“ಈ ತರಕಾರಿ ಸೊಪ್ಪು”ಗಳ ಔಷಧೀಯ ಗುಣಗಳ ಬಗ್ಗೆ ಗೊತ್ತಾ…


Team Udayavani, Oct 6, 2018, 2:36 PM IST

green-leaf-vegetable-image.jpg

ಹಿಂದೆ ಜನರು ತಮಗೆ ಅಗತ್ಯವಿರುವ ಔಷಧಿಗಳನ್ನು ತಮ್ಮ,-ತಮ್ಮ ಮನೆಗಳಲ್ಲಿಯೇ ತಯಾರಿಸುತ್ತಿದ್ದರು. ಆದರೆ ಇಂದಿನ ಪೀಳಿಗೆಯವರಿಗೆ ಔಷಧದ ಬಗ್ಗೆ ಅಷ್ಟೊಂದು ತಿಳಿದಿರಲಿಕ್ಕಿಲ್ಲ. ಹಾಗಾಗಿ ನಾವು ಮನೆಯಲ್ಲಿ ಸೇವಿಸುವ ಕೆಲವೊಂದು ಸೊಪ್ಪುಗಳಲ್ಲಿ ಏನೇನು ಅಡಗಿದೆ ಔಷಧೀಯ ಗುಣಗಳು ಎಂಬುದು ತಿಳಿದುಕೊಳ್ಳೋಣ.

1. ಮೆಂತೆ ಸೊಪ್ಪು:

– ಮೆಂತೆ ಸೊಪ್ಪನ್ನು ಚೆನ್ನಾಗಿ ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಸೊಂಪಾಗಿ ಇರುತ್ತದೆ.

– ಮಧುಮೇಹಿಗಳಿಗೂ ಇದು ಉತ್ತಮ ಔಷಧಿ.

– ಮೆಂತೆ ಸೊಪ್ಪಿನಲ್ಲಿ ಅಧಿಕ ಪ್ರಮಾಣದಲ್ಲಿ ಕಬ್ಬಿಣಾಂಶ ಇರುವುದರಿಂದ ರಕ್ತ ಹೀನತೆಗೆ ಪ್ರಮುಖ ಔಷಧಿಯನ್ನಾಗಿ ಉಪಯೋಗಿಸುತ್ತಾರೆ.

– ಮೆಂತೆ ಸೊಪ್ಪಿನ ಗಂಜಿ ತಯಾರಿಸಿ ಸೇವಿಸಿದಲ್ಲಿ ದೇಹದ ಉಷ್ಣತೆ ಕಡಿಮೆಯಾಗುವುದಲ್ಲದೆ ಪಿತ್ತ ಶಮನವಾಗುವುದು.

2.ಕೊತ್ತಂಬರಿ ಸೊಪ್ಪು:

– ಒಂದು ಲೋಟ ಮಜ್ಜಿಗೆಗೆ 2 ಚಮಚ ಇದರ ರಸವನ್ನು ಬೆರೆಸಿ, ಪ್ರತಿ ದಿನ ಕುಡಿಯುತ್ತಾ ಬಂದರೆ ಅಜೀರ್ಣ, ವಾಂತಿ ಹಾಗೂ ಬಾಯಿಯಲ್ಲಿರುವ ಹುಣ್ಣು ಸಹ ನಿವಾರಣೆಯಾಗುತ್ತದೆ.

– ಒಂದು ಚಮಚ ಕೊತ್ತಂಬರಿ ರಸಕ್ಕೆ 1 ಚಮಚ ಜೇನು ಬೆರೆಸಿ ಕುಡಿದರೆ ಜ್ಞಾಪಕ ಶಕ್ತಿ ಹೆಚ್ಚುತ್ತದೆ.

– ಮಧುಮೇಹಿಗಳ ಶರೀರದಲ್ಲಿ ಅಗತ್ಯವಿದ್ದಷ್ಟು ಪ್ರಮಾಣದಲ್ಲಿ ಇನ್ಸುಲಿನ್‌ ಉತ್ಪತ್ತಿಯಾಗುವುದಿಲ್ಲ. ಕೊತ್ತಂಬರಿಯಲ್ಲಿರುವ ಪೋಷಕಾಂಶಗಳು ಇನ್ಸುಲಿನ್‌ ಉತ್ಪತ್ತಿಯನ್ನು ಉತ್ತೇಜಿಸಿ ಮಧುಮೇಹವನ್ನು ಕಡಿಮೆಗೊಳಿಸುತ್ತವೆ.

3.ಪುದೀನಾ ಸೊಪ್ಪು:

– ಪುದೀನಾ ರಸದಿಂದ ಬಾಯಿ ಮುಕ್ಕಳಿಸಿದರೆ ಬಾಯಿಯ ದುರ್ವಾಸನೆ ಹಾಗೂ ಹಲ್ಲು ನೋವು ಕಡಿಮೆಯಾಗುವುದು.

– ಪುದೀನಾ ಸೊಪ್ಪಿನ ಸೇವನೆಯಿಂದ ಹಸಿವೆ ಹೆಚ್ಚಾಗುವುದು.

– ಮಕ್ಕಳ ಹೊಟ್ಟೆಯಲ್ಲಿ ಜಂತು ಹುಳುಗಳ ಸಮಸ್ಯೆ ಇದ್ದರೆ ಈ ರಸವನ್ನು ಸೇವಿಸುವುದರಿಂದ ನಿವಾರಣೆಯಾಗುತ್ತದೆ.

– ಒಂದು ಹಿಡಿ ಪುದೀನಾ ಎಲೆಯನ್ನು ರುಬ್ಬಿ ಸೋಸಿಕೊಂಡು ಅದಕ್ಕೆ ಸ್ವಲ್ಪ ಜೀರಿಗೆ, ನಿಂಬೆ ರಸ, ಜೇನು ತುಪ್ಪ ಸೇರಿಸಿ ಪ್ರತಿದಿನ 3 ರಿಂದ 4 ಕಪ್‌ ಕುಡಿಯುವುದರಿಂದ ರಕ್ತವನ್ನು ಶುದ್ಧೀಕರಿಸಿ ದೇಹವನ್ನು ಆರೋಗ್ಯಯುತವಾಗಿರುತ್ತದೆ.

4. ಕರಿಬೇವಿನ ಸೊಪ್ಪು:

-ಮಧುಮೇಹ ರೋಗಿಗಳು ಪ್ರತಿದಿನ ರಾತ್ರಿ ಮಲಗುವ ಮುನ್ನ 6-7 ಎಲೆಗಳನ್ನು ಅಗಿದು ತಿಂದರೆ ಬೇಗನೆ ನಿಯಂತ್ರಣಕ್ಕೆ ಬರುವುದು.

– ಕರಿಬೇವಿನ ರಸವನ್ನು ಕಣ್ಣಿಗೆ ಹಾಕಿದರೆ ಪೊರೆ ಬರುವುದಿಲ್ಲ.

– ಕರಿಬೇವಿನ ಚಿಗುರುಗಳನ್ನು ಜೇನಿನೊಂದಿಗೆ ಬೆರೆಸಿ ತಿಂದರೆ ಮೂಲವ್ಯಾಧಿಯ ಉರಿ ಹಾಗೂ ನೋವು ಕಡಿಮೆಯಾಗುವುದು.

5. ಮೂಲಂಗಿ ಸೊಪ್ಪು:

– ಮೂಲಂಗಿ ಸೊಪ್ಪಿನ ರಸವನ್ನು ಸೇವಿಸಿದರೆ ಮೂತ್ರಕೋಶದಲ್ಲಿನ ಕಲ್ಲು ಹೊರ ಬರುವುದು.

– ಮೂಲಂಗಿ ಅಧಿಕ ಬಳಕೆಯಿಂದ ಕಣ್ಣಿನ ಕಾಂತಿ ಹೆಚ್ಚುವುದು.

– ಮೂಲಂಗಿ ಸೇವಿಸುವುದರಿಂದ ರಕ್ತ ಸಂಚಾರ ಸುಗಮವಾಗುವುದು.

– ರಕ್ತದ ಒತ್ತಡ ಇರುವವರು ಮೂಲಂಗಿ ಹೆಚ್ಚಾಗಿ ಸೇವಿಸುವುದರಿಂದ ನಿಯಂತ್ರಣಕ್ಕೆ ಬರುವುದು.

6. ಪಾಲಕ್‌ ಸೊಪ್ಪು:

– ಪಾಲಕ್‌ ಸೊಪ್ಪನ್ನು  ಅರೆದು ಪೇಸ್ಟ್‌ನಂತೆ ತಯಾರಿಸಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮೊಡವೆಗಳು ಕಡಿಮೆಯಾಗುವುದು.

– ಪಾಲಕ್‌ಸೊಪ್ಪು ಕಬ್ಬಿಣದ ಅಂಶವನ್ನು ಹೊಂದಿದ್ದು ಇದನ್ನು ಹೇರಳವಾಗಿ ಸೇವಿಸುವುದರಿಂದ ಕ್ಯಾಲ್ಸಿಯಂ ಕೊರತೆ ನೀಗುವುದು.

7. ನುಗ್ಗೆ ಸೊಪ್ಪು:

-ನುಗ್ಗೆ ಸೊಪ್ಪನ್ನು ಸೇವನೆಯಿಂದ ಶ್ವಾಸಕೋಶವು ಸ್ವಚ್ಛವಾಗುವುದು.

-ಸಕ್ಕರೆ ಕಾಯಿಲೆಗೆ  ನುಗ್ಗೆ ಸೊಪ್ಪು ರಾಮಬಾಣ.

– ನುಗ್ಗೆ ಸೊಪ್ಪಿನ ರಸ ಹಾಗೂ ಜೇನು ತುಪ್ಪ ಬೆರೆಸಿ ಸೇವಿಸಿದರೆ ಕೆಮ್ಮು ಗುಣವಾಗುವುದು.

8. ಸಬ್ಬಸಿಗೆ ಸೊಪ್ಪು:

– ಸಬ್ಬಸಿಗೆ ಸೊಪ್ಪು ರಕ್ತದ ಕೊಲೆಸ್ಟರಾಲ್‌ ಮಟ್ಟವನ್ನು ನಿಯಂತ್ರಿಸುವಲ್ಲಿ  ಸಹಾಯ ಮಾಡುತ್ತದೆ.

– ಮೂಳೆಗಳ ಸರಿಯಾದ ಬೆಳವಣಿಗೆಗೆ ಮತ್ತು ಅಭಿವೃದ್ಧಿಗೆ ಉಪಯುಕ್ತ.

– ಪ್ರಕೃತಿಯ ರೋಗಾಣುಕಾರಕ ಅಥವಾ ಬ್ಯಾಕ್ಟೀರಿಯಾಗಳನ್ನು ಕಡಿಮೆಗೊಳಿಸಿ ಅತಿಸಾರ ನಿವಾರಿಸುತ್ತವೆ.

9. ಬಸಳೆ ಸೊಪ್ಪು: 

– ದೇಹಕ್ಕೆ ಅಗತ್ಯವಾದ ಕಬ್ಬಿಣಾಂಶ ಒದಗಿಸುವಲ್ಲಿ ಬಸಳೆ ಸೊಪ್ಪು ಪ್ರಮುಖ ಪಾತ್ರ ವಹಿಸುತ್ತದೆ.

– ಬಸಳೆ ಸೊಪ್ಪನ್ನು ಬಾಯಿಗೆ ಹಾಕಿ ನಿಧಾನವಾಗಿ ಅಗೆಯುತ್ತಿದ್ದರೆ ಬಾಯಿಹುಣ್ಣು ಗು ಣವಾಗುತ್ತದೆ.

– ಬಸಳೆ ಎಲೆಯ ಕಷಾಯವನ್ನು ನಿಯಮಿತವಾಗಿ ಸೇವಿಸಿದರೆ ಮಲಬದ್ಧತೆ ನಿವಾರಣೆಯಾಗುತ್ತದೆ.

– ಬಸಳೆ ಸೊಪ್ಪಿನ ರಸಕ್ಕೆ ಬೆಣ್ಣೆ ಸೇರಿಸಿ ಸುಟ್ಟಗಾಯಕ್ಕೆ ಹಚ್ಚಿದರೆ ಉರಿ ಕಡಿಮೆಯಾಗಿ ಗಾಯ ವಾಸಿಯಾಗುತ್ತದೆ.

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.