ಅಧಿವೇಶನ ಹತ್ತು ದಿನಗಳ ಜಾತ್ರೆಯಾಗಬಾರದು


Team Udayavani, Dec 25, 2021, 6:00 AM IST

ಅಧಿವೇಶನ ಹತ್ತು ದಿನಗಳ ಜಾತ್ರೆಯಾಗಬಾರದು

ಕೋವಿಡ್ ರೂಪಾಂತರಿ ಒಮಿಕ್ರಾನ್‌ ಆತಂಕದ ನಡುವೆಯೇ ಕುಂದಾ ನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಎರಡು ವಾರಗಳ ರಾಜ್ಯ ವಿಧಾನಮಂಡಲ ಅಧಿವೇಶನ ಮುಗಿದಿದೆ.

ಅಧಿವೇಶನದ ನಡುವೆಯೇ ಕನ್ನಡ ಬಾವುಟಕ್ಕೆ ಅವಮಾನ, ಸಂಗೊಳ್ಳಿ ರಾಯಣ್ಣ, ಶಿವಾಜಿ ಪ್ರತಿಮೆಗೆ ಹಾನಿ ಮಾಡಿದ ಪುಂಡಾಟಿಕೆ ಯಂತಹ ಘಟನೆಗಳು ನಡೆದಿದ್ದು ಬೇಸರದ ಸಂಗತಿಯಾದರೂ, ರಾಜ್ಯ ಸರಕಾರವು ಅಧಿವೇಶನದ ಮೂಲಕವೇ ಕಠಿನವಾದ ಸಂದೇಶ ರವಾನೆ ಮಾಡಿತು. ಮೂರೂ ರಾಜಕೀಯ ಪಕ್ಷಗಳದ್ದು ಈ ವಿಚಾರದಲ್ಲಿ ನಾಡಿನ ಪರ ಒಂದೇ ಧ್ವನಿಯಾಗಿತ್ತು.

ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯ ಆಶಯ ದೊಂದಿಗೆ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿ ಪ್ರತೀ ವರ್ಷ ಅಧಿವೇಶನ ನಡೆಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಇದುವರೆಗೂ ಹತ್ತು ಅಧಿವೇಶನ ನಡೆದಿದ್ದು ಕೆಲವೊಂದು ಸಂದರ್ಭ ಹೊರತು ಪಡಿಸಿದರೆ ಉಳಿದಂತೆ ಅರ್ಥಪೂರ್ಣ ಚರ್ಚೆ ನಡೆದಿದೆ. ಹತ್ತು ಅಧಿವೇಶನಗಳಲ್ಲಿ ಹಲವು ಮಹತ್ತರ ತೀರ್ಮಾನಗಳನ್ನೂ ಕೈಗೊಳ್ಳಲಾಗಿದೆ.

ಅಧಿವೇಶನ ಸಂದರ್ಭ ಹೊರತುಪಡಿಸಿ ಉಳಿದ ದಿನ ಸುವರ್ಣ ವಿಧಾನಸೌಧ ಖಾಲಿ ಖಾಲಿ, ಈ ಭಾಗಕ್ಕೆ ಸೇರಿದ ಇಲಾಖೆಗಳ ಕಚೇರಿ ಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು ಎಂಬ ಬೇಡಿಕೆ ಇದುವರೆಗೂ ಈಡೇರಿಲ್ಲ. ವರ್ಷಕ್ಕೊಮ್ಮೆ ಇಲ್ಲಿ ಸಾಂಕೇತಿಕವಾಗಿ ಅಧಿವೇಶನ ಶಾಸ್ತ್ರ ಮಾಡಿ ಮುಗಿಸುವುದು ಬೇಡ. ಅಧಿವೇಶನ ಹತ್ತು ದಿನಗಳ ಜಾತ್ರೆ ಆಗುವುದು ಬೇಡ ಎಂಬುದು ಬಹುತೇಕ ಜನಪ್ರತಿ ನಿಧಿಗಳ ಅನಿಸಿಕೆಯೂ ಹೌದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಕರ್ನಾಟಕ ಭಾಗದವರೇ ಆಗಿದ್ದಾರೆ. ಈಗಲಾ ದರೂ ಈ ಕುರಿತು ಕ್ರಮ ಕೈಗೊಳ್ಳಬೇಕು. ಸುವರ್ಣ ವಿಧಾನಸೌಧದಲ್ಲಿ ಸರಕಾರಿ ಸಭೆ, ಸಮಾರಂಭ, ಇಲಾಖಾ ಕಚೇರಿಗಳ ಕಾರ್ಯನಿರ್ವಹಣೆ ಮೂಲಕ ಸದಾ ಚಟುವಟಿಕೆ ನಡೆಯುವಂತೆ ನೋಡಿಕೊಂಡರೆ ಇಲ್ಲಿ ಕಟ್ಟಡ ನಿರ್ಮಾಣ ಮಾಡಿದ್ದಕ್ಕೂ ಸಾರ್ಥಕವಾಗಲಿದೆ.

ಇದನ್ನೂ ಓದಿ:ಕೃಷಿ ವಿವಿಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಶೇ.50 ಭರ್ತಿಗೆ ಕ್ರಮ: ಬಿ.ಸಿ.ಪಾಟೀಲ್‌

ಅಧಿವೇಶನದಲ್ಲಿ ಕೈಗೊಂಡ ತೀರ್ಮಾನ ಹಾಗೂ ನಿರ್ಣಯ, ಇಲ್ಲಿ ನೀಡಿದ ಭರವಸೆಗಳ ಈಡೇರಿಕೆಗೆ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡಬೇಕು.

ಜತೆಗೆ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಒಂದು ನೀಲನಕ್ಷೆ ರೂಪಿಸಬೇಕು ಎಂಬ ಬೇಡಿಕೆಯೂ ಇದ್ದು ಆ ಬಗ್ಗೆಯೂ ಸರಕಾರ ಗಮನಹರಿಸಬೇಕಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿ ವೃದ್ಧಿಗೆ ಬಜೆಟ್‌ನಲ್ಲಿ ನಿಗದಿಪಡಿಸಿರುವ ಅನುದಾನ ಆಯಾ ವರ್ಷ ಪೂರ್ಣ ಪ್ರಮಾಣದಲ್ಲಿ ವೆಚ್ಚ ಆಗುವಂತೆ ನಿಗಾ ವಹಿಸಬೇಕಾಗಿದೆ.
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ವಿಚಾರದಲ್ಲಿ ಅಲ್ಲಿನ ಜನಪ್ರತಿನಿಧಿಗಳ ಹೊಣೆಗಾರಿಕೆಯೂ ಹೆಚ್ಚಾಗಿದೆ.

ರಾಜ್ಯ ಸರಕಾರದ ಮೇಲೆ ಪಕ್ಷಾತೀತವಾಗಿ ಒತ್ತಡವನ್ನು ಹೇರಿ ಯೋಜನೆಗಳ ಅನುಷ್ಠಾನ ವಾಗುವಂತೆ ನೋಡಿಕೊಳ್ಳಬೇಕಾಗಿದೆ. ಅದರಲ್ಲೂ ಹಲವು ಶಾಸಕರ ಗೈರು ಹಾಜರಿ ಇಡೀ ಅಧಿವೇಶನದ ಅಗತ್ಯವನ್ನೇ ಅಣಕಿಸುವಂತಿತ್ತು. ಕಾಟಾಚಾರಕ್ಕೆ ಒಂದೆರಡು ದಿನಗಳ ಮಟ್ಟಿಗೆ ಕಲಾಪಕ್ಕೆ ಹಾಜರಾದವರೂ ಇದ್ದಾರೆ. ಶಾಸಕರು ಕಲಾಪವನ್ನು ಗಂಭೀರವಾಗಿ ಪರಿಗಣಿಸದೆ ಇದ್ದರೆ ಸರಕಾರದ ಎಲ್ಲ ಶ್ರಮಗಳೂ ವ್ಯರ್ಥವಾಗುತ್ತವೆೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.