ಕಾರು ತಯಾರಿಕೆ ಚಟಪಡಿಕೆ ನಡುವೆ ಸಿಮೆಂಟ್ ಕಂಡು ಹಿಡಿದ “ಹೋಂಡಾ” ಎಂಬ ಛಲದಂಕಮಲ್ಲ!


ಮಿಥುನ್ ಪಿಜಿ, Jan 7, 2020, 6:00 PM IST

honda-1

ಕೆಲವರು ಜೀವನದಲ್ಲಿ ಬಹಳ ಕಷ್ಟಗಳನ್ನು ಎದುರಿಸುತ್ತಲೇ ಅದ್ಭುತ ಪ್ರಗತಿಯನ್ನು ಸಾಧಿಸುತ್ತಾರೆ. ಯಶಸ್ವಿ ವ್ಯಕ್ತಿ ಹತ್ತು ಬಾರಿ ವಿಫಲನಾದರೇ ಹನ್ನೊಂದನೇ ಭಾರೀ ಯಶಸ್ಸನ್ನು ಸಾಧಿಸುತ್ತಾನೆ. ಇನ್ನೂ ಕೆಲವರು ಮೂರು-ನಾಲ್ಕು  ಭಾರೀ ಯಶಸ್ಸು ಪಡೆಯಲು ಪ್ರಯತ್ನಿಸಿ ಕೈಚೆಲ್ಲುತ್ತಾರೆ.

ಜಗದ್ವಿಖ್ಯಾತ ಹೋಂಡಾ ಅಟೋಮೊಬೈಲ್ ಸಾಮ್ರಾಜ್ಯದ ಸ್ಥಾಪಕ ಸೋಯಿಚಿರೋ ಹೋಂಡಾ. ಇಂದು ಹೋಂಡಾ ಅಂದರೇ ಸಾಮಾನ್ಯ ಜನರಿಗೂ ಪರಿಚಿತ. ಈ ಕಂಪೆನಿಯ ಕಾರು, ಬೈಕ್ ಎಲ್ಲವೂ ಜನರ ಮನಗೆದ್ದಿದೆ. ಈ ಸಂಸ್ಥೆ ಬೆಳೆಸಲು ಸೋಯಿಚಿರೋ ಪಟ್ಟ ಶ್ರಮ ಅಷ್ಟಿಷ್ಟಲ್ಲ.  ಈತ ಕೆಳಮಧ್ಯಮವರ್ಗದಲ್ಲಿ 1906 ನವೆಂಬರ್ 17 ರಂದು ಜಪಾನ್ ನಲ್ಲಿ ಹುಟ್ಟಿದ.ಈತನಿಗೆ ದಿನಕ್ಕೆ ಎರಡು ಹೊತ್ತು ಊಟ ಮಾತ್ರ ಸಿಗುತ್ತಿತ್ತು. ಆದರೇ ಚಿಕ್ಕವಯಸ್ಸಿನಿಂದಲೂ ಸಮಾಜದಲ್ಲಿ ಏನಾದರೂ ಬದಲಾವಣೆ ಮಾಡಬೇಕೆಂಬ ತುಡಿತ, ಆದಮ್ಯ ಬಯಕೆ ಹೋಂಡಾಗಿತ್ತು.   ಆ ಕಾರಣದಿಂದಲೇ ಬಾಲ್ಯದಿಂದಲೇ ಯಂತ್ರೋಪಕರಣಗಳಲ್ಲಿ ಆಸಕ್ತಿ ಕಂಡುಕೊಂಡು ಇಂಜಿನಿಯರಿಂಗ್ ಕಾಲೇಜು ಸೇರಿದ. ಆಗಲೇ  ವಾಹನಗಳಿಗೆ ಪಿಸ್ಟನ್  ರಿಂಗ್ ಗಳನ್ನು ತಯಾರಿಸುವ ಐಡಿಯಾ ಆತನಿಗೆ ಹೊಳೆಯಿತು. ಕಾಲೇಜಿನ ವರ್ಕ್ ಶಾಫ್ ನಲ್ಲಿ  ಹಗಲು ರಾತ್ರಿ ಶ್ರಮಪಟ್ಟ. ಕೆಲವು ದಿನಗಳು ಅಲ್ಲೇ ನಿದ್ದೆ ಮಾಡಿರುವ ಉದಾಹರಣೆಗಳಿವೆ.

ಒಂದು ಅದ್ಭುತವಾದ ಡಿಸೈನ್ ತಯಾರಿಸಿ ಟಯೋಟ ಕಂಪೆನಿಗೆ ಮಾರುತ್ತೇನೆಂಬ ಬಲವಾದ ನಂಬಿಕೆ ಆತನಿಗಿತ್ತು. ಆಗಲೇ ಆತನ ವಯಸ್ಸು 20 ಆಗಿದ್ದರಿಂದ ಮದುವೆಯೂ  ನಡೆದುಹೋಯಿತು. ಪಿಸ್ಟನ್ ರಿಂಗ್  ತಯಾರಿಕೆಗೆ ಹಣದ ಕೊರತೆ ಎದುರಾದಾಗ ಹೆಂಡತಿಯ ಒಡವೆಯನ್ನು ಅಡವಿಟ್ಟ. ಹಲವು ಅಡೆತಡೆಗಳ ನಂತರ ಕೊನೆಗೂ ಅದನ್ನು ಸಿದ್ದಮಾಡಿ ಟಯೋಟಾ ಕಂಪೆನಿಗೆ ಕೊಂಡೊಯ್ದಾಗ, ಈ ಅದ್ಭುತ ಡಿಸೈನ್  ಅನ್ನು ಟಯೋಟ ಕಂಪೆನಿ ತಮ್ಮ ಗುಣಮಟ್ಟಕ್ಕೆ ತಕ್ಕಂತೆ ಇಲ್ಲವೆಂದು  ತಿರಸ್ಕರಿಸಿತು. ಹೋಂಡಾ ನಿರಾಸೆಯಿಂದ ತನ್ನ ವರ್ಕ್ ಶಾಪ್ ಗೆ  ಹಿಂದಿರುಗಿದಾಗ ಅಲ್ಲಿದ್ದ ಇತರ ಇಂಜಿನಿಯರ್ ಗಳು ನಿಮಗೆ ಮೊದಲೇ ಹೇಳೆದ್ದೇವು, ಇದೆಲ್ಲಾ ಆಗದ ಮಾತು ಎಂದು ನಗಲಾರಂಭಿಸುತ್ತಾರೆ. ಆದರೇ  ಹೊಂಡಾ ಮಾತ್ರ  ಮಂದಹಾಸ ಬೀರಿದ.

ಛಲಬಿಡದ ಹೋಂಡಾ ಮತ್ತೆ ಹೊಸ ಡಿಸೈನ್ ಒಂದನ್ನು  ತಯಾರಿಸಲು ಮುಂದಾದ. ಸುಮಾರು ಎರಡು ವರ್ಷದ ಪರಿಶ್ರಮದ ನಂತರ ಮತ್ತೊಂದು ಪಿಸ್ಟನ್ ರಿಂಗ್ ತಯಾರಿಸಿ  ಟಯೋಟಾ ಕಂಪೆನಿಯ ಕದತಟ್ಟಿದ. ಈ ಭಾರೀ ಟಯೋಟ ಕಂಪೆನಿ ಆ ಡಿಸೈನ್ ಕಂಡು ಸಂತೋಷಗೊಂಡು ಪಿಸ್ಟನ್ ರಿಂಗ್ ತಯಾರಿಸಲು ಆತನಿಗೆ ಕಾರ್ಖಾನೆಯನ್ನು ಆರಂಭಿಸಲು ಹಣವನ್ನು ಒದಗಿಸಿತು. ಟಯೋಟ ಕಂಪೆನಿಯ ಈ ಪ್ರೋತ್ಸಾಹದಿಂದ ಸಂತುಷ್ಟನಾದ ಹೋಂಡಾ ಫ್ಯಾಕ್ಟರಿಯನ್ನು ಎತ್ತರಕ್ಕೇರಿಸಲು ಮುಂದಾದ. ಈ ಸಮಯದಲ್ಲೆ ಜಪಾನ್ ನ ವಿವಿಧ ನಗರಗಳಿಗೆ ಭೂಕಂಪ ಅಪ್ಪಳಿಸಿತ್ತು. ಹೋಂಡಾ ಕಟ್ಟಿದ್ದ ಕಾರ್ಖಾನೆಯೂ ಧರೆಗುರುಳಿತ್ತು.

ಆತನ ಸಿಬ್ಬಂದಿ ಇದರಿಂದ ತೀವ್ರ ವಿಚಲಿತವಾದರೂ ಹೋಂಡಾ ಮಾತ್ರ ಸಂತಸದಿಂದಲೇ ಆದದ್ದಾಯಿತು ಮತ್ತೆ ಕಟ್ಟೋಣವೆಂದು ಕಾರ್ಖಾನೆ ನಿರ್ಮಾಣ ಕಾರ್ಯ ಆರಂಭಿಸಿದ. ಅದರ ಕೆಲಸಗಳು ಭರದಿಂದ ಸಾಗುತ್ತಿದ್ದವು. ಆದರೇ ಅದು ಪೂರ್ಣವಾಗುವ ಮೊದಲೇ ಜಪಾನ್ ಎರಡನೇ ಮಹಾಯುದ್ದವನ್ನು ಕಂಡಿತ್ತು. ಆ ಸಮಯದಲ್ಲಿ ದೇಶದಾದ್ಯಂತ ಸಿಮೆಂಟ್ ಪೂರೈಕೆ ಸ್ಥಗಿತಗೊಂಡಿತ್ತು. ಆಗಲೇ ಹೋಂಡಾ ಮತ್ತು ಆತನ ತಂಡ ಸಿಮೆಂಟ್  ತಯಾರಿಸುವ ಹೊಸ ವಿಧಾನವನ್ನು ಕಂಡುಹಿಡಿದರು. ಈ ರೀತಿಯಾಗಿ ಕಾರ್ಖಾನೆ ನಿರ್ಮಾಣವನ್ನು ಪೂರ್ಣಗೊಳಿಸಿದ.

ಆದರೆ ಅದೊಂದು ದಿನ ಅಮೆರಿಕಾ ಪಡೆಗಳು ಜಪಾನ್ ನ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದಾಗ ಹೋಂಡಾ ಕಟ್ಟಿದ ಕಾರ್ಖಾನೆಯೂ ಬಾಂಬ್ ದಾಳಿಗೆ  ತುತ್ತಾಯಿತು.  ಮಾತ್ರವಲ್ಲದೆ ಜಪಾನ್ ನಲ್ಲಿ  ಸ್ಟೀಲ್ ನ ತೀವ್ರ  ಅಭಾವ ಉಂಟಾಯಿತು. ಆಗಲೂ ಹೋಂಡಾ ಕೈಚೆಲ್ಲಲಿಲ್ಲ. ಆ ಸಮಯದಲ್ಲಿ ಅಮೆರಿಕಾ ಯುದ್ಧವಿಮಾನಗಳೆಲ್ಲವೂ ಇಂಧನ ಟ್ಯಾಂಕ್ ಗಳನ್ನು ಹೊತ್ತು ಹಾರುತ್ತಿದ್ದವು. ಈ ಟ್ಯಾಂಕ್ ಗಳಲ್ಲಿನ ಇಂಧನವನ್ನು ಬಳಸಿದ ನಂತರ ಆಗಸದಿಂದ ಅದನ್ನು ಕಳಗೆ ಬಿಸಾಡಲಾಗುತ್ತಿತ್ತು. ಇದರಿಂದ ವಿಮಾನದ ಭಾರ ಕಡಿಮೆಯಾಗುತ್ತಿದ್ದವು. ಈ ರೀತಿ ಅಮೆರಿಕಾ ಯುದ್ಧವಿಮಾನಗಳು ಜಪಾನ್ ನ ತುಂಬೆಲ್ಲಾ ಸ್ಟೀಲ್ ಟ್ಯಾಂಕ್ ಗಳನ್ನು ಎಸೆದುಹೋಗುತ್ತಿದ್ದವು. ಇದನ್ನೆ  ಹೋಂಡಾ ಸಂಗ್ರಹಿಸಿ ಅವುಗಳನ್ನು ಕರಗಿಸಿ ತನ್ನ ಫ್ಯಾಕ್ಟರಿ ನಿರ್ಮಾಣಕ್ಕೆ  ಬಳಸಿಕೊಂಡ. ಈ ಸ್ಟೀಲ್ ಟ್ಯಾಂಕ್ ಗಳನ್ನು ಹೋಂಡಾ ಅಮೆರಿಕಾದ ಅಧ್ಯಕ್ಷ ಟ್ರೂಮನ್ ನ ಕೊಡುಗೆ ಎಂದು ಕರೆದ.

ಆದರೂ ಸಮಸ್ಯೆಗಳ ಸರಮಾಲೆ ನಿಲ್ಲಲಿಲ್ಲ. ಯುದ್ಧ ನಂತರ ಜಪಾನ್ ನಲ್ಲಿ ತೀವ್ರ ಇಂಧನ ಅಭಾವವುಂಟಾಯಿತು. ಇಂಧನಗಳೇ ಇಲ್ಲವೆಂದರೇ ಕಾರುಗಳನ್ನು ಕೊಳ್ಳುವರಾರು ?  ಹೀಗಾಗಿ ಟಯೋಟಾ ಕಂಪೆನಿ ಕಾರು ಉತ್ಪಾದನೆಯನ್ನು ನಿಲ್ಲಿಸಿತು. ಪರಿಣಾಮವಾಗಿ ಹೋಂಡಾಗೆ ಪಿಸ್ಟನ್ ರಿಂಗ್ ಗಳಿಗೆ ಆರ್ಡರ್ ಬರಲಿಲ್ಲ. ಇಂಧನ ಕೊರೆತೆಯಿದ್ದ ಕಾರಣ ಜನಸಾಮಾನ್ಯರು ಕಾಲ್ನಡಿಗೆಯಲ್ಲಿ ಅಥವಾ ಸೈಕಲ್ ಗಳಲ್ಲಿ ಸಾಗಬೇಕಿತ್ತು. ಇದನ್ನು ಕಂಡ ಹೋಂಡಾ ಸೈಕಲ್ ಗಳಿಗೆ ಇಂಜಿನ್ ಕೂರಿಸಿದರೆ ಹೇಗೆ ಎಂದು ಚಿಂತಿಸಲಾರಂಭಿಸಿದ. ಯಾಕೆಂದರೇ ಸೈಕಲ್  ಇಂಜಿನ್ ಗಳಿಗೆ ಹೆಚ್ಚು ಇಂಧನ ಬೇಕಾಗಿರಲಿಲ್ಲ. ಮಾತ್ರವಲ್ಲದೆ ತನ್ನ ಆಲೋಚನೆಯನ್ನು ಕಾರ್ಯರೂಪಕ್ಕಿಳಿಸಿ ಬೈಕ್ ಇಂಜಿನ್ ತಯಾರಿಸಿದ. ಕೆಲವೇ ವರ್ಷಗಳಲ್ಲಿ ಹೋಂಡಾ ಕಂಪೆನಿಯ ಬೈಕ್ ಇಂಜಿನ್ ಗಳು  ಎಷ್ಟು ಪ್ರಖ್ಯಾತವಾದವೆಂದರೇ ಅವುಗಳನ್ನು ಯೂರೋಪ್ ಮತ್ತು ಅಮೆರಿಕಾಕ್ಕೂ ಸರಬರಾಜು ಮಾಡಲಾಯಿತು. ಮುಂದಿನದು ಇತಿಹಾಸ !

1970ರ ವೇಳೆಗೆ ಹೋಂಡಾ ಕಂಪೆನಿ ಚಿಕ್ಕ ಕಾರುಗಳನ್ನು ಉತ್ಪಾದಿಸಲು ಆರಂಭಿಸಿತು. ಅದು ಕೂಡ ಜನಪ್ರಿಯವಾದವು. ಇಂದಿಗೂ ಕೂಡ ಹೊಂಡಾ ಕಂಪೆನಿ ತನ್ನ ನಾಗಾಲೋಟವನ್ನು ಮುಂದುವರಿಸಿದೆ. ಆ ಮೂಲಕ  ಸತತ ಪ್ರಯತ್ನವೇ ಸಾಧನೆಯ ರಹಸ್ಯ ಎಂದು ಸೋಯಿಚಿರೋ ಹೋಂಡಾ ತೋರಿಸಿಕೊಟ್ಟನು.

-ಮಿಥುನ್ ಮೊಗೇರ

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.