ಹುದ್ದೆಗೆ ಮೌಲ್ಯ ಬರುವುದು ಮಾಡುವ ಕೆಲಸದಿಂದ: ಬಂಗಾರದ ಕುರ್ಚಿಯಿಂದಲ್ಲ


Team Udayavani, Aug 19, 2022, 6:10 AM IST

TDY–Y23

ಒಂದು ಊರಿನಲ್ಲಿ ಧೀರಸೇನ ಎನ್ನುವ ರಾಜ ಅತ್ಯಂತ ದಕ್ಷತೆಯಿಂದ ರಾಜ್ಯಭಾರ ಮಾಡುತ್ತಿದ್ದನು. ಧೀರಸೇನನ ಆಸ್ಥಾನದಲ್ಲಿ ಜಯಸಿಂಹ ಶಾಸ್ತ್ರಿ  ಎಂಬ ಆಸ್ಥಾನ ಪಂಡಿತನು ರಾಜನ ಆಡಳಿತಕ್ಕೆ ಸೂಕ್ತ ಸಲಹೆ ಸೂಚನೆಗಳ ಮೂಲಕ ಸಹಕಾರ ನೀಡುತ್ತಿದ್ದನು. ಒಂದು ದಿನ ರಾಜನ ದರ್ಬಾರು ನಡೆಯುತ್ತಿದ್ದಾಗ ರಾಜನು ತನ್ನ ಸಾಮಂತ ರಾಜರಲ್ಲಿ ನಮ್ಮ ಪ್ರಜೆಗಳ ಜೀವನಶೈಲಿ ಮತ್ತು ಜೀವನಮಟ್ಟ ಹೇಗಿದೆ ಎಂದು ಪ್ರಶ್ನಿಸಿದನು. ಆಗ ರಾಜನ ಸಾಮಂತ ನಮ್ಮ ಪ್ರಜೆಗಳೆಲ್ಲರೂ ಅತ್ಯಂತ ಶ್ರೀಮಂತರಾಗಿದ್ದು, ಎಲ್ಲರೂ ಒಳ್ಳೆಯ ರೀತಿಯಲ್ಲಿ ಜೀವನ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ಆಗ ಆಸ್ಥಾನ ಪಂಡಿತನಾದ ಜಯಸಿಂಹ ಶಾಸ್ತ್ರಿಯು ಇಲ್ಲ ಸ್ವಾಮೀ, ನಮ್ಮ ರಾಜ್ಯದ ಅಷ್ಟು ಹಳ್ಳಿಗಳ ಪೈಕಿ ಸತ್ಯಪುರ ಎಂಬ ಹಳ್ಳಿಯ ಪ್ರಜೆಗಳು ಅತ್ಯಂತ ಬಡವರಾಗಿದ್ದು, ಮೂರು ಹೊತ್ತು ಊಟ ಮಾಡಲೂ ಕಷ್ಟ ಪಡುತ್ತಿದ್ದಾರೆ. ಪ್ರಜೆಗಳ ಜೀವನ ನಿರ್ವಹಣೆಗಾಗಿ ಆಸ್ಥಾನದಿಂದ ಕಳುಹಿಸ ಲಾಗುವ ಅನುದಾನಗಳು ಸರಿಯಾದ ರೀತಿಯಲ್ಲಿ ಪ್ರಜೆಗಳಿಗೆ ತಲುಪದೇ ಅಲ್ಲಿನ ಪ್ರಜೆಗಳು ಬಡವರಾಗಿದ್ದಾರೆ ಎಂದನು.

ರಾಜನು ಆಸ್ಥಾನ ಪಂಡಿತನ  ಮಾತನ್ನು ಪ್ರತ್ಯಕ್ಷವಾಗಿ ನೋಡಲು ಮತ್ತು ಪ್ರಜೆಗಳ ಯೋಗಕ್ಷೇಮ ವಿಚಾರಿಸಲು ಆಸ್ಥಾನ ಪಂಡಿತ ಜಯಸಿಂಹ ಶಾಸ್ತ್ರಿಯ ಜತೆಗೆ ಮಾರುವೇಷದಲ್ಲಿ ತೆರಳಿದರು. ತಮ್ಮ ರಾಜ್ಯದಾದ್ಯಂತ ಸಂಚರಿಸಿ ಪರಿಶೀಲಿ ಸಿದಾಗ ಎಲ್ಲ ಹಳ್ಳಿಯ ಜನರು ಸುಖವಾಗಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಕೊನೆಯದಾಗಿ ರಾಜ ಮತ್ತು ಆಸ್ಥಾನ ಪಂಡಿತ ಸತ್ಯಪುರಕ್ಕೆ ಬಂದರು. ಅಲ್ಲಿನ ಜನರೆಲ್ಲರೂ ಅತ್ಯಂತ ಬಡವರಾಗಿದ್ದು, ಜೀವನ ನಿರ್ವಹಿಸಲೂ ಕಷ್ಟ‌ಪಡುತ್ತಿದ್ದು, ಅಲ್ಲಿನ ಜನರ ಕಷ್ಟಗಳನ್ನು ತಿಳಿದುಕೊಂಡ ರಾಜನು ಮರಳಿ ಆಸ್ಥಾನಕ್ಕೆ ಬಂದನು.

ಸತ್ಯಪುರ ಹಳ್ಳಿಯ ಬಗ್ಗೆ ರಾಜಸಭೆಯಲ್ಲಿ ಚರ್ಚಿಸಿದ ಅನಂತರ ಕೊನೆಯದಾಗಿ ಆಸ್ಥಾನ ಪಂಡಿತನಾದ ಜಯಸಿಂಹ ಶಾಸ್ತ್ರಿಯನ್ನು ಸತ್ಯಪುರದ ಅಭಿವೃದ್ಧಿಗಾಗಿ ಸಾಮಂತ ರಾಜನನ್ನಾಗಿ ನೇಮಕ ಮಾಡಿ ಅಲ್ಲಿಗೆ ಕಳುಹಿಸಿದನು. ಸತ್ಯಪುರಕ್ಕೆ ತೆರಳಿ ಅಲ್ಲಿನ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಯನ್ನು ಹಾಕಿದ ಜಯಸಿಂಹ ಶಾಸ್ತ್ರಿಯು ಅಲ್ಲಿನ ಅಭಿವೃದ್ಧಿಗೆ ಅಗತ್ಯವಿರುವ ಹಣಕಾಸು ಮತ್ತು ವಿವಿಧ ಸಾಮಗ್ರಿಗಳ ಬೇಡಿಕೆಯನ್ನು ರಾಜನಿಗೆ ಸಲ್ಲಿಸಿದನು. ಜಯಸಿಂಹ ಶಾಸ್ತ್ರಿಯ ಬೇಡಿಕೆಯಂತೆ ಪ್ರತೀ ವರ್ಷವೂ ತಪ್ಪದೆ ರಾಜನು ಹಣ ಮತ್ತು ಸಾಮಗ್ರಿಗಳನ್ನು ಸತ್ಯಪುರಕ್ಕೆ ಕಳುಹಿಸುತ್ತಿದ್ದನು. ಇದೇ ರೀತಿ 2-3 ವರ್ಷಗಳ ಕಾಲ ಹಣ ಮತ್ತು ಸಾಮ ಗ್ರಿಗಳ ಪೂರೈಕೆಯ ಅನಂತರ ಅಚಾನಕ್ಕಾಗಿ ಈ ಪದ್ಧತಿಯನ್ನು ರಾಜ ನಿಲ್ಲಿಸಿದ.

ಇದೇ ರೀತಿ 4-5 ವರ್ಷಗಳು ಕಳೆದ ಅನಂತರ ಧೀರಸೇನನು ಜಯಸಿಂಹ ಶಾಸ್ತ್ರಿಯ ಸತ್ಯಪುರ ಹಳ್ಳಿಗೆ ಅಭಿವೃದ್ಧಿಯ ಪರಿಶೀಲನೆಗಾಗಿ ತೆರಳಿದನು. ಹಳ್ಳಿಯ ಪ್ರಜೆಗಳು ಖುಷಿಯಿಂದ ಜೀವನ ನಿರ್ವಹಣೆ ಮಾಡುತ್ತಿರುವುದನ್ನು ಗಮನಿಸಿದ ಧೀರಸೇನನು ಜಯಸಿಂಹ ಶಾಸ್ತ್ರಿಯ ಭೇಟಿಗಾಗಿ ಆತನನ್ನು ಹುಡುಕಲು ಪ್ರಾರಂಭಿಸಿದ. ಹಳ್ಳಿಯಿಡೀ ರಾಜನು ಸುತ್ತಾಡಿದರೂ ಎಲ್ಲೂ ಜಯಸಿಂಹ ಶಾಸ್ತ್ರಿ  ರಾಜನಿಗೆ ಕಾಣಿಸಲೇ ಇಲ್ಲ. ಅದಾಗಲೇ ತಮ್ಮ ಹಳ್ಳಿಗೆ ರಾಜನು ಬಂದಿರುವ ವಿಷಯವನ್ನು ತಿಳಿದ ಹಳ್ಳಿಯ ಜನರೆಲ್ಲರೂ ಅಲ್ಲಿ ಸೇರಿದ್ದರು.

ತನ್ನ ಆಸ್ಥಾನ ಪಂಡಿತನಾಗಿದ್ದ ಜಯಸಿಂಹ ಶಾಸ್ತ್ರಿಯನ್ನು ಹುಡುಕಾಡಿ ಸುಸ್ತಾದ ರಾಜನು ಕೊನೆಗೆ ಇಲ್ಲಿ ಜಯಸಿಂಹ ಶಾಸ್ತ್ರಿ ಯಾರೆಂದು ಜೋರಾಗಿ ಕೂಗಿ ಕೇಳಿದನು. ಆಗ ಅಲ್ಲಿ ಸೇರಿದ್ದ ನಾಗರಿಕರ ನಡುವಿನಿಂದ ಕುರುಚಲು ಗಡ್ಡ ಬಿಟ್ಟುಕೊಂಡು ಸಾಮಾನ್ಯ ಜನರಂತೆ ಕಾಣುತ್ತಿದ್ದ ವ್ಯಕ್ತಿಯೊಬ್ಬ ನಾನೇ ಸ್ವಾಮಿ ಜಯಸಿಂಹ ಶಾಸ್ತ್ರಿ  ಎಂದು ಹೇಳುತ್ತಾ ರಾಜನ ಮುಂದೆ ಬಂದು ನಿಂತ.

ಸತ್ಯಪುರ ಹಳ್ಳಿಗೆ ಸಾಮಂತ ರಾಜನಾಗಿ ತೆರಳಿದ್ದಂತಹ ಧೀರಸೇನನ ಆಸ್ಥಾನ ಪಂಡಿತ ಅಲ್ಲಿ ರಾಜನಾಗಿ ಅಧಿಕಾರದಿಂದ ಆಡಳಿತ ನಡೆಸುವ ಬದಲಾಗಿ ರಾಜ್ಯದ ಎಲ್ಲ ಪ್ರಜೆಗಳಂತೆ ತಾನೂ ಜೀವನ ನಿರ್ವಹಿಸುತ್ತಾ ತಾನೂ ತನ್ನ ಜಮೀನಿನಲ್ಲಿ ಕೃಷಿ ಮತ್ತಿತರ ಕೆಲಸಗಳನ್ನು ಮಾಡುತ್ತಾ ಅಲ್ಲಿನ ಜನರ ಏಳಿಗೆಗೆ ಅಗತ್ಯವಿರುವ ಯೋಜನೆಗಳನ್ನು ಹಾಕಿಕೊಡುತ್ತಾ ಜೀವನ ನಿರ್ವಹಿಸಲು ಆರಂಭಿಸಿದ್ದ. 2-3 ವರ್ಷಗಳ ಕಾಲ ರಾಜ ತನ್ನ ಭಂಡಾರದಿಂದ ನೀಡಿದ ಹಣ ಮತ್ತು ಸಾಮಗ್ರಿಗಳನ್ನು ಅಲ್ಲಿನ ಪ್ರಜೆಗಳಿಗೆ ನೀಡಿ ಅವರೆಲ್ಲರೂ ತಮ್ಮ ಜಮೀನಿನಲ್ಲಿ ಕಷ್ಟಪಟ್ಟು ದುಡಿಮೆ ಮಾಡಲು ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಬಳಸಿದ. ರಾಜನು ನೀಡು ತ್ತಿದ್ದ ಅನುದಾನ ನಿಂತ ವೇಳೆಗೆ ಪ್ರಜೆಗಳ ಜಮೀನಿನಲ್ಲಿ ಆದಾಯ ಬರಲಾರಂಭಿಸಿತ್ತು. ಜಯಸಿಂಹ ಶಾಸ್ತ್ರಿ  ಸತ್ಯಪುರದ ಸಾಮಂತ ರಾಜನಾಗಿ ಕಾಣಿಸಿಕೊಂಡು ಅಧಿಕಾರ ಚಲಾಯಿಸುವ ಬದಲಾಗಿ ಅಲ್ಲಿನ ಅಭಿವೃದ್ಧಿಯ ಪ್ರೇರಕನಾಗಿ ಮತ್ತು ಇತರರಿಗೂ ಪ್ರೇರಕನಾಗಿ ಕಂಡನು.

ಯಾವುದೇ ವ್ಯಕ್ತಿಯು ದೊಡ್ಡದಾದ ಹುದ್ದೆಯನ್ನು ಗಳಿಸಿದ ಅಥವಾ ಪಡೆದ ಕೂಡಲೇ ಆ ಹುದ್ದೆಗೆ ಅಥವಾ ಹುದ್ದೆಯಿಂದ ವ್ಯಕ್ತಿಗೆ ಗೌರವ ಬರುವುದಿಲ್ಲ. ಬದಲಿಗೆ ವ್ಯಕ್ತಿ ಅಥವಾ ಹುದ್ದೆಗೆ ಗೌರವ ಬರುವುದು ನಿರ್ದಿಷ್ಟ ಹುದ್ದೆಯಲ್ಲಿ ಇರುವಂತಹ ವ್ಯಕ್ತಿಯು ಮಾಡುವ ಕೆಲಸದಿಂದ ಮಾತ್ರ. ಅಧಿಕಾರದಲ್ಲಿರುವ ವ್ಯಕ್ತಿಯು ಅಲ್ಲಿ ಬಂಗಾರದ ಕುರ್ಚಿಯಲ್ಲಿ ಕುಳಿತುಕೊಂಡರೂ ಆ ಕುರ್ಚಿಯಿಂದ ಆತನಿಗೆ ಗೌರವ ಬರದು. ಬದಲಿಗೆ ತನ್ನ ಜವಾಬ್ದಾರಿಯ ವ್ಯಾಪ್ತಿ ಮತ್ತು ಆಳವನ್ನು ಅರಿತು ತನ್ನ ಅಧೀನದಲ್ಲಿರುವವರನ್ನೂ ಬೆಳೆಸುತ್ತಾ ಎಲ್ಲರನ್ನೂ ಜತೆಯಾಗಿ ಯಶಸ್ಸಿನ ಹಾದಿಯಲ್ಲಿ ಕರೆದುಕೊಂಡು ಹೋಗುವವನು ನಿಜಕ್ಕೂ ಗೆಲ್ಲಬಲ್ಲ. ಯಶಸ್ಸಿನ ಗುಟ್ಟು ಇರುವುದು ಅಧಿಕಾರವನ್ನು ಚಲಾಯಿ ಸುವುದರಲ್ಲಿ ಅಲ್ಲ; ಬದಲಿಗೆ ಅಧಿಕಾರದ ವ್ಯಾಪ್ತಿಯಲ್ಲಿ ಎಲ್ಲರನ್ನೂ ಬೆಳೆಸುವುದರಲ್ಲಿದೆ.

 

ಸಂತೋಷ್‌ ರಾವ್‌ಪೆರ್ಮುಡ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.