ಯುವ ಯೋಗ


Team Udayavani, Jun 23, 2019, 5:00 AM IST

38

ಯೋಗ ಜೀವನ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಆರಂಭವಾದ ತಿಂಗಳ ಅಂಕಣ. ಇದರಲ್ಲಿ ನಿತ್ಯವೂ ಯೋಗಾಭ್ಯಾಸ ಕುರಿತ ಪ್ರಶ್ನೆಗಳಿಗೆ ಪರಿಣತರು ಉತ್ತರಿಸುತ್ತಾರೆ. ಪ್ರತಿ ರವಿವಾರ (ನಾಲ್ಕು) ಯೋಗದ ಸಾಧ್ಯತೆಯನ್ನು ವಿಭಿನ್ನ ನೆಲೆಗಳಲ್ಲಿ
ಕಾಣುವ ಪ್ರಯತ್ನ. ಈ ಬಾರಿ ಯುವ ಜನರಿಗೆ ಹೆಚ್ಚು ಸಂಬಂಧಿಸಿದ್ದು.

ವಿದ್ಯಾರ್ಥಿಗಳಿಗೆ ಹಲವು ದಿಶೆಯಲ್ಲಿ ಯೋಗ ಅನುಕೂಲವನ್ನು ತಂದುಕೊಡಬಲ್ಲದು. ಅವರು ಮಾನಸಿಕವಾಗಿ ಬಳಲದಂತೆ, ಒತ್ತಡ ಹಾಗೂ ಉದ್ವೇಗಕ್ಕೆ ಒಳಗಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಾಲಕರು ಹಾಗೂ ಶಿಕ್ಷಕರ ನೆರವಿಗೆ ಬರುವುದು ಯೋಗ.

ವಿದ್ಯಾರ್ಥಿಗಳಿಗೆ ಯೋಗ

ಯಾಕೆ?
1 ಯೋಗವು ನಮ್ಮೊಳಗನ್ನು ಅರಿಯಲು ಸಹಾಯ ಮಾಡುತ್ತದೆ. ಇದರಿಂದ ಮನಸ್ಸು ಮತ್ತು ದೇಹ ಆರೋಗ್ಯಪೂರ್ಣವಾಗಬಲ್ಲದು. ಪ್ರಾಣಾಯಾಮದಂಥ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಒತ್ತಡ ಬಾಧಿಸಲಾರದು.

ಹೇಗೆ?
2ಏಕಾಗ್ರತೆ ಹೆಚ್ಚಿಸುವಲ್ಲಿ ಸಹಕಾರಿ. ಪ್ರಮುಖವಾಗಿ ಗೊಂದಲ ಗೂಡಾಗಿರುವ ಮನಸ್ಸನ್ನು ತಿಳಿಗೊಳಿಸಿ, ಗುರಿಯನ್ನು ಸ್ಪಷ್ಟಗೊಳಿಸಬಲ್ಲದು.

3ಅಂತರ್ಮುಖೀಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಕಲಿಸುತ್ತದೆ.

4ಕೀಳರಿಮೆ ತ್ಯಜಿಸಿ ಸ್ವ ಸಾಮರ್ಥ್ಯ ವೃದ್ಧಿಸಿಕೊಳ್ಳಲು ಇದಕ್ಕಿಂತ ಸುಲಭವಾದ ಮಾರ್ಗ ಬೇರೊಂದಿಲ್ಲ.

ಬಹುತೇಕ ಸಂದರ್ಭ ವಿದ್ಯಾರ್ಥಿಗಳು ಅಂತರ್ಮುಖೀಗಳು. ಯಾರೊಂದಿಗೂ ಮಾತನಾಡಲಾರರು, ಬೆರೆಯಲಾರರು. ಇಂತಹ ಸಂದರ್ಭವನ್ನು ನಾವು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷ್ಯಿಸುವ ಸಂಭವವಿರುತ್ತದೆ. ಆದರೆ ಮಕ್ಕಳು ಹೆಚ್ಚು ಸಮಾಜಮುಖೀಯಾಗಲು ಯೋಗ ಸಹಾಯ ಮಾಡಬಲ್ಲದು. ನಮ್ಮ ದೇಹ ಮತ್ತು ಮನಸ್ಸಿನ ಮೇಲೆ ಹಿಡಿತ ಸಾಧಿಸಲು ನೆರವಾಗುವುದೇ ಯೋಗ. ನಮ್ಮನ್ನು ಆಧ್ಯಾತ್ಮಿಕ ನೆಲೆಯಲ್ಲಿ ರೂಪಿಸುವಂಥದ್ದು. ಇದೊಂದು ರೀತಿಯಲ್ಲಿ ಸಾವಯವ ಮಾರ್ಗ. ಮಕ್ಕಳ ಕಲಿಕಾ ಸಾಮರ್ಥ್ಯವನ್ನು ವೃದ್ಧಿಸುವಲ್ಲಿ ಯೋಗದ ಪಾತ್ರ ಅನುಪಮ. ಕೇವಲ ಬದುಕಿಗೆ ಒಂದು ಶಿಸ್ತನ್ನಷ್ಟನ್ನೇ ಕಲಿಸುವುದಿಲ್ಲ ; ಬದಲಾಗಿ ನೆಮ್ಮದಿಯಿಂದ ಬದುಕುವುದನ್ನೂ ಕಲಿಸುತ್ತದೆ.

ಏನು?
ಉಸಿರಾಟದ ವ್ಯಾಯಾಮ
ಆರೋಗ್ಯಕಾರಿ ಹಾರ್ಮೋನುಗಳನ್ನು ಬಿಡುಗಡೆ ಮಾಡಲು ನೆರವಾಗಿ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ಉಸಿರಾಟ ಪ್ರಕ್ರಿಯೆಯು ಶ್ವಾಸಕೋಸದ ಆರೋಗ್ಯಕ್ಕೆ ನೆರವಾಗುತ್ತದೆ.

ಸಮತೋಲನ
ಸಮತೋಲನ ಕಾಯ್ದುಕೊಳ್ಳುವ ಭಂಗಿಗಳು ಮನಸ್ಸನ್ನು ಶಾಂತ, ಆರೋಗ್ಯವಾಗಿ ಕಾಪಾಡಿಕೊಳ್ಳುವಲ್ಲಿ ನೆರವಾಗುತ್ತವೆ. ಇದು ಶಕ್ತಿಯನ್ನು ಹೆಚ್ಚಿಸಬಲ್ಲದು.

ಸ್ಟ್ರೆಚ್ಚಿಂಗ್‌
ಇದು ನಮ್ಮ ಮಾಂಸಖಂಡಗಳನ್ನು ಬಲಿಷ್ಟಗೊಳಿಸಿ ದೈಹಿಕ ಸಾಮರ್ಥ್ಯದೊಂದಿಗೆ ಮಾನಸಿಕ ಆರೋಗ್ಯ ವನ್ನೂ ಹೆಚ್ಚಿಸಬಹುದು.

ಧ್ಯಾನವಿರಲಿ ಜತೆಯಲಿ…
ಏಕಾಗ್ರತೆ
ಏಕಾಗ್ರತೆ ಬದುಕಿಗೆ ಅವಶ್ಯ. ಅದರಲ್ಲೂ ವಿದ್ಯಾರ್ಥಿಗಳಿಗಂತೂ ತೀರಾ ಅವಶ್ಯ. ಉಸಿರಾಟವನ್ನು ನಿಧಾನಗೊಳಿಸುತ್ತಾ, ಧ್ಯಾನ ಮಾಡುವ ಮೂಲಕ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಬಹುದು. ವಿದ್ಯಾರ್ಥಿಗಳಲ್ಲಿ Attention deficit hyperactivity disorder (ADHD) ಎಂಬುದು ಇರುತ್ತದೆ. ಪ್ರತಿದಿನ ಧ್ಯಾನದಲ್ಲಿ ತೊಡಗಿಕೊಂಡರೆ ಈ ಸಮಸ್ಯೆ ಕಾಡದು.

ಪರೀಕ್ಷೆ ಭಯಕ್ಕೆ ಗುಡ್‌ ಬೈ
ಸರಿಯಾದ ಓದು ಸಾಧ್ಯವಾಗದಿದ್ದಾಗ ಪರೀಕ್ಷೆಯ ಭಯ ನಮ್ಮನ್ನು ಆವರಿಸುತ್ತದೆ. ಓದಿನ ಕುರಿತ ನಿರಾಸಕ್ತಿಗೆ ಏಕಾಗ್ರತೆ ಕೊರತೆ ಪ್ರಮುಖ ಕಾರಣ. ಜತೆಗೆ ಕೆಲವು ಮಾನಸಿಕ ದೌರ್ಬಲ್ಯಗಳು ಓದಿನೆ‌ಡೆಗಿನ ಆಸಕ್ತಿಯನ್ನು ವಿಮುಖಗೊಳಿಸುತ್ತದೆ. ಇಂಥ ಸಂದರ್ಭದಲ್ಲಿ ಆಸಕ್ತಿಯನ್ನು ಮರು ಸಿದ್ಧಿಸಿಕೊಳ್ಳಲು ಬೆಳಗ್ಗೆ ಓದಲು ಕುಳಿತುಕೊಳ್ಳುವ ಮೊದಲು ಸೂಕ್ತ ಯೋಗ ಆಭ್ಯಾಸವನ್ನು ಮಾಡುವುದು ಸೂಕ್ತ.

ಶಿಖರವೇರುವ ಸಾಮರ್ಥ್ಯ
ತರಗತಿ, ಕ್ರೀಡೆ, ಫೆಸ್ಟ್‌ಗಳು, ಸಂಭ್ರಮಾಚರಣೆಗಳು, ಪರೀಕ್ಷೆ ಮೊದಲಾದವು ವಿದ್ಯಾರ್ಥಿ ಜೀವನದಲ್ಲಿ ಸಹಜ. ಇದರಿಂದ ಮನಸ್ಸು ತರಗತಿಗೆ ಬಂದಾಗ ಚಂಚಲಿತವಾಗಿರುತ್ತದೆ. ಇದನ್ನು ನಿಯಂತ್ರಿಸಲು ಯೋಗ ಮತ್ತು ಧ್ಯಾನ ಸಹಕಾರಿ. ಪ್ರಶಾಂತ ಸ್ಥಳದಲ್ಲಿ ಧ್ಯಾನಸ್ಥರಾದರೆ ನವ ಚೈತನ್ಯ ಬರುತ್ತದೆ. ಇದೇ ಶಿಖರವೇರುವ ಸಾಮರ್ಥ್ಯ ತುಂಬುವಂಥದ್ದು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.