ತಮಿಳುನಾಡಿನಲ್ಲೇಕೆ ಹಿಂದಿ ಮೇಲೆ ಸಿಟ್ಟು? ಇಲ್ಲಿದೆ ಮಾಹಿತಿ…


Team Udayavani, Oct 19, 2022, 6:35 AM IST

ತಮಿಳುನಾಡಿನಲ್ಲೇಕೆ ಹಿಂದಿ ಮೇಲೆ ಸಿಟ್ಟು? ಇಲ್ಲಿದೆ ಮಾಹಿತಿ…

ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಹಿಂದಿ ಭಾಷಿಕ ರಾಜ್ಯಗಳ ಕೇಂದ್ರ ಸರಕಾರಿ ಕಚೇರಿಗಳಲ್ಲಿ ಹಿಂದಿಯನ್ನೇ ಬಳಕೆ ಮಾಡಬೇಕು ಎಂಬ ವಿಚಾರ ಸಂಬಂಧ ತಮಿಳುನಾಡಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಸಿಎಂ ಎಂ.ಕೆ.ಸ್ಟಾಲಿನ್‌, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವನ್ನೂ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾದರೆ, ಹಿಂದಿ ವಿರುದ್ಧದ ತಮಿಳು ನಾಡಿನ ವಿರೋಧ ಯಾವಾಗಿನಿಂದ ಆರಂಭವಾಯಿತು? ಏಕೆ ಹೀಗೆ? ಇಲ್ಲಿದೆ ಮಾಹಿತಿ…

ಏನಿದು ವಿರೋಧ?
ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದ ಸಂಸದೀಯ ಸಮಿತಿಯೊಂದು ಹಿಂದಿ ಭಾಷಿಕ ರಾಜ್ಯಗಳ ಕೇಂದ್ರ ಸರಕಾರಿ ಕಚೇರಿಗಳಲ್ಲಿ ಹಿಂದಿ ಮತ್ತು ಇತರ ಭಾಷೆಗಳ ರಾಜ್ಯಗಳಲ್ಲಿ ಪ್ರಾದೇಶಿಕ ಭಾಷೆಗಳನ್ನೇ ಕಚೇರಿಗಳಲ್ಲಿ ಕಡ್ಡಾಯವಾಗಿ ಬಳಕೆ ಮಾಡಬೇಕು. ಈ ಮೂಲಕ ಇಂಗ್ಲಿಷ್‌ ಮೇಲಿನ ಅವಲಂಬನೆ ಕೈಬಿಡಬೇಕು ಎಂದು ಶಿಫಾರಸು ಮಾಡಿತ್ತು.

ಸ್ಟಾಲಿನ್‌ ವಿರೋಧವೇನು?
ಉತ್ತರ ಭಾರತದ ರಾಜ್ಯಗಳಲ್ಲಿ ಹಿಂದಿ ಭಾಷೆಯನ್ನೇ ಕಡ್ಡಾಯ ಮಾಡುವುದರಿಂದ ಬೇರೆ ಭಾಷೆಯವರು ಅಲ್ಲಿಗೆ ಹೋಗಿ ಕೆಲಸ ಮಾಡಲು ಆಗುವುದಿಲ್ಲ. ಅಲ್ಲದೇ ಈ ಮೂಲಕ ಹಿಂದಿಯನ್ನು ಎಲ್ಲರ ಮೇಲೆ ಹೇರಿಕೆ ಮಾಡಲಾಗುತ್ತಿದೆ ಎಂಬುದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ವಿರೋಧ. ಅಲ್ಲದೆ ಎಲ್ಲ ಭಾಷೆಗಳಿಗೂ ಸಮಾನ ಮಾನ್ಯತೆ ನೀಡಬೇಕು ಎಂಬುದು ಸ್ಟಾಲಿನ್‌ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರ ವಾದ.

ಹಿಂದಿ ವಿರೋಧದ ಇತಿಹಾಸ
ತಮಿಳುನಾಡಿನ ಹಿಂದಿ ವಿರೋಧಿ ಆಂದೋಲನಕ್ಕೆ ಸುದೀರ್ಘ‌ ಇತಿಹಾಸವಿದೆ. 1937ರಲ್ಲಿ ಮದ್ರಾಸ್‌ ಪ್ರಸಿಡೆನ್ಸಿಯ ಮುಖ್ಯಸ್ಥರಾಗಿದ್ದ ಸಿ.ರಾಜಗೋಪಾಲಚಾರಿ ಅಥವಾ ರಾಜಾಜಿ ಅವರು ಪ್ರೌಢಶಾಲೆಗಳಲ್ಲಿ ಹಿಂದಿಯನ್ನು ಕಡ್ಡಾಯವಾಗಿ ಕಲಿಸಬೇಕು ನಿರ್ಧಾರ ಮಾಡಿದ್ದರು. ಆಗ ಪೆರಿಯಾರ್‌ ಎಂದೇ ಪ್ರಸಿದ್ಧರಾಗಿದ್ದ ಇ.ವಿ.ರಾಮಸ್ವಾಮಿ ಅವರು ಈ ನಿರ್ಧಾರಕ್ಕೆ ಬಲವಾಗಿ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಆದರೆ 1940ರಲ್ಲಿ ಬ್ರಿಟಿಷ್‌ ಆಳ್ವಿಕೆಯಲ್ಲಿ ಹಿಂದಿಯನ್ನು ಕಡ್ಡಾಯ ಮಾಡಲಾಗಿತ್ತು.

ನೆಹರೂ ಕಾಲದಲ್ಲೂ ವಿರೋಧ
ಸ್ವಾತಂತ್ರ್ಯ ಅನಂತರದಲ್ಲಿ ದೇಶದಲ್ಲಿ ಅಧಿಕೃತ ಭಾಷೆಯಾಗಿ ಯಾವುದನ್ನು ಬಳಕೆ ಮಾಡಬೇಕು ಎಂಬ ಬಗ್ಗೆ ಚರ್ಚೆ ಶುರುವಾಯಿತು. ಆಗ ಹಿಂದಿಯನ್ನೇ ಬಳಕೆ ಮಾಡಬಹುದು ಎಂಬ ತೀರ್ಮಾನವಾಗಿತ್ತು. ಆದರೆ ಮುಂದಿನ 15 ವರ್ಷಗಳ ಕಾಲ ಹಿಂದಿ ಜತೆಗೆ ಇಂಗ್ಲಿಷ್‌ ಬಳಕೆ ಮಾಡುವುದು, ಅನಂತರದಲ್ಲಿ ಇಂಗ್ಲಿಷ್‌ ಅನ್ನು ಕೈಬಿಡುವ ನಿರ್ಧಾರವಾಗಿತ್ತು. ಅದರಂತೆ 1965ರಲ್ಲಿ ಹಿಂದಿಯನ್ನು ಕಡ್ಡಾಯ ಮಾಡಲು ಹೊರಟಾಗ ಮತ್ತೆ ತಮಿಳುನಾಡಿನಲ್ಲಿ ದೊಡ್ಡ ಹೋರಾಟಗಳೇ ಆರಂಭವಾಗಿದ್ದವು. ವಿಶೇಷವೆಂದರೆ 1959ರಲ್ಲೇ ನೆಹರೂ ಅವರು, ಹಿಂದಿ ಭಾಷಿಕ ರಾಜ್ಯಗಳ ಹೊರತಾಗಿ ಬೇರೆಡೆ ಇಂಗ್ಲಿಷ್‌ ಅನ್ನೇ ಬಳಕೆ ಮಾಡಬಹುದು ಎಂಬ ಭರವಸೆ ನೀಡಿದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.