ಸದ್ದಿಲ್ಲದೇ ಸುದ್ದಿ ಮಾಡುತ್ತಿದೆ ಇರ್ಕಿಗದ್ದೆ ಅಬ್ಬೆ ಜಲಪಾತ


Team Udayavani, Apr 27, 2018, 2:01 PM IST

Abbe-falls.jpg

ಅಬ್ಬಿ ಜಲಪಾತ ಕೇಳಿದ್ದೇವೆ ಆದರೆ ಈ ಇರ್ಕಿಗದ್ದೆ ಅಬ್ಬೆ ಜಲಪಾತ ಯಾವುದು ಎಂದು ಕೆಲವರು ತಲೆಕೆಡಿಸಿಕೊಳ್ಳಬಹುದು ಇನ್ನು ಕೆಲವರು ತಿಳಿದಿರಲೂಬಹುದು., ಇತ್ತೀಚಿನ ದಿನಗಳಲ್ಲಿ ಈ ಜಲಪಾತ ಹೆಚ್ಚು ಜನಪ್ರಿಯತೆಯನ್ನು ಪಡೆದಿರುವುದು ಇದಕ್ಕೆ ಸಾಕ್ಷಿ, ಯಾಕೆಂದರೆ ಈ ಜಲಪಾತ ಸುದ್ದಿ ಮಾಡಲು ಶುರು ಮಾಡಿದ್ದೇ ಇತ್ತೀಚೀನ ಕೆಲವು ವರುಷಗಳಿಂದ, ಹೆಚ್ಚಿನ ಚಾರಣ ಪ್ರಿಯರು ಈ ಜಲಪಾತದ ಸವಿ ಅನುಭವವನ್ನು ಆನಂದಿಸಿರಬಹುದು ಅಂದಹಾಗೆ ಈ ಜಲಪಾತ ಇರುವುದು ಪಶ್ಚಿಮ ಘಟ್ಟದ ತಪ್ಪಲಿನ  ಕುಂದಾಪುರ ತಾಲೂಕಿನ ಹೊಸಂಗಡಿಯಲ್ಲಿ. ಹೊಸಂಗಡಿಯಿಂದ ತೊಂಬಟ್ಟು ಮಾರ್ಗದಲ್ಲಿ ಇರ್ಕಿಗದ್ದೆ ಪ್ರದೇಶದಲ್ಲಿ ಸಂಚರಿಸಿದರೆ ಈ ಮನಮೋಹಕ ಅಬ್ಬೆ ಜಲಪಾತ ಮೈದುಂಬಿ ಹರಿಯುತ್ತಿದೆ. ಬಂಡೆಕಲ್ಲುಗಳ ಮೇಲೆ ಜಾರಿಕೊಂಡು ಹಂತ ಹಂತವಾಗಿ ಹರಿದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಇತ್ತೀಚೆಗೆ ಈ ಜಲಪಾತ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಕಂಡುಕೊಳ್ಳುತ್ತಿದೆ.

ಈ ಪ್ರದೇಶದ ಜನರ ಕಿವಿಗೂ ಸದ್ದು ಮಾಡದೇ ಹರಿದಿರುವುದು ವಿಶೇಷ. ತಮ್ಮ ಪರಿಸರದಲ್ಲಿ ಹಸಿರು ಕಾನನದ ನಡುವೆ ಶಾಂತವಾಗಿ ಹರಿಯುತ್ತಿದೆ ಅಬ್ಬೆ ಜಲಪಾತ. ಈ ಜಲಪಾತ ಸೃಷ್ಟಿಯಾಗಲು ಪ್ರಮುಖ ಕಾರಣ ಇಲ್ಲಿನ ವಾರಾಹಿ ನದಿ. ಘಟ್ಟ ಪ್ರದೇಶದಲ್ಲಿ ಮಳೆಯ ನೀರು ಹರಿದು ಹೊಸಂಗಡಿಯಲ್ಲಿ ವಾರಾಹಿ ನದಿಯನ್ನು ಸೇರುತ್ತದೆ ಈ ನದಿ ಕೆಲವೊಂದು ಕವಲುಗಳಾಗಿ ಹರಿಯುತ್ತಿದೆ ಅದರಲ್ಲಿ ಒಂದು ಕವಲು ಇರ್ಕಿಗದ್ದೆ ಅಬ್ಬೆ ಜಲಪಾತವಾಗಿ ಹರಿಯುತ್ತಿದೆ.

ಜನಾಕರ್ಷಣೆ :

ಅಗಲವಾದ ಬಂಡೆಕಲ್ಲಿನಲ್ಲಿ ಸರಾಗವಾಗಿ ಹರಿಯುವ ನೀರು ಹಲವಾರು ಕವಲುಗಳಿಂದ ಹರಿಯುವುದರಿಂದ ಪ್ರಮುಖ ಆಕರ್ಷಣೆಯಾಗಿದೆ. ಹೊಸಂಗಡಿಯ ದಾಸಿಕಾನು ಎಂಬಲ್ಲಿ ವಾರಾಹಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ಆದಂದಿನಿಂದ ಈ ಜಲಪಾತ ಜನರನ್ನು ಆಕರ್ಷಿಸಲು ಪ್ರಾರಂಭಿಸಿದೆ. ಇದಕ್ಕೂ ಮೊದಲು ಇಲ್ಲಿ ಯಾವುದೇ ಮಾರ್ಗಗಳಿಲ್ಲದೆ ಈ ಪ್ರದೇಶದಲ್ಲಿ ಜಲಪಾತ ಇದೆ ಎಂಬುದು ತಿಳಿದಿರಲಿಲ್ಲ. ಜಲಪಾತದ ಸಂಧಿಯವರೆಗೆ ವಾಹನ ಚಲಿಸುವುದರಿಂದ ಪ್ರಯಾಸ ಕಡಿಮೆ ಹಾಗಾಗಿ ಹೆಚ್ಚು ಜನಾಕರ್ಷಣೆಯಾಗಿದೆ.

ಅಪಾಯವು ಕಡಿಮೆ :

ಈ ಜಲಪಾತವು ಹೆಚ್ಚು ಅಳವಿಲ್ಲದೆ ಬಂಡೆ ಕಲ್ಲಿನ ಮೇಲೆ ಸರಾಗವಾಗಿ ಹರಿಯುತ್ತಿರುವುದರಿಂದ ಇಲ್ಲಿ ಯಾವುದೇ ಅಪಾಯ ಸಂಭವಿಸುವ ಲಕ್ಷಣಗಳು ಕಡಿಮೆ. ಅಲ್ಲದೆ ಅಗಲವಾದ ಬಂಡೆ ಕಲ್ಲಿನ ಹಾಸಿನ ಮೇಲೆ ಶಾಂತವಾಗಿ ಹಂತ ಹಂತವಾಗಿ ಹರಿಯುವುದನ್ನು ನೋಡುವುದೇ ಮನಸ್ಸಿಗೆ ಮುದ ನೀಡುವ ಅನುಭವ, ಇತ್ತೀಚಿಗೆ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ  ಪ್ರವಾಸಿಗರು ಭೇಟಿ ನೀಡುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಪ್ರಚಾರ ಪಡೆಯುತ್ತಿದ. ರಜಾ ದಿನಗಳಲ್ಲಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿರುವುದು ಈ ಜಲಪಾತದ ಆಕರ್ಷಣೆಯಾಗಿದೆ.

ಮಳೆಗಾಲದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಜಲಪಾತದ ಸೌಂದರ್ಯ ಇಮ್ಮಡಿಗೊಳಿಸುತ್ತದೆ. ಹಸಿರು ವನ್ಯರಾಶಿಯ ನಡುವೆ ಸ್ವಚ್ಛಂದವಾಗಿ ಹರಿಯುವ ಜಲಪಾತ ಕಣ್ಣಿಗೆ ಮುದ ನೀಡುತ್ತದೆ.

ದಟ್ಟ ಅರಣ್ಯದ ನಡುವೆ ಮುಂಜಾನೆಯ ಸವಿಯನ್ನು ಸವಿಯುತ್ತಾ, ಚುಮು ಚುಮು ಚಳಿಯಲ್ಲಿ ಈ ಜಲಪಾತಕ್ಕೆ ಭೇಟಿ ನೀಡಿದರೆ ಇದರ ಅನುಭವವೇ ಬೇರೆ.  

ದಾರಿ ಹೇಗೆ :

ಇರ್ಕಿಗದ್ದೆ ಅಬ್ಬೆ ಜಲಪಾತಕ್ಕೆ ಬರುವವರು ಕುಂದಾಪುರದ ಹೊಸಂಗಡಿಯಿಂದ ಬಾಗೆಮನೆ ಮಾರ್ಗವಾಗಿ ಚಲಿಸಿ ಬಾಗೆಮನೆಯಿಂದ ಬಲಕ್ಕೆ ತಿರುಗಿ ಮೂರು ಕಿಲೋಮೀಟರ್ ಸಂಚರಿಸಿದರೆ ಜಲಪಾತ ಕಾಣಸಿಗುತ್ತದೆ.

ಅಮಾಸೆಬೈಲು ಮಾರ್ಗವಾಗಿ ಬರುವವರು ಮಚ್ಚಟ್ಟು ತೊಂಬಟ್ಟು ಮಾರ್ಗವಾಗಿ ಕಬ್ಬಿನಾಲೆ ಮೂಲಕ ಸಂಪರ್ಕಿಸಬಹುದು.  

ಸ್ವಚ್ಛತೆಯನ್ನು ಕಾಪಾಡಿ :

ಈ ಜಲಪಾತ ಇತ್ತೀಚೆಗಷ್ಟೇ ಜನಪ್ರಿಯತೆ ಪಡೆದಿದ್ದರು ಇಲ್ಲಿಗೆ ಬರುವ ಪ್ರವಾಸಿಗರು ತಾವು ತಂದಿರುವ ತಿಂಡಿ ತಿನಿಸುಗಳ ತ್ಯಾಜ್ಯವನ್ನು ಜಲಪಾತದ ಎಕ್ಕೆಲೆಗಳಲ್ಲಿ ಎಸೆದಿರುವುದು ಕಂಡುಬರುತ್ತಿದೆ. ಇದರಿಂದ ಪರಿಸರ ನಾಶವಾಗುವುದರ ಜೊತೆಗೆ ಜಲಪಾತ ತನ್ನ ಆಕರ್ಷಣೆಯನ್ನು ಕಳೆದುಕೊಳ್ಳುತ್ತದೆ, ಹಾಗಾಗಬಾರದು ಎಂಬುದೇ ನಮ್ಮೆಲ್ಲರ ಆಶಯ…

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.