ಇಂದು ವಿಶ್ವ  ಫಾರ್ಮಸಿಸ್ಟ್‌  ದಿನ: ವಿಶ್ವಾಸಾರ್ಹತೆ, ನಂಬಿಕೆಯ ಪ್ರತೀಕ ಫಾರ್ಮಸಿಸ್ಟ್‌


Team Udayavani, Sep 25, 2021, 6:20 AM IST

ಇಂದು ವಿಶ್ವ  ಫಾರ್ಮಸಿಸ್ಟ್‌  ದಿನ: ವಿಶ್ವಾಸಾರ್ಹತೆ, ನಂಬಿಕೆಯ ಪ್ರತೀಕ ಫಾರ್ಮಸಿಸ್ಟ್‌

ಫಾರ್ಮಸಿಸ್ಟ್‌ ಎಂದಾಕ್ಷಣ ನಾವು ಔಷಧ ಮಾರಾಟಗಾರರು ಎಂಬಲ್ಲಿಗೆ ಸೀಮಿತರಾಗಿಬಿಡುತ್ತೇವೆ. ಫಾರ್ಮಸಿ ಶೈಕ್ಷಣಿಕ ಅರ್ಹತೆಯನ್ನು ಪಡೆದು ಫಾರ್ಮಸಿಸ್ಟ್‌ ಎಂದು ನಾಮಾಂಕಿತಗೊಳ್ಳುವ ಇವರು ಔಷಧ ಸಂಶೋಧನೆ, ಉತ್ಪಾದನೆ, ಸಂಗ್ರಹಣೆ, ಔಷಧ ವಿತರಣೆ, ಮಾರಾಟ ಮತ್ತು ಬೋಧನೆ ಹೀಗೆ ವಿವಿಧ ಚಟುವಟಿಕೆ, ವೃತ್ತಿಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಇವರು ಜನರಿಗೆ ನೀಡುತ್ತಾ ಬಂದಿರುವ ವಿಶ್ವಾಸಾರ್ಹ  ಸೇವೆಯನ್ನು ಗೌರವಿಸುವ ಉದ್ದೇಶದಿಂದ ಪ್ರತೀ ವರ್ಷ ಸೆ.25ರಂದು ವಿಶ್ವ ಫಾರ್ಮಸಿಸ್ಟ್‌ ದಿನವನ್ನು ಆಚರಿಸಲಾಗುತ್ತದೆ. ಇವರ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಜತೆಯಲ್ಲಿ ಈ ವೃತ್ತಿಯ ಮಹತ್ವದ ಕುರಿತಂತೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ. ತಮ್ಮ ವಿಶಾಲ ಜ್ಞಾನ ಮತ್ತು ಅನನ್ಯ ಪರಿಣತಿಯಿಂದ ಮಾನವನ ಆರೋಗ್ಯ ರಕ್ಷಣೆಯಲ್ಲಿ ತಮ್ಮದೇ ಆದ ಪಾತ್ರ ನಿರ್ವಹಿಸುತ್ತಿರುವ ಫಾರ್ಮಸಿಸ್ಟ್‌ಗಳಿಗೆ ಈ ದಿನ ಅರ್ಪಣೆಯಾಗಿದೆ.

ವರ್ಷದ ಧ್ಯೇಯ:

ಪ್ರತೀ ವರ್ಷ ಒಂದು ಧ್ಯೇಯವನ್ನಿರಿಸಿಕೊಂಡು ಈ ದಿನ ವನ್ನು ಆಚರಿಸುತ್ತಾ ಬರಲಾಗಿದೆ. “ಫಾರ್ಮಸಿ:  ನಿಮ್ಮ ಆರೋಗ್ಯಕ್ಕಾಗಿ ಯಾವಾಗಲೂ ವಿಶ್ವಾಸಾರ್ಹ’- ಇದು ಈ ವರ್ಷದ ಧ್ಯೇಯವಾಗಿದೆ. ಮಾನವ ಸಂಬಂಧಗಳಲ್ಲಿ  “ವಿಶ್ವಾಸ’ ಎನ್ನುವುದು ಬಹುಮುಖ್ಯ. ಆರೋಗ್ಯ ರಕ್ಷಣೆಯಲ್ಲಿ ವಿಶ್ವಾಸ, ನಂಬಿಕೆ ಅತ್ಯಗತ್ಯ. ಯಾವುದೇ ರೋಗಿ ಚಿಕಿತ್ಸೆ, ಔಷಧದ ಬಗೆಗೆ ವಿಶ್ವಾಸಾರ್ಹತೆಯನ್ನು ಬೆಳೆಸಿ

ಕೊಂಡಲ್ಲಿ  ಆತ ಬಹು ಬೇಗ ಗುಣಮುಖನಾಗಲು ಸಾಧ್ಯ.ವಿಶ್ವಾಸ ಎನ್ನುವುದು ಕೇಚಲ ಚಿಕಿತ್ಸೆ ನೀಡುವ ವೈದ್ಯರಿಗೆ ಮಾತ್ರ ಸೀಮಿತವಾಗದೇ ರೋಗಿಯ ಚಿಕಿತ್ಸೆ ಪ್ರಕ್ರಿಯೆ ಯಲ್ಲಿ  ಭಾಗಿಧಾರರಾದ ಪ್ರತಿ ಯೊಬ್ಬರ ಮೇಲೆ ಆತನಿಗೆ ವಿಶ್ವಾಸ ಇರಬೇಕು. ನಾವು ವೃತ್ತಿಪರರಲ್ಲಿ ಹೆಚ್ಚಿನ ನಂಬಿಕೆ ಇಟ್ಟಾಗ  ಆರೋಗ್ಯ ಸುಧಾರಣೆ ಸಾಧ್ಯ. ಇದೇ ಈ ವರ್ಷದ ವಿಶ್ವ ಫಾರ್ಮಸಿಸ್ಟ್‌ ದಿನದ ಧ್ಯೇಯದ ಮೂಲ ಉದ್ದೇಶವಾಗಿದೆ.

ದಿನವೇ ಯಾಕೆ?  :

2009ರಲ್ಲಿ ಇಸ್ತಾಂಬುಲ್‌ನಲ್ಲಿ ನಡೆದ ಇಂಟರ್‌ನ್ಯಾಶನಲ್‌ ಫಾರ್ಮಸ್ಯುಟಿಕಲ್‌ ಫೆಡರೇಶನ್‌ ಕೌನ್ಸಿಲ್‌ನಲ್ಲಿ ಟರ್ಕಿಶ್‌ ಸದಸ್ಯರ ಸಲಹೆಯಂತೆ ಪ್ರತೀ ವರ್ಷ ಸೆ. 25ರಂದು ವಿಶ್ವ ಫಾರ್ಮಸಿ ದಿನವನ್ನು ಆಚರಿಸುವ ನಿರ್ಧಾರ ಕೈಗೊಳ್ಳಲಾಯಿತು. ಅದರಂತೆ ಕಳೆದ 12 ವರ್ಷ ಗಳಿಂದ ಈ ದಿನವನ್ನು ಜಗತ್ತಿನಾದ್ಯಂತ ಆಚರಿಸುತ್ತಾ ಬರಲಾಗಿದೆ. 1912ರ ಸೆ. 25ರಂದು ಅಂತಾರಾಷ್ಟ್ರೀಯ ಫಾರ್ಮಸ್ಯುಟಿಕಲ್‌ ಫೆಡರೇಶನ್‌ ಸ್ಥಾಪನೆಯಾಗಿತ್ತು. ಇದೊಂದು ಜಾಗತಿಕ ಸಂಸ್ಥೆಯಾಗಿದ್ದು ಔಷಧಾಲಯ, ಔಷಧಕ್ಕೆ ಸಂಬಂಧಪಟ್ಟ ಶಿಕ್ಷಣ, ಔಷಧ ವಿಜ್ಞಾನ ಹೀಗೆ ಅನೇಕ ವಿಷಯಗಳನ್ನು ಪ್ರತಿನಿಧಿಸುತ್ತದೆ. 144 ರಾಷ್ಟ್ರೀಯ ಸಂಸ್ಥೆಗಳ ಮೂಲಕ ಪ್ರಪಂಚದಾದ್ಯಂತ ಲಕ್ಷಾಂತರ ಫಾರ್ಮಸಿಗಳನ್ನು ಪ್ರತಿನಿಧಿಸುತ್ತಿದೆ. ಇದು ಸರಕಾರೇತರ ಸಂಸ್ಥೆಯಾಗಿದ್ದು, ನೆದರ್‌ಲ್ಯಾಂಡ್‌ನ‌ಲ್ಲಿ ತನ್ನ ಮುಖ್ಯ ಕಚೇರಿಯನ್ನು ಹೊಂದಿದೆ.

ನೈಜ ಕೊರೊನಾ ವಾರಿಯರ್  :

ಕಳೆದ ಎರಡು ವರ್ಷಗಳಿಂದ ವಿಶ್ವವನ್ನು ಎಡೆಬಿಡದೇ ಕಾಡಿದ ಕೊರೊನಾ ಸಾಂಕ್ರಾಮಿಕದ ವೇಳೆ ಫಾರ್ಮಸಿಸ್ಟ್‌ಗಳು ನೀಡಿದ ಸೇವೆಗೆ ನೈಜ ಗೌರವ ಸಂದಿಲ್ಲ. ಸಾಂಕ್ರಾಮಿಕ ಜನಜೀವನವನ್ನೇ ಸ್ಥಗಿತಗೊಳಿಸಿದರೂ ಫಾರ್ಮಾಸಿಸ್ಟ್‌ಗಳು ತಮ್ಮ ಕಾಯಕವನ್ನು ನಿರಂತರವಾಗಿ ಮುಂದುವರಿಸಿಕೊಂಡು ಬಂದಿದ್ದಾರೆ. ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊರೊನಾ ಇನ್ನಿಲ್ಲದಂತೆ ಜನರನ್ನು ಕಾಡಿದಾಗಲೂ ಫಾರ್ಮಸಿಸ್ಟ್‌ಗಳು ಜನತೆಗೆ ನೀಡಿದ ಸೇವೆ ಅತ್ಯಮೂಲ್ಯವಾದುದು. ತಮ್ಮ ಪ್ರಾಣವನ್ನೂ ಲೆಕ್ಕಿಸದೇ ನಿಜಾರ್ಥದಲ್ಲಿ “ಜೀವರಕ್ಷಕ’ರಾಗಿ ದುಡಿದ ಇವರಿಗೆ ಕೃತಜ್ಞತೆ ಸಲ್ಲಿಸಲೇಬೇಕು.

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.