ಶೈಲಿ ಯಾವುದೇ ಆದರೂ ಯಕ್ಷಗಾನವಾಗಿಯೇ ಇರಲಿ:99 ರ ಗೋಪಾಲ ರಾಯರು


Team Udayavani, Aug 19, 2018, 4:44 PM IST

2bvbvb.jpg

(ಕಳೆದ ಸಂಚಿಕೆಯಿಂದ ಮುಂದುವರಿದಿದೆ) ಯಕ್ಷಗಾನ ಜಾನಪದ ಕಲೆ ಎಂದು ಪರಿಗಣಿಸಲ್ಪಟ್ಟಿದೆ ಆದರೂ ಅದರಲ್ಲಿ ಖಚಿತತೆ ಇದೆ.ತಾಳಗಳ ಲೆಕ್ಕಾಚಾರವಿದೆ.  ಹಾಗಾಗಿ ಅದನ್ನು ಶಾಸ್ತ್ರೀಯ ಕಲೆ ಎನ್ನಲೂ ಬಹುದು. ತಾಳ, ಲಯ , ಶ್ರುತಿ , ವೇಷ ಭೂಷಣದಲ್ಲಿ ತನ್ನದೇ ಆದ ಚೌಕಟ್ಟು ಇದೆ. ಯಕ್ಷಗಾನದಲ್ಲಿ  ತಿಟ್ಟುಗಳು ಬೇರೆ ಬೇರೆ ಇವೆ. ಹಲವು ಕಲಾವಿದರು ತಮ್ಮ ಪ್ರಭಾವ ಬೀರಿ ಚೌಕಟ್ಟಿನಲ್ಲಿಯೇ  ಹೊಸ ಶೈಲಿಯನ್ನು ಜನಪ್ರಿಯಗೊಳಿಸಿದ್ದಾರೆ. ಶುದ್ಧ ಯಕ್ಷಗಾನದಲ್ಲಿ ಬೇರೆ ಕಲೆಗಳ ಮಿಶ್ರಣ ಮಾಡಿ ಹೊಸ ಶೈಲಿ ಹುಟ್ಟು ಹಾಕುವುದು ಸರಿಯಲ್ಲ ಎಂದರು. 

ನೋಡಿ ಕುಂಜಾಲು ಶೈಲಿ, ಉಪ್ಪೂರರ ಶೈಲಿ ಬೇರೆ ಬೇರೆ ಆದರೂ ಅದರೆಡರಲ್ಲೂ ಹಿಂದೆ ಯಕ್ಷಗಾನ ಭಾಗವತಿಕೆಯ ಶುದ್ಧ ವಾತಾವರಣವಿತ್ತು. ಒಬ್ಬ ಕಲಾವಿದನಿಗಿಂತ ಇನ್ನೋಬ್ಬ ಕಲಾವಿದ ಭಿನ್ನವಾಗಿರುತ್ತಾರೆ ಯಾವುದೇ ರೀತಿಯ ಪ್ರಸ್ತುತಿ ಇದ್ದರೂ ಅದು ಸಂದರ್ಭಕ್ಕನುಗುಣವಾಗಿರುಬೇಕು ಎಂದರು.

ಸಂದರ್ಭಕ್ಕನುಗುಣವಲ್ಲದ ನಾಟ್ಯ,ಗಾಯನ,ಅಭಿನಯ ಪ್ರೇಕ್ಷಕರಿಗೆ ರಸಭಂಗವಾಗುತ್ತದೆ. ಈಗ ಅತೀ ಎನಿಸುವಂತ ಬದಲಾವಣೆಗಳು ಆಗಿ ಪ್ರೇಕ್ಷಕರು ರಸಭಂಗಕ್ಕೀಡಾಗುತ್ತಿದ್ದಾರೆ. ದುರಂತವೆಂದರೆ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಕಲೆಯನ್ನು ಬದಲಾಯಿಸಬೇಕಾಗಿದೆಯಲ್ಲ ಎಂದರು..!

ಹಲವು ಹಾಡುಗಳನ್ನು ಹಾಡಿ ತೋರಿಸಿದ ರಾಯರು…ಕೃಷ್ಣಾರ್ಜುನ ಕಾಳಗ, ಕರ್ಣಾರ್ಜುನ ಕಾಳಗ , ಪ್ರಮೀಳಾರ್ಜುನ ಪ್ರಸಂಗದ ಅಪರೂಪದ ಹಾಡುಗಳನ್ನು ನಮ್ಮೆದುರು ಹಾಡಿ ಇದಕ್ಕೆ ಅತೀಯಾಗಿ ನಾಟ್ಯ ಮಾಡಿದರೆ ಸರಿಯೇ? ನಿಮಗೇನಿಸುತ್ತದೆ ಎಂದು ಪ್ರಶ್ನಿಸಿದರು. 

ಲೋಕೋ ಭಿನ್ನ ರುಚಿ ಎಂಬಂತೆ ಪ್ರೇಕ್ಷಕರು ಭಿನ್ನ ಭಿನ್ನ ಅಭಿರುಚಿ ಹೊಂದಿರುತ್ತಾರೆ.ಕೆಲವರಿಗೆ ಅರ್ಥಗಾರಿಕೆ ಬೇಕಾಗುತ್ತದೆ, ಇನ್ನು ಕೆಲವರಿಗೆ ನಾಟ್ಯವೇ ಇಷ್ಟವಾಗುತ್ತದೆ. ಸ್ತ್ರೀ ವೇಷದ ಅಭಿಮಾನಿಗಳು ಇರುತ್ತಾರೆ ಹೀಗಾಗಿ ಒಂದು ಪ್ರದರ್ಶನ ಎಲ್ಲರಿಗೂ ಖುಷಿ ನೀಡಿದೆ ಎಂದು ಹೇಳಲಾಗುವುದಿಲ್ಲ ಎಂದರು. 

ಕೆಲ ಪ್ರಸಂಗಗಳಲ್ಲಿ ಹಾಸ್ಯಕ್ಕೆ ಹೆಚ್ಚು ಅವಕಾಶಗಳಿರುವುದಿಲ್ಲ. ಅಂತಹ ಪ್ರಸಂಗಗಳು ಕಲಾವಿದರಿಗೆ ಸವಾಲಾಗಿರುತ್ತದೆ ಆದರೂ ಪ್ರೇಕ್ಷಕರಿಗೆ ಮೆಚ್ಚುಗೆಯಾಗುವುದಿಲ್ಲ, ಏನು ಮಾಡಲಿಕ್ಕೆ ಆಗುತ್ತದೆ ಎಂದು ಪ್ರಶ್ನಿಸಿದರು. 

ಯಕ್ಷಗಾನ ಯಾವಾಗಲು ಏಕವ್ಯಕ್ತಿಯಿಂದ ಯಶಸ್ವಿಯಾಗಲು ಸಾಧ್ಯವಿಲ್ಲ. ತಾಳ ಮೇಳ ಸರಿಯಾಗಿದ್ದರೆ ಮಾತ್ರ ಯಶಸ್ಸು ಎನ್ನುವ ಹಾಗೆಯೇ ಹಿಮ್ಮೇಳ, ಮುಮ್ಮೇಳದ  ಎಲ್ಲಾ ಕಲಾವಿದರು ನ್ಯಾಯ ಒದಗಿಸಿದಾಗ ಮಾತ್ರ ಅದ್ಭುತವಾಗದ ಪ್ರದರ್ಶನ ಎನಿಸಿಕೊಳ್ಳುತ್ತದೆ ಎಂದರು. 

ಒಟ್ಟಿನಲ್ಲಿ ಯಕ್ಷಗಾನ ಈಗ ಬದಲಾವಣೆ ಆದದನ್ನು ನೋಡಿದ್ದೇನೆ, ಇನ್ನು ಯಾವ ರೀತಿ ಬದಲಾವಣೆ ಆಗುತ್ತದೆಯೋ ನನಗೆ ಗೊತ್ತಿಲ್ಲ. ಪರಂಪರೆಯ ಚೌಕಟ್ಟುಗಳನ್ನು ಉಳಿಸಿ ಬೆಳೆಸಿ ಅದನ್ನು ರಂಗದಲ್ಲಿ ಬೆಳಗಿದರೆ ಮಾತ್ರ ಯಕ್ಷಗಾನ ಎನ್ನಬಹುದು..ಅಲ್ಲವಾದಲ್ಲಿ ಅದಕ್ಕೆ ಬೇರೆ ಬೇರೆ ಹೆಸರು ಹುಡುಕಬೇಕಾಗುತ್ತದೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.