ತಾಲೂಕಿನಲ್ಲಿ ಮಹಿಳಾ ಅಧಿಕಾರಿಗಳದ್ದೇ ಆಡಳಿತ
Team Udayavani, Mar 8, 2021, 4:28 PM IST
ಚಿಕ್ಕನಾಯಕನಹಳ್ಳಿ: ತಾಲೂಕಿನ ಪ್ರತಿ ಕ್ಷೇತ್ರದಲ್ಲಿಯೂ ಮಹಿಳೆಯರು ಸಮರ್ಥವಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದು. ಬಹುತೇಕ ಸರ್ಕಾರಿ ಇಲಾಖೆಗಳ ಉನ್ನತ ಸ್ಥಾನದಲ್ಲಿ, ತಾಪಂ, ಪುರಸಭೆ ಅಧ್ಯಕ್ಷರಾಗಿ ಆಡಳಿತ ಮಾಡುತ್ತಿರುವ ಮಹಿಳೆಯರು ಸಮರ್ಥ ಆಡಳಿತದ ಉದಾಹರಣೆಗೆ ಸಾಕ್ಷಿಯಾಗಿದ್ದಾರೆ.
ದೇಶವನ್ನೆ ಅಲ್ಲೋಲಕಲ್ಲೋಲ ಮಾಡಿದ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಇಡೀ ತಾಲೂ ಕಿ ನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಕೊರೊನಾವನ್ನು ತಡೆಗಟ್ಟಲು ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಿದ್ದು ಇದೇ ಮಹಿಳಾ ಅಧಿಕಾರಿಗಳು. ತಾಲೂಕಿನ ದಂಡಾಧಿಕಾರಿ, ಪೊಲೀಸ್ ವೃತ್ತ ನಿರೀಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇ ಶಕರು, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರು, ಬಿಸಿಎಂ ಸಹಾ ಯಕ ನಿರ್ದೇಶಕರು ಎಲ್ಲಾ ಮಹಿಳಾ ಅಧಿಕಾರಿಗಳೇ.
ತಹಶೀಲ್ದಾರ್ ತೇಜಸ್ವಿನಿ: ತೇಜಸ್ವಿನಿಯವರುಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಆಗಿ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು. ಕೊವೀಡ್ಸಂದರ್ಭದಲ್ಲಿ ಜನಸಮಾನ್ಯರು ಸಹ ಮೆಚ್ಚುವಂತೆಕೆಲಸ ನಿರ್ವಹಿಸಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ದೇವರಿಗೆ ಬಂದ ಕಾಣಿಕೆಯ ಸೀರೆಗಳನ್ನು ಬಡ ಮಹಿಳೆಯರಿಗೆ ಹಂಚಿದ್ದು ಹಾಗೂ ತನ್ನ ಸ್ನೇಹಿತರಿಂದ ಸಹಾಯ ಪಡೆದು ದಿನಸಿ ಸಾಮಗ್ರಿಗಳನ್ನು ನಿರ್ಗತಿಕರಿಗೆ ನೀಡುವ ಮೂಲಕ ಪ್ರಶಂಸೆಗೆ ಮಾತ್ರರಾಗಿದ್ದರು.
2ಪೊಲೀಸ್ ವೃತ್ತ ನಿರೀಕ್ಷಕರು ವೀಣಾ: ವೀಣಾ ಅವರು ಕಳೆದ ಒಂದು ವರ್ಷದಿಂದ ತಾಲೂಕಿನಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನೊಂದವರಿಗೆ ನೆರವು ನೀಡುವ ಕೆಲಸ ಮಾಡುತ್ತಿದ್ದಾರೆ. ಜನಸ್ನೇಹಿ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು. ಲಾಕ್ ಡೌನ್ ಸಂದರ್ಭದಲ್ಲಿ ಹಗಲು ರಾತ್ರಿ ಎನ್ನದೆ ತಾಲೂಕಿನಲ್ಲಿ ಯಾವುದೆ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವಲ್ಲಿ ಯಶಸ್ವಿ ಯಾಗಿದ್ದಾರೆ. ಪೊಲೀಸ್ ಸಿಬ್ಬಂದಿ ಜೊತೆ ಯೂ ಸಹ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಕ್ಷೇತ್ರ
ಶಿಕ್ಷಣಾಧಿಕಾರಿ ಕಾತ್ಯಾಹಿನಿ: ಕಾತ್ಯಾಹಿನಿ ಅವರು ಸುಮಾರು 2 ವರ್ಷಗಳಿಂದ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು , ಅತ್ಯಂತ ಸರಳ ವ್ಯಕ್ತಿತ್ವ ಹೊಂದಿರುವ ಅಧಿಕಾರಿಯಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಹಾಗೂ ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಗಾಗಿ ಶ್ರಮ ಹಾಕಿದ್ದಾರೆ.
ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ: ಮಂಜುಶ್ರೀ ತಾಲೂಕಿನಲ್ಲಿ 3 ವರ್ಷಗಳಿಂದ ಮೀನು ಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮೀನುಗಾರರಿಗೆ ಸರಕಾರದಿಂದ ಸಿಗುವ ಸೌಲಭ್ಯ ತಲುಪಿಸುವ ಕೆಲಸ ಮಾಡುತ್ತಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ರೇಣುಕಾದೇವಿ: ರೇಣುಕಾದೇವಿ ಯವರು ತಾಲೂಕಿನಲ್ಲಿ 2 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು. ಎಸ್.ಟಿ , ಎಸ್.ಸಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೇರವಾಗಿ ತಲುಪುವಂತ ಕೆಲಸ ನಿರ್ವಹಿಸುತ್ತಿದ್ದು , ಇವರ ವ್ಯಾಪ್ತಿಯಲ್ಲಿ ಬರುವ ಹಾಸ್ಟಲ್ಗಳ ನಿರ್ವಹನೆಯಲ್ಲಿ ಯಾವುದೇ ಲೋಪ ಬಾರದಂತೆ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸಿಗುವ ಸರ್ಕಾರದ ಸೌಲಭ್ಯವನ್ನು ತಲುಪಿಸುತ್ತಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಇಂದ್ರಮ್ಮ:
ಇಂದ್ರಮ್ಮ ನಿವೃತ್ತ ಪ್ರಾಂಶುಪಾಲರಾಗಿದ್ದು . ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ನಿರ್ಗತಿಕರ ಪರ ಧ್ವನಿ ಎತ್ತುವ ಇವರು , ನೂರಾರು ಹೋರಾಟ, ಕಾರ್ಯಾಗಾರ ನೀಡಿದ್ದು ಉತ್ತಮ ವಾಗ್ಮಿ ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ತಾಪಂ ಅಧ್ಯಕ್ಷರು ಜಯಮ್ಮ: ಜಯಮ್ಮ ತಾಲೂಕಿನ ಶೆಟ್ಟಿಕೆರೆ ನಿವಾಸಿಯಾಗಿದ್ದು ತಾಪಂ ಅಧ್ಯಕ್ಷರಾಗಿ ಜನ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಪುರಸಭೆ ಅಧ್ಯಕ್ಷರು ಪುಷ್ಪ; ಪುಷ್ಪರವರು ಪಟ್ಟಣದ ನಿವಾಸಿಯಾಗಿದ್ದು , ಪಟ್ಟಣದ ಪ್ರಥಮ ಪ್ರಜೆಯಾಗಿದ್ದಾರೆ. ಪುರಸಭೆಯ ಮಹಿಳಾ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದು. ಜನಪರ ಕೆಲಸಗಳನ್ನು ಮಾಡುವ ಉದ್ದೇಶ ಹೊಂದಿದ್ದಾರೆ.
ತಾಲೂಕು ಆಸ್ಪತ್ರೆಯ ಡಿ ಗ್ರೂಪ್ ಮಹಿಳಾ ನೌಕರರು, ಪುರಸಭೆಯಲ್ಲಿನ ಮಹಿಳಾ ಪೌರ ಕಾರ್ಮಿಕರು, ಮಹಿಳಾ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ.
– ಚೇತನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?
Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…
Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ
Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ
Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ