ಮೂಲಿಕೆಗಳ ರಾಣಿ ತುಳಸಿ..ಔಷಧೀಯ ಗುಣ ತಿಳಿದುಕೊಳ್ಳಿ
Team Udayavani, Mar 15, 2019, 2:48 PM IST
ಹಿಂದಿನ ಕಾಲದಲ್ಲಿ ನಮ್ಮ ಮನೆಯ ಹಿತ್ತಲಿನಲ್ಲಿಯೇ ತರಕಾರಿ ಹಣ್ಣು ಹಂಪಲುಗಳ ಜೊತೆಗೆ ಔಷಥೀಯ ಸಸ್ಯಗಳನ್ನು ಕೂಡ ಹಿರಿಯರು ಬೆಳೆಯುತ್ತಿದ್ದರು ಇದರಿಂದ ಮನೆಯ ಔಷಧೋಪಾಚಾರದ ಸಮಸ್ಯೆಯೂ ಬಗೆ ಹರಿಯುತ್ತಿತ್ತು ಜೊತೆಗೆ ಮನೆಗೂ ಕೀಟಗಳಿಂದ ಸಂರಕ್ಷಣೆ ದೊರೆಯುತ್ತದೆ. ಇಂತಹ ಪ್ರಮುಖ ಮೂಲಿಕೆ ತುಳಸಿ. ಮೂಲಿಕೆಗಳ ರಾಣಿಯೆಂದೇ ಕರೆಯಲ್ಪಡುವ ತುಳಸಿ ಪ್ರತಿಯೊಬ್ಬರ ಮನೆಯಲ್ಲೂ ಕಂಡು ಬರುವ ಸಾಮಾನ್ಯ ಗಿಡ ಮೂಲಿಕೆಯಾಗಿದೆ.
ಹಿಂದೂ ಧರ್ಮದಲ್ಲಿ ತುಳಸಿಗೆ ಹೆಚ್ಚಿನ ಸ್ಥಾನವಿದೆ. ಪ್ರತಿಯೊಂದು ಪೂಜೆ ಪುನಸ್ಕಾರಗಳಲ್ಲಿ ಶುದ್ಧತೆಯ ಸಂಕೇತವಾಗಿ ತುಳಸಿಯನ್ನು ಹೆಚ್ಚಾಗಿಯೇ ಬಳಸುತ್ತಾರೆ. ವಾಸ್ತು ಕೂಡ ತುಳಸಿಗೆ ಪೂಜನೀಯ ಸ್ಥಾನವನ್ನು ನೀಡಿದೆ. ಈ ಗಿಡವನ್ನು ಮನೆಯ ಮುಂದುಗಡೆ ಬೆಳೆಸುವುದರಿಂದ ಮನೆಯವರೆಲ್ಲರಿಗೂ ಒಳಿತಾಗುತ್ತದೆ ಎಂಬ ವಿಶ್ವಾಸ ಕೂಡ ನಮ್ಮಲಿದೆ. ವೈದ್ಯಕೀಯ ಕ್ಷೇತ್ರದಲ್ಲೂ ತುಳಸಿಯು ಹಲವಾರು ಅದ್ಬುತಗಳನ್ನು ಮಾಡಿದೆ.
ತುಳಸಿ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಬೆಳೆಯುವ ದೈವಿಕ ಸಸ್ಯ. ತುಳಸಿ ಧಾರ್ಮಿಕವಾಗಿ ಮಾತ್ರವಲ್ಲದೆ, ಔಷಧೀಯ ಗುಣಗಳನ್ನು ಹೊಂದಿದೆ.
ತುಳಸಿ ಎಲೆಯ ಕೆಲವು ಆರೋಗ್ಯಕರ ಪ್ರಯೋಜನಗಳು:
• ಜ್ವರ ಹಾಗೂ ಶೀತದ ಸಮಯದಲ್ಲಿ ಇದರ ಎಲೆಗಳನ್ನು ಚಹಾದೊಂದಿಗೆ ಕುದಿಸಿ ಕುಡಿಯುವುದರಿಂದ ಮಲೇರಿಯಾ ಹಾಗೂ ಡೆಂಗ್ಯೂ ಜ್ವರ ಉಪಶಮನವಾಗುತ್ತದೆ. ಇದರ ಎಲೆಗಳನ್ನು ಜಗಿಯುವುದರಿಂದ ಶೀತ ಹಾಗೂ ಕೆಮ್ಮು ನಿವಾರಣೆಯಾಗುತ್ತದೆ.
• ಕಿಡ್ನಿಕಲ್ಲಿನ ಸಮಸ್ಯೆ ಇರುವವರು ತುಳಸಿ ರಸವನ್ನು ಜೇನಿನೊಂದಿಗೆ ನಿಯಮಿತವಾಗಿ ಸೇವಿಸುವುದರಿಂದ ಈ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.
• ತುಳಸಿ ಬೊಜ್ಜನ್ನು ನಿಯಂತ್ರಿಸುವುದಲ್ಲದೆ ರಕ್ತದಲ್ಲಿನ ಕೊಬ್ಬಿನಂಶವನ್ನು ನಿಯಂತ್ರಿಸುತ್ತದೆ.
• ತುಳಸಿ ರಸವನ್ನು ಗಂಧದೊಂದಿಗೆ ತೇಯ್ದು ನೆತ್ತಿಗೆ ಹಚ್ಚುವುದರಿಂದ ತಲೆನೋವು ಕಡಿಮೆಯಾಗುತ್ತದೆ.
• ತುಳಸಿ ಎಲೆಯನ್ನು ಪ್ರತಿ ದಿನ ತಿಂದರೆ ಹಲವು ಸೋಂಕು ಮತ್ತು ರೋಗವನ್ನು ದೂರವಿರಿಸಬಹುದು . ಇದರ ಸೇವನೆಯಿಂದ ಜ್ಞಾಪಕ ಶಕ್ತಿಯೂ ಹೆಚ್ಚಾಗಿ ಬುದ್ಧಿವಂತಿಕೆಯೂ ಚುರುಕುಗೊಳ್ಳುತ್ತದೆ.
• ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ರಸವನ್ನು ನೀರಿನೊಂದಿಗೆ ಬೆರೆಸಿ ಸೇವಿಸಿದರೆ ತ್ವಚೆಯ ಹೊಳಪು ಹೆಚ್ಚುತ್ತದೆ.
• ಹಲ್ಲು ಗಳಲ್ಲಿ ಊತ ಇರುವವರು ಇದರ ಎಲೆಯನ್ನು ನೋವಿರುವ ಹಲ್ಲಿನ ಕೆಳಗೆ ಇರಿಸಿ ಇದರಿಂದ ಹಲ್ಲು ನೋವು ಕಡಿಮೆಯಾಗುತ್ತದೆ.
• ತುಳಸಿ ಬೀಜದ ಪುಡಿ ಮತ್ತು ಅದರ ಬೇರಿನ ಪುಡಿಯನ್ನು ಸಮಾನ ಪ್ರಮಾಣದಲ್ಲಿ ತೇಯ್ದು ಹಸುವಿನ ಹಾಲಿನೊಂದಿಗೆ ಸೇವಿಸುವುದರಿಂದ ದುರ್ಬಲತೆ ಕಡಿಮೆಯಾಗುತ್ತದೆ.
• 2 ರಿಂದ 4 ಗ್ರಾಂ ತುಳಸಿಯನ್ನು ಪುಡಿ ಮಾಡಿ ಹಾಲಿನೊಂದಿಗೆ ಸೇವಿಸುವುದರಿಂದ ಮೂಳೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.
ದೈವಿಕ ಸ್ಥಾನ ಹೊಂದಿರುವ ತುಳಸಿಯು ಆರೋಗ್ಯದಾಯಕವಾಗಿಯೂ ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ
JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?
“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…
ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!
ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್