ಕತ್ತಲೆಯಲ್ಲೇ ಸೈನಿಕರಿಗೆ ಚಿಕಿತ್ಸೆ ನೀಡಿ ಬದುಕಿಸಿದೆವು


Team Udayavani, Dec 23, 2021, 8:00 AM IST

ಕತ್ತಲೆಯಲ್ಲೇ ಸೈನಿಕರಿಗೆ ಚಿಕಿತ್ಸೆ ನೀಡಿ ಬದುಕಿಸಿದೆವು

ಗಂಜೀಮಠ ನಿವಾಸಿಯಾಗಿರುವ ಏಕನಾಥ ಶೆಣೈ ಅವರು 1971ರ ಜನವರಿಯಲ್ಲಿ ಸೈನ್ಯಕ್ಕೆ ಸೇರ್ಪಡೆಯಾಗಿದ್ದು ಅದೇ ವರ್ಷ ಬಾಂಗ್ಲಾ ಯುದ್ಧ ನಡೆದಿತ್ತು. ಒಟ್ಟು 17 ವರ್ಷ ಸೇವೆ ಸಲ್ಲಿಸಿದ್ದಾರೆ. ನಾಯ್ಕ ಹುದ್ದೆಗೆ ಪದೋನ್ನತಿಗೊಂಡು ನಿವೃತ್ತರಾದರು.

ಏಕನಾಥ ಶೆಣೈ
ಬಾಂಗ್ಲಾ ಯುದ್ಧ ನಡೆಯುವಾಗ ನನಗೆ 19 ವರ್ಷ. ಆರ್ಮಿ ಮೆಡಿಕಲ್‌ ಕೋಪ್ಸ್‌ (ಎಎಂಸಿ) ಆಗಿದ್ದೆ. ತರಬೇತಿಯಲ್ಲಿರುವಾಗಲೇ ಯುದ್ಧ ಘೋಷಣೆಯಾದ ಹಿನ್ನೆಲೆಯಲ್ಲಿ ಸೇವೆ ಆರಂಭಿಸಿದೆವು. ಮೇರಥ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಗಾಯಗೊಂಡ ಸೈನಿಕರಿಗೆ ಚಿಕಿತ್ಸೆ ನೀಡುವ ಕೆಲಸ ನಮ್ಮದಾಗಿತ್ತು. ಕೈ, ಕಾಲು, ಕಣ್ಣು ಕಳೆದುಕೊಂಡ ಸೈನಿಕರಿಗೆ ಚಿಕಿತ್ಸೆ ನೀಡುವ ಕೆಲಸವನ್ನು ನಿತ್ಯವೂ ಮಾಡುತ್ತಿದ್ದೆವು. 1,000 ಬೆಡ್‌ಗಳಿದ್ದ ಆಸ್ಪತ್ರೆಯಲ್ಲಿ ಕೆಲವೊಮ್ಮೆ ಬೆಡ್‌ಗಳು ಸಾಕಾಗದೆ ನೆಲದಲ್ಲಿಯೇ ಮಲಗಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಜೀವನದಲ್ಲಿ ಮೊದಲ ಬಾರಿಗೆ ಅಂತಹ ದೃಶ್ಯ ನೋಡಿದ್ದೆ. ಸೈನಿಕರಲ್ಲದೆ ಇನ್ನೊಂದು ಬದಿಯಲ್ಲಿ ಯುದ್ದ ಕೈದಿಗಳಿಗೂ ಪ್ರತ್ಯೇಕ ಕ್ಯಾಂಪ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಸುತ್ತ ತಂತಿ ಬೇಲಿ ಹಾಕಲಾಗಿತ್ತು. ಕೃತಕ ಅವಯವಗಳನ್ನು ಜೋಡಿಸುವ ಕೆಲಸಗಳೂ ನಡೆಯುತ್ತಿದ್ದವು. ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್‌ ಗಳ ಕೊರತೆ ಇರಲಿಲ್ಲ.

ಯುದ್ಧದ ಹಿನ್ನೆಲೆಯಲ್ಲಿ ರಾತ್ರಿ ಲೈಟ್‌ ಆಫ್’ ಆದೇಶವಿತ್ತು. ಹಾಗಾಗಿ ಸರಿಯಾದ ಬೆಳಕಿನ ವ್ಯವಸ್ಥೆಯೂ ಇಲ್ಲದ ಪರಿಸ್ಥಿತಿಯಲ್ಲಿ ಸೇವೆ ಮಾಡುವ ಅನಿವಾರ್ಯತೆ ಇತ್ತು. ಆಗಷ್ಟೇ ಕೈ, ಕಾಲುಗಳನ್ನು ಕಳೆದುಕೊಂಡು ಬಂದ ಸೈನಿಕರನ್ನು ನೋಡಿ ಸ್ವಲ್ಪವೂ ಧೃತಿಗೆಡದೆ ಚಿಕಿತ್ಸೆಗೆ ಮುಂದಾಗುತ್ತಿದ್ದೆವು. ಆ ದೃಶ್ಯಗಳು ಈಗಲೂ ಕಣ್ಣ ಮುಂದಿವೆ. ಬಳಿಕ ನಾನು ಮೇರಥ್‌ನಿಂದ ಶ್ರೀನಗರದ ಮಿಲಿಟರಿ ಆಸ್ಪತ್ರೆಗೆ ಸರ್ಜಿಕಲ್‌ ವಾರ್ಡ್‌ನಲ್ಲಿ ಸೇವೆಗೆ ಸೇರ್ಪಡೆಯಾದೆ. ಅಲ್ಲಿ ಕೂಡ ನೆಲಬಾಂಬ್‌ಗಳಿಂದ ಗಾಯಗೊಂಡ ಸೈನಿಕರು ಚಿಕಿತ್ಸೆಗೆ ಬರುತ್ತಿದ್ದರು.

ನಿರೂಪಣೆ: ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.