ಪ್ರಕೃತಿ ಸೌಂದರ್ಯದ “ಚಾರ್ಮಾಡಿ” ಎಂಬ ಪ್ರವಾಸಿಗರ ಸ್ವರ್ಗ


Team Udayavani, Jul 6, 2018, 11:59 AM IST

charmadi-main.jpg

ಚಾರ್ಮಾಡಿ ಹೆಸರು ಕೇಳದವರಿಲ್ಲ ಒಂದು ವೇಳೆ ಕೇಳರಿಯದವರು ಇತ್ತೀಚಿನ ಪತ್ರಿಕೆಗಳನ್ನು ಮೆಲುಕು ಹಾಕಿದರೆ ಪತ್ರಿಕೆ ತುಂಬೆಲ್ಲಾ ಚಾರ್ಮಾಡಿ ಘಾಟಿಯದ್ದೇ ಸುದ್ಧಿ, ಹೌದು ಇದು ಇತ್ತೀಚೆಗೆ ಸುರಿದ ಭಾರೀ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ  ಗುಡ್ಡ ಕುಸಿದು ಪ್ರಯಾಣಿಕರು ರಾತ್ರಿಯಿಡೀ ಮಕ್ಕಳು ಮರಿಯೆನ್ನದೆ ರಸ್ತೆಯಲ್ಲೇ ಕಾಲಕಳೆದ ಘಟನೆ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಪ್ರಕೃತಿಯ ಏರಿಳಿತಗಳಿಗೆ ತಲೆಬಾಗಲೇ ಬೇಕು ಆದೇನೆ ಇರಲಿ ನಾವೀಗ  ಚಾರ್ಮಾಡಿಯನ್ನು ಪ್ರವಾಸಿ ಕೇಂದ್ರವಾಗಿ ನೋಡೋಣ…

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗಡಿಯನ್ನು ಹೊಂದಿಕೊಂಡು ಪಶ್ಚಿಮ ಘಟ್ಟಗಳ ಸಾಲಿನ ಕೆಳಭಾಗದಲ್ಲಿ ನೆಲೆಯೂರಿರುವ ಪುಟ್ಟ ಹಳ್ಳಿ ಚಾರ್ಮಾಡಿ. ಇಲ್ಲಿ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಬೆಸೆಯುವ ಮುಖ್ಯ ರಸ್ತೆಯೊಂದು ಈ ಹಳ್ಳಿಯಲ್ಲಿ ಹಾದುಹೊಗಿರುವುದರಿಂದ ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಕಾರಣವಾಗಿದೆ. ಜೊತೆಗೆ ಇಲ್ಲಿ ಎತ್ತರವಾದ ಬೆಟ್ಟ  ಗುಡ್ಡಗಳು , ಆಸಂಖ್ಯಾತ ಜಲಪಾತಗಳು, ದಟ್ಟವಾದ ಕಾನನಗಳು, ಕಾನನಗಳ ನಡುವೆ ಓಡಾಡುವ ವನ್ಯಮೃಗಗಳು ಹತ್ತಾರು ತೊರೆಗಳನ್ನು ಕಾಣಬಹುದಾಗಿದೆ.

ಚಾರ್ಮಾಡಿಯನ್ನು ಪ್ರವಾಸಿ ಕೇಂದ್ರವಾಗಿ ನೋಡಿದರೆ ನಮ್ಮನ್ನು ಬೇರೆಯೇ ಲೋಕಕ್ಕೆ ಕರೆದೊಯ್ಯುವುದರಲ್ಲಿ ಸಂದೇಹವಿಲ್ಲ. ಚಾರ್ಮಾಡಿ ಪ್ರದೇಶವೇ ಅಂತದ್ದು ಜೂನ್‌ ತಿಂಗಳು ಬಂತೆಂದರೆ ಸಾಕು ಪ್ರವಾಸಿಗರ ದಂಡೇ ಹೊರಟು ನಿಲ್ಲುತ್ತದೆ. ಪಶ್ಚಿಮ ಘಟ್ಟಗಳು ಹಸಿರು ಹೊದಿಕೆಯನ್ನು ಮುಡಿಗೇರಿಸಕೊಂಡು ತಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತವೆ. ಈ ಘಟ್ಟ ಪ್ರದೇಶಗಳಲ್ಲಿ ಬರುವ ಪ್ರಮುಖ ಬೆಟ್ಟಗಳೆಂದರೆ ಅಮೇಧಿಕಲ್ಲು ಬೆಟ್ಟ, ಬಾಳೆಕಲ್ಲು ಬೆಟ್ಟ, ಕೊಡೆಕಲ್ಲು ಬೆಟ್ಟ, ಜೇನುಕಲ್ಲು ಬೆಟ್ಟ, ಎತ್ತಿನಭುಜ, ಶಿಶಿಲ ಹೀಗೆ ಹತ್ತಾರು ಬೆಟ್ಟಗಳು ಇಲ್ಲಿಗೆ ಸಮೀಪದಲ್ಲೇ ಕಾಣಸಿಗುವ ಬೆಟ್ಟದಸಾಲುಗಳು.

ಆಂತೆಯೇ ಹಲವಾರು ಜಲಪಾತಗಳು ಆಲೇಖಾನ್‌ ಜಲಪಾತ, ಜೇನುಕಲ್ಲು ಜಲಪಾತ, ಕಲ್ಲರ್ಬಿ ಜಲಪಾತ, ಹಕ್ಕಿಕಲ್ಲು ಜಲಪಾತ, ಬಂಡಾಜೆ ಜಲಪಾತ ಮಳೆಗಾಲದಲ್ಲಿ ಚಾರಣಿಗರನ್ನು ಆಕರ್ಷಿಸುತ್ತಿದೆ.

ಕಡಿದಾದ ತಿರುವುಗಳು : ಚಾರ್ಮಾಡಿ ಘಾಟ್‌ ಸುಮಾರು ಹನ್ನೊಂದು ಕಡಿದಾದ ತಿರುವುಗಳನ್ನು ಹೊಂದಿದೆ ಆದಕ್ಕಾಗಿಯೇ ಇದನ್ನು ಕರ್ನಾಟಕದ ಅತ್ಯಂತ ದುರ್ಗಮ ಘಾಟಿ ಎಂದು ಹೆಸರುವಾಸಿಯಾಗಿದೆ. ಆತ್ಯಂತ ಅಪಾಯಕಾರಿಯಾಗಿರುವ ತಿರುವುಗಳು ಇರುವುದರಿಂದ  ಚಾಲಕರು ಜಾಗರೂಕತೆವಹಿಸುವುದು ಒಳಿತು.

ಏರಿಕಲ್ಲು ಎಂಬ ಮಾಯಾಕಲ್ಲು: ಚಾರ್ಮಾಡಿ ಘಾಟಿ ಆರಂಭವಾಗುವಾಗ ನಮ್ಮ ಕಣ್ಣಿಗೆ ದೂರದಲ್ಲಿ ಬೆಟ್ಟದ ತುದಿಯಲ್ಲಿ ಗಿರಿಯ ಮುಡಿಗೆ ಕಿರೀಟ ಇಟ್ಟಂತೆ ಭಾಸವಾಗುವ ಚೂಪಾದ ಬಂಡೆಯ ಕಲ್ಲೊಂದು ಬೆಟ್ಟದಿಂದ ಜಾರುವ ಹಂತದಲ್ಲಿ ಇದ್ದಂತೆ ಕಾಣುತ್ತಿರುವ ಕಲ್ಲೇ ಏರಿಕಲ್ಲು ಇದು ಘಾಟಿ ಆರಂಭದಿಂದ ಕೊನೆಗೊಳ್ಳುವ ತನಕವು ಕಣ್ಣಿಗೆ ಕಾಣುವಂತಹ ಕಲ್ಲು ಬಹಳ ವಿಶೇಷವಾಗಿದೆ.

ಚಾರ್ಮಾಡಿ ಬೆಟ್ಟದ ತಿರುವು ಹೆಚ್ಚಿದಂತೆ ಚಾರ್ಮಾಡಿ ಬೆಟ್ಟದ ಸೌಂದರ್ಯ ವೃದ್ಧಿಸುತ್ತಾ ಹೋಗುತ್ತದೆ ಮಳೆಗಾಲದಲ್ಲಿ ತುಂತುರು ಮಳೆಹನಿ ಬೀಳುತ್ತಿದ್ದರೆ ಒಂದೆಡೆ ಗಿರಿಶಿಖರಗಳು ಹಸಿರು ಸೀರೆ ಉಟ್ಟು ಮದುವಣಗಿತ್ತಿಯಂತೆ ಸಿಂಗಾರಗೊಂಡಂತಹ ಆನುಭವ ನೋಡನೋಡುತ್ತಿದ್ದಂತೆ ಬೆಟ್ಟಗಳನ್ನು ಆವರಿಸುವ ಮೋಡಗಳು ವರ್ಣಿಸಲು ಪದಗಳೇ ಸಾಲದು.

ಸೌಂದರ್ಯ ಇಮ್ಮಡಿಗೊಳಿಸುವ ಝರಿಗಳು: ಬೆಟ್ಟದ ಆರಂಭದಿಂದ ಕೊನೆಯವರೆಗೂ ಹತ್ತುಹಲವು ಶುದ್ಧನೀರಿನ ಝರಿಗಳು ಬಂಡೆಗಳನ್ನು ಸೀಳಿಕೊಂಡು ಬರುವುದೇ ಅದ್ಬುತ, ಪ್ರಕೃತಿಯೇ ಪ್ರವಾಸಿಗರಿಗೋಸ್ಕರ ನಿರ್ಮಿಸಿದೆಯೆನೋ ಎಂಬಂತೆ ಕಾಣುತ್ತದೆ. 

ಅಣ್ಣಪ್ಪ‌ ಗುಡಿ: ಘಾಟಿ ಹತ್ತುವವರು ಹಾಗೆಯೇ ಘಾಟಿ ಇಳಿಯುವ ವಾಹನ ಚಾಲಕರು ಇಲ್ಲಿ ವಾಹನಗಳನ್ನು ನಿಲ್ಲಿಸಿ ಅಣ್ಣಪ್ಪ‌ ಗುಡಿಗೆ ನಮಸ್ಕರಿಸಿ ಮುಂದುವರೆಯುವುದು ಹಿಂದಿನಿಂದಲೂ ಚಾಲ್ತಿಯಲ್ಲಿದೆ.

ಪ್ರಕೃತಿಯ ರಕ್ಷಣೆ ನಮ್ಮ ಜವಾಬ್ದಾರಿ: ಇಲ್ಲಿಗೆ ಭೇಟಿ ನೀಡುವ ಪ್ರತಿಯೊಬ್ಬ ಪ್ರವಾಸಿಗರು ಪರಿಸರ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಪ್ರವಾಸಿಗರು ತಾವು ತಂದ ತಿಂಡಿತಿನಿಸುಗಳನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ತೊಟ್ಟಿಗೆ ಹಾಕಿದರೆ ಉತ್ತಮ ಆದಷ್ಟು  ಪ್ರಕೃತಿಯ ಸೌಂದರ್ಯಕ್ಕೆ ಧಕ್ಕೆ ಮಾಡದೆ ನೈಜ್ಯ ಸೌಂದರ್ಯ ಉಳಿಸಲು ಪ್ರಯತ್ನಿಸೋಣ… ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ…

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.