UPI ಲೈಟ್‌ ಪಾವತಿ ಈಗ ಮತ್ತಷ್ಟು ಗ್ರಾಹಕಸ್ನೇಹಿ…3 ಮಹತ್ತರ ಬದಲಾವಣೆ


Team Udayavani, Aug 17, 2023, 12:02 AM IST

UPI Q

3 ಮಹತ್ತರ ಬದಲಾವಣೆಗಳನ್ನು ಘೋಷಿಸಿದ ಆರ್‌ಬಿಐ
ಡಿಜಿಟಲ್‌ ಕರೆನ್ಸಿ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ತಕ್ಕಂತೆ ತಾಂತ್ರಿಕತೆ ಮತ್ತು ನಿಯಮಗಳೂ ಗ್ರಾಹಕ ಸ್ನೇಹಿಯಾಗುತ್ತಿವೆ. ಭಾರತೀಯ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ಅಧ್ಯಕ್ಷ ಶಕ್ತಿಕಾಂತ್‌ ದಾಸ್‌ ಅವರು ಯುಪಿಐಗೆ ಮತ್ತಷ್ಟು ಶಕ್ತಿ ತುಂಬುವ ಯೋಜನೆಗಳನ್ನು ಕಳೆದ ವಾರ ನಡೆದ ದ್ವೆ„ಮಾಸಿಕ ವಿತ್ತೀಯ ನೀತಿ ಪರಿಶೀಲನ ಸಭೆಯ ಬಳಿಕ ಪ್ರಕಟಿಸಿದ್ದಾರೆ. ಈ ಪೈಕಿ ಮೂರು ಪ್ರಮುಖ ಬದಲಾವಣೆಗಳು ಸೇರಿವೆ.

ಮಿತಿ ಹೆಚ್ಚಳ
ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿರುವ ಆರ್‌ಬಿಐ, ಯುಪಿಐ ಲೈಟ್‌ ಮೂಲಕ ಪಾವತಿಸುವ ಮೊತ್ತವನ್ನು ಹೆಚ್ಚಿಸಿದೆ. ಇದುವರೆಗೆ ಒಮ್ಮೆ 200 ರೂ.ಗಳ ವರೆಗಿನ ಮೊತ್ತವನ್ನು ಮಾತ್ರ ಪಾವತಿಸಲು ಸಾಧ್ಯವಾಗಿತ್ತು. ಆದರೆ ಈಗ ಅದನ್ನು ಹೆಚ್ಚಿಸಲಾಗಿದ್ದು, ಇನ್ನು ಮುಂದೆ 500 ರೂ.ವರೆಗಿನ ಮೊತ್ತವನ್ನು ಯುಪಿಐ ಲೈಟ್‌ ಮೂಲಕ ಪಾವತಿಸಬಹುದು. ಆದರೆ ಒಂದು ದಿನಕ್ಕೆ ಗರಿಷ್ಠ ಎಂದರೆ 2,000 ರೂ.ಗಳ ವರೆಗಿನ ವ್ಯವಹಾರ ಮಿತಿಯನ್ನು ಮಾತ್ರ ಹಾಗೆಯೇ ಉಳಿಸಿಕೊಳ್ಳಲಾಗಿದೆ.

ಮಾತನಾಡಿ, ಹಣ ನೀಡಿ
ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (ಎಐ) ಇತ್ತೀಚೆಗೆ ಎಲ್ಲ ಕಡೆಯೂ ಭಾರೀ ಸದ್ದು ಮಾಡಿದೆ. ಆರ್‌ಬಿಐ ಕೂಡ ಇದನ್ನು ಬಳಸಿಕೊಳ್ಳಲು ನಿರ್ಧರಿಸಿದೆ. ಯುಪಿಐ ಲೈಟ್‌ನಲ್ಲಿ ಇದನ್ನು ಶೀಘ್ರವೇ ಜಾರಿಗೊಳಿಸುವುದಾಗಿ ತಿಳಿಸಿದೆ. ಈ ತಂತ್ರಜ್ಞಾನದಲ್ಲಿ ಕೇವಲ ಮಾತಿನ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ಎಐ ವ್ಯಕ್ತಿ ಮಾತು ಆರಂಭಿಸಿ ನೀವು ಉತ್ತರ ನೀಡಿದರಷ್ಟೇ ಸಾಕಾಗುತ್ತದೆ. ಆರಂಭದಲ್ಲಿ ಇದು ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಲಭ್ಯವಾಗಲಿದೆ. ಅನಂತರ ಇತರ ಪ್ರಾದೇಶಿಕ ಭಾಷೆಗಳಲ್ಲಿಯೂ ಸೇವೆ ಸಿಗಲಿದೆ ಎಂದು ಆರ್‌ಬಿಐ ತಿಳಿಸಿದೆ. ಆದರೆ ಇದರ ಪೂರ್ಣ ಮಾಹಿತಿಯನ್ನು ಇನ್ನಷ್ಟೇ ನೀಡಬೇಕಿದೆ.

ಇಂಟರ್‌ನೆಟ್‌ ರೇಂಜ್‌ ಇಲ್ಲದೆಯೂ ಪಾವತಿ
ಪ್ರಸ್ತುತ ಚಾಲ್ತಿಯಲ್ಲಿರುವ ಮಾದರಿಯಲ್ಲಿ ಡಿಜಿಟಲ್‌ ಕರೆನ್ಸಿ ಪಾವತಿಗೆ ಇಂಟರ್‌ನೆಟ್‌ ಅಗತ್ಯ ವಾಗಿದೆ. ಇಂಟರ್‌ನೆಟ್‌ ಇದ್ದರಷ್ಟೇ ವ್ಯವಹಾರ ನಡೆಯುತ್ತಿದೆ. ಇಲ್ಲಿ ಭಾರೀ ಮಹತ್ವದ ಬದಲಾವಣೆ ಯನ್ನು ಆರ್‌ಬಿಐ ಘೋಷಿಸಿದೆ. ಇನ್ನು ಮುಂದೆ ಇಂಟರ್‌ನೆಟ್‌ ರೇಂಜ್‌ ಇಲ್ಲದ ಮತ್ತು ಅತ್ಯಂತ ಕಡಿಮೆ ರೇಂಜ್‌ ಇರುವ ಪ್ರದೇಶದಲ್ಲಿಯೂ ನೀವು ಸುಲಲಿತವಾಗಿ ವ್ಯವಹಾರ ಮಾಡಬಹುದು. ನಿಯರ್‌ ಫೀಲ್ಡ್‌ ಕಮ್ಯೂನಿಕೇಶನ್‌ (ಎನ್‌ಎಫ್ಸಿ) ತಾಂತ್ರಿಕತೆಯನ್ನು ಯುಪಿಐ ಲೈಟ್‌ ಶೀಘ್ರವೇ ಅಳವಡಿಸಿಕೊಳ್ಳಲಿದೆ. ಈ ತಂತ್ರಾಂಶದಲ್ಲಿ ಎರಡು ಡಿವೈಸ್‌ (ಮೊಬೈಲ್‌ ಮತ್ತು ಪೇಮೆಂಟ್‌ ಟರ್ಮಿನಲ್‌-ಹಣ ನೀಡುವ ಮತ್ತು ಸ್ವೀಕರಿಸುವ ಸಾಧನ)ಗಳನ್ನು ಹತ್ತಿರ ತಂದಾಗ ಮ್ಯಾಗ್ನೆಟಿಕ್‌ ಸಂಪರ್ಕದ ಮೂಲಕ ವ್ಯವಹಾರ ಪೂರ್ಣಗೊಳ್ಳುತ್ತದೆ.

ಯುಪಿಐ ಲೈಟ್‌ ಏಕೆ ಜನಪ್ರಿಯ?
ಸಣ್ಣ ವ್ಯವಹಾರಗಳಿಗೆ ಯುಪಿಐ ಲೈಟ್‌ ಹೆಚ್ಚು ಜನಪ್ರಿಯವಾಗಿದೆ. ಇದರಲ್ಲಿ ಯುಪಿಐ ಪಿನ್‌ (ವೈಯಕ್ತಿಕ ಸಂಖ್ಯೆ) ನಮೂದಿಸುವ ಅಗತ್ಯವಿಲ್ಲ. ಮಾತ್ರವಲ್ಲದೆ ಸಣ್ಣ ಸಣ್ಣ ವ್ಯವಹಾರಗಳೆಲ್ಲ ಬ್ಯಾಂಕ್‌ನ ಸ್ಟೇಟ್‌ಮೆಂಟ್‌ನಲ್ಲಿ ದಾಖಲಾಗುವುದಿಲ್ಲ. ಆ್ಯಪ್‌ನಲ್ಲಿ ಮಾತ್ರವೇ ಅದನ್ನು ನೋಡಬಹುದು. ಇವಿಷ್ಟು ಅಲ್ಲದೆ ಆನ್‌ಲೈನ್‌ ವ್ಯವಹಾರದ ಅಪಾಯ ಗಳನ್ನು ಕಡಿಮೆ ಮಾಡುವುದಕ್ಕಾಗಿ ಇಲ್ಲಿ ದಿನಕ್ಕೆ 2,000 ರೂ.ಗಳ ಮಿತಿ ಇದೆ. ರೇಂಜ್‌ ಕಡಿಮೆ ಇದ್ದಾಗಲೂ ವ್ಯವಹಾರ ಸುಲಭವಾಗಿ ಮತ್ತು ಬೇಗನೆ ಸಾಧ್ಯವಾಗುವುದ ರಿಂದ ಇದು ಹೆಚ್ಚು ಜನಪ್ರಿಯವಾಗಿದೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.