ಆರೋಗ್ಯ; ದಾಳಿಂಬೆ ಹಣ್ಣಿನ ರಸ ಮಾತ್ರವಲ್ಲ…ಇದರಲ್ಲಿದೆ ಹಲವು ಔಷಧೀಯ ಗುಣ
Team Udayavani, Feb 3, 2020, 6:39 PM IST
ದಾಳಿಂಬೆ ಹಣ್ಣನ್ನು ಔಷಧವಾಗಿ ಹಲವಾರು ವರುಷಗಳಿಂದ ಬಳಸಲಾಗುತ್ತಿದೆ. ಇಂದಿಗೂ ಹಲವು ಆರೋಗ್ಯ ಸಮಸ್ಯೆ ನಿವಾರಿಸುವಲ್ಲಿ ಇದು ಸಹಕಾರಿ. ದಾಳಿಂಬೆ ಹಣ್ಣಿನ ರಸ ಅಥವಾ ಅದರ ಬೀಜ ಅಥವಾ ಸಿಪ್ಪೆ ಪ್ರತಿ ಭಾಗವು ಅದ್ಭುತ ಪ್ರಯೋಜನಗಳನ್ನು ಹೊಂದಿದೆ.
ದಾಳಿಂಬೆಯಲ್ಲಿದೆ ಕಬ್ಬಿಣದ ಖಜಾನೆ : ದೇಹದಲ್ಲಿ ಹೆಚ್ಚಿನ ಶಕ್ತಿ ತುಂಬಲು ರಕ್ತದಲ್ಲಿ ಕಬ್ಬಿಣದ ಅಂಶ ಇರುವುದು ಅಗತ್ಯ. ದೇಹದಲ್ಲಿ ಕಬ್ಬಿಣದ ಅಂಶ ಹೆಚ್ಚಲು ದಾಳಿಂಬೆ ಸೇವನೆ ಅತ್ಯುತ್ತಮ ಆಯ್ಕೆಯಾಗಿದೆ.
ಹೃದಯಕ್ಕೆ ಒಳಿತು: ದಾಳಿಂಬೆ ಹಣ್ಣು ರಕ್ತವನ್ನು ತೆಳುವಾಗಿಸುವಲ್ಲಿ ಸಹಾಯ ಮಾಡುತ್ತದೆ. ಹಾಗಾಗಿ ಅನಗತ್ಯ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಗಟ್ಟುತ್ತದೆ. ಇದರಿಂದ ಹೃದಯ ಸೂಕ್ತ ರೀತಿಯಲ್ಲಿ ಕಾರ್ಯಾಚರಣೆ ಮಾಡುವಂತೆ ಉತ್ತೇಜಿಸುತ್ತದೆ.
ದೇಹದ ಕಾರ್ಯಕ್ಷಮತೆಯನ್ನು ವೃದ್ಧಿಸುತ್ತದೆ: ದಾಳಿಂಬೆ ರಸವು ದೇಹದ ಕಾರ್ಯಕ್ಷಮತೆಯನ್ನು ವೃದ್ಧಿಸುತ್ತದೆ. ಇದು ನೋವನ್ನು ಕಡಿಮೆ ಮಾಡಲು ಮತ್ತು ದೇಹಕ್ಕೆ ಚೈತನ್ಯವನ್ನು ಒದಗಿಸಲು ಸಹಾಯ ಮಾಡುತ್ತದೆ
ಉತ್ತಮಗೊಳ್ಳುವ ರೋಗನಿರೋಧಕ ಶಕ್ತಿ: ದಾಳಿಂಬೆ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಉತ್ತಮಪಡಿಸುವುದು. ದೇಹಕ್ಕೆ ಮಾರಕವಾಗುವ ಹಲವು ಕ್ರಿಮಿಗಳನ್ನು ಎದುರಿಸಲು ದೇಹವನ್ನು ಸದೃಢಗೊಳಿಸಲು ದಾಳಿಂಬೆಯಲ್ಲಿ ಹೇರಳವಾಗಿರುವ ವಿಟಮಿನ್ ಸಿ ನೆರವಾಗುತ್ತವೆ.
ಸಂಧಿವಾತ ತಡೆಯುತ್ತದೆ: ದಾಳಿಂಬೆ ಹಣ್ಣು ಸೇವಿಸುವುದರಿಂದ ಸಂಧಿವಾತವನ್ನು ತಡೆಗಟ್ಟಬಹುದು. ಅದಕ್ಕೆ ಕಾರಣ ಈ ಹಣ್ಣಿನಲ್ಲಿರುವ ಉರಿಯೂತದ ವಿರೋಧಿ ಲಕ್ಷಣಗಳು.
ಅಲರ್ಜಿಗೆ ನೈಸರ್ಗಿಕ ಪ್ರತಿರೋಧಿಯಾಗಿದೆ: ಹಲವರಿಗೆ ಕೆಲವು ವಸ್ತುಗಳಿಂದ ಅಲರ್ಜಿಯುಂಟಾಗುತ್ತದೆ ಈ ಅಲರ್ಜಿಯನ್ನು ಪ್ರತಿರೋಧಿಸುವ ಅಂಶ ದಾಳಿಂಬೆ ಹಣ್ಣಿನಲ್ಲಿರುದರಿಂದ ಇದರ ಸೇವನೆ ಅತ್ಯುತ್ತಮ .
ಹೊಟ್ಟೆ ತುಂಬಿಸುತ್ತದೆ: ದಾಳಿಂಬೆ ಹಣ್ಣಿನಲ್ಲಿ ಆಹಾರದ ನಾರಿನಂಶ ಹೆಚ್ಚಿರುತ್ತದೆ. ಇದರಿಂದ ಈ ಹಣ್ಣನ್ನು ಸೇವಿಸಿದರೆ ಹೊಟ್ಟೆ ಹಸಿವು ತಣಿದು, ಹೊಟ್ಟೆ ತುಂಬಿದ ಭಾವವನ್ನು ನೀಡುತ್ತದೆ.
ಜೀರ್ಣಕ್ರಿಯೆಯನ್ನು ನಿಧಾನಿಸುತ್ತದೆ: ನಾರಿನಂಶ ಜೀರ್ಣಕ್ರಿಯೆಯನ್ನು ನಿಧಾನಿಸುವುದರೊಂದಿಗೆ, ಕರುಳಿನಲ್ಲಿ ಆಹಾರ ಹೀರುವಿಕೆಯನ್ನು ಕಡಿಮೆಗೊಳಿಸುತ್ತದೆ. ಹಾಗಾಗಿ ಇದು ಅನಗತ್ಯ ಆಹಾರ ಸೇವನೆಯನ್ನು ತಡೆಗಟ್ಟುತ್ತದೆ. ಇದು ತೂಕ ನಿಭಾಯಿಸುವವರಿಗೆ ಸೂಕ್ತವಾದ ಹಣ್ಣು.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ದಾಳಿಂಬೆ ಹಣ್ಣಿನಲ್ಲಿ ಆ್ಯಂಟಿಓಕ್ಸಿಡಾಂಟ್ಸ್ ಹೆಚ್ಚಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ವರ್ಧಿಸುತ್ತದೆ. ಇದು ಎಲ್ಲಾ ಬಗೆಯ ವೈರಸ್ ಮತ್ತು ಬ್ಯಾಕ್ಟೀರಿಯಾ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ.
ಮೊಡವೆಗಳನ್ನು ನಿವಾರಿಸುತ್ತದೆ: ಉರಿಯೂತದ ವಿರೋಧಿ ಗುಣದಿಂದ ದಾಳಿಂಬೆ ಮೊಡವೆಗಳನ್ನು ನಿವಾರಿಸುವಲ್ಲಿ ಸಹಾಯ ಮಾಡುತ್ತದೆ. ದಾಳಿಂಬೆ ಬೀಜಗಳನ್ನು ಅರಿಶಿನದೊಂದಿಗೆ ಪುಡಿಮಾಡಿ ಮೊಡವೆಗಳಾಗಿರುವ ಸ್ಥಳಕ್ಕೆ ಲೇಪಿಸುದರಿಂದ ಮೊಡವೆಗಳನ್ನು ನಿವಾರಿಸಬಹುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ
JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?
“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…
ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!
ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್