ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ ಮಾಡಿಕೊಳ್ಳೋದು ಹೇಗೆ?


Team Udayavani, May 20, 2018, 10:16 AM IST

o-30.jpg

ಬೇಸಿಗೆಯ ಬಿಸಿಯಿಂದ ಬಸವಳಿದಿದ್ದ ಇಳೆಯನ್ನು ತಂಪುಗೊಳಿಸಲು ಮಳೆಗಾಲ ಮೇ ಕೊನೆಯ ವಾರದಲ್ಲಿ ಆರಂಭಗೊಳ್ಳಲಿದೆ. ಆಗಾಗ ಬರುವ ಮಳೆ, ಮೋಡ ಮುಸುಕಿದ ವಾತಾವರಣ, ತಣ್ಣನೆಯ ಗಾಳಿ ಇರುವುದರಿಂದ ಆರೋಗ್ಯ ಸಮಸ್ಯೆ ಹೆಚ್ಚಾಗುವುದು ಸಾಮಾನ್ಯ. ಈ ಸಮಯದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿಡಬೇಕು. ಈ ಕಾಲದಲ್ಲಿ ಶೀತ, ನೆಗಡಿ, ಜ್ವರ ಸರ್ವೆಸಾಮಾನ್ಯ. ಮಳೆಗಾಲದಲ್ಲಿ ನೀರು ಕಲುಷಿತವಾಗುತ್ತದೆ ಸೋಂಕು ಬಹುಬೇಗ ಬರುತ್ತದೆ. ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಕಲುಷಿತ ನೀರಿನಿಂದ ಸೊಳ್ಳೆ ನೊಣಗಳ ಸಂಖ್ಯೆ ಹೆಚ್ಚಾಗುವುದು ಜೊತೆಗೆ ರೋಗಗಳು ಹರಡುತ್ತದೆ. ಕೆಲವು ಸರಳ ಉಪಾಯಗಳನ್ನು ನಮ್ಮದಾಗಿಸಿಕೊಂಡಲ್ಲಿ ಅನಾರೋಗ್ಯದಿಂದ ದೂರವಿರಬಹುದು.

1. ಸುತ್ತಮುತ್ತಲಿನ ಪರಿಸರ: ಸುತ್ತಮುತ್ತಲಿನ ಪರಿಸರ ನಮ್ಮ ಆರೋಗ್ಯವನ್ನು ಕೆಡಿಸುತ್ತದೆ. ನಮ್ಮ ವಾಸ ಸ್ಥಳದ ಸುತ್ತಮುತ್ತ ನೀರು ನಿಂತಿದ್ದರೆ ಸೊಳ್ಳೆ ಮತ್ತು ನೊಣಗಳ ಉತ್ಪತ್ತಿಗೆ ಕಾರಣವಾಗಬಹುದು. ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ಕಾಳಜಿ ವಹಿಸಿ. ಡೆಂಗ್ಯೂ, ಮಲೇರಿಯಾದಂತಹ ರೋಗಗಳು ಹರಡದಂತೆ ನೋಡಿಕೊಳ್ಳಬೇಕು.

2. ಹೊರಗಡೆ ತಿನ್ನದಿರುವುದು: ಮಳೆಗಾಲದಲ್ಲಿ ಕರಿದ ತಿಂಡಿಗಳನ್ನು ತಿನ್ನಬೇಕೆನ್ನುವುದು ಸಹಜ ಆದರೆ, ರಸ್ತೆ ಬದಿಯ ತಿಂಡಿಗಳನ್ನು ಈ ಸಮಯದಲ್ಲಿ ಆದಷ್ಟು ತಿನ್ನದಿರುವುದು ಉತ್ತಮ. ರಸ್ತೆ ಬದಿಯ ತಿಂಡಿಗಳಲ್ಲಿ ಬ್ಯಾಕ್ಟೀರಿಯಾ ಸೇರುವುದು ಹೆಚ್ಚು. 

3. ನೀರನ್ನು ಹೆಚ್ಚು ಕುಡಿಯಬೇಕು: ಮಳೆಗಾಲದಲ್ಲಿ ಬಾಯಾರಿಕೆಯಾಗದಿರುವುದರಿಂದ ತುಂಬ ಕಡಿಮೆ ನೀರು ಕುಡಿಯುತ್ತಾರೆ. ಆದರೆ, ಯಾವುದೇ ಕಾಲವಾಗಿರಲಿ ಆರೋಗ್ಯಕರವಾಗಿರಲು ಪ್ರತಿದಿನ 3ರಿಂದ 4 ಲೀ. ನೀರು ಕುಡಿಯಬೇಕು. ನೀರನ್ನು ಬಿಸಿ ಮಾಡಿ ಕುಡಿಯೊದು ಒಳ್ಳೆಯದು. ಕಷಾಯ, ಹರ್ಬಲ್ ಟೀ ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಸಾಧ್ಯವಿದೆ. 

4:ಒದ್ದೆಯಾದರೆ ತಕ್ಷಣ ಸ್ನಾನ ಮಾಡಿ: ವಿಪರೀತ ಮಳೆಯ ಸಂದರ್ಭದಲ್ಲಿ ಒದ್ದೆಯಾಗುವುದು ಸಾಮಾನ್ಯವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಒದ್ದೆಯಾಗಿದೆ ಎಂದು  ಮೈ ಒರಿಸಿ ಸುಮ್ಮನೆ ಕೂರದೆ ಬಿಸಿ ನೀರಿನಿಂದ ಸ್ನಾನ ಮಾಡುವುದು ಒಳ್ಳೆಯದು.. ಇದರಿಂದ ಶೀತದಂತಹ ಸಾಮಾನ್ಯ ಕಾಯಿಲೆಯಿಂದ ದೂರವಿರಬಹುದು.

5. ಸೊಪ್ಪು ತರಕಾರಿ ಹೆಚ್ಚು ಸೇವನೆ: ಮಳೆಗಾಲದಲ್ಲಿ ಹಸಿರು ತರಕಾರಿ ಮತ್ತು ಸೊಪ್ಪು ತರಕಾರಿಗಳನ್ನು ಹೆಚ್ಚು ಸೇವನೆ ಮಾಡುವುದರಿಂದ ಆರೋಗ್ಯದ ರಕ್ಷಣೆ ಸಾಧ್ಯವಿದೆ. ಮಾಂಸಹಾರ ಸೇವನೆ ಮಾಡುವುದಾದರೆ ತಾಜಾ ಮೀನು ಮಾತ್ರ ಕೊಳ್ಳುವುದು ಉತ್ತಮ. ತೇವಾಂಶದಲ್ಲಿ ಇಟ್ಟ ಮೀನು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.