ನಿಮಗೆ ಗೊತ್ತಿರಲಿ: ಹಲವು ಖನಿಜಗಳ ಗಣಿ…ಬೆಳ್ಳುಳ್ಳಿಯಲ್ಲಿದೆ ಹಲವು ಔಷಧೀಯ ಗುಣಗಳು


Team Udayavani, Nov 22, 2019, 9:03 PM IST

tt-1

ಪ್ರತಿನಿತ್ಯವು ನಾವು ಅಡುಗೆಯಲ್ಲಿ ಬಳಸುವಂತಹ ಸಾಂಬಾರ ಪದಾರ್ಥದಲ್ಲಿ ಬೆಳ್ಳುಳ್ಳಿ ಕೂಡ ಒಂದಾಗಿದೆ. ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲ ಅಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಇಂತಹ ಬೆಳ್ಳುಳ್ಳಿಯಲ್ಲಿ ಸಾರಜನಕ, ರಂಜಕ ಪಿಷ್ಟ. ಮೇದಸ್ಸು ಸುಣ್ಣ, ಮುಂತಾದ ಜೀವಸತ್ವ ಇರುವ ಔಷಧಿಯ ಗುಣಗಳಿವೆ. ಪ್ರತಿದಿನ ಅಡುಗೆಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗಗಳನ್ನು ಪಡೆದುಕೊಳ್ಳಬಹುದು. ಬೆಳ್ಳುಳ್ಳಿಯ ಉತ್ತಮ ಗುಣಗಳು ಆರೋಗ್ಯದ ಮಟ್ಟಿಗೆ ಚಿನ್ನದಂತೆಯೇ ಕೆಲಸ ಮಾಡುತ್ತದೆ. ಬೆಳ್ಳುಳ್ಳಿಯನ್ನು ಆಹಾರದ ಜೊತೆಗೆ ಸೇವಿಸುವ ಮೂಲಕ ಆರೋಗ್ಯವೂ ವೃದ್ಧಿಯಾಗುತ್ತದೆ.

ಬೆಳ್ಳುಳ್ಳಿಯ ಔಷಧೀಯ ಔಷಧೀಯ ಗುಣಗಳು:

ಜೀರ್ಣಕ್ರಿಯೆಗೆ ನೆರವಾಗುವುದು
ಬೆಳ್ಳುಳ್ಳಿಯಲ್ಲಿ ಇರುವಂತಹ ಕೆಲವೊಂದು ಖನಿಜಾಂಶಗಳು ಮತ್ತು ವಿಟಮಿನ್ ಗಳು ಯಕೃತ್, ಮೂತ್ರನಾಳ ಮತ್ತು ಕಿಡ್ನಿಯ ಆರೋಗ್ಯವನ್ನು ಸುಧಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಇದರೊಂದಿಗೆ ಬೆಳ್ಳುಳ್ಳಿಯಲ್ಲಿ ಇರುವಂತಹ ಒತ್ತಡ ವಿರೋಧಿ ಅಂಶಗಳು ಹೊಟ್ಟೆಯಲ್ಲಿ ಹೆಚ್ಚು ಆಮ್ಲವು ಬಿಡುಗಡೆ ಆಗುವುದನ್ನು ತಡೆಯುವುದು ಮತ್ತು ಜೀರ್ಣಕ್ರಿಯೆ ವ್ಯವಸ್ಥೆಯು ಹೆಚ್ಚು ಪರಿಣಾಮಕಾರಿ ಆಗಿರುವಂತೆ ಮಾಡುವುದು.

ತೂಕ ಇಳಿಸಲು ನೆರವಾಗುವುದು
ದೇಹದಲ್ಲಿ ಬೊಜ್ಜು ಆವರಿಸಿಕೊಂಡು, ಅನಾರೋಗ್ಯಕಾರಿ ಆಗಿ ತೂಕ ಬೆಳೆದಿದ್ದರೆ ಹಸಿ ಬೆಳ್ಳುಳ್ಳಿ ಸೇವಿಸಿ. ಹಸಿ ಬೆಳ್ಳಿಯಲ್ಲಿ ಕೆಟ್ಟ ಮತ್ತು ಅಧಿಕ ಕೊಬ್ಬನ್ನು ಕರಗಿಸುವಂತಹ ಅಂಶಗಳು ಇವೆ. ವಿವಿಧ ರೀತಿಯ ಅಧ್ಯಯನಗಳ ಪ್ರಕಾರ ಬೆಳ್ಳುಳ್ಳಿಯು ಚಯಾಪಚಯ ಕ್ರಿಯೆ ವೃದ್ಧಿಸುವುದು ಎಂದು ಕಂಡುಕೊಳ್ಳಲಾಗಿದೆ.

ರಕ್ತದಲ್ಲಿ ಸಕ್ಕರೆ ಮಟ್ಟ ಕಾಪಾಡಲು
ಮಧುಮೇಹಿಗಳಿಗೆ ಬೆಳ್ಳುಳ್ಳಿಯು ತುಂಬಾ ಪ್ರಯೋಜನಕಾರಿ. ಇದರಲ್ಲಿ ಇರುವಂತಹ ಅಲಿಸಿನ್ ಎನ್ನುವ ಅಂಶವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು. ಜಜ್ಜಿಕೊಂಡ ಬೆಳ್ಳುಳ್ಳಿಯನ್ನು ದಿನದಲ್ಲಿ ಎರಡು ಸಲ ಸೇವಿಸಿದರೆ, ಸಕ್ಕರೆ ಮಟ್ಟವು ನಿಯಂತ್ರಣದಲ್ಲಿ ಇರುವುದು.

ಖಿನ್ನತೆ ನಿವಾರಿಸುವುದು
ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಬೆಳ್ಳುಳ್ಳಿ ತುಂಬಾ ಒಳ್ಳೆಯದು. ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ಸೇವಿಸಿದರೆ ಆಗ ಅದು ನೈಸರ್ಗಿಕವಾಗಿ ಮನಸ್ಥಿತಿ ಸುಧಾರಣೆ ಮಾಡುವುದು. ದೇಹದಲ್ಲಿನ ರಾಸಾಯನಿಕಗಳನ್ನು ಇದು ಸಮತೋಲನದಲ್ಲಿ ಇಡುವುದು. ಖಿನ್ನತೆಯು ಮೆದುಳಿನ ರಾಸಾಯನಿಕದ ಅಸಮತೋಲನದಿಂದ ಬರುವುದು ಮತ್ತು ಬೆಳ್ಳುಳ್ಳಿಯು ಖಿನ್ನತೆ ವಿರುದ್ಧ ಹೋರಾಡಲು ನೆರವಾಗವುದು.

ಹಲವು ಖನಿಜಗಳ ಗಣಿಯಾಗಿದೆ
ಬೆಳ್ಳುಳ್ಳಿಯಲ್ಲಿ ಮ್ಯಾಂಗನೀಸ್, ಸೆಲೆನಿಯಂ, ವಿಟಮಿನ್ ಸಿ, ವಿಟಮಿನ್ B6 ಹಾಗೂ ಕರಗುವ ನಾರು ಇದೆ. ಇದರ ಹೊರತಾಗಿ ಚಿಕ್ಕ ಪ್ರಮಾಣದಲ್ಲಿ ಪೊಟ್ಯಾಶಿಯಂ, ಗಂಧಕ, ಕಬ್ಬಿಣ, ಕ್ಯಾಲ್ಸಿಯಂ, ತಾಮ್ರ ಮತ್ತು ವಿಟಮಿನ್ B1 ಇವೆ. ಇವೆಲ್ಲವೂ ಆರೋಗ್ಯವನ್ನು ವೃದ್ದಿಸಲು ನೆರವಾಗುತ್ತದೆ.

ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ
ಬೆಳ್ಳುಳ್ಳಿಯಲ್ಲಿ ಅಜೋವೀನ್ (ajoene) ಎಂಬ ಪೋಷಕಾಂಶವಿದೆ. ಈ ಪೋಷಕಾಂಶ ದೇಹದೊಳಗೆ ರಕ್ತ ಹೆಪ್ಪುಗಟ್ಟುವುದನ್ನು ತಡೆಯುವ ಕ್ಷಮತೆ ಹೊಂದಿದೆ. ನಿಯಮಿತವಾಗಿ ಬೆಳ್ಳುಳ್ಳಿ ಸೇವಿಸುತ್ತ ಬಂದರೆ ದೇಹದಲ್ಲಿ ಉತ್ತಮ ಪ್ರಮಾಣದ ರಕ್ಷಣೆ ದೊರೆಕುತ್ತದೆ.

ಹೃದಯವನ್ನು ರಕ್ಷಿಸುತ್ತದೆ
ಪ್ರತಿದಿನ ಊಟದಲ್ಲಿ ಕೆಲವು ಎಸಳು ಬೆಳ್ಳುಳ್ಳಿ ಸೇವಿಸುವ ಮೂಲಕ ರಕ್ತನಾಳಗಳು ಸಡಿಲಗೊಳ್ಳುತ್ತವೆ. ಅಲ್ಲದೇ ಕ್ಯಾನ್ಸರ್ ಗೆ ಕಾರಣವಾಗುವ ಫ್ರೀ ರ್‍ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುತ್ತವೆ. ಇವೆರಡೂ ಹೃದಯದ ಆರೋಗ್ಯ ಹೆಚ್ಚಿಸಲು ನೆರವಾಗುತ್ತವೆ.

ಹೀಗೆ ಅನೇಕ ಔಷಧೀಯ ಗುಣ ಹೊಂದಿರುವ ಬೆಳ್ಳುಳ್ಳಿ ಅಮೃತಕ್ಕೆ ಸಮಾನ .

ಟಾಪ್ ನ್ಯೂಸ್

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.