Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


Team Udayavani, Apr 25, 2024, 4:03 PM IST

19-uv-fusion

ನಾವು ವೋಟು ಹಾಕುತ್ತೇವೆ ನಮ್ಮ ಜನಪ್ರತಿನಿಧಿಗಳು ತಪ್ಪು ಮಾಡಿದರೆ ನಾವೇನು ಮಾಡಬೇಕು.? ಈ ಮಾತು ದೇಶದ ಪ್ರತಿಯೊಬ್ಬ ಮತದಾರನ ಮಾತು ಹೌದು.. ಪ್ರಜಾಪ್ರಭುತ್ವದಲ್ಲಿ ಇಂಥ ಮಾತುಗಳನ್ನು ನಾವು ಕೇಳುತ್ತಲೇ ಬಂದಿದ್ದೇವೆ. ಮತದಾರನೇ ಮಹಾಪ್ರಭು ಎನ್ನಲಾಗುತ್ತದೆ.

ಅಭ್ಯರ್ಥಿಯ ಗೆಲುವಿಗೆ ಮತದಾರನ ನಿಲುವೇ ನಿರ್ಣಾಯಕ. ವೋಟು ಪಡೆದ ಗೆದ್ದ ಮಹಾಶಯ ಉನ್ನತ ಸ್ಥಾನದಲ್ಲಿ ಕುಳಿತು ಅಧಿಕಾರ ಚಲಾಯಿಸುತ್ತಾನೆ.. ರಾಜಕಾರಣದ ಚುಕ್ಕಾಣಿ ಹಿಡಿಯುತ್ತಾನೆ. ಆದರೆ ಮತದಾರ ನಿರ್ಣಾಯಕ ಎಂಬುದಂತೂ ಸತ್ಯ. ಆದರೆ ಇಂದಿನ ಪರಿಸ್ಥಿತಿಯಲ್ಲಿ ಎಲ್ಲವೂ ಬದಲಾದಂತಿದೆ. ಪ್ರಜಾಪ್ರಭುತ್ವ ಪರಿಕಲ್ಪನೆ ಹುಟ್ಟು ಹಾಕಿದ ಪೂರ್ವಜರು ಬಹುಶಃ ಇಂಥದೊಂದು ಪರಿಸ್ಥಿತಿ ಎದುರಾಗಬಹುದು ಎಂದು ಊಹೆ ಕೂಡ ಮಾಡಿರಲಿಕ್ಕಿಲ್ಲ. ಮತದಾರನ ಶಕ್ತಿ ಕೇವಲ ಕಾಗದದ ಮೇಲಿನ ಹುಲಿಯಾಗಿದೆ. ಎಲ್ಲ ಶಕ್ತಿ ಸಾಮರ್ಥ್ಯಗಳು ಗೆದ್ದು ಗದ್ದುಗೆ ಏರಿದವನ ಕೈಯಲ್ಲಿದೆ. ಮತದಾರ ಅಸಹಾಯಕನಾಗಿದ್ದಾನೆ. ನಾಯಕ ವಿಜೃಂಭಿಸುತ್ತಿದ್ದಾನೆ. ಗೆದ್ದು ಬಂದಾತನ ಮನೆ ಅರಮನೆಯಾಗುತ್ತದೆ. ಆತ ಐಷಾರಾಮಿ ಕಾರುಗಳಲ್ಲಿ ಓಡಾಡುತ್ತಾನೆ.

ಈ ಒಂದು ವಿಷಯ ಯಾವಾಗಲೂ ಮತದಾರರನ್ನು ಕಾಡುತ್ತಲೆ ಇರುತ್ತದೆ.. ಅಂಥ ಕ್ರಿಮಿನಲ್‌ಗ‌ಳು, ಬಾಹುಬಲಿಗಳು ಚುನಾವಣೆಯಲ್ಲಿ ಗೆಲ್ಲುವುದಾದರೂ ಹೇಗೆ? ಒಳ್ಳೆಯ ಚಾರಿತ್ರಿಕ ಹಿನ್ನೆಲೆಯಿರುವ ವ್ಯಕ್ತಿಗಳು ಚುನಾವಣೆಯಲ್ಲಿ ಸೋಲುವುದಾದರೂ ಹೇಗೆ? ಚುನಾವಣೆ ರಾಜಕೀಯದಲ್ಲಿರುವ ಭ್ರಷ್ಟತೆಯಿಂದ ಜನಸಾಮಾನ್ಯರು ಎಚ್ಚೆತ್ತುಕೊಳ್ಳುವುದಾದರೂ ಯಾವಾಗ? ಮತದಾರನ ಹೊಣೆಗಾರಿಕೆ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದಕ್ಕಷ್ಟೇ ಸೀಮಿತವಾಗಿ ಹೋಗಿದೆ. ಒಮ್ಮೆ ಚುನಾವಣೆ ಮುಗಿದ ಅನಂತರ ಮತದಾರರ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ಈಗಲೂ ಇದೆ.

ನಮ್ಮ ಮುಂದಿನ ಪ್ರಶ್ನೆಯೆಂದರೆ, ಮತದಾರರ ಏನು ಮಾಡಬೇಕು.? ಯಾರಿಗೆ ವೋಟು ಹಾಕಬೇಕು? ಎಂಬುದಾಗಿದೆ. ಮತವನ್ನು ಹಾಕುವಾಗ ನಾವು ಅಭ್ಯರ್ಥಿಯ ಹಿನ್ನೆಲೆಯನ್ನು ಗಮನಿಸಬೇಕಾಗಿರುವುದು ಮುಖ್ಯ. ಅಭ್ಯರ್ಥಿಯ ಆಸ್ತಿ ಹಿನ್ನೆಲೆ, ಶೈಕ್ಷಣಿಕ ಹಿನ್ನೆಲೆ ಹಾಗೂ ಅಪರಾಧ ಹಿನ್ನೆಲೆಗಳನ್ನು ಗಮನಿಸಬೇಕಾಗುತ್ತದೆ.. ಅಭ್ಯರ್ಥಿಯು ಒಂದು ವೇಳೆ ಅಪರಾಧಿಯಾಗಿದ್ದಲ್ಲಿ ಅವನನ್ನು ಆಯ್ಕೆ ಮಾಡದೆ ಇರುವುದೇ ಉತ್ತಮ.

ಕೆಲವರು ಇರುತ್ತಾರೆ ಅಭ್ಯರ್ಥಿಯು ನಮ್ಮ ಜಾತಿಗೆ ಸೇರಿದವನು ಇವನನ್ನು ಆಯ್ಕೆ ಮಾಡಿದರೆ ನಮ್ಮ ಜಾತಿಯವನು ಅಧಿಕಾರಕ್ಕೆ ಬರುತ್ತಾನೆ ಎಂದೆಲ್ಲಾ ಯೋಚಿಸುತ್ತಾರೆ. ಇನ್ನೂ ಕೆಲವರು ರಾಜಕಾರಣಿಗಳು ಅಥವಾ ಅಭ್ಯರ್ಥಿಗಳು ನೀಡುವ ಉಡುಗೊರೆ, ಹಣ ಮತ್ತಿತರ ವಸ್ತುಗಳ ಆಮೀಷಕ್ಕೆ ಒಳಗಾಗಿ ತಮ್ಮ ಮತವನ್ನು ಮಾರಿಕೊಳ್ಳುತ್ತಾರೆ.

ಇದ್ಯಾವುದೇ ಆಮೀಷಕ್ಕೆ ಒಳಗಾಗದೇ ಅಭ್ಯರ್ಥಿಯ ಹಿನ್ನೆಲೆಯನ್ನು ಗಮನಿಸಿ, ಅವನು ಪ್ರಾಮಾಣಿಕನೋ, ಅವನಿಗೆ ಆಡಳಿತ ಮಾಡುವ ಸಾಮರ್ಥ್ಯ ನಿಜವಾಗಿಯೂ ಇದೆಯಾ, ಒಂದೊಮ್ಮೆ ಈ ಅಭ್ಯರ್ಥಿಯು ಆಯ್ಕೆ ಆದರೆ ನಮ್ಮ ಗ್ರಾಮ, ದೇಶ ಅಭಿವೃದ್ಧಿಯಾಗುತ್ತದೆಯೇ ಎಂಬೆಲ್ಲ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಿದರೆ ಒಬ್ಬ ಉತ್ತಮ ಅಭ್ಯರ್ಥಿಯನ್ನು ಆರಿಸಬಹುದು ಎಂಬುದು ನನ್ನ ಅಭಿಪ್ರಾಯವಾಗಿದೆ.

-ಕೆ. ಎಂ. ಪವಿತ್ರಾ

ಎಂಜಿಎಂ ಕಾಲೇಜು, ಉಡುಪಿ

ಟಾಪ್ ನ್ಯೂಸ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.