ಜಗತ್ತಿನಲ್ಲಿ ಸಂಗೀತ ಇಷ್ಟವಿಲ್ಲದವರು ಯಾರಿದ್ದಾರೆ?: ಎನ್‌. ರಾಜಮ್‌


Team Udayavani, Jan 19, 2020, 8:00 AM IST

meg-39

ಸಂಗೀತ ಜಗತ್ತಿನಲ್ಲಿ ಬಹುಮನ್ನಣೆ ಪಡೆದಿರುವ ಪಿಟೀಲು ವಾದಕಿ ಪದ್ಮಭೂಷಣ ಡಾ| ಎನ್‌. ರಾಜಮ್‌ ಅವರು ಶ್ರೀ ಅದಮಾರು ಮಠದ ಪರ್ಯಾಯೋತ್ಸವದ ಅಂಗವಾಗಿ ಹಮ್ಮಿಕೊಂಡ “ದರ್ಬಾರ್‌ ಸಂಗೀತ ಕಚೇರಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ “ಉದಯವಾಣಿ’ಗೆ ಸಂದರ್ಶನ ನೀಡಿದರು.

ಸಂಗೀತ ಯಾಕೆ ಕಲಿಯಬೇಕು?
ಜೀವನದಲ್ಲಿ ಸಂತೋಷವಾಗಿ ಇರಬೇಕು ಎನ್ನುವುದು ಪ್ರತಿಯೊಬ್ಬರ ಆಶಯ. ಜಗತ್ತಿನಲ್ಲಿ ಸಂಗೀತ ಇಷ್ಟವಿಲ್ಲದವರು ಯಾರಿದ್ದಾರೆ? ಸಂಗೀತ ದೇವರು ಕೊಟ್ಟ ವರ. ಪ್ರೀತಿಯ ಸಂಕೇತವಾಗಿದೆ. ಮನಸ್ಸಿನ ಕೊಳೆಯನ್ನು ತೊಳೆದು ಹಾಕಬಹುದು. ನಮ್ಮ ನೋವನ್ನು ಸಂಗೀತದ ಮೂಲಕ ಮರೆಯಬಹುದು. ನಮ್ಮ ಅನೇಕ ಹಿರಿಯರು ಸಂಗೀತದ ಮೂಲಕ ಭಗವಂತನ ದರ್ಶನ ಪಡೆದಿದ್ದಾರೆ. ಇಂತಹ ಸಂದರ್ಭದಲ್ಲಿ ನಾವು ಸಂಗೀತ ಕಲಿಕೆಯ ಮೂಲಕ ಭಗವಂತನ ಕಾಣಲು ಸಾಧ್ಯ.

ಸಂಗೀತದ ಮೂಲಕ ಅರಿವು ಹೇಗೆ ಸಾಧ್ಯ?
ಪ್ರಸ್ತುತ ಕಾಲಘಟ್ಟದಲ್ಲಿ ಫ್ಯೂಷನ್‌ನಿಂದ ಶಾಸ್ತ್ರೀಯ ಸಂಗೀತ ಮೂಲೆಗುಂಪಾಗುತ್ತಿದೆ ಎನ್ನುವ ಮಾತುಗಳಿವೆ. ಆದರೆ ಎಲ್ಲ ಬಗೆಯ ಸಂಗೀತಗಳ ಮೂಲ ಶಾಸ್ತ್ರೀಯ ಸಂಗೀತ. ಇದರಿಂದಲೇ ಜಾನಪದ, ಫ್ಯೂಷನ್‌ ಹುಟ್ಟಿಕೊಂಡಿದೆ. ಕೆಲವರು ಫ್ಯೂಷನ್‌ ಇಷ್ಟಪಟ್ಟರೆ, ಇನ್ನು ಕೆಲವರು ಶಾಸ್ತ್ರೀಯ ಸಂಗೀತವನ್ನು ಇಷ್ಟಪಡುತ್ತಾರೆ. ಫ್ಯೂಷನ್‌ನಲ್ಲಿ ಶಾಸ್ತ್ರೀಯ ಸಂಗೀತವನ್ನು ಹೆಚ್ಚಾಗು ಬಳಸುವ ಮೂಲಕ ಯುವ ಜನರಲ್ಲಿ ಒಲವು ಮೂಡಿಸಲು ಸಾಧ್ಯ.

ನಿಮ್ಮ ಬನಾರಸ್‌ನ ಜೀವನದ ಬಗೆಗೆ…?
ಬನಾರಸ್‌ನಲ್ಲಿ 40 ವರ್ಷ ಇದ್ದೆ. ಅಲ್ಲಿನ ಹಿಂದೂ ವಿ.ವಿ.ಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿದ್ದೇನೆ. ಅಲ್ಲಿ ನನಗೆ ಬನಾರಸಿಯ ಸಂಗೀತದ ವೈವಿಧ್ಯಗಳು ಕೇಳಲು ಸಿಕ್ಕಿವೆ. ಪಂಡಿತ್‌ ಮಹಾದೇವ್‌ ಪ್ರಸಾದ್‌ ಮಿಶ್ರ ಅವರ ಬನಾರಸಿ ಸಂಗೀತ ಶೈಲಿಯನ್ನು ಆಭ್ಯಾಸವನ್ನು ಮಾಡಿದ್ದೆ.

ಕೃಷ್ಣನಿಗೂ ನಿಮಗೂ ಎಂತಹ ನಂಟು?
ಉಡುಪಿ ಹಲವು ಬಾರಿ ಬಂದಿ ದ್ದೇನೆ. ಆದರೆ ಎಂದೂ ಶ್ರೀಕೃಷ್ಣ ಮಠಕ್ಕೆ ಬರುವ ಅವಕಾಶ ಸಿಕ್ಕಿರಲಿಲ್ಲ. ಇದೇ ಮೊದಲ ಬಾರಿಗೆ ಶ್ರೀಕೃಷ್ಣ ಮಠದ ಪರ್ಯಾಯದಲ್ಲಿ ಭಾಗವಹಿಸಲು ಅವಕಾಶ ದೊರಕಿದೆ. ನಮ್ಮ ಭಜನೆ ಯಲ್ಲಿ ಕೃಷ್ಣನೂ ಇದ್ದಾನೆ. ಇಂದು ಅವನ ಸ್ಥಾನದಲ್ಲಿ ಬಂದು ಕಛೇರಿ ನಡೆಸುತ್ತಿರುವುದು ನಮ್ಮ ಪುಣ್ಯ.

ಪಿಟೀಲು ಪರಂಪರೆಯನ್ನು ಹೇಗೆ ಕಾಪಾಡಿಕೊಂಡು ಬರುತ್ತಿದ್ದೀರಿ?
ನಾನು, ಮಗಳು ಸಂಗೀತಾ, ಮೊಮ್ಮಗಳು ರಾಗಿಣಿ ಮತ್ತು ನಂದಿನಿ ಒಂದೇ ವೇದಿಕೆಯಲ್ಲಿ ಪ್ರದರ್ಶನ ನೀಡುತ್ತೇವೆ. ನಮ್ಮಲ್ಲಿ ಹುಟ್ಟಿದ ಮಗುವಿಗೆ ಮೂರು ವರ್ಷವಾಗುತ್ತಿದಂತೆ ಪಿಟೀಲು ಅಭ್ಯಾಸ ಮಾಡಿಸುತ್ತೇವೆ. ನನ್ನ ಪ್ರತಿಯೊಂದು ಯಶಸ್ಸಿಗೆ‌ ಮನೆಯವರ ಸಹಕಾರವಿದೆ. ರಾಗಿಣಿ ಮತ್ತು ನಂದಿನಿ ಉನ್ನತ ಶಿಕ್ಷಣವನ್ನು ಪಡೆದಿದ್ದಾರೆ. ಇವರು ಮುಂದೆ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಾರೆ.

 ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.