1990ರಲ್ಲೇ ಸ್ವಚ್ಛ ಭಾರತಕ್ಕಾಗಿ ಶ್ರಮಿಸಿದ ಮರುಳ ಸಿದ್ದಯ್ಯ ಇನ್ನಿಲ್ಲ


Team Udayavani, Oct 28, 2018, 12:47 PM IST

2556.jpg

ಕನ್ನಡ ನಾಡು ಕಂಡ ಮೇರು ಸಾಹಿತಿ ,ಸಾರಸ್ವತ ಲೋಕದ ಕೊಂಡಿ,  ಹಿರಿಯ ಚಿಂತಕ , ನಾಡಿನ ಏಳಿಗೆಗಾಗಿ ಪೂರ್ವಾಲೋಚನೆ ಹೊಂದಿದ್ದ , ಸ್ವಚ್ಛತೆಗಾಗಿ ಶ್ರಮಿಸಿದ್ದ ಮಹಾನ್‌ ಚೇತನವೊಂದನ್ನು ಕಳೆದುಕೊಂಡಿದೆ. ಸಮಾಜದ ಏಳಿಗೆಗಾಗಿ ಶ್ರಮಿಸಿ ವಿದೇಶಿ ವಿದ್ಯಾರ್ಥಿಗಳ ಗಮನ ಸೆಳೆದಿದ್ದ  ಡಾ. ಎಚ್‌.ಎಂ. ಮರುಳು ಸಿದ್ದಯ್ಯ ಅವರು 87 ರ ಹರೆಯದಲ್ಲಿ  ನಮ್ಮನ್ನಗಲಿದ್ದಾರೆ. 

ವಾರ್ಧಕ್ಯದಿಂದಾಗಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 

ಸಾಹಿತ್ಯ ಕ್ಷೇತ್ರದಲ್ಲಿ ಮಾತ್ರವಲ್ಲದೆ 1990 ರಲ್ಲೇ ಈಗಿನ ಸ್ವಚ್ಛ ಭಾರತಕ್ಕಾಗಿ ಶ್ರಮಿಸಿದ್ದ ಅವರು ‘ನಿರ್ಮಲ ಕರ್ನಾಟಕ’ ಯೋಜನೆಯನ್ನು ಪರಿಚಯಿಸಿದ್ದರು. ವ್ಯಾಪಕವಾಗಿ ಬಯಲು ಶೌಚವಿದ್ದ ಕಾಲದಲ್ಲಿ  ಬಯಲು ಶೌಚ ಮುಕ್ತ ಕರ್ನಾಟಕ ನಿರ್ಮಾಣದ ಮಹದಾಸೆ ಹೊಂದಿದ್ದ ಮರುಳ ಸಿದ್ದಯ್ಯ ಅವರು ನಿರ್ಮಲ ಕರ್ನಾಟಕ ಯೋಜನೆಯ ರೂವಾರಿಯಾಗಿದ್ದರು. ಹಲವು ಪ್ರದೇಶಗಳಲ್ಲಿ ಗುಂಪು ಶೌಚಾಲಯಗಳ ನಿರ್ಮಾಣಕ್ಕೆ ಕಾರಣೀಕರ್ತರಾಗಿದ್ದರು. ನಿರ್ಮಲ ಕರ್ನಾಟಕ ಮಾತ್ರವಲ್ಲದೆ ಪಂಚಮುಖೀ ಅಭ್ಯುದಯ ಮಾರ್ಗ, ಸ್ವಸ್ತಿ ಗ್ರಾಮ ಯೋಜನೆಯಗಳನ್ನು ಪರಿಚಯಿಸಿದ್ದರು. 

ಬಳ್ಳಾರಿಯ ಕೂಡ್ಲಿಗಿ ತಾಲೂಕಿನ ಹಿರೇ ಕುಂಬಳ ಕುಂಟೆಯಲ್ಲಿ 1931 ರಲ್ಲಿ ಜನಿಸಿದ್ದ  ಮರುಳ ಸಿದ್ದಯ್ಯ  ಮೈಸೂರು ವಿಶ್ವವಿದ್ಯಾಲಯದಲ್ಲಿ ಸಮಾಜ ಶಾಸ್ತ್ರದಲ್ಲಿ ಎಂ.ಎ ಪದವಿ ಪಡೆದಿದ್ದರು. ಬಳಿಕ ದೆಹಲಿ ವಿವಿಯಲ್ಲೂ ಸಮಾಜ ಕಾರ್ಯದಲ್ಲಿ ಎಂ.ಎ ಪದವಿ ಪಡೆದಿದ್ದರು. ಕಾಶಿ ವಿದ್ಯಾಪೀಠ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್‌ ಪದವಿ ಪಡೆದಿದ್ದರು. 

 ಕರ್ನಾಟಕ ವಿವಿಯಲ್ಲಿ  ಸಮಾಜ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಅವರು ರಾಜ್ಯದಲ್ಲೇ ಮೊದಲ ಬಾರಿಗೆ ಸಮಾಜ ಕಾರ್ಯ ವಿಭಾಗ ಆರಂಭಿಸಿದ್ದರು. 

ಅನುಭವದ ಆಗರ ವಾಗಿದ್ದ  ಮರುಳ ಸಿದ್ದಯ್ಯ ಅವರ ಬಳಿ ಜ್ಞಾನಾರ್ಜನೆಗಾಗಿ ವಿದೇಶದಿಂದಲೂ ವಿದ್ಯಾರ್ಥಿಗಳು ಆಗಮಿಸುತ್ತಿದ್ದರು. ಅಮೆರಿಕಾ, ಇಸ್ರೇಲ್‌,ಇಂಗ್ಲೆಂಡ್‌, ಸ್ವೀಡನ್‌ ಮೊದಲಾದ ದೇಶಗಳಿಂದ ನೂರಾರು ವಿದ್ಯಾರ್ಥಿಗಳು ಆಗಮಿಸಿ ಮಾರ್ಗದರ್ಶನವನ್ನು ಪಡೆದಿದ್ದರು. 

ಹೃದಯ ಶ್ರೀಮಂತ 
ಮರುಳ ಸಿದ್ದಯ್ಯ ಅವರ ಆದರ್ಶಪ್ರಾಯ ಜೀವನವನ್ನು ನಡೆಸಿದವರು. ಹಿರೇಕುಂಬಳ ಕುಂಟೆಯಲ್ಲಿದ್ದ ತನ್ನ ಮನೆಯನ್ನು ಶಿಕ್ಷಣ ಇಲಾಖೆಗೆ ದಾನವಾಗಿ ನೀಡಿ, ಅಲ್ಲಿ ಪುಸ್ತಕ ಮನೆಯನ್ನು ಸ್ಥಾಪಿಸಿದ್ದಾರೆ. 

60 ಕ್ಕೂ ಹೆಚ್ಚು ಕೃತಿಗಳು
ಮರುಳ ಸಿದ್ದಯ್ಯ ಅವರು ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ 60 ಕ್ಕೂ ಹೆಚ್ಚು  ಅರ್ಥಪೂರ್ಣ ಕೃತಿಗಳನ್ನು ರಚಿಸಿದ್ದಾರೆ. ತಜ್ಞ ಸಮುದಾಯದಲ್ಲಿ, ವಿದ್ಯಾರ್ಥಿ ಸಮುದಾಯದಲ್ಲಿ  ಅಪಾರ ಜನಪ್ರಿಯತೆ ಪಡೆದಿವೆ. ಉಳಿದಂತೆ ಭಕ್ತಿ ಪಂಥದಲ್ಲಿ ಸಮಾಜ ಕಾರ್ಯದ ಬೇರುಗಳು, ಗಾಂಧೀಜಿ ಅರ್ಥ ಶಾಸ್ತ್ರ , ಹುಲ್ಲು ಬೇರುಗಳ ನಡುವೆ, ಅರಿವು ಆಚರಣೆ, ಗ್ರಾಮೋನ್ನತಿ, ವಚನಗಳಲ್ಲಿ ಅಂತರಂಗ ಬಹಿರಂಗ ಶುದ್ದಿ  ಮೊದಲಾದ ಕೃತಿಗಳನ್ನು ಸಾರಸ್ವತ ಲೋಕಕ್ಕೆ ಕೊಡುಗೆ ಯಾಗಿ ನೀಡಿದ್ದಾರೆ. 

ಸಮಾಜಕ್ಕೆ ತನ್ನ ಚಿಂತನೆಗಳು, ಯೋಜನೆಗಳು ಮತ್ತು  ಕೃತಿಗಳ ಮೂಲಕ ಮಾರ್ಗದರ್ಶನ ನೀಡಿದ ಮರುಳ ಸಿದ್ದಯ್ಯ ಅವರು ಕನ್ನಡ ನಾಡಿನಲ್ಲಿ  ಮತ್ತೆ ಹುಟ್ಟಿ ಬರಲಿ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.