ಮಹಿಳಾ ದಿನಾಚರಣೆ ವಿಶೇಷ: ಅಮ್ಮ, ಮರು ಜನ್ಮದಲ್ಲಾದರೂ ನನಗೆ ನಿನ್ನ ಸ್ಥಾನವ ಕರುಣಿಸುವೆಯಾ ?
Team Udayavani, Mar 8, 2020, 10:59 AM IST
ತೊದಲು ನುಡಿವ ಕಂದನ ಬಾಯಿಂದ ಮೊದಲ ಬಾರಿಗೆ ಬಂದ ‘ಅಮ್ಮ’ ಎಂಬ ಪದಕ್ಕೆ ಹೆಣ್ಣಿನ ಬದುಕನ್ನೇ ಸಾರ್ಥಕಗೊಳಿಸುವ ಶಕ್ತಿಯಿದೆ! ಆಕೆಯ ಬಗ್ಗೆ ಬರೆಯುವುದಕ್ಕೆ ಹೋದರೆ ಪದಗಳು ಸಾಲದು ಎನಿಸುತ್ತದೆ. ಯಾವುದೇ ಪದಗಳಲ್ಲಿ ಅವಳನ್ನು ವರ್ಣಿಸುವುದಕ್ಕೆ ಹೋದರೂ, ಆಕೆಯ ಪಾತ್ರದೆದುರು ಆ ಪದವೇ ಸೋತುಬಿಡುತ್ತದೆ! ಒಂದು ಪದದಲ್ಲಿ, ಒಂದು ವಾಕ್ಯದಲ್ಲಿ, ಒಂದು ಕತೆಯಲ್ಲಿ, ಒಂದು ಹೊತ್ತಿಗೆಯಲ್ಲಿ ಹಿಡಿದಿಡಲು ಸಾಧ್ಯವಾಗದ ವ್ಯಕ್ತಿತ್ವ ಅಮ್ಮನದು.
ಅಮ್ಮ,
ನಾ ಹುಟ್ಟಿದ ಮೇಲಲ್ಲವೇ ನೀನು ನಿನಗಾಗಿ ಬದುಕುವುದನ್ನು ಮರೆತದ್ದು. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು, ಎಂತಹ ಅನುಬಂಧವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂಧವಿದು. ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲಾ ಎಲ್ಲರೊಡನೆ ವಿವರಿಸುತ್ತಿದ್ದೆ. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ. ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ, ನನ್ನ ಸಂತೋಷಕ್ಕೆಂದು ಅಪ್ಪನಿಂದ ಏನೆಲ್ಲಾ ಆಟದ ಸಾಮಾನುಗಳನ್ನು ತರಿಸಿ, ನನ್ನ ನಗುವ ನೀ ನೋಡುತ್ತಿದ್ದೆ.
ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ್ತಾ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸುತ್ತಿದ್ದೆ. ಚಂದಮಾಮನ ಕೊಡಿಸೋ ಆಸೆ ತೋರಿಸಿ, ನನ್ನ ಕಿಲ ಕಿಲ ನಗುವಲ್ಲಿ ಆ ನಗುವ ನಡುವಲ್ಲಿ, ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ. ನೀನು ನಿನಗೋಸ್ಕರ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ !. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗುವವಳು ನೀನು. ನಿನ್ನ ಋಣ ಹೇಗೆ ತೀರಿಸಲಿ ? ಮರು ಜನ್ಮದಲ್ಲಾದರೂ ನನಗೆ ನಿನ್ನ ಸ್ಥಾನವ ಕರುಣಿಸುವೆಯಾ ?
– ನಿನ್ನ ಪ್ರೀತಿಯ ಮಗಳು
ತಾಯಿ ಸಂತೋಷವಾಗಿದ್ದರೆ ಕುಟುಂಬ ಸಮೃದ್ಧವಾಗಿರುತ್ತದೆ. ಕುಟುಂಬ ಸಂತೋಷವಾಗಿದ್ದರೇ ದೇಶ ಅಭಿವೃದ್ಧಿಯಾಗುತ್ತದೆ. ಅಂದರೆ ಇಡೀ ದೇಶದ ಸಂತೋಷ ತಾಯಿಯ ಮೇಲೆ ನಿಂತಿದೆ ಎಂಬ ಭಾರತದ ಹೆಮ್ಮೆ, ರಾಷ್ಟ್ರಪತಿಯಾಗಿದ್ದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಮಾತಲ್ಲಿ ‘ತಾಯಿಗಿಂತ ದೊಡ್ಡದು ಇನ್ನೇನು ಇಲ್ಲ ಎಂಬ ಭಾವ ವ್ಯಕ್ತವಾಗಿದೆ. ಅಮ್ಮನನ್ನು, ಆಕೆ ಮಕ್ಕಳ ಮೇಲೆ ತೋರುವ ಪ್ರೀತಿಯನ್ನು, ಜೀವನದುದ್ದಕ್ಕೂ ಮಾಡಿದ ತ್ಯಾಗವನ್ನು, ಸಾಕು ಸಾಕೆನಿಸುವಷ್ಟು ಸುರಿಯುವ ವಾತ್ಸಲ್ಯವನ್ನು ಕೆಲವೇ ಪದಗಳಲ್ಲಿ ಹಿಡಿದಿಡುವುದು ಯಾರಿಂದಲೂ ಸಾಧ್ಯವಿಲ್ಲ. ಎಲ್ಲರಿಗೂ ಅವರ ತಾಯಿ ನಾಯಕಿಯೇ, ಆದರ್ಶವೇ. ಬದುಕಿನ ಪುಟಗಳೇ ಹಾಗೆ, ತಿರುವಿಹಾಕಿದಷ್ಟು ಮುಗಿಯದ ಹೊತ್ತಿಗೆ…. ಬಾಲ್ಯದ ಅಮ್ಮ ಕೊನೆವರೆಗೂ ಅಮ್ಮನೇ…
-ಸಾನಿಯಾ. ಅರ್
ಶಿವಮೊಗ್ಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ
ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…
Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ