ಮಹಾತ್ಮ ತೋರಿದ ದಾರಿಯಲ್ಲಿ…


Team Udayavani, Oct 2, 2019, 5:58 AM IST

s-67

ಮಹಾತ್ಮ ಗಾಂಧಿ ಜನಿಸಿ 150 ವರ್ಷ ಪೂರ್ಣವಾಗಿದೆ. ಅವರು ಪ್ರತಿಪಾದಿಸಿದ ಸತ್ಯ, ಅಹಿಂಸೆ, ಆಸ್ಥೆಯಗಳು ಪ್ರಸ್ತುತ ದಿನಮಾನಗಳಿಗೂ ಅನ್ವಯವಾಗುತ್ತವೆ. ಈ ಬಾರಿಯ ಗಾಂಧಿ ಜಯಂತಿ ಹಿಂದಿನ ವರ್ಷಗಳ ಆಚರಣೆಗಳಿಗಿಂತ ಭಿನ್ನವಾಗಿದೆ ಎಂದರೆ ತಪ್ಪಾಗಲಾರದು. ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಗಾಂಧಿ ಚಿಂತನೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ದೊರೆತಿದೆ ಎನ್ನುವುದು ಭಾರತೀಯರಾಗಿರುವ ನಮಗೆಲ್ಲ ಹೆಮ್ಮೆಯ ವಿಚಾರವೇ ಸರಿ.

ಪ್ರಧಾನಿ ನರೇಂದ್ರ ಮೋದಿ ಕಳೆದ ತಿಂಗಳು ಅಮೆರಿಕ ಪ್ರವಾಸ ಕೈಗೊಂಡಿದ್ದಾಗ ವಿಶ್ವಸಂಸ್ಥೆಯ ತಾರಸಿಯಲ್ಲಿ ಮಹಾತ್ಮ ಗಾಂಧಿ ಹೆಸರಿನಲ್ಲಿರುವ ಸೌರ ಫ‌ಲಕಗಳ ಉದ್ಘಾಟನೆ ಮತ್ತು ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಿದ್ದರು. ಅಮೆರಿಕದ ಪ್ರಮುಖ ನಾಯಕರಾಗಿದ್ದ ಮಾರ್ಟಿನ್‌ ಲೂಥರ್‌ ಕಿಂಗ್‌ ಜ್ಯೂನಿಯರ್‌, ಜೇಮ್ಸ್‌ ಲಾಸನ್‌, ಜೇಮ್ಸ್‌ ಬೇವೆಲ್‌, ದಕ್ಷಿಣ ಆಫ್ರಿಕದ ಸ್ವಾತಂತ್ರ್ಯ ಹೋರಾಟದ ರೂವಾರಿ ಡಾ| ನೆಲ್ಸನ್‌ ಮಂಡೇಲ ಹೀಗೆ ಹಲವಾರು ಮಂದಿ ವಿದೇಶಿ ನಾಯಕರಿಗೆ ನಮ್ಮ ಮಹಾತ್ಮ ಸ್ವಾತಂತ್ರ್ಯ, ಸರಳ ಜೀವನ, ಸಾತ್ವಿಕತೆಯಲ್ಲಿ ಆದರ್ಶರಾಗಿದ್ದವರು. ತಮ್ಮ ಜೀವಿತದ ಉದ್ದಕ್ಕೂ ಶುಚಿತ್ವಕ್ಕೆ ಆದ್ಯತೆ ನೀಡಿದ್ದವರು ಮಹಾತ್ಮ ಗಾಂಧಿ. ಅದಕ್ಕೆ ಅನುಸರಣೀಯವಾಗಿ ಸ್ವತ್ಛ ಭಾರತ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗಿದೆ, ಪ್ರತಿಯೊಂದು ಹಳ್ಳಿಗಳ ಮನೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಆ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹಳ್ಳಿಗಳ ದೇಶವಾಗಿರುವ ಭಾರತದಲ್ಲಿ ಅವುಗಳ ಸಮಗ್ರ ಅಭಿವೃದ್ಧಿಯೇ ಗಾಂಧೀಜಿಯವರ ಆದರ್ಶ ಭಾರತದ ಕಲ್ಪನೆಯಾಗಿತ್ತು. ಅದರಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಈಗ ಜಾರಿ ಮಾಡಲಾಗಿದೆ. ಇಂಥ ಕೆಲವೊಂದು ನಿರ್ಧಾರಗಳು ದೇಶದ ಮೊದಲ ಸರಕಾರದ ಅವಧಿಯಿಂದಲೂ ಜಾರಿಯಾಗಿದ್ದರೂ, ಅದು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಆಗಿಲ್ಲ.ಇದೊಂದು ಕಹಿ ಸತ್ಯವೇ ಸರಿ. ವಿಶ್ವದ ಇತರ ರಾಷ್ಟ್ರಗಳು ನಮ್ಮ ಬಾಪು ಹಾಕಿಕೊಟ್ಟ ಮಾರ್ಗ ಅನುಸರಿಸಿ, ಪ್ರಪಂಚದ ಅಗ್ರೇಸರ ರಾಷ್ಟ್ರಗಳ ಸಾಲಿನಲ್ಲಿ ಮಿಂಚಬಲ್ಲವು ಎಂದಾದರೆ ಅವರು ಜನಿಸಿದ ನಾಡಿನಲ್ಲಿ ಏಕೆ ಸಾಧ್ಯವಿಲ್ಲ? ಈ ನಿಟ್ಟಿನಲ್ಲಿ ಪ್ರತಿ ವರ್ಷ ಅ.2ರಂದು ಸುತ್ತಮುತ್ತಲಿನ ಸ್ಥಳಗಳನ್ನು ಶುಚಿಯಾಗಿ ಇರಿಸುವ ಬಗ್ಗೆ ಘೋಷಣೆ ಮಾಡಿದರೆ ಸಾಲದು. ಅವು ನಿತ್ಯಾನುಷ್ಠಾನಗೊಳ್ಳಬೇಕು. ದೀನ-ದಲಿತರ ಉದ್ಧಾರ ಮಹಾತ್ಮ ಕೈಗೊಂಡಿದ್ದ ಪ್ರಮುಖ ಸಾಮಾಜಿಕ ಸುಧಾರಣೆಗಳಲ್ಲಿ ಒಂದು. ಅದಕ್ಕೆ ಪೂರಕವಾಗಿ ಸ್ವಾತಂತ್ರ್ಯ ನಂತರದ ಸರಕಾರಗಳು ತತ್ಸಂಬಂಧಿ ಕಾನೂನುಗಳನ್ನು ಜಾರಿಗೊಳಿಸಿವೆಯಾದರೂ, ಅಸ್ಪೃಶ್ಯತೆಯಂಥ ಕೀಳು ಆಚರಣೆಗಳು ಅಲ್ಲೊಂದು ಇಲ್ಲೊಂದು ಕಣ್ಣಿಗೆ ರಾಚಿದಂತೆ ವರದಿಯಾಗುತ್ತಿವೆ. ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ, ಜನರ ಮನಸ್ಸಿನಲ್ಲಿಯ ಭಾವನೆಗಳಲ್ಲಿ ಪರಿವರ್ತನೆ ಉಂಟಾಗಿದ್ದರೂ, ಇನ್ನೂ ಸಂಪೂರ್ಣ ಬದಲಾವಣೆ ಆಗಿಲ್ಲ ಎನ್ನುವುದು ಸತ್ಯ.

ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ನೀಡಿದ ಗಾಂಧೀಜಿಯವರ ಜನ್ಮದಿನದ ಪ್ರಧಾನ ಅಂಶಗಳು ಭಾಷಣ, ಕರಪತ್ರಕ್ಕೆ ಮಾತ್ರಕ್ಕೆ ಸೀಮಿತವಾಗಿರದೆ, ಅದು ದೈನಂದಿನ ಜೀವನದಲ್ಲಿಯೂ ಅಳವಡಿಕೆಯಾದರೆ ಅದುವೇ ನಾವು ಬಾಪುಗೆ ಸಲ್ಲಿಸುವ ಮಹತ್ವದ ಗೌರವವಾಗುತ್ತದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.