ಕೋಟ್ಯಂತರ ಜನರ ಜೀವನಾಡಿಯಾಗಿರುವ ಜನಪ್ರಿಯ KSRTC ಆರಂಭಗೊಂಡಿದ್ದು ಹೇಗೆ ?


ಮಿಥುನ್ ಪಿಜಿ, Nov 19, 2019, 6:00 PM IST

ksrtc

ಕರ್ನಾಟಕ ರಾಜ್ಯದ ಕೋಟ್ಯಂತರ ಜನರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುತ್ತಿರುವ ಕೀರ್ತಿ ಕೆ.ಎಸ್.ಆರ್.ಟಿ.ಸಿ ಗೆ ಸಲ್ಲುತ್ತದೆ. ಪ್ರತಿಯೊಬ್ಬರೂ ಒಂದಲ್ಲಾ ಒಂದು ದಿನ  ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣ ಮಾಡಿಯೇ ಇರುತ್ತಾರೆ. ಶಾಲಾ ದಿನಗಳ ಪ್ರವಾಸಕ್ಕಾಗಿ, ರಜೆಯ ಮಜಾ ಕಳೆಯಲು ದೂರದೂರಿನ ಪ್ರಯಾಣಕ್ಕೆ, ಮದುವೆ ಸಮಾರಂಭಕ್ಕೆ ಈ ಬಸ್ ಹೇಳಿ ಮಾಡಿಸಿದಂತಿದೆ. ನಗರಗಳಿಂದ ಹಿಡಿದು ಹಳ್ಳಿಗಳವರೆಗೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿರುವ ಈ ಸಾರಿಗೆ ಸಂಸ್ಥೆಯು ಉದಯವಾದುದ್ದೇ ಒಂದು ರೋಚಕ ಕಥನ.

1948ರಲ್ಲಿ ಮೈಸೂರು ಪ್ರಾಂತ್ಯವನ್ನು, ಸಾರ್ವಜನಿಕರಿಗೆ ಸಮರ್ಪಕ ಸಾರಿಗೆ ಸಂಪರ್ಕ ಸೌಲಭ್ಯ ಒದಗಿಸಲು ಮೈಸೂರು ಸರ್ಕಾರ ರಸ್ತೆ ಸಾರಿಗೆ ಇಲಾಖೆ (MGRTD)ಯನ್ನು 120 ವಾಹನಗಳೊಂದಿಗೆ ಆರಂಭಮಾಡಿತು. ಇದು ಮೈಸೂರು ಸರ್ಕಾರದ ಒಂದು ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೇ 1961ರಲ್ಲಿ ಇದನ್ನು ರಸ್ತೆ ಸಾರಿಗೆ ನಿಗಮ ಕಾಯ್ದೆಯ ಅನ್ವಯ ಸ್ವತಂತ್ರ ಸಂಸ್ಥೆಯನ್ನಾಗಿ ಪರಿವರ್ತಿಸಲಾಯಿತು. MGRTDಯ ಆಸ್ತಿ ಮತ್ತು ಋಣಭಾರವನ್ನು ಹೊಸ ಸಂಸ್ಥೆಗೆ ವರ್ಗಾಯಿಸಲಾಯಿತು ಮಾತ್ರವಲ್ಲದೆ ಸಂಸ್ಥೆಯನ್ನು ಎಂ.ಎಸ್.ಆರ್.ಟಿ.ಸಿ ಎಂದು ನಾಮಕರಣ ಮಾಡಲಾಯಿತು. ಇದರಿಂದಾಗಿ ಇಡೀ ರಾಜ್ಯಕ್ಕೆ ಒಂದೇ ಸಂಸ್ಥೆಯನ್ನು ಸ್ಥಾಪಿಸಿದಂತಾಗುತ್ತದೆ. ಭಾರತ ಸರ್ಕಾರವೂ ಕೂಡ ಈ ಸಂಸ್ಥೆಯಲ್ಲಿ ಹೂಡಿಕೆ ಹೊಂದಿದೆ.

ನವೆಂಬರ್ 1.1973ರಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ಮರುನಾಮಕರಣ ಮಾಡಲಾಗುತ್ತದೆ. ಅದರ ಜೊತೆಗೆ ಎಂ.ಎಸ್.ಆರ್.ಟಿ.ಸಿಯನ್ನು ಕೆ.ಎಸ್.ಆರ್.ಟಿ.ಸಿ ಎಂದು ಕರೆಯಲಾಗುತ್ತದೆ.  1997ರವರೆಗೂ ಕ.ರಾ.ರ.ಸಾ.ನಿಗಮವು 10,400 ಬಸ್ ಗಳನ್ನು 9500 ಮಾರ್ಗಗಳಲ್ಲಿ ನಡೆಸುತ್ತಿತ್ತು. 1997 ರಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯನ್ನು(ಬಿಎಂಟಿಸಿ) ಸ್ವತಂತ್ರ ಸಂಸ್ಥೆಯನ್ನಾಗಿ ಮಾಡಲಾಯಿತು. ಇದು ಕ.ರಾ.ರ.ಸಾ.ನಿಗಮದ ಮೊದಲ ವಿಭಾಗೀಕರಣ. 1997ರಲ್ಲೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವನ್ನು ವಾಯುವ್ಯ ಕರ್ನಾಟಕದ ಸೇವೆಗೆಂದು ಪ್ರಾರಂಭಿಸಲಾಯಿತು. ಅದಾದ ನಂತರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವನ್ನು ಈಶಾನ್ಯ ಕರ್ನಾಟಕದ ಸೇವೆಗೆಂದು ಆರಂಭಿಸಲಾಯಿತು.

ಕೆ.ಎಸ್.ಆರ್.ಟಿ.ಸಿ ಯ ಮುಖ್ಯ ಕಛೇರಿ ಬೆಂಗಳೂರಿನ ಶಾಂತಿನಗರದಲ್ಲಿದೆ. ಈ ಸಂಸ್ಥೆ ಕರ್ನಾಟಕದ 17 ಜಿಲ್ಲೆಯಲ್ಲಿ ತನ್ನ ಕಾರ್ಯ ವ್ಯಾಪ್ತಿಯನ್ನು ಹೊಂದಿದೆ. 16 ಕಾರ್ಯನಿರ್ವಹಣಾ ವಿಭಾಗ. 79 ಡಿಪೋಗಳು, ಗ್ರಾಮೀಣ ತರಬೇತಿ ಸಂಸ್ಥೆಗಳು,  ಮುದ್ರಣಾಲಯ ಮತ್ತು  ಆಸ್ಪತ್ರೆಯನ್ನು ಒಳಗೊಂಡಿದೆ.

ಕೆ.ಎಸ್.ಆರ್.ಟಿ.ಸಿಯಲ್ಲಿ 37 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಪ್ರತಿನಿತ್ಯ ಒಂದು ಊರಿಂದ ಮತ್ತೊಂದು ಊರಿಗೆ 74 ಲಕ್ಷ ಪ್ರಯಾಣಿಕರು ಇದರಲ್ಲಿ ಸಂಚರಿಸುತ್ತಾರೆ. ಮಾತ್ರವಲ್ಲದೆ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ಕೇರಳ, ಪುದುಚೇರಿ, ತಮಿಳುನಾಡು ಮಹಾರಾಷ್ಟ್ರ, ಗೋವಾ, ತೆಲಂಗಾಣದಲ್ಲಿ ಕೂಡ ಈ ಸಂಸ್ಥೆಯ ಬಸ್ ಗಳು ಸಂಚರಿಸುತ್ತದೆ.

2005ರಲ್ಲಿ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಗಳನ್ನು ಪರಿಚಯಿಸುತ್ತದೆ. ಭಾರತದಲ್ಲಿ ವೋಲ್ವೋ ಹವಾನಿಯಂತ್ರಿತ ಬಸ್ ಗಳನ್ನು ಮೊಟ್ಟಮೊದಲ ಬಾರಿಗೆ ಬಳಸಿದ್ದು ಮತ್ತು ಪರಿಚಯಿಸಿದ  ಹೆಗ್ಗಳಿಕೆ ಈ ಸಂಸ್ಥೆಗೆ ಸಲ್ಲುತ್ತದೆ. ಪ್ರಸ್ತುತ  ಟಾಟಾ, ವೋಲ್ವೋ, ಅಶೋಕ್ ಲೈಲ್ಯಾಂಡ್, ಐರಾವತ, ಮರ್ಸಿಡೀಸ್ ಬೆಂಜ್, ರಾಜಹಂಸ, ಶೀತಲ್, ಮಯೂರ, ಮೇಘದೂತ, ಅಂಬಾರಿ,ಪ್ಲೈ ಬಸ್ ಮುಂತಾದ ಹಲವು ಸೇವೆಗಳನ್ನು ಹೊಂದಿದೆ.

ವರದಿಯೊಂದರ ಪ್ರಕಾರ ದೇಶದಲ್ಲೇ ಅತೀ ಹೆಚ್ಚು ಗುಣಮಟ್ಟತೆಯನ್ನು ಹೊಂದಿದ ಬಸ್ ಇದಾಗಿದೆ. ಸಂಸ್ಥೆಯ ಅಷ್ಟು ಉದ್ಯೋಗಿಗಳು ರಾತ್ರಿ ಹಗಲೆನ್ನದೆ ಪ್ರಯಾಣಿಕರನ್ನು ಕರೆದೊಯ್ಯುತ್ತಾರೆ. ವಿದ್ಯಾರ್ಥಿಗಳಿಗೆ, ಅಂಗವಿಕಲರಿಗೆ, ವೃದ್ಧರಿಗೆ, ಸೈನಿಕರಿಗೆ ಆಸನಗಳ ಕಾಯ್ದಿರುಸುವಿಕೆ ಸೌಲಭ್ಯಗಳು ಈ ಬಸ್ ನಲ್ಲಿ ಕಂಡುಬರುವುದು ವಿಶೇಷ. ಈ ರೀತಿ 1948 ರಿಂದ ಆರಂಭವಾದ ಈ ಸಾರಿಗೆ ಸಂಸ್ಥೆ ಇವತ್ತಿಗೂ ಹಲವಾರು ಭಾಗಗಳಲ್ಲಿ ಕೋಟ್ಯಂತರ ಜನರ ಜೀವನಾಡಿಯಾಗಿದೆ.

ಮಿಥುನ್ ಮೊಗೇರ

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.