ಸ್ವಾದಿಷ್ಟ ಪನ್ನೀರ್ ಚಿಕನ್ ಕರ್ರಿ ಮಾಡೋದು ಹೇಗೆ…ಇಲ್ಲಿದೆ ಸುಲಭ ವಿಧಾನ


Team Udayavani, Aug 31, 2020, 7:27 PM IST

paneer-chicken-curry

ಚಿಕನ್‌ ಎಂದಾಗ ಎಲ್ಲರ ಬಾಯಿಯಲ್ಲಿ ನೀರು ಬಂದೆ ಬರುತ್ತದೆ. ಚಿಕನ್‌ ನಿಂದ ಅನೇಕ ರೀತಿಯಲ್ಲಿ ಅಡುಗೆಯನ್ನು ಮಾಡಬಹುದಾಗಿದೆ. ಅದರಲ್ಲೂ ಪನ್ನೀರ್‌ ಚಿಕನ್‌ ಕರ್ರಿ ತುಂಬಾ ಸ್ವಾದಿಷ್ಟವಾಗಿ ಇರುತ್ತದೆ. ಆರೋಗ್ಯಕ್ಕೆ ಒಳ್ಳೆಯದು ಹಾಗೂ ರುಚಿಕಾರವಾಗಿರುತ್ತದೆ. ನೀವು ಮನೆಯಲ್ಲೇ ಸಿದ್ಧ ಪಡಿಸಿ ಮಾಂಸಹಾರಿಗಳೂ ಇಷ್ಟಪಡುವ ಮತ್ತು ಆರೋಗ್ಯಕಾರಕ ಪನ್ನೀರ್‌ ಚಿಕನ್‌ ಕರ್ರಿಯನ್ನು ನೀವೂ ಒಮ್ಮೆ ಸವಿದು ನೋಡಿ.

ಬೇಕಾಗುವ ಸಾಮಗ್ರಿಗಳು
ಚಿಕನ್‌ 250 ಗ್ರಾಂ, ಪನ್ನೀರ್‌ 100 ಗ್ರಾಂ, ಈರುಳ್ಳಿ 3, ನಿಂಬೆ ಹಣ್ಣು 1, ಧನಿಯಾ ಪುಡಿ 1ಚಮಚ, ಅರಿಶಿನ ಪುಡಿ 1ಚಮಚ, ಬೆಳ್ಳುಳ್ಳಿ 1, ಟೊಮೆಟೋ 2, ಮೆಣಸಿನ ಪುಡಿ 2ಚಮಚ, ಜೀರಾ ಪುಡಿ ಅರ್ಧ ಚಮಚ, ಶುಂಠಿ ಸ್ವಲ್ಪ, ತುಪ್ಪ 2ಚಮಚ, ಗರಂ ಮಸಾಲೆ ಅರ್ಧ ಚಮಚ, ಕ್ಯಾಪ್ಸಿಕಮ್‌ 1, ಕೊತ್ತಂಬರಿ ಸೊಪ್ಪು, ಎಣ್ಣೆ ಬೇಕಾಗುವಷ್ಟು, ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
ಮೊದಲು ಚಿಕನ್‌ನನ್ನು ಚೆನ್ನಾಗಿ ನೀರಿನಲ್ಲಿ ತೊಳೆದು ಪೀಸ್‌ ಮಾಡಿಟ್ಟುಕೊಳ್ಳಿ. ಈರುಳ್ಳಿ ಉದ್ದಕ್ಕೆ ಹೆಚ್ಚಿಕೊಂಡು ಎಣ್ಣೆಗೆ ಹಾಕಿ ಕೆಂಪಗೆ ಕರಿದಿಟ್ಟುಕೊಳ್ಳಿ. ಒಂದು ಬೋಲ್‌ ಗೆ ಚಿಕನ್‌ ಪೀಸ್‌ಗಳನ್ನು ಹಾಕಿ.ಮೆಣಸಿನ ಪುಡಿ,ಧನಿಯಾ ಪುಡಿ,ಜೀರಾ ಪುಡಿ,ಅರಿಶಿನ ಪುಡಿ,ಉಪ್ಪು,ಕರಿದಿರುವ ಈರುಳ್ಳಿ ಚೂರುಗಳು,ಕಟ್‌ ಮಾಡಿರುವ ಪನ್ನೀರ್‌ ತುಂಡುಗಳು,ನಿಂಬೆ ರಸ ಹಾಕಿ ಚೆನ್ನಾಗಿ ಕಲೆಸಿ.ಈ ರೀತಿ ಮ್ಯಾರಿನೇಡ್‌ ಮಾಡಿರುವ ಚಿಕನ್‌ ಪೀಸ್‌ಗಳನ್ನು ಒಂದು ಗಂಟೆಗಳ ಕಾಲ ನೆನೆಸಿ.ಕ್ಯಾಪ್ಸಿಕಮ್‌ ಉದ್ದಕ್ಕೆ ಹೆಚ್ಚಿಕೊಳ್ಳಿ.ಟೊಮೆಟೋ ಸಹ ಸಣ್ಣಗೆ ಹೆಚ್ಚಿಕೊಳ್ಳಿ.ಶುಂಠಿ-ಬೆಳ್ಳುಳ್ಳಿ ಪೇಸ್ಟ್‌ ಮಾಡಿಟ್ಟುಕೊಳ್ಳಿ. ಒಂದು ಬಾಣಲೆ ಒಲೆಯ ಮೇಲೆ ಇಟ್ಟು ಎಣ್ಣೆ ಹಾಕಿ,ಬಿಸಿಯಾದ ನಂತರ ಈರುಳ್ಳಿ ಚೂರುಗಳನ್ನು ಹಾಕಿ.ಕೆಂಪಗೆ ಹುರಿದುಕೊಳ್ಳಿ.ಶುಂಠಿ,ಬೆಳ್ಳುಳ್ಳಿ ಪೇಸ್ಟ್‌ ಹಾಕಿ.ಹಸಿ ವಾಸನೆ ಹೋಗುವ ತನಕ ಹುರಿದುಕೊಳ್ಳಿ.ಕ್ಯಾಪ್ಸಿಕಮ್‌ ಚೂರುಗಳು ಸ್ವಲ್ಪ ಅರಿಶಿನ ಹಾಕಿ ಕೆಂಪಗೆ ಫ್ರೈ ಮಾಡಿ ಟೊಮೆಟೋ ಚೂರುಗಳನ್ನು ಹಾಕಿ. ಚಿಕನ್‌ ಮಿಶ್ರಣವನ್ನು ಕಲೆಸಿ ನಂತರ ಗರಂ ಮಸಾಲೆಯನ್ನು ಹಾಕಿರಿ. ಸ್ವಲ್ಪ ನೀರು ಹಾಕಿ ಚೆನ್ನಾಗಿ ಬೇಯಿಸಿ. ಅವಶ್ಯಕತೆಗೆ ತಕ್ಕಷ್ಟು ನೀರು ಸೇರಿಸಿ ನಂತರ ಉಪ್ಪು ಹಾಕಿ.ಖಾದ್ಯ ಚೆನ್ನಾಗಿ ಕುದಿಸಿದ ನಂತರ ಇಳಿಸುವ ಮೊದಲು ತುಪ್ಪ ಹಾಕಿ,ಸಣ್ಣಗೆ ಹೆಚ್ಚಿರುವ ಕೊತ್ತಂಬರಿ ಸೊಪ್ಪು ಹಾಕಿರಿ.

ಚಪಾತಿ,ಪರೋಟ,ಅನ್ನದ ಜೊತೆ ಸವಿಯಲು ಪನ್ನೀರ್‌ ಚಿಕನ್‌ ಕರ್ರಿ ತುಂಬಾ ಸ್ವಾದಿಷ್ಟವಾಗಿ ಇರುತ್ತದೆ.

ಒಂದು ಸಲ ಈ ರೆಸಿಪಿ ಮಾಡಿ ನೋಡಿ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.