ನೀ ಬರಿಯೋ ಕವಿತೆಗಳ ಪ್ರತೀ ಸಾಲು ನನಗಿಷ್ಟ… ಕವಿಯೂ ಇಷ್ಟ !


Team Udayavani, Feb 14, 2021, 1:18 PM IST

valentine’s day special

ಹಸಿರ ಹುಲ್ಲು ಹಾಸಿನ ಮೇಲೆ ಮಲಗಿ ಮುಗಿಲ ಆಟವನು ನೋಡುತ್ತಿದ್ದವನಿಗೆ ಕೇಳಿದ್ದ ಆ ಗೆಜ್ಜೆ ಸದ್ದು ನಿನ್ನದೋ ಎಂಬ ಅನುಮಾನ, ಮೇಲೆದ್ದು ಸುತ್ತ ಹುಡುಕಿದವನಿಗೆ ಕಂಡಿದ್ದು ಭರಪೂರವಾಗಿ ತುಂಬಿದ್ದ ಹಸಿರು‌ ಮಾತ್ರ… ಮನಸು ನಾಚಿ ಮುಗುಳ್ನಕ್ಕು ನನ್ನ ಕೈಯಿಂದಲೆ ತಲೆಗೊಂದು ಏಟು ಕೊಡಿಸಿದಾಗ ಎಚ್ಚೆತ್ತ ಹೃದಯ ಕೇಳಿದ್ದೊಂದೆ ಪ್ರಶ್ನೆ! ಕೇಳಿದ ಗೆಜ್ಜೆ ಸದ್ದು ನಿನ್ನದು ಅಂತ ಅನಿಸಿದ್ದೇಕೆ?

ಅದೇ, ಪ್ರೀತಿ…

ಬಿಳಿಯ ಕಾಗದದಲಿ ಬರೆದು ಮುಗಿಸಲಾಗದಷ್ಟು ಅರ್ಥಗಳು, ಸರಿದ ನಿಮಿಷಗಳು ಮರೆಯದೇ ಇರುವಷ್ಟು ನೆನಪುಗಳು, ಹೇಳಿ ಮುಗಿಸಲಾರದಷ್ಟು ಭಾವನೆಗಳು, ಮನಸೊಳಗೆ ಅಳಿಸಲಾರದಷ್ಟು ಒಲವ ರೇಖೆಗಳು.

ಹಳೇ ಕಥೆಗಳನು ನೆನಪಿನ ರುಮಾಲಿನಲ್ಲಿ ಬಿಗಿಯಾಗಿ ಕಟ್ಟಿ ಕುಂತರೂ ರುಮಾಲಿನ ತುದಿಯೆಳೆದು ಮತ್ತೆ ಹೊರಬಂದು ಮನಸಿನಲಿ ಕುಣಿಯುತ್ತಿರುತ್ತದೆ. ಅದೇನು ಬಚ್ಚಿಟ್ಟು ಕೂರುವಂಥ ನೆನಪುಗಳೇ?!

ಕಾಲೇಜಿನಲ್ಲಿ ಯಾವುದೋ ಆಲೋಚನೆಯಲಿ ಕುಳಿತಿದ್ದವನ ಆಲೋಚನೆಗಳ ಕದಡಿಸಿ ನೀ ಹೇಳಿದ ಆ ಮಾತುಗಳು ಈಗಲೂ ಕೇಳಿಸುತ್ತಿವೆ. ನಿನ್ನ ಬಾಯಿಯಿಂದ ಬಂದ ಆ ಹೊಗಳಿಕೆ ‘ ನೀ ಬರಿಯೋ ಕವಿತೆಗಳ ಪ್ರತೀ ಸಾಲು ನನಗಿಷ್ಟ.. ದಿನವೂ ಓದುತ್ತಲೇ ಇರುತ್ತೇನೆ.. ಕವಿತೆಯ ಜೊತೆಗೆ ಕವಿಯೂ ಇಷ್ಟವಾದ.. ಮತ್ತೇನೂ ಹೇಳಬೇಕಿಲ್ಲ ಅಲ್ವಾ?’ ಅಂತ ಒಂಟಿ ಹುಬ್ಬೇರಿಸಿ ನಡೆದದ್ದು ನಿನಗೆ ನೆನಪಿದೆಯೋ ಇಲ್ವೋ, ನನಗಂತೂ ಅದುವೇ ಮಧುರ ಕ್ಷಣ. ಅದೇಕೋ ಸಿನಿಮಾ ಶೈಲಿಯಲ್ಲೇ ತಂಗಾಳಿ ಬಂದು ನಿನ್ನ ಮುಂಗುರಳ ನಡುವೆ ಹಾದು, ಕಿವಿಯೋಲೆಗಳ ಹಿಡಿದು ತೂಗಾಡಿ ಸಾಗಿತ್ತು. ಅದರ ರಭಸಕೆ ಮುಚ್ಚಿಕೊಂಡ ಕಣ್ರೆಪ್ಪೆ ನಿನ್ನ ಕಣ್ಣುಗಳ ನಗುವನ್ನೊಮ್ಮೆ ಮರೆಯಾಗಿಸಿ ಮತ್ತೆ ತೆರೆದುಕೊಂಡಿತ್ತು. ಪಕ್ಕದಲಿ ಕುಳಿತಿದ್ದ ಗೆಳೆಯರ ಕೂಗಾಟವೇ ಕೇಳಿಸದೆ, ನಿನ್ನ ತುಂಟ ನಗುವೇ ಕಿವಿಯೊಳಗೆ ಇಳಿದಿತ್ತು.

ನಿನ್ನ ಹೆಸರೇ ನೆನಪಿರಲಿಲ್ಲ ಮೊದಲು. ನಿನ್ನ ಹೆಸರು ಬೇಕಾಗಿಯೂ ಇರಲಿಲ್ಲ. ನಿನ್ನ ಪ್ರೀತಿಗೆ, ಮಾತಾಡೋ ರೀತಿಗೆ, ನಗುವ ಕಂಗಳಿಗೆ ನಾನೇ ನೆನಪಾಗೋ ಹೆಸರಿಟ್ಟಾಗಿತ್ತು. ಮನಸು ಆ ಹೆಸರ ಕರೆಯುತ್ತಿತ್ತು ಬಿಟ್ಟರೆ ಹೊರಗೆ ಹೇಳಿದ್ದಿಲ್ಲ. ಭಾವನೆಗಳನ್ನು ನಿನ್ನಲ್ಲಿ ಹಂಚಿದಷ್ಟು ಇನ್ನೊಬ್ಬರಿಗೆ ತಿಳಿಸಿದ್ದಿಲ್ಲ.

ಬಹುಶಃ ನಮ್ಮ ಪ್ರೀತಿಗೆ ನಾವಿಬ್ಬರೂ ಆಡಿದ ಜಗಳಗಳೂ ಸಾಥ್ ಕೊಟ್ಟಿರಬೇಕು. ಅದ್ಯಾರೋ ಪ್ರೇಮಿಗಳು ಮೊದಲೇ ಹೇಳಿದ್ದಾರೆಲ್ಲವೇ, ಜಗಳವಾಡಿದ್ರೇನೆ ಪ್ರೀತಿ ಹೆಚ್ಚಾಗೋದಂತೆ; ಹಾಗೇನೆ. ಜಗಳದ ನಂತರ, ಮಾತು ನಿಂತಾದ ಮೇಲೆ, ಕ್ಷಣಗಳಿಗೊಮ್ಮೆ ಮನಸು ಭಾರವಾಗುತ್ತ ಹೋದಂತೆ ಅನಿಸಿದಾಗ ಕೇಳುವ ಆ ‘SORRY’ ಪದ ತನ್ನಲ್ಲೇ ಮುಗಿಯದಷ್ಟು ಪ್ರೀತಿ ತಂದಿರುತ್ತದೆ. ದೂರ ಹೋಗು ಅಂದಿದ್ದ ಹೃದಯ ಹತ್ತಿರ ಬಾ ಎಂದು ಕೂಗಿ ಕರೆಯುತ್ತದೆ.

ಭಾವನೆಗಳಿಗೆ ಬೇಕಾದ ಬಣ್ಣ ಹಚ್ಚಿ ನಮಗಿಬ್ಬರಿಗೆ ಮಾತ್ರ ಕಾಣುವಂತೆ ಚಿತ್ರಿಸಿ ದಿನವೂ ನೋಡಿ ಖುಷಿಪಡುತ್ತಿದ್ದಿದ್ದು ನೆನಪಿರಬಹುದು ನಿನಗೆ. ಹುಟ್ಟಿದ ಹಬ್ಬದ ದಿನ ನೀ ಹೇಳಿದ ಶುಭಾಶಯಗಳು, ನೀ ಕೊಡಿಸಿದ ನೀಲಿ ಬಣ್ಣದ ಲೇಖನಿಯಲ್ಲಿರೋ ನಿನ್ನ ಹಸ್ತಾಕ್ಷರ, ಸಂಜೆ ಕುಳಿತು ಕುಡಿದ ಕಾಫಿ, ಜೊತೆಗೆ ನಡೆದು ಸವೆಸಿದ ಹೆಜ್ಜೆಗಳು, ಹಾದಿಗಳು….ಪ್ರೀತಿಯ ಹಬ್ಬಗಳ ತುಂಬಿರೋ ಹೊಸ ಸಂವತ್ಸರ.

ಇನ್ನೇನಿದೆ ಹೇಳೋಕೆ?…

ಮನಸಿನ ಅಪ್ಸರೆಯೆ ಕನಸಲ್ಲೂ ಕನವರಿಸು

ನಾ ಬಂದು ಮುದ್ದಿಸುವೆ ಮನಸು ಹೇಳುವಷ್ಟು

ಹೃದಯದ ಅರಮನೆಯ ಬಾಗಿಲೊಳಗೆ ಕಾಲಿರಿಸು

ಕೈ ಹಿಡಿದು ಕರೆದೊಯ್ವೆ, ದಾರಿ ಮುಗಿಯದಷ್ಟು.

ನಿನ್ನ ಪ್ರೇಮಲೋಕದ ಕಥೆಗಾರ-  ಮೃಗಾಂಕ (ಶ್ರೀಶ)

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

4-manohar-prasad

ನುಡಿನಮನ- ಪತ್ರಿಕಾರಂಗದ ಮನೋಹರ ಪ್ರಸಾದ್‌ ಕರಾವಳಿಯ ರಾಯಭಾರಿ

1-dasdsad

Yakshagana; ಮಾತಿನ ಜರಡಿ: ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Shivratri 2024; ದಕ್ಷಿಣ ಕಾಶಿ, ಸಂಗಮ ಕ್ಷೇತ್ರ ಎನಿಸಿಕೊಂಡ ಶ್ರೀ ಸಹಸ್ತ್ರಲಿಂಗೇಶ್ವರನ ಆಲಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.