ಸುಲಭವಾಗಿ ತಯಾರಿಸಿ ರುಚಿ ರುಚಿಯಾದ ಟೊಮೊಟೊ ಪಲಾವ್


ಶ್ರೀರಾಮ್ ನಾಯಕ್, Aug 22, 2019, 6:10 PM IST

Tomato-Pulao

ಇಂದು ಎಲ್ಲರೂ ಆಹಾರದಲ್ಲಿ ವೈವಿಧ್ಯತೆಯನ್ನು ಬಯಸುತ್ತಾರೆ. ಅದರಲ್ಲೂ ನಗರ ಪ್ರದೇಶದಲ್ಲಿರುವವರಂತೂ ಪ್ರತೀ ದಿನ ಅಲ್ಲದಿದ್ದರೂ ವೀಕೆಂಡ್ನಲ್ಲಂತೂ ವೈವಿಧ್ಯಮಯ ಆಹಾರಗಳಿಗೆ ತಮ್ಮ ಆಧ್ಯತೆಯನ್ನು ನೀಡುತ್ತಿರುವ ಜೊತೆಗೆ ಹೊಸ ಹೊಸ ಬಗೆಯ ತಿಂಡಿ ತಿನಿಸುಗಳನ್ನು ಮಾಡಿ ತಮ್ಮ ಕೈ ರುಚಿಯ ಸವಿಯನ್ನು ಕುಟುಂಬದವರೊಂದಿಗೆ ಹಂಚಿಕೊಳ್ಳಲು ನಾವು ನಿಮಗೊಂದು ಸುಲಭ ರೀತಿಯಲ್ಲಿ ರುಚಿಕರವಾದ ಟೊಮೊಟೊ ಪಲಾವ್ವನ್ನು ನಾವು ಉಣಬಡಿಸಲಿದ್ದೇವೆ.

ಹಲವಾರು ಬಗೆಯ ಪಲಾವ್ ಗಳನ್ನು ನಾವು ತಿಂದಿರುತ್ತೇವೆ ಅದರಲ್ಲಿ ಮುಖ್ಯವಾಗಿ ಪನ್ನೀರ್ ಪಲಾವ್, ಕಾಶ್ಮೀರಿ ಪಲಾವ್,ಮಶ್ರೂಮ್ ಪಲಾವ್, ವೆಜಿಟೇಬಲ್ ಪಲಾವ್, ಗೋಬಿ ಪಲಾವ್ ಹೀಗೆ ರೈಸ್ ಐಟಮ್‌ ಗಳಲ್ಲಿ ಮೇಲ್ಪಂಕ್ತಿಯಲ್ಲಿ ನಿಲ್ಲುವುದು ಟೊಮೊಟೊ ಪಲಾವ್ . ಹಾಗಾದರೆ ಇನ್ನೇಕೆ ತಡ ರುಚಿ ರುಚಿಯಾದ ಟೊಮೊಟೊ ಪಲಾವ್ ಮಾಡುವ ವಿಧಾನವನ್ನು ಓದಿಕೊಂಡು ನಿಮ್ಮ ಮನೆಯಲ್ಲೇ ಮಾಡಿಕೊಂಡು ಸ್ವಾದಿಷ್ಟವಾಗಿ ಸವಿಯಿರಿ…

ಬೇಕಾಗುವ ಪದಾರ್ಥಗಳು:
ಬೆಳ್ತಿಗೆ ಅಕ್ಕಿ: 350 ಗ್ರಾಂ, ಈರುಳ್ಳಿ : 4ರಿಂದ 5, ಲವಂಗ: 4, ಏಲಕ್ಕಿ :3, ಕಾಳು ಮೆಣಸು 2ರಿಂದ 3, ಅರಿಶಿನ ಪುಡಿ 1 ಚಮಚ, ತುಪ್ಪ 4 ಚಮಚ, ಕರಿಬೇವು 2 ಎಳಸು, ಟೊಮೊಟೊ 4ರಿಂದ 5, ತೆಂಗಿನ ತುರಿ 2 ಕಪ್, ಚಕ್ಕೆ ಸ್ವಲ್ಪ, ಶುಂಠಿ ಸ್ವಲ್ಪ, ಒಣ ಮೆಣಸು 5 ರಿಂದ  7 ಗೋಡಂಬಿ 10, ತೆಂಗಿನ ಎಣ್ಣೆ 2 ಚಮಚ, ಕೊತ್ತಂಬರಿ ಸೊಪ್ಪು ಸ್ವಲ್ಪ, ಉಪ್ಪು ರುಚಿಗೆ ತಕ್ಕಷ್ಟು.

ಮಾಡುವ ವಿಧಾನ:
ಟೊಮೊಟೊ ತೊಳೆದುಕೊಂಡು ಹೆಚ್ಚಿ ,ಈರುಳ್ಳಿಯನ್ನು ಉದ್ದುದ್ದ ಹೆಚ್ಚಿಕೊಳ್ಳಿ ತುರಿದಿಟ್ಟ ತೆಂಗಿನಕಾಯಿಯನ್ನು ಮಿಕ್ಸಿಗೆ ಹಾಕಿ ಹಾಲನ್ನು ಮಾಡಿಕೊಳ್ಳಿ. ಲವಂಗ, ಕಾಳು ಮೆಣಸು, ಚಕ್ಕೆ, ಏಲಕ್ಕಿಯನ್ನು ಹುರಿದು ಪುಡಿ ಮಾಡಿ. ಒಂದು ಅಗಲವಾದ ಪಾತ್ರೆಗೆ ತುಪ್ಪ ಹಾಗೂ ಎಣ್ಣೆಯನ್ನು ಹಾಕಿಕೊಂಡು ಬಿಸಿಯಾದ ನಂತರ ಸಾಸಿವೆ, ಶುಂಠಿ ,ಒಣಮೆಣಸಿಕಾಯಿಯ ಪೇಸ್ಟ್ ಹಾಕಿ ಒಗ್ಗರಣೆ ಮಾಡಿದ ನಂತರ ಈರುಳ್ಳಿ ಚೂರುಗಳು, ಟೊಮೊಟೊ ಚೂರುಗಳು ಹಾಕಿ ಮೆತ್ತಗಾಗುವರೆಗೆ ಫ್ರೈ ಮಾಡಿ. ತದನಂತರ ಕರಿಬೇವಿನ ಸೊಪ್ಪು ಹಾಕಿ ಸ್ವಲ್ಪ ಹೊತ್ತು ಫ್ರೈ ಮಾಡಿ . ಮಾಡಿಟ್ಟ ತೆಂಗಿನ ಹಾಲನ್ನು ಬೆರಸಿ. ಅಕ್ಕಿಗೆ ಹೊಂದುವಷ್ಟು ನೀರು ಸೇರಿಸಿ ಈ ಎಲ್ಲಾ ಮಸಾಲೆ ಹಾಗೂ ಗೋಡಂಬಿಯನ್ನು ಹಾಕಿ. ನೀರು ಕುದಿ ಬಂದ ಮೇಲೆ ಅರಿಶಿನ ಹಾಕಿ ಅಕ್ಕಿ ಸೇರಿಸಿ. ಅಕ್ಕಿ ಬೇಯುವಾಗ ಉಪ್ಪು ಸೇರಿಸಿ. ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು ಹಾಕಿ. ಈಗ ಟೊಮೊಟೊ ಪಲಾವ್ ರೆಡಿ. ಬಿಸಿ ಇರುವಾಗ ಟೊಮೆಟೊ ಪಲಾವ್ ತಿನ್ನಲು ತುಂಬಾನೇ ರುಚಿಯಾಗಿರುವುದು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.