ಮಣ್ಣಿನ ಪಾತ್ರೆಯಲ್ಲಿ ತಯಾರಿಸಿದ ಆಹಾರ.. ಆರೋಗ್ಯಕ್ಕೆ ಹಿತಕರ!


Team Udayavani, Aug 11, 2018, 7:01 PM IST

clay-pot.jpg

ಮಣ್ಣಿನ ಪಾತ್ರೆಗಳು ಪರಿಸರ ಸ್ನೇಹಿಯಾಗಿವೆ. ಯಾವುದೇ ರಾಸಾಯನಿಕ ಅಂಶಗಳ ಮಿಶ್ರಣವಿಲ್ಲದಿರುವುದರಿಂದ ಪ್ರಕೃತಿಗೆ ಯಾವುದೇ ಹಾನಿಯಾಗುವುದಿಲ್ಲ ಮಾತ್ರವಲ್ಲದೇ ಮಣ್ಣಿನ ಪಾತ್ರೆಯಲ್ಲಿ ತಯಾರಿಸಿದ ಆಹಾರದಲ್ಲಿ ಪೌಷ್ಟಿಕಾಂಶ ನಾಶವಾಗುವುದಿಲ್ಲ ಎಂಬುದು ನಂಬಿಕೆ. 

ಮಣ್ಣಿನ ಪಾತ್ರೆಗಳಲ್ಲಿ ಔಷಧೀಯ ಗುಣಗಳಿದ್ದು, ಹಿಂದಿನ ಕಾಲದಲ್ಲಿ ನಮ್ಮ ಹಿರಿಯರೆಲ್ಲರೂ ದಿನಪಯೋಗಿ ವಸ್ತುಗಳಾಗಿ ಮಣ್ಣಿನ ಪಾತ್ರೆಗಳನ್ನೇ ಬಳಸುತ್ತಿದ್ದರು. ನಮ್ಮ ಈಗಿನ ಸ್ಟೀಲ್ ಹಾಗೂ ಅಲ್ಯೂಮಿನಿಯಂ ಕಾಲದಲ್ಲಿ ಮಣ್ಣಿನ ಪಾತ್ರೆಗಳು ತಮ್ಮ ಸ್ಥಾನವನ್ನು ಕಳೆದುಕೊಂಡಿದೆ. ಆದರೂ ಈ ಆಧುನಿಕ ಯಗದಲ್ಲಿ ಆರೋಗ್ಯದ ದೃಷ್ಟಿಯಲ್ಲಿ ಕೂಡ ಒಮ್ಮೊಮ್ಮೆ ಮಣ್ಣಿನ ಪಾತ್ರೆಗಳನ್ನು ಉಪಯೋಗಿಸುವುದು ಕಾಣಬಹುದು. ಆಹಾರವನ್ನು ನಿಧಾನವಾಗಿ ಬೆಂಕಿಯಿಂದ ಬೇಯಿಸಬೇಕೆಂದು ಆಯುರ್ವೇದ ಹೇಳಿದೆ. ಆದರೆ ಸ್ಟೀಲ್ ಹಾಗೂ ಅಲ್ಯೂಮಿನಿಯಂ ಪಾತ್ರೆಯಲ್ಲಿ ಸಾಧ್ಯವಿಲ್ಲ ಅವುಗಳಲ್ಲಿ ಆಹಾರವನ್ನು ವೇಗವಾಗಿ ತಯಾರಿಸಲಾಗುತ್ತದೆ. ಮಣ್ಣಿನ ಪಾತ್ರೆಯಲ್ಲಿ ಮಾಡಿದ ಆಹಾರವು ರುಚಿಕರವಾಗಿರುವುದು ಮಾತ್ರವಲ್ಲ ಮತ್ತು ಪೌಷ್ಟಿಕಾಂಶವನ್ನು ನೀಡುತ್ತದೆ. ಮಣ್ಣಿನ ಪಾತ್ರೆಯ ಮಾಡುವ ಅಡುಗೆಯ ರುಚಿ ಇತರ ಪಾತ್ರೆ ನೀಡುವುದಿಲ್ಲ.

ಮಣ್ಣಿನ ಪಾತ್ರೆಯಲ್ಲಿ ತಯಾರಿಸಿದ ಅಡುಗೆಯ ಉಪಯೋಗಗಳು:
1. ರುಚಿ, ಪೋಷಕಾಂಶಗಳ ದೃಷ್ಟಿಕೋನ:

 ಮಣ್ಣಿನ ಪಾತ್ರೆಗಳು ಸೂಕ್ತವಾಗಿದ್ದು ಅಲ್ಲದೆ ಆಯುರ್ವೇದದ ಪ್ರಕಾರ ಹೆಚ್ಚಾಗಿ ಎಲ್ಲಾ ತರಹದ ಅಡುಗೆಗಳಿಗೆ ಮಣ್ಣಿನ ಪಾತ್ರೆಯಲ್ಲಿ ನಿಧಾನ ಗತಿಯಲ್ಲಿ ಅಡುಗೆ ತಯಾರಿಸುವುದರಿಂದ ಗುಣಮಟ್ಟ ಹೆಚ್ಚಿಸುವುದಲ್ಲದೇ ರುಚಿಯಾದ ಅಡುಗೆಯ ಜೊತೆಗೆ ಸಮತೋಲನ ಪೋಷಕಾಂಶಗಳು ದೊರೆಯುತ್ತದೆ. ಮಣ್ಣಿನಲ್ಲಿರುವ ನೈಸರ್ಗಿಕ ನಿರೋಧಕ ಗುಣಗಳಿಂದಾಗಿ ಶಾಖ ಮತ್ತು ತೇವಾಂಶ ಮಣ್ಣಿನ ಪಾತ್ರೆಯಲ್ಲಿ ಸಮಾನವಾಗಿ ಪ್ರಸರಿಸಿ ಪೋಷಕಾಂಶಗಳನ್ನು ಕರಗದಂತೆ ಹಾಗೂ ಆಹಾರ ಸುಡದಂತೆ ತಡೆಯುತ್ತದೆ.

2. ಅಸಿಡಿಟಿ ಸಮಸ್ಯೆ ಪರಿಹಾರ:
ಅಸಿಡಿಟಿ ಸಮಸ್ಯೆ ಇದ್ದವರು ಮಣ್ಣಿನ ಪಾತ್ರೆಯಲ್ಲಿ ತಯಾರಿಸಿದ ಆಹಾರ ಸೇವಿಸುವುದರಿಂದ ಅಸಿಡಿಟಿ ಸಮಸ್ಯೆಯಿಂದ ದೂರ ಉಳಿಯಬಹುದು.

3. ಮಾನವನ ದೇಹಕ್ಕೆ ಆರೋಗ್ಯಕರ:
ಮಣ್ಣಿನ ಪಾತ್ರೆಯನ್ನು ಮಾಡಲು ಉಪಯೋಗಿಸುವ ಮಣ್ಣಿನಲ್ಲಿ ಕ್ಷಾರೀಯ ಅಂಶವು ಅಡುಗೆ ತಯಾರಿಸುವಾಗ ಆಹಾರದಲ್ಲಿನ ಆಮ್ಲಿàಯ ಗುಣವನ್ನು ಸಮದೂಗಿಸುವುದಲ್ಲದೇ ಜೀರ್ಣಕ್ರಿಯೆಯನ್ನು ಸುಲಭ ಮಾಡುತ್ತದೆ. ಮಣ್ಣಿನ ಪಾತ್ರೆಗಳಲ್ಲಿ ತಯಾರಿಸಿದ ಆಹಾರದಲ್ಲಿ ಕಬ್ಬಿಣಾಂಶ, ಕ್ಯಾಲ್ಸಿಯಂ, ಮೆಗ್ನೇಷಿಯಂ ಹೇರಳವಾಗಿರುತ್ತದೆ. ಮಣ್ಣಿನ ಪಾತ್ರೆಯಲ್ಲಿ ನೈಸರ್ಗಿಕ ತೇವಾಂಶ ಅಡುಗೆ ತಯಾರಿಸಲು ಸಾಕಾಗುವುದಲ್ಲದೇ ಎಣ್ಣೆಯ ಉಪಯೋಗ ಕಡಿಮೆ ಮಾಡಬಹುದು.

4. ಮಲಬದ್ಧತೆಗೆ ಪರಿಹಾರ:
ಮಲಬದ್ಧತೆಯಿಂದ ತೊಂದರೆಗೆ ಒಳಗಾಗಿರುವ ವ್ಯಕ್ತಿ ಮಣ್ಣಿನ ಪಾತ್ರೆಯಲ್ಲಿ ತಯಾರಿಸಿದ ಆಹಾರ ಸೇವಿಸುವುದರಿಂದ ಮಲಬದ್ಧತೆಯನ್ನು ನಿವಾರಣೆ ಮಾಡಬಹುದು.

5. ಅಗ್ಗ ಮತ್ತು ಸುಲಭವಾಗಿ ಸಿಗುವಂತಹವು:
ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುವಂತಹವು ,ಬೇರೆ ಅಡುಗೆ ಪಾತ್ರೆಗಳಿಗೆ ಸೇರಿಸಿ ನೋಡಿದರೆ ಅಗ್ಗದಲ್ಲಿ ದೊರೆಯುತ್ತದೆ. ಅಲ್ಲದೇ ವಿವಿಧ ಗಾತ್ರದಲ್ಲಿ ದೊರೆಯುತ್ತದೆ.

ಎಚ್ಚರ ! ಹೊಳೆಯುವ ಮಣ್ಣಿನ ಪಾತ್ರೆಗಳನ್ನು ತಿರಸ್ಕರಿಸಿ
ಹೊಳಿಪಿನ ಮಿಶ್ರಣ ತಯಾರಿಸಲು ಹಲವು ಬಗೆಯ ರಾಸಾಯನಿಕ ವಸ್ತುಗಳನ್ನು ಉಪಯೋಗಿಸುತ್ತಾರೆ ಇದು ವಿಷಯುಕ್ತ ಹೊಗೆಯನ್ನು ಬಿಸಿ ಮಾಡಿದಾಗ ಉತ್ಪತ್ತಿ ಮಾಡುತ್ತದೆ ಹೆಚ್ಚಿನ ಹೊಳೆಯುವ ಬಣ್ಣದಲ್ಲಿ ಸೀಸದಂಶ ಇರುತ್ತದೆ ಆದ್ದರಿಂದ ಮಾರುಕಟ್ಟೆಯಲ್ಲಿ ಸಿಗುವ ಮಣ್ಣಿನ ಪಾತ್ರೆಯನ್ನು ಸರಿಯಾಗಿ ನೋಡಿ ಕೊಂಡುಕೊಳ್ಳುವುದು ಉತ್ತಮ.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.