ದಿನನಿತ್ಯದ ಆರೋಗ್ಯಕ್ಕೆ ನೀರು ಎಷ್ಟು ಮುಖ್ಯ ಗೊತ್ತೆ?


Team Udayavani, Apr 28, 2018, 3:38 PM IST

water-New.jpg

ಆರೋಗ್ಯಕ್ಕೆ ನೀರು ಎಷ್ಟು ಮುಖ್ಯವೆಂದು ನಮಗೆಲ್ಲಾ ಗೊತ್ತೆ ಇದೆ.  ದಿನಕ್ಕೆ ಕನಿಷ್ಠ ಎಂದರೆ 11 ರಿಂದ 12 ಲೋಟ ನೀರು ಕುಡಿಯಿರಿ ಎಂದು ವೈದ್ಯರು ತಿಳಿಸುತ್ತಾರೆ.  ನೀರಿನ ಅವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀರಿನ ಅವಶ್ಯಕತೆ ಎನ್ನವುದು ಆನೇಕ ಅಂಶಗಳನ್ನು ಅವಲಂಬಿಸಿಕೊಂಡು, ಒಬ್ಬ ವ್ಯಕ್ತಿಯಿಂದ ಇನೊಬ್ಬ ವ್ಯಕ್ತಿಗೆ ಬೇರೆ ಬೇರೆ ಆಗಿರುತ್ತದೆ. ನೀರಿನ ಅವಶ್ಯಕತೆಯು ಅವಲಂಬಿಸಿರುವ ಅಂಶಗಳು ಅಂದರೆ, ವ್ಯಕ್ತಿಯ ದೈಹಿಕ ಚಟುವಟಿಕೆ, ಸುತ್ತಲಿನ ತಾಪಮಾನ, ಆರೋಗ್ಯ ಪರಿಸ್ಥಿತಿ, ದೈಹಿಕ ಪರಿಸ್ಥಿತಿ ವಯಸ್ಸು ಲಿಂಗ ಹಾಗೂ ಇನ್ನಿತರ ಅಂಶಗಳು.

ಎಷ್ಟು ಪ್ರಮಾಣದ ನೀರು ಅವಶ್ಯಕ?

ಪ್ರತಿ ದಿನವೂ ನಾವು ಉಸಿರಾಟ, ಬೆವರು, ಮೂತ್ರ ಮತ್ತು ಮಲ ವಿಸರ್ಜನೆಯ ಮೂಲಕ ನೀರನ್ನು ಕಳೆದುಕೊಳ್ಳುತ್ತಿರುತ್ತೇವೆ. ಹಾಗಾಗಿ ನಮ್ಮ ಶರೀರವು ಸರಿಯಾಗಿ ಕಾರ್ಯನಿರ್ವಹಿಸಬೇಕಾಗಿದ್ದಲ್ಲಿ ನಾವು ಸಾಕಷ್ಟು ಪ್ರಮಾಣದಲ್ಲಿ ಪಾನೀಯಗಳು ಮತ್ತು ನೀರನ್ನು ಹೊಂದಿರುವ ಆಹಾರಗಳನ್ನು ಸೇವಿಸಿ ದೇಹದ ನೀರಿನ ಅವಶ್ಯಕತೆಯನ್ನು ಪೂರೈಸಬೇಕು. ಅಂದಾಜು ಒಂದ ದಿನಕ್ಕೆ 12ರಿಂದ 13 ಕಪ್‌ ನೀರಿನ ಅವಶ್ಯಕತೆ ಇರುತ್ತದೆ. ಬಿಸಿ ಅಥವಾ ತೇವಭರಿತ ವಾತಾವರಣವು ನಮ್ಮನ್ನು ಬೆವರುವಂತೆ ಮಾಡುತ್ತದೆ, ಇಂಥ ಸಂದರ್ಭಗಳಲ್ಲಿ ಹೆಚ್ಚು ನೀರನ್ನು ಕುಡಿಯಬೇಕಾಗುತ್ತದೆ.

ನೀರಿನ ಆರೋಗ್ಯಕಾರಿ ಪ್ರಯೋಜನಗಳು:

ನೀರು ನಮ್ಮ ಶರೀರದ ಜೀವಕೋಶಗಳಲ್ಲಿ ಇರುವ ತ್ಯಾಜ್ಯಗಳನ್ನು ತೊಡೆದು ಹಾಕುತ್ತದೆ ಮತ್ತು ಜೀವಕೋಶಗಳಿಗೆ ಪೋಷಕಾಂಶಗಳನ್ನು ಒದಗಿಸುತ್ತದೆ. ದೇಹದ ತಾಪಮಾನವನ್ನು ಕಾಪಾಡುತ್ತದೆ. ನೀರು ಮೂತ್ರಪಿಂಡದಲ್ಲಿ ಕಲ್ಲಾಗಾದಂತೆ ಮತ್ತು ಮಲಬದ್ಧತೆ ಆಗದಂತೆ ತಡೆಯುತ್ತದೆ. ತ್ವಚೆಯ ಕಾಂತಿ ಹೆಚ್ಚುವಂತೆ ಮಾಡುವುದು ಮೊದಲಾದವುಗಳಿಗೂ ನೀರು ಅಗತ್ಯವಾಗಿದೆ. ನರವ್ಯವಸ್ಥೆಯಲ್ಲಿಯೂ ನೀರು ಪ್ರಮುಖ ಪಾತ್ರ ವಹಿಸುತ್ತದೆ. ರಕ್ತ ಪರಿಚಲನಾ ವ್ಯವಸ್ಥೆ ಉಸಿರಾಟದ ವ್ಯವಸ್ಥೆ, ಎಲ್ಲದರಲ್ಲೂ ನೀರು ಪ್ರಮುಖವಾಗಿ ಬೇಕಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯುತ್ತಿಲ್ಲವಾದಲ್ಲಿ ಈ ಕಾರಣಗಳಿಂದ ಗಂಭೀರ ಸಮಸ್ಯೆಗಳು ಎದುರಾಗಬಹುದು.

ನೀರಿನ ಮೂಲಗಳು

ನಮ್ಮ ದೇಹಕ್ಕೆ ನೀರಿನ ಅವಶ್ಯಕತೆ ಇದೆ ಎಂದ ಮಾತ್ರಕ್ಕೆ ಅದು ಕೇವಲ ದ್ರವ ರೂಪದ ನೀರು ಎಂದುಕೊಂಡರೆ ತಪ್ಪು, ಏಕೆಂದರೆ ನಾವು  ದಿನನಿತ್ಯ ಸೇವಿಸುವ ಆಹಾರಗಳಲ್ಲೂ ಸಾಕಷ್ಟು ಪ್ರಮಾಣದ ನೀರಿನ ಅಂಶ ಇರುತ್ತದೆ. ಒಟ್ಟು ಸೇವಿಸುವ ನೀರಿನ ಪ್ರಮಾಣದಲ್ಲಿ ಶೇ.20ರಷ್ಟು ನೀರನ್ನು ಆಹಾರವು ಪೂರೈಸುತ್ತದೆ. ಅನೇಕ ರೀತಿಯ ಹಣ್ಣು ಮತ್ತು ತರಕಾರಿಗಳು, ಅಂದರೆ ಕಲ್ಲಂಗಡಿ ಮತ್ತು ಸೊಪ್ಪು ತರಕಾರಿಗಳು ಇವುಗಳಲ್ಲಿ ಶೇ.90ರಷ್ಟು ನೀರಿನ ಆಂಶವನ್ನು ಒಳಗೊಂಡಿರುತ್ತದೆ.  ಇದರ ಜೊತೆಗೆ ಹಾಲು ಮತ್ತು ಜ್ಯೂಸ್‌ನಂತಹ ಪಾನೀಯಗಳಲ್ಲಿ ನೀರಿನ ಆಂಶವೇ ಹೆಚ್ಚಾಗಿರುತ್ತದೆ.

ಮುಂಜಾನೆ ನೀರನ್ನು ಕುಡಿಯುವುದರಿಂದ ಪ್ರಯೋಜನಗಳು:

*ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ವಿಚಾರಗಳಲ್ಲಿ ನಾವು ಗೊಂದಲ ಮಾಡಿಕೊಳ್ಳುತ್ತೇವೆ. ನಮ್ಮ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಕೆಲವು ಸರಳ ಸೂತ್ರಗಳು, ಆರೋಗ್ಯವನ್ನು

*ಸುಧಾರಿಸುವಲ್ಲಿ ಬಹಳಷ್ಟು ಉತ್ತಮ ಪರಿಣಾಮವನ್ನು ಬೀರಬಲ್ಲವು. ಇವುಗಳಲ್ಲಿ ಒಂದು ಬೆಳಗ್ಗೆ ಖಾಲಿ ಹೊಟ್ಟೆಗೆ ಸಾಕಷ್ಟು ನೀರನ್ನು ಸೇವಿಸುವುದು. ಇದರಿಂದ ಹೊಟ್ಟೆಯು ಬಹಳ ಚೆನ್ನಾಗಿ ಖಾಲಿ ಆಗುವುದಷ್ಟೇ ಅಲ್ಲದೇ, ಅನೇಕ ರೀತಿಯ ಅಪಾಯಕಾರಿ ಕಾಯಿಲೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಇದು ಬಹಳಷ್ಟು ಪ್ರಯೋಜನಕಾರಿ.

* ಬೆಳಿಗ್ಗೆ ಖಾಲಿ ಹೊಟ್ಟೆಗೆ ನೀರನ್ನು ಕುಡಿಯುವುದರಿಂದ ದೊಡ್ಡಕರುಳು ಚೆನ್ನಾಗಿ ಸ್ವಚ್ಚವಾಗುತ್ತದೆ ಮತ್ತು ಇದರಿಂದ ಪೋಷಾಕಾಂಶಗಳನ್ನು ಸುಲಭವಾಗಿ ಹೀರಿಕೊಳ್ಳಲು ಸಹಾಯಕವಾಗುತ್ತದೆ.

* ಹೊಸ ರಕ್ತ ಮತ್ತು ಸ್ನಾಯು ಕೋಶಗಳ ಸಂರಚನೆ ಸಾಧ್ಯವಾಗುತ್ತದೆ.

* ದೇಹದ ತೂಕ ಇಳಿಸಿಕೊಳ್ಳಲು ಅವಶ್ಯಕ.

* ಚಯಾಪಚಯ ಕ್ರಿಯೆಯು ಉತ್ತಮಗೊಳ್ಳುತ್ತದೆ.

* ದೇಹದ ದ್ರವಾಂಶವನ್ನು ಸಮತೋಲನದಲ್ಲಿ ಇಡುತ್ತದೆ ಮತ್ತು ರೋಗಾಣುಗಳ ವಿರುದ್ಧ ಹೋರಾಡುತ್ತದೆ.

ಸಂಜೀವಿನಿಯಂತೆ ಕೆಲಸ ಮಾಡುವ ನೀರು ಪಂಚಭೂತಗಳಲ್ಲಿ ಒಂದು. ಭೂಮಿಯ ಮತ್ತು ನಮ್ಮ ಶರೀರದ ಶೇ.70 ರಷ್ಟು ನೀರಿನಿಂದ ಆವೃತವಾಗಿದೆ. ತಿನ್ನುವ ಆಹಾರಕ್ಕಿಂತ ಕುಡಿಯುವ ನೀರಿಗೆ ಹೆಚ್ಚಿನ ಮಹತ್ವ ನೀಡಿದ್ದಲ್ಲಿ ಎಲ್ಲರೂ ಆರೋಗ್ಯದಿಂದಿರಬಹುದು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.