ಯಕ್ಷರಂಗದ ಏಳಿಗೆಗೆ ಹವ್ಯಾಸಿಗಳ ಗಣನೀಯ ಕೊಡುಗೆ 


Team Udayavani, Mar 10, 2019, 1:31 PM IST

ykshhotelkhoj.jpg

ಯಕ್ಷಗಾನರಂಗ ತೆಂಕುತಿಟ್ಟು ಮತ್ತು ಬಡಗುತಿಟ್ಟಿನಲ್ಲಿ ಇಂದು 50 ಕ್ಕೂ ಹೆಚ್ಚು ವೃತ್ತಿ ಮೇಳಗಳು ತಿರುಗಾಟ ಮಾಡುತ್ತಿರುವುದು ಕಲಾಲೋಕ ಬೆಳದ ಬಗೆಯನ್ನು ಸಾರಿ ಹೇಳುತ್ತಿದೆ. ವೃತ್ತಿ ಮೇಳಗಳಲ್ಲಿ ನೂರಾರು ಹಿರಿಯ ,ಕಿರಿಯ ಕಲಾವಿದರು ಕಲಾಲೋಕವನ್ನು ಬೆಳಗುತ್ತಿರುವ ಹಾಗೆಯೇ ಶ್ರೇಷ್ಠ ಜಾನಪದ ಕಲೆ ಎನಿಸಿಕೊಂಡಿರುವ ಯಕ್ಷಗಾನ ರಂಗವನ್ನು ಸಾವಿರಾರು ಹವ್ಯಾಸಿ ಕಲಾವಿದರು ಬೆಳಗುತ್ತಿದ್ದಾರೆ. 

ದೊಡ್ಡ ಇತಿಹಾಸವಿದ್ದು, ಕಾಲಾನುಕ್ರಮಕ್ಕೆ ಸರಿಯಾಗಿ ಬದಲಾವಣೆ ಕಂಡುಕೊಳ್ಳುತ್ತಾ ಬಂದಿರುವ ಕಲೆಗೆ ಹವ್ಯಾಸಿ ರಂಗದ ಕೊಡುಗೆ ಅಪಾರ. ಇಂದಿನ ದಿನಮಾನಗಳಲ್ಲಿ ಟಿವಿ ಮಾಧ್ಯಮಗಳು, ಅಧುನೀಕರಣದ ನಡುವೆಯೂ ಶುದ್ಧ ದೇಸಿ ಕಲೆಯಾಗಿರುವ ಯಕ್ಷಗಾನದತ್ತ ಯುವ ಜನಾಂಗವೂ ಆಕರ್ಷಿತವಾಗುತ್ತಿರುವುದು ಕಲಾ ಪರಂಪರೆ ಬಹುದೂರಕ್ಕೆ  ಮುಂದುವರಿಯುವ ಸೂಚನೆ ಎನ್ನಬಹುದು. 

ಸ್ವಾತಂತ್ರ್ಯ ಪೂರ್ವದಲ್ಲಿ ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸುವವರು ಹೊರತು ಹವ್ಯಾಸಿಗಳಾಗಿ ಕಾಣಿಸಿಕೊಂಡಿರುವ ಸಂಖ್ಯೆ ವಿರಳ ಎನ್ನುವುದು ಹಿರಿಯ ಕಲಾವಿದರ ಅಭಿಪ್ರಾಯ. ಇದೀಗ ವೈದ್ಯರು, ಐಟಿ ಉದ್ಯೋಗಿಗಳು, ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಲಿಂಗಬೇಧವಿಲ್ಲದೆ ಯಕ್ಷಗಾನ ರಂಗದಲ್ಲಿ ಹವ್ಯಾಸಿ ಕಲಾವಿದರಾಗಿ ಬಣ್ಣ ಹಚ್ಚಿ ಅಭಿನಯಿಸುತ್ತಿದ್ದಾರೆ,ರಂಗದಲ್ಲಿ ಗೆಜ್ಜೆ ಕಟ್ಟಿ ಹೆಜ್ಜೆ ಹಾಕುತ್ತಿದ್ದಾರೆ. 

ಹಿಂದೆ ಮಡಿವಂತಿಕೆಯ ಕಾಲದಲ್ಲಿ ಮಹಿಳೆಯರು ಯಕ್ಷಗಾನ ರಂಗಕ್ಕೆ ಬರುವುದು ಅಸಾಧ್ಯವಾಗಿತ್ತು  ಇಂದು ನೂರಾರು ಯುವತಿಯರು ,ಮಹಿಳೆಯರು  ಯಕ್ಷಗಾನ ಕಲಾವಿದರಾಗುವ ಮೂಲಕ ಕಲಾವಿದೆಯರಾಗಿ ಗಮನ ಸೆಳೆಯುತ್ತಿದ್ದಾರೆ.  ಹವ್ಯಾಸಿ ರಂಗದ ಆಕರ್ಷಣೆ ಎನ್ನುವಂತೆ ಕೆಲ ಕಲಾವಿದೆಯರು ಬಹುಬೇಡಿಕೆಯನ್ನು ಪಡೆದು ರಂಗದಲ್ಲಿ ಮಿಂಚುತ್ತಿರುವುದು ಅವರ ಕಲಾ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ. 

ಓರ್ವ ಹವ್ಯಾಸಿ ಕಲಾವಿದ ವೃತ್ತಿ ಕಲಾವಿದರಿಗೆ ಸರಿಗಟ್ಟುವ ಮಟ್ಟಿಗೆ ಪ್ರದರ್ಶನ ನೀಡಲು ಸಾಧ್ಯವಿಲ್ಲ ಎನ್ನುವ ಮಾತಿಗೆ ಅಪವಾದ ಎನ್ನುವಂತೆ ಈಗ ಕೆಲ ಹವ್ಯಾಸಿ ರಂಗದ ಪ್ರತಿಭೆಗಳು ಡೇರೆ ಮೇಳಗಳಿಗೆ ಅತಿಥಿ ಕಲಾವಿದರಾಗಿ ಹೋಗುವ ಮಟ್ಟಿಗೆ ತಮ್ಮ ಕಲಾ ಪ್ರತಿಭೆಯನ್ನು ಮೆರೆಯುತ್ತಿದ್ದಾರೆ. 

ಹವ್ಯಾಸಿ ಕಲಾವಿದನೊಬ್ಬ ಉತ್ತಮ ಪ್ರೇಕ್ಷಕನಾಗುತ್ತಾನೆ, ಕಲಾ ಲೋಕದ ಏಳಿಗೆಗೆ ನೆರವಾಗುತ್ತಾನೆ ಎನ್ನುವುದು ಎಲ್ಲರೂ ಒಪ್ಪಿಕೊಳ್ಳಲೇ ಬೇಕಾದ ಸತ್ಯ. ಹವ್ಯಾಸಿ ರಂಗದ ನೂರಾರು ಸಂಘ ಸಂಸ್ಥೆಗಳು ಕಲಾವಿದರ ಏಳಿಗೆಗೆ , ಬಯಲಾಟ ಮೇಳಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುತ್ತಿದ್ದಾರೆ. 

ಈಗೀಗ ಯುವ ಜನಾಂಗಕ್ಕೆ  ಪೌರಾಣಿಕ ಪ್ರಸಂಗಳ ಆಸಕ್ತಿ ಕಡಿಮೆಯಾಗುತ್ತಿರುವ ವೇಳೆಯಲ್ಲಿ ಹವ್ಯಾಸಿ ರಂಗದ ಯುವ ಹವ್ಯಾಸಿಗಳು ಪೌರಾಣಿಕ ಪ್ರದರ್ಶನಗಳನ್ನು  ತರಬೇತಿ ಪಡೆದು ಪ್ರದರ್ಶನ ನೀಡುತ್ತಿರುವುದು ಪೌರಾಣಿಕ ಪ್ರಸಂಗಗಳ ಉಳಿವಿಗೆ ,ಆ ಪ್ರಸಂಗಗಳ ಮೌಲ್ಯಗಳನ್ನು ಉಳಿಸಲು ಸಾಧ್ಯವಾಗಿದೆ ಎನ್ನಬಹುದು.

ಸಂಪ್ರದಾಯ ಬದ್ಧ ಯಕ್ಷಗಾನ ಈಗ ಕಾಣುವುದು ಕಷ್ಟ ಎನ್ನುವ ಅಪವಾದದ ನಡುವೆ ಹವ್ಯಾಸಿ ಸಂಘಗಳು ಪೌರಾಣಿಕ ಪ್ರಸಂಗಳನ್ನು ಆ ನಡೆಗಳಿಗೆ ಅನುಸಾರವಾಗಿ ಪ್ರದರ್ಶಿಸುವುದನ್ನು ಕಾಣಬಹುದಾಗಿದೆ. ಪ್ರಮುಖವಾಗಿ ವೇಷ ಭೂಷಣ, ಒಡ್ಡೋಲಗ, ಪ್ರಯಾಣ ಕುಣಿತ  ,ಅರ್ಥಗಾರಿಕೆಯಲ್ಲಿ ಚೌಕಟ್ಟನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. 

ಮುಂದುವರಿಯುವುದು..

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.