ವಿವೇಕಾನಂದರ ಜೀವನದ ಮಹಾಪಾತ್ರ ಚಿಕ್ಕಮಗಳೂರಿನ ಅಳಸಿಂಗ ಪೆರುಮಾಳ್‌!


Team Udayavani, Jan 12, 2018, 4:57 AM IST

12-18.jpg

ಸ್ವಾಮಿ ವಿವೇಕಾನಂದರ ಜೀವನದಲ್ಲಿ ಶ್ರೀರಾಮಕೃಷ್ಣ ಪರಮಹಂಸ ನಿರ್ಣಾಯಕ ಪಾತ್ರ. ಅವರ ಜೀವನದ ಸರ್ವಸ್ವವೂ ಅವರೇ. ಆದರೂ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಟ್ಟಿದ ಅಳಸಿಂಗ ಪೆರುಮಾಳ್‌ ಅವರು ವಿವೇಕಾನಂದರ ಜೀವನದ ಮಹಾತಿರುವಿಗೆ ಕಾರಣ ಎನ್ನುವುದನ್ನು ಮರೆಯಲು ಸಾಧ್ಯವೇ ಇಲ್ಲ. ಸರ್ವಧರ್ಮ ಸಮ್ಮೇಳನಕ್ಕೆ ಹೋಗಬೇಕೋ, ಬೇಡವೋ ಎಂಬ ಬಗ್ಗೆ ವಿವೇಕಾನಂದರಿಗೆ ಗೊಂದಲವಿದ್ದಾಗ, ಹಗಲುರಾತ್ರಿ ಅವರ ಬೆನ್ನುಬಿದ್ದು ಒಪ್ಪಿಸಿದ್ದೇ ಅಳಸಿಂಗರು. ಅಷ್ಟು ಮಾತ್ರವಲ್ಲ ಅದಕ್ಕೆ ಬೇಕಾದ ಹಣ ಸಂಗ್ರಹ ಮಾಡಿದ್ದೂ ಅವರೇ.

ಆದರೆ ಅಂತಹ ಅಳಸಿಂಗರ ನೆನಪುಗಳನ್ನು ಕರ್ನಾಟಕ ಸರ್ಕಾರ ಉಳಿಸಿಕೊಂಡಿಲ್ಲ. ಚಿಕ್ಕಮಗಳೂರು ನಗರದ ಹೃದಯ ಭಾಗವಾದ ಬಸವನಹಳ್ಳಿಯಲ್ಲಿ ಅಳಸಿಂಗರು ಹುಟ್ಟಿ, ಬಾಲ್ಯವನ್ನೂ ಕಳೆದಿದ್ದರು. ಈಗ ಆ ಪ್ರದೇಶದಲ್ಲಿ ಅವರ ಮನೆಯಿತ್ತು ಎನ್ನುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಅಲ್ಲಿನ ಜನರಿಗೂ ಅದರ ಪರಿವೆಯಿಲ್ಲ. ಸ್ವಾತಂತ್ರ್ಯ ಬಂದ ಮೇಲಾದರೂ ಅಲ್ಲಿನ ನಗರಪಾಲಿಕೆ, ಜಿಲ್ಲಾ ಪಂಚಾಯಿತಿ, ರಾಜ್ಯ ಸರ್ಕಾರಗಳು ಅಳಸಿಂಗರ ನೆನಪುಗಳನ್ನು ಉಳಿಸಿಕೊಳ್ಳುವುದಕ್ಕೆ ಶ್ರಮಿಸಿದ ಉದಾಹರಣೆಗಳು ಸಿಕ್ಕುವುದಿಲ್ಲ. ಇದು ಬೇಸರದ ಸಂಗತಿ.

ಅಳಸಿಂಗರ ಹಿನ್ನೆಲೆ: ಅಳಸಿಂಗರ ಪೂರ್ವಿಕರು ಮಂಡ್ಯದವರು. ಅಲ್ಲಿಂದ ಚಿಕ್ಕಮಗಳೂರಿಗೆ ಬಂದ ಅವರ ತಂದೆ ಮಂಡಯಂ ಚಕ್ರವರ್ತಿ ನರಸಿಂಹಾಚಾರ್ಯರು ನಗರಪಾಲಿಕೆಯಲ್ಲಿ ಗುಮಾಸ್ತ ಹುದ್ದೆಯಲ್ಲಿದ್ದರು. ಬಹಳ ಬಡತನದಲ್ಲಿದ್ದರು. 1865ರಲ್ಲಿ ಮದ್ದೂರಿನ ನರಸಿಂಹಸ್ವಾಮಿಯ ಕೃಪೆಯಿಂದ ಅಳಸಿಂಗ ಜನಿಸಿದರು (ನಂಬಿಕೆ). ನರಸಿಂಹ ಎಂದೇ ಹೆಸರಿಡಲು ತಂದೆ ಇಚ್ಛಿಸಿದರೂ, ತನ್ನ ಪತಿಯ ಹೆಸರಾದ್ದರಿಂದ ತಾಯಿ ಒಪ್ಪಲಿಲ್ಲ. ಆದ್ದರಿಂದ ನರಸಿಂಹ ಅರ್ಥವೇ ಬರುವ ಅಳಸಿಂಗ ಪೆರುಮಾಳ್‌ (ಅಳ-ಸುಂದರವಾದ, ಸಿಂಗ-ಸಿಂಹ, ಪೆರುಮಾಳ್‌-ದೇವರು)ಎಂಬ ಹೆಸರನ್ನು ಇಡಲಾಯಿತು.

1872ರಿಂದ 1875ರ ನಡುವೆ ಅಳಸಿಂಗರ ಕುಟುಂಬ ತಮಿಳುನಾಡಿನ ಮದ್ರಾಸ್‌ಗೆ ತೆರಳಿತು. ಅಲ್ಲಿ ಹಣ ಬರುವ ಉದ್ಯೋಗ ಸಿಕ್ಕಿದ್ದು ಇದಕ್ಕೆ ಕಾರಣ. ಇದೇ ಜಾಗದಲ್ಲಿ 1892ರಲ್ಲಿ ವಿವೇಕಾನಂದ ಮತ್ತು ಅಳಸಿಂಗರ ಮಿಲನವಾಯಿತು. ಮನ್ಮಥಾನಾಥ ಭಟ್ಟಾಚಾರ್ಯ ಎನ್ನುವವರ ಮನೆಯಲ್ಲಿ ಅಳಸಿಂಗರ ತಮ್ಮ ಗುರುಗಳನ್ನು ಭೇಟಿ ಮಾಡಿದರು. ಅಲ್ಲಿಂದಲೇ ನಿಕಟಗೊಂಡ ಸಂಬಂಧ ಅವರ ಸಾವಿನವರೆಗೂ ಮುಂದುವರೆಯಿತು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.