸಿರಾಡುವುದರಿಂದ ಗರ್ಭದಲ್ಲಿ  ಬೆಳೆಯುತ್ತಿರುವ ಮಗುವಿನ ಮೇಲೆ ಪರಿಣಾಮ ಬೀರುತ್ತದೆ. ಇದು ಪ್ರಬುದ್ಧ ಪೂರ್ವ ಪ್ರಸವದ ಅಪಾಯವನ್ನು ಸಹ ಹೊಂದಿದೆ. ಮಗು ಜನನದ ಸಮಯದಲ್ಲಿ ತೂಕವನ್ನು ಕಳೆದುಕೊಳ್ಳಬಹುದು ಮತ್ತು ಇದು ಅಪೌಷ್ಟಿಕತೆಗೆ ಕಾರಣವಾಗುತ್ತದೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.