ನಿತ್ಯಾನಂದ ಕೈಲಾಸ! ಯಾರಿಗೆಲ್ಲ ಪ್ರವೇಶ ?


Team Udayavani, Mar 4, 2023, 7:15 AM IST

ನಿತ್ಯಾನಂದ ಕೈಲಾಸ! ಎಲ್ಲಿದೆ ಕೈಲಾಸ ?

ಭಾರತದಿಂದ ಪರಾರಿಯಾಗಿ, ಯುನೈಟೆಡ್‌ ಸ್ಟೇಟ್ಸ್‌ ಆಫ್ ಕೈಲಾಸ ಎನ್ನುವ ದೇಶವನ್ನೇ ಸ್ಥಾಪಿಸಿದ್ದಾರೆ ಎನ್ನಲಾಗುವ ವಿವಾದಿತ, ಸ್ವಘೋಷಿತ ದೇವಮಾನವ ನಿತ್ಯಾನಂದ ಕಳೆದ ಕೆಲದಿನಗಳಿಂದ ಮತ್ತೆ ಸುದ್ದಿಯಲ್ಲಿದ್ದಾರೆ.

ವಿಶ್ವಸಂಸ್ಥೆಯ ಸಭೆಯಲ್ಲಿ ಕೈಲಾಸದ ಪ್ರತಿನಿಧಿಗಳು ಭಾಗಿಯಾಗಿದ್ದ ವಿಚಾರ ಜಾಲತಾಣದಲ್ಲಿ ವೈರಲ್‌ಆಗಿದೆ. ನಿಜಕ್ಕೂ ಇದರ ಸತ್ಯಾಸತ್ಯತೆಗಳೇನು? ಕೈಲಾಸ ಎಲ್ಲಿದೆ? ಇದು ಅಧಿಕೃತ ದೇಶವೇ ಎಂಬುದರ ವಿವರ ಇಲ್ಲಿದೆ.

ಎಲ್ಲಿದೆ ಕೈಲಾಸ ?
ದಕ್ಷಿಣ ಅಮೆರಿಕದ ಈಕ್ವೆಡರ್‌ ಬಳಿ ಇರುವ ದ್ವೀಪ ಪ್ರದೇಶವೊಂದನ್ನು ನಿತ್ಯಾನಂದ ಕೈಲಾಸ ಎಂದು ಹೆಸರಿಸಿ, ದ್ವೀಪವನ್ನೇ ದೇಶವನ್ನಾಗಿ ಮಾರ್ಪಾಡು ಮಾಡಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಅಧಿಕೃತ ದೇಶವೇ?
ಯಾವುದೇ ಒಂದು ಪ್ರದೇಶವನ್ನು ಅಂತಾರಾಷ್ಟ್ರೀಯ ಮಾನ್ಯತೆಯೊಂದಿಗೆ ದೇಶವೆಂದು ಪರಿಗಣಿಸಬೇಕಾದರೆ, ವಿಶ್ವಸಂಸ್ಥೆಯ ಮಾನ್ಯತೆ ಅಗತ್ಯ. ಅದರ ಮಾನದಂಡಗಳ ಪ್ರಕಾರ, ಪ್ರದೇಶವೊಂದು ಶಾಶ್ವತ ಜನಸಂಖ್ಯೆ, ಸರ್ಕಾರ ಹಾಗೂ ವಿದೇಶಗಳೊಂದಿಗೆ ಸಂಪರ್ಕ ಸಾಧಿಸುವ ಸಾಮರ್ಥ್ಯ ಹೊಂದಿರಬೇಕು. ಇದೇ ಪ್ರಸ್ತಾಪಕ್ಕಾಗಿ ಕೈಲಾಸದ ಪ್ರತಿನಿಧಿಗಳು ವಿಶ್ವಸಂಸ್ಥೆ ಸಭೆಯಲ್ಲಿ ಭಾಗಿಯಾಗಿದ್ದರು. ಆದರೆ, ಕೈಲಾಸ ಇದರಲ್ಲಿ ವಿಫ‌ಲವಾಗಿರುವ ಕಾರಣ, ಅದನ್ನು ಮಾನ್ಯತೆ ಪಡೆದ ದೇಶವೆಂದು ಗುರುತಿಸಲಾಗಿಲ್ಲ.

ಯಾರಿಗೆಲ್ಲ ಪ್ರವೇಶ ?
ಕೈಲಾಸ ವೆಬ್‌ಸೈಟ್‌ನಲ್ಲಿಯೇ ಹೇಳಿರುವಂತೆ ವಿಶ್ವರಾಷ್ಟ್ರಗಳಲ್ಲಿ ದೌರ್ಜನ್ಯಕ್ಕೊಳಗಾಗಿರುವ ಹಿಂದೂಗಳು ಕೈಲಾಸದಲ್ಲಿ ಮುಕ್ತವಾಗಿ ಹಿಂದೂ ಧರ್ಮ ಅನುಸರಿಸಬಹುದಾಗಿದೆ. ಅಲ್ಲದೇ, ಆ ದೇಶದ ಪೌರತ್ವ ಪಡೆಯಬಹುದು. ಈ ಸಂಬಂಧಿಸಿದಂತೆ ಶೀಘ್ರವೇ ಇ-ವೀಸಾ, ಇ-ಸಿಟಿಜನ್‌ಶಿಪ್‌ ಆರಂಭಿಸುವುದಾಗಿಯೂ ತಿಳಿಸಲಾಗಿದೆ.

ಹೇಳಿಕೆ ಅಪ್ರಸ್ತುತ
ಕೈಲಾಸ ಪ್ರತಿನಿಧಿ ವಿಶ್ವಸಂಸ್ಥೆಯಲ್ಲಿ ಮಾಡಿದ್ದ ಭಾಷಣದ ವಿಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದ್ದರ ಬಗ್ಗೆಯೂ ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯೋಗ ಸ್ಪಷ್ಟನೆ ನೀಡಿದೆ. ಫೆ.24ರಂದು ನಡೆದ ಸಭೆ ಸಾರ್ವಜನಿಕರಿಗೆ ಮಕ್ತವಾಗಿತ್ತು. ಆಸಕ್ತ ಎನ್‌ಜಿಒಗಳು ಭಾಗವಹಿಸಲು ಅವಕಾಶವಿತ್ತು. ಅದರಂತೆ ಕೈಲಾಸ ಎನ್‌ಜಿಒ ಪ್ರತಿನಿಧಿ ಭಾಗವಹಿಸಿದ್ದರು. ಆದರೆ, ಅವರು ಮಂಡಿಸಿದ ವಿಚಾರಗಳು ಅಪ್ರಸ್ತುತವಾಗಿದ್ದು, ಅವುಗಳನ್ನು ಅಂತಿಮ ಕರಡು ರಚನೆಯಲ್ಲಿ ಪರಿಗಣಿಸುವುದಿಲ್ಲ ಎಂದಿದೆ.

 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.