ಲಾಕ್‌ಡೌನ್‌ನಲ್ಲಿ ಅರಳಿದ ಡಾರ್ಬಿ ಯುಕೆ ಕನ್ನಡ ಪ್ರತಿಭೆಗಳು


Team Udayavani, Apr 14, 2021, 1:07 PM IST

ಲಾಕ್‌ಡೌನ್‌ನಲ್ಲಿ ಅರಳಿದ ಡಾರ್ಬಿ ಯುಕೆ ಕನ್ನಡ ಪ್ರತಿಭೆಗಳು

ಕೋವಿಡ್ ಮಹಾಮಾರಿಯು ಮನುಕುಲವನ್ನು ಆವರಿಸಿಕೊಂಡು ಒಂದು ವರ್ಷ ಕಳೆದಿದೆ. ಈ ಅವಧಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡು ದೈನಂದಿನ ಬದುಕಿನ ಮೇಲೆ ಬಹಳಷ್ಟು ಬದಲಾವಣೆಗಳನ್ನು ಹೇರಿ ಮನುಕುಲವನ್ನು ಕಟ್ಟಿಹಾಕಿದೆ. ಇತ್ತೀಚಿಗೆ ಲಸಿಕೆಗಳು ಹೊರಬಂದಿವೆ ಎನ್ನುವುದು ಸಮಾಧಾನಕರ ಸಂಗತಿಯಾದರೂ ಆತಂಕ ಇನ್ನೂ ದೂರವಾಗಿಲ್ಲ.

ಯು.ಕೆ.ಯಲ್ಲಿ ನೆಲೆಸಿರುವ ಕನ್ನಡಿಗರ ಮಟ್ಟಿಗೆ ಹೇಳುವುದಾದರೆ ಈ ಕೋವಿಡ್ ಸಂಕಷ್ಟದ ನಡುವೆ, ಸರಕಾರದ ಲಾಕ್‌ಡೌನ್‌, ಟಿಯರ್‌ ವ್ಯವಸ್ಥೆಯ ನಿಬಂಧನೆಗಳಿಂದಾಗಿ ಎಲ್ಲರಂತೆ ಕಷ್ಟಗಳನ್ನು ಎದುರಿಸಬೇಕಾಯಿತು.

ಕಳೆದ ವರ್ಷದಲ್ಲಿ  ಅನೇಕ ಹಬ್ಬಗಳು, ಸಾಮಾಜಿಕ ಸಮಾರಂಭಗಳು, ಸಮುದಾಯ ಕಾರ್ಯಕ್ರಮಗಳು, ಸಾಂಸ್ಕೃತಿಕ ಮೇಳಗಳು.. ಹೀಗೆ ಎಲ್ಲವನ್ನೂ ತಡೆಹಿಡಿದು ಮನೆಯ ನಾಲ್ಕು ಗೋಡೆಗಳ ಮಧ್ಯೆ ಪಂಜರದ ಗಿಳಿಗಳಂತೆ ಬಂಧಿಗಳಾಗಿ ಹೊರ ಜಗತ್ತಿನ ವ್ಯವಹಾರ ಗಣನೀಯವಾಗಿ ಕಡಿಮೆಯಾಗಿದ್ದು ಎಲ್ಲರಿಗೂ ತಿಳಿದಿರುವ ವಿಷಯ. ಈ ನಡುವೆ ಮಕ್ಕಳ ಮೇಲೆ ಆಗಿರುವ ಮಾನಸಿಕ ಪರಿಣಾಮಗಳನ್ನು ನಾವು ಕಡೆಗಣಿಸುವ ಹಾಗಿಲ್ಲ.

ಈ ಎಲ್ಲ ನಕಾರಾತ್ಮಕ ಬೆಳವಣಿಗೆಗಳ ಮಧ್ಯೆಯೂ ಸಕಾರಾತ್ಮಕ ಚಿಂತನೆಯನ್ನು ಮಾಡುವುದು ಮತ್ತು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗುವುದು ಪ್ರಶಂಸನೀಯ ವಿಷಯ.

ಇದಕ್ಕೆ ಹಿಡಿದ ಕನ್ನಡಿಯಂತೆ ಯುಕೆಯ ಡಾರ್ಬಿ ಕನ್ನಡಿಗರು ಮತ್ತು “ಎಚ್‌ಎನ್‌ಬಿಸಿ ಕನ್ನಡ’ ಅಂತರ್ಜಾಲ ವಾಹಿನಿಯ ಸಹಯೋಗದೊಂದಿಗೆ 2021ರಲ್ಲಿ ಮೂಡಿ ಬಂದ “ಚಿಣ್ಣರ ಅರಳು ಪ್ರತಿಭೆ’ ಕಾರ್ಯಕ್ರಮ ಬಹಳಷ್ಟು ಜನರ ಪ್ರೀತಿಗೆ ಪಾತ್ರವಾಗಿ ಯಶಸ್ವಿಯಾಯಿತು.

ಎಲ್ಲ  ಮಕ್ಕಳಲ್ಲೂ ಒಂದಲ್ಲ  ಒಂದು ಪ್ರತಿಭೆ ಸುಪ್ತವಾಗಿ ಅಡಗಿರುತ್ತದೆ. ಅದನ್ನು ಗುರುತಿಸಿ, ಪ್ರೋತ್ಸಾಹಿಸಿ ಬೆಳೆಸಬೇಕಾದದ್ದು ಪೋಷಕರ ಮತ್ತು ಸಮುದಾಯದ ಕರ್ತವ್ಯವಾಗಿರುತ್ತದೆ.

ಪರಿಸ್ಥಿತಿ ಏನೇ ಇರಲಿ, ಲಾಕ್‌ಡೌನ್‌ ಅಂತಹ ಸಂದರ್ಭಗಳೇ ಎದುರಾದರೂ ಬೆಳೆಯುವ ಮಕ್ಕಳಿಗೆ ಅವರ ಪ್ರತಿಭೆಗಳನ್ನು ಅರಳಿಸಲು, ಜನರ ಮುಂದೆ ಅನಾವರಣಗೊಳಿಸಲು ತಮ್ಮ ಮನೆಯಲ್ಲೇ ಒಂದು ಪುಟ್ಟ ವೇದಿಕೆಯನ್ನು ಕೊಟ್ಟು ಅವರ ಪಠ್ಯೇತರ ಚಟುವಟಿಕೆಗಳನ್ನು ಬೆಳೆಸಬೇಕಾದದ್ದು ಎಲ್ಲ ತಂದೆ ತಾಯಿಯರ ಜವಾಬ್ದಾರಿ.

ಇದಕ್ಕೊಂದು ನಿದರ್ಶನ ವೆಂಬಂತೆ “ಚಿಣ್ಣರ ಅರಳು ಪ್ರತಿಭೆ’ ಕಾರ್ಯಕ್ರಮ ಮೂಡಿಬಂದು ಬಹಳಷ್ಟು ವೀಕ್ಷಕರ ಗಮನ ಸೆಳೆಯಿತು. ಈ ಕಾರ್ಯಕ್ರಮದಲ್ಲಿ ಮೂರು ವರ್ಷಗಳಿಂದ ಹನ್ನೆರಡು ವರ್ಷಗಳ ಮಕ್ಕಳು ಭಾಗವಹಿಸಿ ಗಾಯನ, ನೃತ್ಯ, ಅಭಿನಯ, ವಾದ್ಯ ವಾದನ ಹೀಗೆ ಅನೇಕ ಕಲೆಗಳನ್ನು ಪ್ರದರ್ಶಿಸಿ ವೀಕ್ಷಕರ ಪ್ರಶಂಸೆಗೆ ಪಾತ್ರರಾದರು.

ನಮ್ಮ ಭಾರತೀಯ ಸಂಸ್ಕೃತಿಯ ಭರತನಾಟ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಜನಪದ ಹೀಗೆ ಅನೇಕ ಕಾರ್ಯಕ್ರಮಗಳ ಮೂಲಕ ವೇದಿಕೆ ಕಂಗೊಳಿಸಿತ್ತು. ಈ ಪುಟ್ಟ ಮಕ್ಕಳ ಅಜ್ಜ ಅಜ್ಜಿಯಂದಿರು ಹಾಗೂ ಸಂಬಂಧಿಕರು ದೂರದ ಭಾರತದಿಂದಲೇ ನೋಡಿ ಅನಂದಿಸಿ ಆಶ್ಚರ್ಯ ಚಕಿತರಾಗಿದ್ದೂ ಹೌದು.

ಈ ಕಾರ್ಯಕ್ರಮದ ವಿಶೇಷವೆಂಬಂತೆ ಮಕ್ಕಳು ಸಂಸ್ಕೃತ ದ ಶ್ಲೋಕಗಳನ್ನು ಪಠಣ ಮಾಡಿ ಅದರ ಅರ್ಥಗಳನ್ನು ವಿವರಿಸಿದ್ದು ಬಹಳಷ್ಟು ಪ್ರಶಂಸೆಗೆ ಒಳಗಾಗಿತ್ತು.

ಒಟ್ಟಿನಲ್ಲಿ ಈ ಕಾರ್ಯಕ್ರಮ ವೀಕ್ಷಕರಿಗೆ ಮನರಂಜನೆಯನ್ನು ನೀಡಿದ್ದಲ್ಲದೇ ಮಕ್ಕಳ ಪ್ರತಿಭೆಯನ್ನು ಅರಳಿಸಲು ಪೋಷಕರಿಗೆ ಪ್ರೇರಣೆಯನ್ನು ನೀಡಿ ಗಮನಸೆಳೆಯಿತು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.